Headlines

ಬೈಕ್ ಸ್ಕಿಡ್ ಆಗಿ ಯುವಕನೊಬ್ಬ ಸ್ಥಳದಲ್ಲಿಯೇ ಸಾವು :

ಬೈಕ್ ಸ್ಕಿಡ್ ಆಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದ ಕೊರ್ಲಿಕೊಪ್ಪ ಹೊಸೂರು ಗ್ರಾಮದಲ್ಲಿ ನಡೆದಿದೆ. ತ್ಯಾಗರ್ತಿ ಗ್ರಾಮದ ಅಜಿತ್ 21 ವರ್ಷ ಸಾವಿಗೀಡಾದ ದುರ್ದೈವಿಯಾಗಿದ್ದಾನೆ.ಈತ ಜೆಸಿಬಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗುತ್ತಿದೆ. ಕೊರ್ಲಿಕೊಪ್ಪ ಗ್ರಾಮದ ಸಮೀಪವಿರುವ ರಾಮ ದೇವಸ್ಥಾನದ ತಿರುವಿನಲ್ಲಿ ಅಪಘಾತ ಸಂಭವಿಸಿದೆ.ಅಜಿತ್ ತ್ಯಾಗರ್ತಿಯಿಂದ ಕುಂದೂರು ಕಡೆ ಹೋಗುವ ವೇಳೆ ರಾತ್ರಿ 11.30 ರ ಸಂದರ್ಭದಲ್ಲಿ ಘಟನೆ ನಡೆದಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ…

Read More

ಮಾನವೀಯತೆ ಮೆರೆದ ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಪಟ್ಟಣದಲ್ಲಿ ನೆಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಬೆಂಗಳೂರು ಪ್ರಯಾಣದಲ್ಲಿ ಇದ್ದ ಗೃಹಸಚಿವ ಆರಗ ಜ್ಞಾನೇಂದ್ರರವರು  ದಾರಿಯ ಮದ್ಯೆ ಮುತ್ತಿನಕೊಪ್ಪ ಬಳಿ ತೆರಳುತ್ತಿದ್ದಾಗ ರಸ್ತೆಯ ಮದ್ಯೆ ಕಾರು ಮತ್ತು ಬೈಕ್ ಅಪಘಾತ ದಲ್ಲಿ ಗಾಯಗೊಂಡ ದಂಪತಿಗಳನ್ನು ಸಂತೈಸಿ ಅವರಿಗೆ ಧೈರ್ಯ ತುಂಬಿ ಸಮೀಪದ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ಮಾಡಿಸಲು ಎಲ್ಲಾ ವ್ಯವಸ್ಥೆ ಮಾಡಿ ನಂತರ ಬೆಂಗಳೂರಿನತ್ತ ಪ್ರಯಾಣ  ಮಾಡಿದರು. ಅಪಘಾತದಲ್ಲಿ ದಂಪತಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.  ಗೃಹಸಚಿವರ…

Read More

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲಿಯೇ ಸಾವು ,ಏಳು ಜನರ ಸ್ಥಿತಿ ಗಂಭೀರ

ಸಾಗರ – ತಾಳಗುಪ್ಪ ರಾಷ್ಟ್ರೀಯ ಹೆದ್ದಾರಿಯ ಆಲಳ್ಳಿ ಗ್ರಾಮದ ಬಳಿ ಕಾರು ಹಾಗೂ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ನಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟು ,ಏಳು ಜನ ಗಂಬೀರ ಗಾಯಗೊಂಡಿರುವ ಘಟನೆ ನಡೆದಿದೆ. ಚನ್ನಗಿರಿ ಮೂಲದ 8 ಜನರಿದ್ದ ಇಕೋ ಕಾರಿನಲ್ಲಿ ಜೋಗ ಜಲಪಾತವನ್ನು ವೀಕ್ಷಿಸಿ ವಾಪಾಸ್ ಹಿಂದಿರುಗುತ್ತಿದ್ದಾಗ ಸಾಗರದಿಂದ ತಾಳಗುಪ್ಪದ ಕಡೆಗೆ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಹೋಗುತ್ತಿದ್ದ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಎಲ್ಲಾರು ಒಂದೇ ಕುಟುಂಬದವರಾಗಿದ್ದು…

