ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಒಂದು ವರ್ಷ|punith

ಮೊನ್ನೆ ಮೊನ್ನೆ ನಡೆದಿದೆಯೇನೋ.. ಎಂಬ ಭಾವನೆ ಇಂದಿಗೂ ಜನರ ಮನಸ್ಸಿನಲ್ಲಿದೆ. ಅಪ್ಪು ಅಗಲಿಕೆಗೆ ಆಗಲೇ ಒಂದು ವರ್ಷ. ಕಳೆದ ವರ್ಷ ಅಕ್ಟೋಬರ್ 29ರಂದು ಇಡೀ ಕರುನಾಡು ಕಣ್ಣೀರಿಟ್ಟಿತ್ತು. ನಿನ್ನೆಯಷ್ಟೇ ಪುನೀತ್ ಕಟ್ಟಕಡೆಯ ಸಿನಿ-ಡಾಕ್ಯುಮೆಂಟರಿ ಅಥವಾ ಡಾಕ್ಯು-ಡ್ರಾಮಾ ಗಂಧದ ಗುಡಿ ರಿಲೀಸ್ ಆಗಿದೆ. ಕರ್ನಾಟಕ ರತ್ನ ಡಾ| ಪುನೀತ್ ರಾಜ್‍ಕುಮಾರ್ ರವರ ಮೊದಲ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್‍ಕುಮಾರ್ ಅಭಿಮಾನಿ…

Read More

ಹೊಸನಗರ : ಉರುಳಿಗೆ ಸಿಲುಕಿ ಚಿರತೆ ಸಾವು..!|leopard

ಹೊಸನಗರ : ಉರುಳಿಗೆ ಸಿಲುಕಿ ಚಿರತೆ ಸಾವು ! ಹೊಸನಗರ: ತಾಲೂಕಿನಲ್ಲಿ ನಗರ ಹೋಬಳಿ ವ್ಯಾಪ್ತಿಯ ಅಂಡಗದೋದೂರು ಗ್ರಾಮದ ಸರ್ವೆ ನಂಬರ್ 64 ರಲ್ಲಿ 4-5 ವರ್ಷ ಪ್ರಾಯದ ಗಂಡು ಚಿರತೆ ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಶುಕ್ರವಾರ ನಗರ ವಲಯ ಅರಣ್ಯ ಅಧಿಕಾರಿ ಸಂಜಯ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಿಲ್ಲಾ ವನ್ಯಜೀವಿ ಸಂರಕ್ಷಣ ವಿಭಾಗದ ವೈದ್ಯರನ್ನು ಸ್ಥಳಕ್ಕೆ ಕರೆಸಿ ಮೃತ…

Read More

ಕೆ ಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆಯಲ್ಲಿ ಕೆಎಸ್ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಆಂಜನೇಯ ಅಗ್ರಹಾರದ ಮೂರನೇ ತಿರುವಿನ ನಿವಾಸಿ ಲೋಕೇಶ್ ಎಂಬಾತನು ಬೈಕ್ ನಲ್ಲಿ ಹೋಗುತ್ತಿದ್ದಾಗ ನ್ಯೂಟೌನ್ ಪೊಲೀಸ್ ಠಾಣೆಯ ಸಮೀಪ ಕೆಎಸ್ ಆರ್ ಟಿ ಸಿ ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಸವಾರ…

Read More

ಶಿವಮೊಗ್ಗದ ಮಾರಿ ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರ ಬೇಡ ಎಂದ ಬಿಜೆಪಿ ಯವರು ನಗರದ ಸಿಟಿ ಮಾಲ್​ನಲ್ಲಿ ಮುಸ್ಲಿಂ ಉದ್ಯಮಿಯ ಫನ್​-ಗೇಮ್​ ಉದ್ಘಾಟಿಸುತ್ತಾರೆ : ಯಮುನಾ ರಂಗೇಗೌಡ

