Headlines

ಅನಂದಪುರದಲ್ಲಿ ಭರ್ಜರಿಯಾಗಿ ಆರಂಭಗೊಂಡ ಕಾಂಗ್ರೆಸ್ ಸದಸ್ಯತ್ವ ಅಭಿಯಾನ !!

ರಾಜ್ಯಾದ್ಯಂತ ಇಂದು ಡಿಕೆ ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಪ್ರಾರಂಭ ಮಾಡಲಾಗಿದೆ. ಜೂಮ್ ಆ್ಯಪ್ ನ ಮೂಲಕ ಇದೀಗ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ರಾಜ್ಯಾದ್ಯಂತ ಯುವ ಪೀಳಿಗೆಯನ್ನು ಸೆಳೆಯುವ ಉದ್ದೇಶದಿಂದ ಭರ್ಜರಿಯಾಗಿ ಇಂದಿನಿಂದ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಚಾಲನೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾಕ್ಟರ್  ರಾಜ ನಂದಿನಿ. ಪ್ರಧಾನ ಕಾರ್ಯದರ್ಶಿಯಾದ ಅಘ ಸುಲ್ತಾನ್ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ರತ್ನಾಕರ…

Read More

ಯೋಧರ ಸಾವು ಸಂಭ್ರಮಿಸುತ್ತಿರುವ ವಿಕೃತರಿಗೆ ನಡು ರಸ್ತೆಯಲ್ಲಿಯೇ ಗುಂಡಿಟ್ಟರು ತಪ್ಪಿಲ್ಲ ಎಂದ ಶಿವಮೊಗ್ಗ ಗ್ರಾಮಾಂತರ ಶಾಸಕ..

ಶಿವಮೊಗ್ಗ : ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸಶಸ್ತ್ರ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಇತರೆ ಯೋಧರ ಸಾವಿನ ಕುರಿತಂತೆ, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಮಾಡಿದವರ ವಿರುದ್ದ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ್ ಗರಂ ಆಗಿದ್ದಾರೆ. ಇಂತಹ ವಿಕೃತರನ್ನು ನಡು ರಸ್ತೆಯಲ್ಲಿಯೇ ಗುಂಡಿಟ್ಟು ಕೊಂದರು ತಪ್ಪಿಲ್ಲ..! ಎಂದು ಟ್ವೀಟ್ ಮಾಡಿದ್ದಾರೆ.  ಈ ಕುರಿತಂತೆ ಶುಕ್ರವಾರ ತಮ್ಮ ಅದಿಕೃತ ಟ್ವಿಟರ್ ಖಾತೆಯಲ್ಲಿ ಕೆ.ಬಿ.ಅಶೋಕನಾಯ್ಕ್ ಪೋಸ್ಟ್ ಒಂದನ್ನು ಹಾಕಿದ್ದಾರೆ.ರಕ್ಷಣಾ ವ್ಯವಸ್ಥೆಯಲ್ಲಿ ಮಹತ್ತರವಾದ ಪಾತ್ರವಹಿಸಿ ದೇಶಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟಿರುವ…

Read More

ರಿಪ್ಪನ್ ಪೇಟೆಯಲ್ಲಿ ಶ್ರದ್ದಾ ಭಕ್ತಿಯ ಷಷ್ಟಿ ಆಚರಣೆ :

ರಿಪ್ಪನ್‌ಪೇಟೆ: ಸುಬ್ರಹ್ಮಣ್ಯ ಷಷ್ಟಿಯ ಅಂಗವಾಗಿ ಇಲ್ಲಿನ ಇತಿಹಾಸ ಪ್ರಸಿದ್ದ ಸಿದ್ದಿ ವಿನಾಯಕ ಸ್ವಾಮಿ ದೇವಸ್ಥಾನ, ಬರುವೆ ಚೌಡೇಶ್ವರಿ ಅಮ್ಮನವರ  ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಷಷ್ಟಿ ಉತ್ಸವವು ವೈಭವದೊಂದಿಗೆ ಸಂಪನ್ನಗೊಂಡಿತು. ರಿಪ್ಪನ್‌ಪೇಟೆಯ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಚಂದ್ರಶೇಖರ್‌ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ  ಮತ್ತು ಮಹಾಮಂಗಳಾರತಿಯೊಂದಿಗೆ ಕಾರ್ತೀಕ ದೀಪೋತ್ಸವ ಜರುಗಿತು. ಕಾರ್ತಿಕ ದೀಪೋತ್ಸವ ವು ಸುತ್ತಮುತ್ತಲಿನ ಅಲಸೆ, ಬರುವೆ, ಹುಂಚದಕಟ್ಟೆ, ಶಿವಪುರ ಇನ್ನಿತರ ಹಲವು ಗ್ರಾಮಗಳಲ್ಲಿನ ದೇವಸ್ಥಾನದಲ್ಲಿ ಒಂದು ತಿಂಗಳ ಕಾಲ…