Read More

ಹೆಚ್ ಡಿ ಕುಮಾರಸ್ವಾಮಿ ಸಾಂತ್ವಾನ : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು,ಮಸೂದ್,ಫಾಝಿಲ್ ಮನೆಗೆ ಭೇಟಿ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಮೃತ ಪ್ರವೀಣ್ ನೆಟ್ಟಾರು, ಮಸೂದ್ ಮತ್ತು ಸುರತ್ಕಲ್‌ನ ಪಾಝಿಲ್ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದರು. ಮೂವರೂ ಮೃತರ ಕುಟುಂಬಗಳಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 5 ಲಕ್ಷ ರೂಪಾಯಿ ಧನ ಸಹಾಯದ ಚೆಕ್‌ಗಳನ್ನು ಈ ಸಂದರ್ಭದಲ್ಲಿ ಅವರು ಹಸ್ತಾಂತರ ಮಾಡಿದರು. ಸೋಮವಾರ ಬೆಳಿಗ್ಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಮನೆಗೆ…

Read More

ಮೃತದೇಹ ಸಾಗಿಸುತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಮೃತದೇಹವನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಆಗುಂಬೆ ಸಮೀಪದಲ್ಲಿ ನಡೆದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ತರೀಕೆರೆ ನಿವಾಸಿಯೊಬ್ಬರ ಮೃತದೇಹವನ್ನು ಕರೆತರುತಿದ್ದಾಗ ಆಗುಂಬೆ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಪಲ್ಟಿಯಾಗಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಮೃತ ವ್ಯಕ್ತಿಯ ಮಗನಿಗೆ ಪೆಟ್ಟಾಗಿದ್ದು ತೀರ್ಥಹಳ್ಳಿಯ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯಿಂದ ರೈತ ಮಿತ್ರ ಕಾರ್ಯಕ್ರಮ : ರೈತರು ದೇಶದ ಅನ್ನದಾತರು, ಪ್ರತಿಯೊಬ್ಬ ನಾಗರಿಕರು ರೈತರನ್ನು ಗೌರವಿಸಬೇಕು : ಪ್ರಮೀಳಾ ಎಲ್ ಗೌಡ.

ರಿಪ್ಪನ್ ಪೇಟೆ : ದೇಶದ ಅಭಿವೃದ್ಧಿಗಾಗಿ ಹಾಗೂ ನಾಗರಿಕರ ಆಹಾರಕ್ಕಾಗಿ ರೈತರುಗಳು ಹಗಲಿರಲು ದುಡಿಯುತ್ತಿರುತ್ತಾರೆ. ರೈತರಗಳು ದೇಶಕ್ಕೆ ಅನ್ನ ನೀಡುವ ಅನ್ನದಾತರು ಅವರುಗಳನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ ಅಧ್ಯಕ್ಷೆ ಪ್ರಮೀಳಾ ಎಲ್ ಗೌಡ ಹೇಳಿದರು. ಪಟ್ಟಣದಲ್ಲಿ  ರೈತ ಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗಾಳಿ, ಮಳೆ, ಚಳಿ, ಬಿಸಿಲು ಇವುಗಳನ್ನು ಲೆಕ್ಕಿಸದೆ ಹಗಲಿರಲು ದೇಶದ ಒಳಿತಿಗಾಗಿ ಮತ್ತು ನಾಗರಿಕರ ಅಭಿವೃದ್ಧಿಗಾಗಿ ರೈತರು ಶ್ರಮವಹಿಸುತ್ತಾ ದುಡಿಯುತ್ತಾರೆ ಅವರುಗಳನ್ನು ಗೌರವಿಸುವುದು ಮತ್ತು…

Read More

ಕೊಡಚಾದ್ರಿ ಬೆಟ್ಟಕ್ಕೆ ಹೊರಟಿದ್ದ ಟಿಟಿ – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಬೆಂಗಳೂರಿನಿಂದ ಮಲೆನಾಡಿನ ಸುಂದರ ವಿಹಾರ ತಾಣವಾದ ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟಕ್ಕೆ ತೆರಳುತ್ತಿದ್ದ ಪ್ರವಾಸಿಗರು ಇದ್ದ ಟೆಂಪೋ ಟ್ರಾವಲರ್ ವಾಹನ ಹೊಸನಗರ ಸಮೀಪದ ಜಯನಗರದ ಚಾಮುಂಡಿಬೆಟ್ಟ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.  ಟಿಟಿ ವಾಹನ ಮಗುಚಿಬಿದ್ದ ಪರಿಣಾಮ ಅದರಲ್ಲಿದ್ದ ಪ್ರವಾಸಿಗರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಬ್ಬ ಪ್ರವಾಸಿಗರ ಕೈಗೆ ತೀವ್ರ ಪೆಟ್ಟಾಗಿದ್ದ ಕಾರಣ ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಕೆಂಚನಾಳದಲ್ಲಿ ರೈಲ್ವೆ ಹಳಿ ಮೇಲೆ ಉರುಳಿಬಿದ್ದ ಬೃಹದಾಕಾರದ ಮರ : ರೈಲ್ವೆ ಸಂಚಾರ ಅಸ್ತವ್ಯಸ್ತ