ಶಿವಮೊಗ್ಗ : ನಾಗರಿಕರಿಗೆ ಉತ್ತಮ ಆಡಳಿತ ಕೊಡಲು ಸಾಧ್ಯವಿಲ್ಲದಿದ್ದರೂ ನಾಗರಿಕರ ಹಿತಕಾಯುವಲ್ಲಿ ವಿಫಲರಾದರೂ ನಕಲಿ ಹಿಂದುತ್ವದ ಘೋಷಣೆ ಕೂಗುತ್ತಾ ಬಡ ಮುಸ್ಲಿಂ ವ್ಯಾಪಾರಿಗಳನ್ನು ದ್ವೇಷ ಮಾಡಿ, ಅವರ ದಿನನಿತ್ಯದ ಕೂಲಿಯನ್ನು ಕಿತ್ತುಕೊಂಡು ಕಾರ್ಪೊರೇಟ್ ಬಂಡವಾಳಶಾಹಿ ಮುಸ್ಲಿಮರೊಂದಿಗೆ ಕೈಜೋಡಿಸುತ್ತಿರುವ ನಕಲಿ ಹಿಂದುತ್ವವಾದಿಗಳು ಈ ಬಿಜೆಪಿ ಯವರು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ವಾಗ್ದಾಳಿ ನಡೆಸಿದ್ದಾರೆ. ಕಳೆದವಾರ ನಡೆದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವದಲ್ಲಿ ಯಾವುದೇ ಮುಸ್ಲಿಮರಿಗೆ ವ್ಯಾಪಾರ ಕೊಡಬಾರದೆಂದು ರೋಷಾವೇಷ ತೋರಿದ್ದ…

Read More

“ಒಂದು ಕಂತು ಬಾಕಿ – ರೈತನ ಮನೆಗೆ ನುಗ್ಗಿ ಜಾನುವಾರು ಎಳೆದೊಯ್ದ ಫೈನಾನ್ಸ್ ಗೂಂಡಾಗಳು!”

“ಒಂದು ಕಂತು ಬಾಕಿ – ರೈತನ ಮನೆಗೆ ನುಗ್ಗಿ ಜಾನುವಾರು ಎಳೆದೊಯ್ದ ಫೈನಾನ್ಸ್ ಗೂಂಡಾಗಳು!” ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಫೈನಾನ್ಸ್ ಕಂಪನಿಗಳ ‘ಗುಂಡಾಗಿರಿ’ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೇವಲ ಒಂದು ತಿಂಗಳ ಕಂತು ಬಾಕಿ ಇಟ್ಟ ಕಾರಣಕ್ಕೆ ರೈತನ ಜೀವಾಳವಾದ ಜಾನುವಾರುಗಳನ್ನು ಬಲಪ್ರಯೋಗದಿಂದ ಎಳೆದೊಯ್ದಿರುವ ಗೃಹಹಲ್ಲೆಯಂತ ಘಟನೆ ಸಿದ್ಲಿಪುರದಲ್ಲಿ ನಡೆದಿದೆ. ಸಿದ್ಲಿಪುರ ಗ್ರಾಮದ ಭರತ್ ಎಂಬ ಕೃಷಿಕರು 2 ಲಕ್ಷ ರೂಪಾಯಿ ಲೋನ್ ಪಡೆದಿದ್ದರು. ನಿಯಮಿತವಾಗಿ ತಿಂಗಳಿಗೆ ₹9,000 ಕಂತು ಪಾವತಿಸುತ್ತಿದ್ದರೂ, ಹಾಲಿಡುವ ಹಸು ಅಕಾಲಿಕವಾಗಿ ಸಾವನ್ನಪ್ಪಿದ…