Read More

ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡಿಯೇ ತೀರುತ್ತೇವೆ : ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಮತಾಂತರ ಕಾಯ್ದೆ ಜಾರಿಗೆ ತರಲಿಕ್ಕಾದರೂ ವಿಧಾನ ಪರಿಷತ್ ನಲ್ಲಿ ಬಿಜೆಪಿಗೆ ಬಹುಮತ ಬೇಕು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಗೆಲುವಿಗೆ ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಅದ್ಯಾವ ಬುದ್ದಿ ಇದೆಯೋ ಗೊತ್ತಿಲ್ಲ. ಹಿಂದೂ ಧರ್ಮದ ಅವನತಿ ನಡೆಯುತ್ತಿದ್ದರೂ ಕೂಡ ಕೇವಲ ವೋಟಿನ ರಾಜಕಾರಣಕ್ಕಾಗಿಯೇ ಧರ್ಮ ವಿರೋಧ…

Read More

ವಿಧಾನ ಪರಿಷತ್ ಚುನಾವಣೆ : ಬಿಎಸ್ ವೈ,ಈಶ್ವರಪ್ಪ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಯ ಸದಸ್ಯರಿಂದ ಮತದಾನ : ರಿಪ್ಪನ್ ಪೇಟೆಯಲ್ಲಿ ಗ್ರಾಪಂ ಸದಸ್ಯರಿಂದ ಮತದಾನ

ವಿಧಾನ ಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ ಮಧ್ಯಾಹ್ನದವರೆಗೂ ಅನೇಕ ಪ್ರಮುಖರು ಮತ ಚಲಾಯಿಸಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿರುವ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಮತದಾನ ಮಾಡಿದರು. ಶಿಕಾರಿಪುರದಲ್ಲಿ ನಿಕಟಪೂರ್ವ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ರಾಘವೇಂದ್ರ ಮತಚಲಾಯಿಸಿದರೆ, ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ, ಆಯನೂರು ಮಂಜುನಾಥ್, ರುದ್ರೇಗೌಡ, ಮೇಯರ್ ಸುನೀತ ಅಣ್ಣಪ್ಪ ಒಳಗೊಂಡತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಒಟ್ಟಿಗೆ ಬಂದು ಮತ ಚಲಾಯಿಸಿದರು. ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ರವರು ತೀರ್ಥಹಳ್ಳಿ ಪಟ್ಟಣ…

Read More

ರಿಪ್ಪನ್ ಪೇಟೆ : ಪಿಯು ಕಾಲೇಜಿನ 56 ವಿದ್ಯಾರ್ಥಿಗಳ ಕೋವಿಡ್ ವರದಿ ಪ್ರಕಟ :

ರಿಪ್ಪನ್ ಪೇಟೆ : ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು,ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ. ಇಲ್ಲಿನ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗೆ ಕರೋನ ಸೋಂಕು ತಗುಲಿದ ಹಿನ್ನೆಲೆಯಲ್ಲಿ  ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಸ್ಲ್ಯಾಬ್ ಪರೀಕ್ಷೆ ನಡೆಸಲಾಗಿತ್ತು. ಎಲ್ಲಾ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಗಂಟಲು /ಮೂಗಿನ ದ್ರವದ RTPCR ಟೆಸ್ಟ್ ವರದಿ ನೆಗೆಟಿವ್ ಬಂದಿರುತ್ತದೆ ಎಂದು ತಿಳಿದುಬಂದಿದೆ. ಈ ಘಟನೆಯ…

Read More

ರಿಪ್ಪನ್ ಪೇಟೆ : ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಸೈನಿಕ ಮುಖ್ಯಸ್ಥರಿಗೆ ಹಾಗೂ ಅಧಿಕಾರಿಗಳಿಗೆ ಶ್ರದ್ಧಾಂಜಲಿ

ರಿಪ್ಪನ್ ಪೇಟೆ : ಬುಧವಾರ ತಮಿಳು ನಾಡಿನ  ಕುನೂರು ಸಮೀಪದಲ್ಲಿ ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಜನರಲ್ ಬಿಪಿನ್ ರಾವತ್ ಹಾಗೂ ಮೃತಪಟ್ಟ ಸೇನಾ ಅಧಿಕಾರಿಗಳಿಗೆ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಶ್ರದ್ದಾಂಜಲಿ ಕಾರ್ಯಕ್ರಮ ನಡೆಸಿ ಸಂತಾಪ ಸೂಚಿಸಲಾಯಿತು.  ಈ ಸಂಧರ್ಭದಲ್ಲಿ  ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾದಿ ಬಿಪಿನ್ ರಾವತ್ ಅವರು ಮೂರು ದಶಕಗಳಿಗೂ ಹೆಚ್ಚಿನ ಅವಧಿಗೆ ಭಾರತದ ಸೇವೆ ಮಾಡಿದ್ದಾರೆ. ಇತ್ತೀಚೆಗೆ ಪ್ರಪಂಚದ ಗಮನ…

