ಶಿವಮೊಗ್ಗ ಜೈಲಿನಲ್ಲಿ ಮಾರಾಮಾರಿ : ಒಬ್ಬನಿಗೆ ಆರು ಜನರಿಂದ ಥಳಿತ|jail
ಶಿವಮೊಗ್ಗ : ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಮೇಲೆ ಹಳೇ ದ್ವೇಷದಿಂದ ಇತರ ಆರು ಕೈದಿಗಳು ಹಲ್ಲೆ ನಡೆಸಿದ್ದಾರೆ. ನಾಗರಾಜ್ ಎಂಬ ವಿಚಾರಣಾಧೀನ ಕೈದಿ ಮೇಲೆ ಸಚಿನ್ ಅಲಿಯಾಸ್ ಸ್ಯಾಡೋ, ದರ್ಶನ್, ಪರಶುರಾಮ, ಅನಿಲ್ಕುಮಾರ್, ವಿಶ್ವನಾಥ, ವಿಶಾಲ್ ಎಂಬುವರು ಹಲ್ಲೆ ಮಾಡಿದ್ದಾರೆ. ನಾಗರಾಜ್ ಭದ್ರಾವತಿಯ ಎರಡನೇ ಅಪರ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರಾಗಲು ಜೈಲಿನಲ್ಲಿರುವ ವಿಡಿಯೋ ಕಾನ್ಫರೆನ್ಸ್ ಕೊಠಡಿಗೆ ತೆರಳುವಾಗ ಆರು ಕೈದಿಗಳು ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಜೈಲು ನಿರೀಕ್ಷಕ ಆತ್ಮಾನಂದ ಕುದರಿ ಮತ್ತು…