ರಿಪ್ಪನ್‌ಪೇಟೆ : ಕೆಂಚನಾಳ ರೈಲ್ವೆ ನಿಲ್ದಾಣದ ಮುಂಭಾಗದ ರೈಲು ಹಳಿಯ ಮೇಲೆ ಮರವೊಂದು ಉರುಳಿಬಿದ್ದ ಘಟನೆ ರವಿವಾರ ಬೆಳಗಿನ ಜಾವ ನಡೆದಿದೆ. ಕೆಂಚನಾಳ ರೈಲ್ವೆ ನಿಲ್ದಾಣದ ಎದುರುಗಡೆ ಇರುವ ಸುಮಾರು ನೂರು ವರ್ಷಕ್ಕೂ ಹಳೆಯ ಮರಕ್ಕೆ ನೆಲಕ್ಕುರುಳಿದೆ.ಇದರಿಂದ ತಾಳಗುಪ್ಪ-ಬೆಂಗಳೂರು ರೈಲು ಎರಡು ಗಂಟೆ ತಡವಾಗಿ ಸಂಚರಿಸಿತು. ತಾಳಗುಪ್ಪ-ಬೆಂಗಳೂರು ರೈಲು ಸಾಗರ ರೈಲ್ವೆ ನಿಲ್ದಾಣಕ್ಕೆ 06.30ಕ್ಕೆ ಆಗಮಿಸಬೇಕಾಗಿತ್ತು ಆದರೆ ಎರಡು ಗಂಟೆ ತಡವಾಗಿ ಅಂದರೆ 8:30ಕ್ಕೆ ಆಗಮಿಸಿದೆ. ಹಾಗೂ ಸಾಗರದಿಂದ-ಮೈಸೂರಿಗೆ ಹೋಗುವ ರೈಲು ಅರ್ಧ ಗಂಟೆ ತಡವಾಗಿ ಸಂಚರಿಸಿದೆ….

Read More

ಹುಂಚ ಸೊಸೈಟಿಯ ಐವರು ನಿರ್ದೇಶಕರ ರಾಜೀನಾಮೆ!!!!!! ಸೂಪರ್ ಸೀಡ್ ಆಗುತ್ತಾ ಹೊಂಬುಜಾ ಸೊಸೈಟಿ!!!!??????

ಕಳೆದ ಹಲವು ದಿನಗಳಿಂದ ವಿವಾದಗಳಿಂದಲೇ ಸುದ್ದಿಯಲ್ಲಿರುವ ಹೊಂಬುಜ ವ್ಯವಸಾಯ ಸಹಕಾರ ಸಂಘದ ಐವರು ನಿರ್ದೇಶಕರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೊಂಬುಜಾ ಸೊಸೈಟಿಯ ನಿರ್ದೇಶಕ ಸ್ಥಾನಕ್ಕೆ ಐವರು ರಾಜೀನಾಮೆ ನೀಡಿದ್ದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಈ ಹಿಂದೆ ಹಲವು ಬಾರಿ ಹೊಂಬುಜಾ ಸೊಸೈಟಿಯಲ್ಲಿ ಅಕ್ರಮ ನಡೆದಿದೆ ಎಂದು ಷೇರುದಾರರು ಆರೋಪಿಸುತಿದ್ದರು ತಿಪ್ಪೆ ಸಾರಿಸುತ್ತಿದ್ದ ಸಹಕಾರ ಇಲಾಖೆ ಈಗ ನಡೆದ ಆಡಿಟ್ ವರದಿಯಿಂದ ದಂಗು ಬಡಿದು ಕೂತಿದೆ ಎನ್ನಲಾಗುತ್ತಿದೆ. ಈಗಾಗಲೆ ಮೇಲ್ನೋಟಕ್ಕೆ ಹೆಚ್ಚು ಹಣದ ದುರುಪಯೋಗದ ವಾಸನೆ ಸಿಕ್ಕಿದ್ದು…

Read More

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅರಸಾಳು ಹೊನ್ನಪ್ಪ ಹೃದಯಘಾತದಿಂದ ನಿಧನ

ರಿಪ್ಪನ್ ಪೇಟೆ : ಅರಸಾಳು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅರಸಾಳು ಹೊನ್ನಪ್ಪ ಎಂ. ಬಿ.(76) ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಹೊನ್ನಪ್ಪ ರವರು ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದರು. ಮೃತರು ಪತ್ನಿ.ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ ಅರಸಾಳು ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು…

Read More