Headlines

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ವಿಧಿವಶ :

ರಾಷ್ಟ್ರ ಕವಿ ಕುವೆಂಪು ಅವರ ಸೊಸೆ, ಪೂರ್ಣಚಂದ್ರ ತೇಜಸ್ವಿ (84) ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ಇಂದು ಬೆಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನಲ್ಲಿ ವಾಸವಾಗಿದ್ದ ರಾಜೇಶ್ವರಿ ತೇಜಸ್ವಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದ ಕಾರಣ ಬೆಂಗಳೂರಿಗೆ ಆಗಮಿಸಿದ್ದರು.ಕಳೆದ ನಾಲ್ಕು ದಿನಗಳಿಂದ ನಗರದ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಪತಿ ಪೂರ್ಣಚಂದ್ರ ತೇಜಸ್ವಿ ನಿಧನದ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದ…

Read More

21 ವರ್ಷಗಳ ನಂತ್ರ ಭಾರತಕ್ಕೆ ವಿಶ್ವಸುಂದರಿ ಪಟ್ಟ- ಹರ್ನಾಜ್ ಕೌರ್ ಸಂಧು ಮಿಸ್ ಯೂನಿವರ್ಸ್ :

2021ರ 70ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತದ ಹರ್ನಾಜ್ ಕೌರ್ ಸಂಧು ನೂತನ ವಿಶ್ವ ಸುಂದರಿ ಪಟ್ಟ ಅಲಂಕರಿಸಿದ್ದಾಳೆ. ಮಿಸ್ ಯೂನಿವರ್ಸ್ 2021 ಸ್ಪರ್ಧೆಯಲ್ಲಿ ನಟಿ ಮತ್ತು ಮಾಡೆಲ್ ಹರ್ನಾಜ್ ಕೌರ್ ಸಂಧು ಅವರನ್ನು ಸ್ಪರ್ಧೆಯ ವಿಜೇತೆ ಎಂದು ಘೋಷಿಸುತ್ತಿದ್ದಂತೆ ಭಾರತದ ತ್ರಿವರ್ಣ ಧ್ವಜವು ಎತ್ತರಕ್ಕೆ ಹಾರಾಡಿದೆ. ಇಸ್ರೇಲ್‌ನ ದಕ್ಷಿಣ ನಗರವಾದ ಇಲಾಟ್‌ನಲ್ಲಿ ಡಿಸೆಂಬರ್ 12(ಭಾನುವಾರ) ರಂದು ವಿಶ್ವ ಸುಂದರಿ ಸ್ಪರ್ಧೆ ನಡೆದಿದೆ. ಮಿಸ್ ಯೂನಿವರ್ಸ್ 2021 ಹರ್ನಾಜ್ ಸಂಧು ಪಂಜಾಬ್‌ನ ಚಂಡೀಗಢ ಮೂಲದ ಮಾಡೆಲ್‌…

Read More

ಸಿನಿಮೀಯ ರೀತಿಯಲ್ಲಿ ಸರಗಳ್ಳನನ್ನು ಬೆನ್ನತ್ತಿ ಹಿಡಿದ ಶಿವಮೊಗ್ಗದ ಟ್ರಾಫಿಕ್ ಪೊಲೀಸ್ ಮುನೇಶಪ್ಪ

ಶಿವಮೊಗ್ಗ: ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಬಂಧಿಸುವಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ವಿ.ಹೆಚ್. ಮುನೇಶಪ್ಪ ಯಶಸ್ವಿಯಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಿನ್ನೆ ಮಧ್ಯಾಹ್ನ ಸಮಯದಲ್ಲಿ ಉಷಾ ನರ್ಸಿಂಗ್ ಹೋಂ ಬಳಿ ತಾಯಿ ಮತ್ತು ಮಗಳು ಬಸ್ ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಯುವತಿಯ ಕತ್ತಿನಲ್ಲಿದ್ದ ಸರಕ್ಕೆ ಕೈಹಾಕಿದ್ದಾರೆ. ಯುವತಿ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಾಗ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾರೆ. ಆಗ, ಯುವತಿ…

Read More

ಜಿಂಕೆ ಭೇಟೆಯಾಡಿ ಮಾಂಸ ತಯಾರಿಸುತ್ತಿದ್ದ ಇಬ್ಬರ ಬಂಧನ :