Read More

RIPPONPETE | ಬೈಕ್ ಕಳ್ಳತನವೆಸಗಿದ್ದ ಆರೋಪಿಯ ಬಂಧನ

RIPPONPETE | ಬೈಕ್ ಕಳ್ಳತನವೆಸಗಿದ್ದ ಆರೋಪಿಯ ಬಂಧನ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ನಡೆದ ಬೈಕ್‌ ಕಳ್ಳತನ ಪ್ರಕರಣವನ್ನು ಪೊಲೀಸರು ಕೆಲವೇ ದಿನಗಳಲ್ಲಿ ಭೇದಿಸಿ ಆರೋಪಿಯನ್ನು ವಶಕ್ಕೆ ಪಡೆದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಅಕ್ಟೋಬರ್ 19ರ ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಕಣಬಂದೂರಿನ ವ್ಯಕ್ತಿಯೊಬ್ಬರು ಸತ್ಕಾರ ಲಾಡ್ಜ್‌ ಮುಂಭಾಗ, ರಾಧಾಕೃಷ್ಣ ಜ್ಯೂವೆಲರಿ ಪಕ್ಕದಲ್ಲಿ ಕೆಎ 14 ಇಎ 9708 ನೊಂದಣೆಯ ಹಿರೋ ಹೋಂಡಾ ಬೈಕ್ ನಿಲ್ಲಿಸಿದ್ದರು.ಸ್ವಲ್ಪ ಹೊತ್ತಿನ ನಂತರ ಮರಳಿ ಬಂದು ನೋಡಿದಾಗ ಬೈಕ್ ಕಾಣೆಯಾಗಿದ್ದು, ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗದೆ…

Read More

ಶಾಂತಿ ಸಹಬಾಳ್ವೆಯೇ ಕ್ರಿಶ್ಚಿಯನ್ ಧರ್ಮದ ಮೂಲ ಮಂತ್ರವಾಗಿದೆ : ಆರಗ ಜ್ಞಾನೇಂದ್ರ|church-ripponpet

ರಿಪ್ಪನ್‌ಪೇಟೆ : ಕ್ರಿಶ್ಚಿಯನ್ ಸಮುದಾಯದವರು ಸದಾ ಶಾಂತಿ ಸಹಬಾಳ್ವೆಯೊಂದಿಗೆ ಅರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಸರ್ವಧರ್ಮೀಯರಲ್ಲಿ ಸಮಾನತೆ ಸಹೋದರತ್ವವನ್ನು ಕಾಣುವುದರೊಂದಿಗೆ ತಮ್ಮ ಧರ್ಮದ ಸಂಘಟನೆಯನ್ನು ಬೆಳೆಸಿಕೊಂಡವರು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೆಂದ್ರ ಹೇಳಿದರು. ರಿಪ್ಪನ್‌ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ನವೀಕರಣಗೊಂಡು ನಾಳೆ ಲೋಕಾರ್ಪಣೆಗೊಳ್ಳಲಿರುವ ಗುಡ್‌ಶಫರ್ಡ್ ಚರ್ಚ್ ಗೆ ಭೇಟಿ ನೀಡಿ ಧರ್ಮಗುರುಗಳು ಹಾಗೂ ಕ್ರೈಸ್ತ ಬಾಂಧವರ ಜೊತೆ ಸಮಾಲೋಚನೆ ನಡೆಸಿ ಮಾತನಾಡಿ ಕ್ರಿಶ್ಚಿಯನ್ ಸಮುದಾಯ ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ…

Read More

ನಾರಾಯಣ ಗುರು ವಿಚಾರ ವೇದಿಕೆ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಪುನೀತ್ ಬೆಳ್ಳೂರು ನೇಮಕ :

ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಸಂಘಟನ ಕಾರ್ಯದರ್ಶಿಯಾಗಿ ಪತ್ರಕರ್ತ ಪುನೀತ್ ಬೆಳ್ಳೂರು ಅವರನ್ನ ಆಯ್ಕೆ ಮಾಡಿ   ರಾಜ್ಯ ಅಧ್ಯಕ್ಷರಾದ ಸತ್ಯಜಿತ್‌ ಸುರತ್ಕಲ್ ಅದೇಶ ಹೊರಡಿಸಿದ್ದಾರೆ. ನೂತನ ಹುದ್ದೆ ಅಲಂಕರಿಸಿದ ಪುನೀತ್ ಬೆಳ್ಳೂರು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿ ಸಂಘಟನೆಯು ನನಗೆ ಅತ್ಯಂತ ಜವಾಬ್ದಾರಿ ಹುದ್ದೆಯನ್ನ ನೀಡಿದೆ,ಹಾಗೂ ನನ್ನನ್ನು ಗುರುತಿಸಿದ ಶಿವಮೊಗ್ಗ ಜಿಲ್ಲಾ ಸಮಿತಿಗೆ ನಾನು ಧನ್ಯವಾದ ತಿಳಿಸುತ್ತೇನೆ,ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಈಗಾಗಲೇ ಹಲವು ಸಮಾಜ ಮುಖಿ ಕೆಲಸ ಮಾಡುತ್ತ…

