ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅರಸಾಳು ಹೊನ್ನಪ್ಪ ಹೃದಯಘಾತದಿಂದ ನಿಧನ

ರಿಪ್ಪನ್ ಪೇಟೆ : ಅರಸಾಳು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅರಸಾಳು ಹೊನ್ನಪ್ಪ ಎಂ. ಬಿ.(76) ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಹೊನ್ನಪ್ಪ ರವರು ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದರು. ಮೃತರು ಪತ್ನಿ.ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ ಅರಸಾಳು ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು…

Read More

ಸಾಗರದ ಮಹಿಳೆಯ ಹೊಟ್ಟೆಯಲ್ಲಿತ್ತು ಬರೋಬ್ಬರಿ ಎಂಟು ಕೆ.ಜಿ ತೂಕದ ಗಡ್ಡೆ…!!!! ಯಶಸ್ವಿಯಾದ ಸಾಗರ ವೈದ್ಯರ ಶಸ್ತ್ರಚಿಕಿತ್ಸೆ

ಸಾಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಬುಧವಾರ 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ ನಂತರ 50 ವರ್ಷದ ಮಹಿಳೆ ಹೊಟ್ಟೆಯಲ್ಲಿದ್ದ 8 ಕೆಜಿ ತೂಕದ ಗಡ್ಡೆಯನ್ನು ಹೊರತೆಗೆದಿದ್ದಾರೆ. ಇದೊಂದು ಅಂಡಾಶಯದ ಗಡ್ಡೆಯಾಗಿದ್ದು, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆಸ್ಪತ್ರೆಯ ಹಿರಿಯ ಸ್ತ್ರೀರೋಗ ತಜ್ಞ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ.  ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು,ಶಸ್ತ್ರಚಿಕಿತ್ಸೆಗೆ ಅರವಳಿಕೆ ತಜ್ಞೆ ಸುಷ್ಮಾ ಪತ್ತಾರ್,ನರ್ಸ್ ಸುವರ್ಣ,ರೋಹಿನಿ ಹಾಗೂ ಚಂದ್ರು  ಸಹಕರಿಸಿದ್ದಾರೆ ಎಂದು ಇದೇ ವೇಳೆ ತಿಳಿಸಿದರು. ಮಹಿಳೆಯ ಪ್ರಾಣ ಉಳಿಸಿದ ಡಾ.ನಾಗೇಂದ್ರಪ್ಪ…

Read More

RIPPONPETE | ಬಟ್ಟೆಮಲ್ಲಪ್ಪದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪತ್ತೆ

RIPPONPETE | ಬಟ್ಟೆಮಲ್ಲಪ್ಪದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರು ಪತ್ತೆ ರಿಪ್ಪನ್‌ಪೇಟೆ : ಬಟ್ಟೆಮಲ್ಲಪ್ಪ ಗ್ರಾಮದಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕರನ್ನು ಶಿವಮೊಗ್ಗದಲ್ಲಿ ರಿಪ್ಪನ್‌ಪೇಟೆ ಪೊಲೀಸರು ಪತ್ತೆ ಹಚ್ಚಿ, ಪಟ್ಟಣಕ್ಕೆ ವಾಪಾಸು ಕರೆತಂದಿದ್ದು, ಮರಳಿ ಪೋಷಕರಿಗೆ ಒಪ್ಪಿಸಿದ್ದಾರೆ. ಬಟ್ಟೆಮಲ್ಲಪ್ಪ ಗ್ರಾಮದ ನಿವಾಸಿಗಳಾದ ಸಾತ್ವಿಕ್ (13) ನಿರಂಜನ್ (13)ಎಂಬ ಇಬ್ಬರು ಬಾಲಕರು ಬಟ್ಟೆಮಲ್ಲಪ್ಪದಿಂದ ಶಾಲೆಗೆ ತೆರಳುತ್ತೇವೆ ಎಂದು ಗುರುವಾರ ಬೆಳಿಗ್ಗೆ ನಾಪತ್ತೆಯಾಗಿದ್ದರು. ಶಾಲಾ ಸಮವಸ್ತ್ರ ದೊಂದಿಗೆ ನಾಪತ್ತೆಯಾಗಿದ್ದ ಇಬ್ಬರು ಬಾಲಕರ ಬಗ್ಗೆ ಪೋಷಕಕರಿಗೆ ತಿಳಿಯುತಿದ್ದಂತೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ…