ಸಾಗರ: ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದುದನ್ನು ಅರಣ್ಯಾಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಸಾಗರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯತಿ ಬಳಸಗೋಡು ಗ್ರಾಮದಲ್ಲಿ ಜಿಂಕೆ ಮಾಂಸ ಸಮೇತ ಆರೋಪಿಗಳನ್ನು ಬಂದಿಸಲಾಗಿದೆ. ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನಕುಮಾರ ಹಾಗೂ ಸಾಗರ ACF ಶ್ರೀಧರ್ ಮತ್ತು RFO ಪ್ರಮೋದ್ ರವರ ಮಾರ್ಗದರ್ಶನದಲ್ಲಿ  ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ ತಂಡ ನೇತೃತ್ವದಲ್ಲಿ ದಾಳಿ ನಡೆಸಿದಾಗ ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ…

Read More

ಪ್ರೀತಿಸಿದ ಹುಡುಗಿಯ ಮನೆ ಮುಂದೆ ವಿಷ ಕುಡಿದು ಆಸ್ಪತ್ರೆಗೆ ಸೇರಿದ ಪಾಗಲ್ ಪ್ರೇಮಿ.!! ಪ್ರೇಮ್ ಕಹಾನಿ ಮೆ ಪಾಯಿಸನ್ ಸ್ಟೋರಿ !!!

ಹೊಸನಗರ : ಎಂಟು ವರ್ಷದ ಪ್ರೀತಿಯನ್ನು ಪ್ರಿಯತಮೆ ನಿರಾಕರಿಸಿದ್ದಕ್ಕೆ ಯುವತಿಯ ಮನೆಯ‌ ಮುಂದೆಯೇ ಯುವಕನೋರ್ವ ವಿಷ ಸೇವಿಸಿ‌ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ನಡೆದಿದೆ. ಯುವಕನ ವರ್ತನೆಗೆ ರೋಸತ್ತು,ಬೇಸರವಾಗಿ ಯುವತಿಯ ತಾಯಿ ಹೊಸನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನಿಗೆ 8 ವರ್ಷದ ಹಿಂದೆ ಜಯನಗರ ಯುವತಿಯೊಂದಿಗೆ ಪ್ರೀತಿ ಹುಟ್ಟಿದೆ. ಆರಂಭದಲ್ಲಿ ಇಬ್ವರಿಗೂ ಚೆನ್ನಾಗಿದ್ದ ಪ್ರೀತಿ ಕಾಲಕ್ರಮೇಣ ಯುವತಿಗೆ ಬೇಸರವೆನಿಸಿದೆ. ಯುವಕನ ವಿಪರೀತಿ ಕುಡಿತ ಹಾಗೂ ಆತನ ಇತರೆ ಚಟುವಟಿಕೆಗಳಿಗೆ ಯವತಿ ರೋಸತ್ತಿ…

Read More

ಯಶಸ್ವಿಯಾಗಿ ನಡೆದ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾವಳಿ : ಪುನೀತ್ ರಾಜ್‍ಕುಮಾರ್ ರಂತವರು ಪದೇ ಪದೇ ಕನ್ನಡ ನಾಡಿನಲ್ಲಿ ಜನಿಸಬೇಕು : ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ಪಟ್ಟಣದ ಆರ್ ಸಿಸಿ ಆಟದ ಮೈದಾನದಲ್ಲಿ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಇಲೆವೆನ್ ಸ್ಟಾರ್ ಕ್ರಿಕೆಟ್ ತಂಡ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಗೆದ್ದ ಎಕೆ ಲಯನ್ಸ್ ಕ್ರಿಕೆಟ್ ಕ್ಲಬ್ ಶಿವಮೊಗ್ಗ ತಂಡಕ್ಕೆ ಪುನೀತ್ ರಾಜ್‍ಕುಮಾರ್ ಟ್ರೋಫಿಯನ್ನು ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ವಿತರಿಸಿದರು. ನಂತರ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ, ಮಾನಸಿಕ ಆರೋಗ್ಯದ ಜೊತೆಗೆ ನಾಯಕತ್ವ ಗುಣ…

Read More

ಸೊರಬದಲ್ಲಿ ಎತ್ತು ತೊಳೆಯುವಾಗ ಕಾಲುಜಾರಿ ಬಿದ್ದು ವ್ಯಕ್ತಿ ಸಾವು :

ಸೊರಬ : ನದಿಯಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿ ಕಾಲು ಜಾರಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ತಾಲೂಕಿನ ಮೂಡಿ ಗ್ರಾಮದಲ್ಲಿ ನಡೆದಿದೆ. ಮೂಡಿ ಗ್ರಾಮದ ಶಶಿಧರ ಗೂಳೇರ್ (42) ಮೃತ ದುರ್ದೈವಿ. ಇಂದು ಬೆಳಗ್ಗೆ ಗ್ರಾಮದ ವರದಾ ನದಿಯಲ್ಲಿ ಎತ್ತುಗಳ ಮೈತೊಳೆಯಲು ಹೋದ ಸಂದರ್ಭದಲ್ಲಿ ಶಶಿಧರ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ….