Read More

ಫೆಬ್ರವರಿ 3 ರಿಂದ ಸಾಗರದ ಮಾರಿಕಾಂಬಾ ದೇವಿ ಜಾತ್ರೆ – ಮೂರು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ಈ ಬಾರಿ ಏನೇನಿರುತ್ತೇ..!!??

ಫೆಬ್ರವರಿ 3ರಿಂದ ಸಾಗರ ಮಾರಿಕಾಂಬಾ ದೇವಿ ಜಾತ್ರೆ – ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ಮಾಹಿತಿ ಸಾಗರ: ಪ್ರತಿ ಮೂರುವರ್ಷಕ್ಕೊಮ್ಮೆ ಸಕಲ ವಿಧಿ-ವಿಧಾನಗಳೊಂದಿಗೆ ಸಮಸ್ತ ಭಕ್ತಾಧಿಗಳು ಒಟ್ಟಾಗಿ ಸೇರಿ ನಡೆಸುವ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ಬರುವ ಫೆಬ್ರವರಿ 3ರಿಂದ ಆರಂಭವಾಗಿ 11ರವರೆಗೆ ಜರುಗಲಿದೆ. 9 ದಿನಗಳಕಾಲ ನಡೆ ಯುವ ದೇವಿಯ ಜಾತ್ರೆ ರಾಜ್ಯದ ಅತೀದೊಡ್ಡ ಜಾತ್ರೆಯಲ್ಲಿ ಒಂದು ಎನ್ನುವ ಪ್ರಸಿದ್ದಿ ಪಡೆದಿದೆ. ಎಂದು ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ತಿಳಿಸಿದರು….

Read More

ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ : ಯುವ ಕಾಂಗ್ರೆಸ್ ವತಿಯಿಂದ ಗೃಹ ಸಚಿವರ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು :

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಗೃಹಸಚಿವ ಆರಗ ಜ್ಞಾನೇಂದ್ರ ಕೋಮುಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆ ನೀಡಿದ್ದಾರೆ ಈ ಕಾರಣಕ್ಕೆ ಆದಷ್ಟು ಬೇಗ ರಾಜೀನಾಮೆ ಕೊಟ್ಟು ತೀರ್ಥಹಳ್ಳಿಯ ಗೌರವ ಕಾಪಾಡಿ ಎಂದು ಇಂದು ತೀರ್ಥಹಳ್ಳಿಯ ತಾಲೂಕು ಕಛೇರಿ ಮುಂಭಾಗ ನೆಡದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಕಿಮ್ಮನೆ ರತ್ನಾಕರ್ ವಾಗ್ದಾಳಿ ನೆಡೆಸಿದರು.  ಅವರೊಬ್ಬ ರಾಜ್ಯದ ಗೃಹಸಚಿವ, ರಾಜ್ಯದಲ್ಲಿ  ಶಾಂತಿ ಕಾಪಾಡುವಂತೆ ಮಾಡುವ ಕೆಲಸ ಅವರದ್ದು  ಯಾವುದೇ ಕೇಸ್ ಗೆ ಸಂಬಂಧಪಟ್ಟ ವಿಷಯವಾದರೂ ತನಿಖೆ ನೆಡೆಯುವದರೊಳಗೆ ಹೇಳಿಕೆ ನೀಡಬಾರದು. ಆದರೆ ಗೃಹಸಚಿವರು ವಿಷಯ…

Read More
Exit mobile version