Read More

ರಿಪ್ಪನ್ ಪೇಟೆಯಲ್ಲಿ ಶ್ರದ್ದಾ ಭಕ್ತಿಯ ಷಷ್ಟಿ ಆಚರಣೆ :

ರಿಪ್ಪನ್‌ಪೇಟೆ: ಸುಬ್ರಹ್ಮಣ್ಯ ಷಷ್ಟಿಯ ಅಂಗವಾಗಿ ಇಲ್ಲಿನ ಇತಿಹಾಸ ಪ್ರಸಿದ್ದ ಸಿದ್ದಿ ವಿನಾಯಕ ಸ್ವಾಮಿ ದೇವಸ್ಥಾನ, ಬರುವೆ ಚೌಡೇಶ್ವರಿ ಅಮ್ಮನವರ  ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಷಷ್ಟಿ ಉತ್ಸವವು ವೈಭವದೊಂದಿಗೆ ಸಂಪನ್ನಗೊಂಡಿತು. ರಿಪ್ಪನ್‌ಪೇಟೆಯ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಚಂದ್ರಶೇಖರ್‌ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ  ಮತ್ತು ಮಹಾಮಂಗಳಾರತಿಯೊಂದಿಗೆ ಕಾರ್ತೀಕ ದೀಪೋತ್ಸವ ಜರುಗಿತು. ಕಾರ್ತಿಕ ದೀಪೋತ್ಸವ ವು ಸುತ್ತಮುತ್ತಲಿನ ಅಲಸೆ, ಬರುವೆ, ಹುಂಚದಕಟ್ಟೆ, ಶಿವಪುರ ಇನ್ನಿತರ ಹಲವು ಗ್ರಾಮಗಳಲ್ಲಿನ ದೇವಸ್ಥಾನದಲ್ಲಿ ಒಂದು ತಿಂಗಳ ಕಾಲ…

Read More

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು | SAGARA

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು  ಡೆಂಗ್ಯೂವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸೊರಬ ತಾಲೂಕಿನ ಶಿಗ್ಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಸಂತ (40) ಮೃತ ದುರ್ದೈವಿ. ಜ್ವರ ಹಾಗೂ ವಾಂತಿಯಿಂದ ಬಳಲುತ್ತಿದ್ದ ವಸಂತ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದಾಗ ಡೆಂಗ್ಯೂ ಎಂದು ದೃಢಪಟ್ಟಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವಸಂತಾ ಅವರಿಗೆ ಏಕಾಏಕಿ ಹೃದಯಾಘಾತವಾಗಿದೆ. ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಗಿ ವೈದ್ಯರು…

Read More

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದ ದರೋಡೆ ಆರೋಪಿ : ಮೆಗ್ಗಾನ್ ಗೆ ದಾಖಲು

ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ಘಟನೆ ಸಂಭವಿಸಿದೆ. ದೊಡ್ಡಪೇಟೆ ಠಾಣೆ ಕ್ರೈಮ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಎಂಬುವವರಿಗೆ ಚಾಕು ಇರಿಯಲಾಗಿದೆ. ಪ್ರಕರಣವೊಂದರ ಸಂಬಂಧ ಆರೋಪಿ ಶಾಹಿದ್ ಖುರೇಷಿ ಎಂಬಾತನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿ ಶಾಹಿದ್ ಖುರೇಷಿ ಪೊಲೀಸ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ ಎಂದು ತಿಳಿದು…

Read More

Ripponpete | ಜಾನಪದ ಹಾಡಿನ ಮೂಲಕ ಕಲಾವಿದರಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಪರ ಮತಯಾಚನೆ

ಜಾನಪದ ಹಾಡಿನ ಮೂಲಕ ಕಲಾವಿದರಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪಪರ ಮತಯಾಚನೆ ರಿಪ್ಪನ್‌ಪೇಟೆ;-ಮೇ.7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರ ಪರ ಜಾನಪದ ಹಾಡಿನ ಮೂಲಕ ಕಲಾವಿದರ ತಂಡ ಮತಯಾಚನೆಯನ್ನು ನಡೆಸುತ್ತಾ ಮತದಾರರ ಮನವೊಲಿಸುತ್ತಿರುವುದು ವಿಶೇಷವಾಗಿದೆ. ಇಲ್ಲಿನ ವಿನಾಯಕ ವೃತ್ತದಲ್ಲಿ ಶಿವಮೊಗ್ಗದ ಕಲಾವಿದರ ತಂಡ ಇಂದು ಬಿಸಿಲಿನಲ್ಲಿಯೇ ಪಿಕ್‌ಆಪ್ ವಾಹನದ ಮೇಲೆ ನಿಂತು ಪಕ್ಷೇತರ ಆಭ್ಯರ್ಥಿ ಕೆ.ಎಸ್.ಈಶ್ವರಪ್ಪನವರ ಪರವಾದ ಜಾನಪದ ಹಾಡು ಹಾಡುವುದರೊಂದಿಗೆ ಕ್ರಮಸಂಖ್ಯೆ 8 ಕ್ಕೆ ಮತಹಾಕುವಂತೆ ಹಾಡು ಹಾಡಿ ಮತದಾರರನ್ನು ಸೆಳೆಯುತ್ತಿದ್ದು…