Read More

ಕಾರಿನಲ್ಲಿ ಆಂಧ್ರದಿಂದ ಶಿವಮೊಗ್ಗ ಸಾಗಿಸುತ್ತಿದ್ದ 21 ಕೆ.ಜಿ ಗಾಂಜಾ ವಶಕ್ಕೆ: ನಾಲ್ವರ ಬಂಧನ

ಶಿವಮೊಗ್ಗ: ಆಂಧ್ರದಿಂದ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿದ್ದ 21 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆದಿರುವ ತುಂಗಾ ನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ನಗರಕ್ಕೆ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಕಾರ್ಯಾಚರಣೆ ನಡೆದಿದೆ.‌ ಶಿವಮೊಗ್ಗ ತಾಲೂಕಿನ ಹಾಲಲಕ್ಕವಳ್ಳಿ ಗ್ರಾಮದ ಬಳಿ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನೋವಾ ಕಾರಿನಲ್ಲಿ ಗಾಂಜಾವನ್ನು ಶಿವಮೊಗ್ಗಕ್ಕೆ ತರಲಾಗುತ್ತಿತ್ತು. ಕಾರಿನಲ್ಲಿದ್ದ ದೌಲತ್ ಅಲಿಯಾಸ್ ಗುಂಡು, ಮುಜೀಬ್ ಖಾನ್ ಅಲಿಯಾಸ್ ಬ್ರಸ್ಟ್, ಶೋಯೆಬ್ ಅಲಿಯಾಸ್ ಚೂಡಿ ಹಾಗೂ ಜಪ್ರುಲ್ಲಾ ಎಂಬುವರನ್ನು ಬಂಧಿಸಲಾಗಿದೆ. ಗಾಂಜಾ ಮೌಲ್ಯವು ಅಂದಾಜು 6…

Read More

ರಿಪ್ಪನ್ ಪೇಟೆಯ ನೇತ್ರಾ ಟೈಲರ್ ಗುರುಪಾದಪ್ಪ ನಿಧನ :

ರಿಪ್ಪನ್ ಪೇಟೆ: ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಪಟ್ಟಣದ ನಿವಾಸಿ, ಟೈಲರ್ ಗುರುಪಾದಪ್ಪ (ನೇತ್ರಾ ಟೈಲರ್) (65) ಅವರು ಹೃದಯಾಘಾತದಿಂದ ಶನಿವಾರ ನಿಧನರಾದರು. ರಿಪ್ಪನ್ ಪೇಟೆಯಲ್ಲಿ ನೇತ್ರಾ ಟೈಲರ್ ಎಂದೇ ಪ್ರಸಿದ್ದರಾಗಿದ್ದ ಇವರು ಕೆಲವು ವರ್ಷಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಪತ್ನಿ,ಇಬ್ಬರು ಪುತ್ರಿಯರು ಇದ್ದಾರೆ. ಭಾನುವಾರ ಬೆಳಿಗ್ಗೆ 10ಕ್ಕೆ ಬೈರಾಪುರ ಗ್ರಾಮದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನೇರವೆರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಬಸ್ ನಲ್ಲಿ ಶೃಂಗೇರಿ ಮೂಲದ ಮುಸ್ಲಿಂ ಯುವಕ, ಹಿಂದೂ ಯುವತಿಯ ರೋಮ್ಯಾನ್ಸ್ ; ಸಾರ್ವಜನಿಕರಿಂದ ತರಾಟೆ

ಶೃಂಗೇರಿ : ತಾಲೂಕು ಹಾಗೂ ತೀರ್ಥಹಳ್ಳಿ ಗಡಿಭಾಗದ ಬಿದರಗೋಡು ಗ್ರಾಮದ ಯುವಕನೊಬ್ಬ ಉಡುಪಿ ಮೂಲದ ಹಿಂದೂ ಯುವತಿಯಳೊಡನೆ ಅಸಭ್ಯವಾಗಿ ವರ್ತಿಸಿ ಹಿಂದೂ ಸಂಘಟಕರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಬಿದರಗೋಡಿನ ಸುನೈಫ್ ಇಬ್ರಾಹಿಂ ಎಂಬಾತ ಉಡುಪಿ-ಮಂಗಳೂರು ಬಸ್ ನಲ್ಲಿ ಉಡುಪಿ ಮೂಲದ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಹಾಗೂ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡು, ಥಳಿಸಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದೆ. ಲವ್ ಜಿಹಾದ್ ಆರೋಪ;…

Read More