Read More

ವಿಧಿಯಾಟಕ್ಕೆ ಹೊಸ ಟ್ರಾಕ್ಟರ್ ಬಲಿ ಪಡೆಯಿತೇ ಯುವ ರೈತನನ್ನು : ಹೊಸಕೊಪ್ಪದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವು: ವಿಧಿಯೇ ನೀನೆಷ್ಟು ಕ್ರೂರಿ

ಹೊಸ ಟ್ರಾಕ್ಟರ್ ನಲ್ಲಿ ಹೋಗುವಾಗ ವಿಧಿಯಾಟಕ್ಕೆ ಬಲಿಯಾಗಿ ಹೊಸಕೊಪ್ಪ ಗ್ರಾಮದ ಬಳಿ ಟ್ಯಾಕ್ಟರ್  ಪಲ್ಟಿಯಾಗಿ ಗುಂಡಿಗೆ ಬಿದ್ದಿದ್ದು ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ  ನಡೆದಿದೆ. ಹೊಸ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಎನ್ ಟಿ ರಸ್ತೆಯಿಂದ ಹೊಸಕೊಪ್ಪದ‌ ಕೆರೆ ಏರಿಗೆ ಬರುವಾಗ ಎದುರುಗಡೆ ಬಂದ ವಾಹನವನ್ನ ತಪ್ಪಿಸಲು ಹೋದ ಚಾಲಕ ನಿಯಂತ್ರಣ ಕಳೆದುಕೊಂಡು ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಟ್ರ್ಯಾಕ್ಟರ್ ನ ಚಾಲಕನ ಪಕ್ಕದಲ್ಲಿ ಕುಳಿತಿದ್ದ ಶಶಿನಾಯ್ಕ್(30) ಎಂಬುವವರು ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಶಶಿನಾಯ್ಕ್ ನ‌ ಮೈ ಮೇಲೆ ಟ್ರ್ಯಾಕ್ಟರ್…

Read More

ಶಿವಮೊಗ್ಗ ಕ್ಷೇತ್ರದ ಬಿಜೆಪಿ ವಿಧಾನ ಪರಿಷತ್ ಅಭ್ಯರ್ಥಿ ಡಿ ಎಸ್ ಅರುಣ್ ಗೆಲುವು ನಿಶ್ಚಿತ : ಎಂ ಬಿ ಮಂಜುನಾಥ್

ರಿಪ್ಪನ್ ಪೇಟೆ : ಶಿವಮೊಗ್ಗ ಕ್ಷೇತ್ರದ ಬಿಜೆಪಿ ವಿಧಾನ ಪರಿಷತ್ ಅಭ್ಯರ್ಥಿ ಡಿ ಎಸ್ ಅರುಣ್ ಗೆಲುವು ನಿಶ್ಚಿತವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕೆಲಸಗಳೇ ಡಿ ಎಸ್ ಅರುಣ್ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವ ಮೂಲಕ ವಿರೋಧ ಪಕ್ಷಗಳಿಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ ಎಂದು ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ತಿಳಿಸಿದ್ದಾರೆ. ಅವರು ಪೋಸ್ಟ್ ಮ್ಯಾನ್ ನ್ಯೂಸ್ ತಂಡದೊಂದಿಗೆ ಮಾತನಾಡಿ…

Read More

ಅರಸಾಳಿನ ಕಾಂಗ್ರೆಸ್ ಸದಸ್ಯೆ ಬೆಳಿಗ್ಗೆ ಕಮಲ ಹಿಡಿದು ಸಂಜೆ ವೇಳೆಗೆ ಮತ್ತೆ ವಾಪಾಸ್ ಕೈ ಹಿಡಿದ ರೋಚಕ ಘಟನೆ

ರಿಪ್ಪನ್ ಪೇಟೆ : ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಸಚಿವರಾದ ಕೆ ಎಸ್ ಈಶ್ವರಪ್ಪರವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದ ಅರಸಾಳು ಗ್ರಾಪಂ ಸದಸ್ಯೆ ಪೂರ್ಣಿಮಾ ಸಂಜೆಯಾಗುವಷ್ಟರಲ್ಲಿ ಮತ್ತೆ ಮರಳಿ ಕಾಂಗ್ರೆಸ್ ಗೆ ಸೇರಿದ್ದಾರೆ. ಆಪರೇಶನ್ ಕಮಲದ ಮೂಲಕ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯೆಯನ್ನು ಸೆಳೆದಿದ್ದ ಬಿಜೆಪಿಗೆ ರಿವರ್ಸ್‌ ಆಪರೇಶನ್ ಮಾಡುವ ಮೂಲಕ ಬೇಳೂರು ಗೋಪಾಲಕೃಷ್ಣ ಖಡಕ್ ಉತ್ತರ ನೀಡಿದ್ದಾರೆ. ಇಂದು ಬೆಳಿಗ್ಗೆ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿ ಡಿ…

Read More