Read More

ಮಠ ಸಿನಿಮಾದ ನಿರ್ದೇಶಕ ಗುರುಪ್ರಸಾದ್ ಆತ್ಮ*ಹತ್ಯೆ

ಮಠ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಠ ಚಲನಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಅವರು ಇಂದು ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನ ಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲಗಾರರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಾದನಾಯಕನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 2 ದಿನಗಳಿಂದ ಅವರ ರೂಮಿನಿಂದ ವಾಸನೆ ಬರುತ್ತಿರುವ ಹಿನ್ನೆಲೆಯಲ್ಲಿ…

Read More

ಸಂಘಟನೆಯಿಂದ ಮಾತ್ರ ವಿಶ್ವಕರ್ಮ ಸಮಾಜದ ಅಭಿವೃದ್ಧಿ ಸಾಧ್ಯ : ಶ್ರೀನಿವಾಸ್ ಆರ್ ಹೆಚ್ ಆಚಾರ್

ರಿಪ್ಪನ್ ಪೇಟೆ : ವಿಶ್ವಕರ್ಮ ಸಮಾಜದವರು ಒಟ್ಟಾಗಿ ಸಮಾಜದ ಅಭಿವೃದ್ಧಿಗೆ  ಶ್ರಮಿಸಿದಾಗ ಮಾತ್ರ ವಿಶ್ವಕರ್ಮ ಸಮಾಜದ ಏಳಿಗೆ ಸಾಧ್ಯ ಎಂದು ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಶ್ರೀನಿವಾಸ್ ಆರ್. ಹೆಚ್.ಹೇಳಿದರು.  ಕೆರೆಹಳ್ಳಿ ಹೋಬಳಿ ವಿಶ್ವಕರ್ಮ ಸಮಾಜ ವತಿಯಿಂದ ಆಯೋಜಿಸಲಾಗಿದ್ದ  ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು ವಿಶ್ವಕರ್ಮ ಸಮಾಜದವರು ಶ್ರಮಿಕ ರಾಗಿದ್ದು. ತಮ್ಮ ಕಾರ್ಯ ಚಟುವಟಿಕೆಗಳ ಮೂಲಕ  ಸಮಾಜದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷ ಕಳೆದರೂ ಸಹ  ರಾಜ್ಯದ ಗ್ರಾಮೀಣ ಪ್ರದೇಶದ…

Read More

ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹ ಕೇಸ್ : ಸಿಎಂ ಬೊಮ್ಮಾಯಿ ಘೋಷಣೆ

ಭಾಷೆ ನೆಪದಲ್ಲಿ ಶಾಂತಿ ಕದಡಲು ಯತ್ನಿಸಿದವರ ವಿರುದ್ಧ ಗೂಂಡಾ ಕಾಯ್ದೆ, ದೇಶದ್ರೋಹದ ಕೇಸ್ ದಾಖಲಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್ ಕೃತ್ಯ ಖಂಡಿಸಿ ವಿಧಾನಸಭೆಯಲ್ಲಿ ಒಕ್ಕೊರಲಿನ ನಿರ್ಣಯ ಕೈಗೊಳ್ಳಲಾಗಿದೆ. ಎಂಇಎಸ್ ವಿರುದ್ಧ ಸರ್ವಾನುಮತದ ಖಂಡನಾ ನಿರ್ಣಯ ಕೂಡ ಅಂಗೀಕರಿಸಲಾಗಿದೆ. ಸುವರ್ಣ ಸೌಧದ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಣಿ ಚೆನ್ನಮ್ಮನ ಪ್ರತಿಮೆ ನಿರ್ಮಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ. ಎಂಇಎಸ್ ಬ್ಯಾನ್ ಮಾಡಲು ಆಗದಿದ್ದರೂ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು…

Read More
Exit mobile version