Headlines

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News ಹೊಸನಗರ: ತಾಲೂಕಿನಾದ್ಯಂತ  ಕಳೆದ ಮೂರು ದಿನದಿಂದ ಬಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಸಂಕ ದಾಟಲು ಹೋದಾಗ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ. ಮೃತ ಮಹಿಳೆ ಶಶಿಕಲಾ ಬೆಳಿಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ…

Read More

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara  ಹೊಸನಗರ ತಾಲೂಕಿನ ಚಕ್ರಾ , ಸಾವೇಹಕ್ಲು ಜಲಾಶಯ ಭರ್ತಿಯಾಗಿದ್ದು ಗಮನ ಸೆಳೆಯುತ್ತಿದ್ದು ಜನರ ಮನಸೂರೆಗೊಂಡಿದೆ. ಶುಕ್ರವಾರ ಅವಳಿ ಜಲಾಶಯಗಳಿಗೆ ತಾಲೂಕು ಆಡಳಿತ ಮತ್ತು ಕರಿಮನೆ ಗ್ರಾಪಂ ವತಿಯಿಂದ ತಹಶೀಲ್ದಾರ್ ರಶ್ಮೀ ಹಾಲೇಶ್, ಶುಕ್ರವಾರ ಎರಡು ಜಲಾಶಯಗಳಿಗೆ ಗಂಗಾರತಿ ಬೆಳಗಿ ಬಾಗಿನ ತೇಲಿ ಬಿಡುವ ಮೂಲಕ‌ ಗೌರವ ಅರ್ಪಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ ನಾಡಿನ ಬೆಳಕಿಗಾಗಿ ಸುಧೀರ್ಘ…

Read More

RIPPONPETE | ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ

RIPPONPETE | ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ ರಿಪ್ಪನ್‌ಪೇಟೆ : ತಳಲೆ ಸೊಸೈಟಿಯ ಮಾಜಿ ಅಧ್ಯಕ್ಷರು , ಪಿಎಲ್ ಡಿ ಬ್ಯಾಂಕ್ ಮಾಜಿ ನಿರ್ದೇಶಕರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಮಳವಳ್ಳಿ ಗ್ರಾಮದ ಗೋಪಾಲಣ್ಣ ರವರು ಇಂದು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಅನಾರೋಗ್ಯದ ಕಾರಣ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಬುಧವಾರ ಬೆಳಗಿನಜಾವ ಮೃತಪಟ್ಟಿದ್ದಾರೆ. ತಳಲೆ ಪ್ರಾಥಮಿಕ ಸಹಕಾರ ಸಂಘದ ಮಾಜಿ…

Read More

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು

Anandapura |ಆನಂದಪುರದ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಟ್ರೈನ್ ಗೆ ಸಿಲುಕಿ ನಿಗೂಡ ಸಾವು ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ರೈಲ್ವೆ ಹಳಿ ಮೇಲೆ, ರೈಲಿಗೆ ತಲೆಕೊಟ್ಟು ಮೃತಪಟ್ಟ ರೀತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ‌ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್‌ ಅರುಣ್‌ ಕುಮಾರ್‌ ಅವರು ಕುಂಸಿಯಲ್ಲಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಬೆಳಗ್ಗೆ ರೈಲಿನಲ್ಲಿ ಆಗಮಿಸಿ ಕುಂಸಿ ನಿಲ್ದಾಣದಲ್ಲಿ ಇಳಿದಿದ್ದಾರೆ. ತಾವು ಬಂದಿದ್ದ ರೈಲಿಗೆ ಸಿಲುಕಿಯೇ ಅವರು ಸಾವನ್ನಪ್ಪಿದ್ದಾರೆ….

Read More

Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ

Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ ರಿಪ್ಪನ್‌ಪೇಟೆ;-ಇಲ್ಲಿನ ಸಾಗರ ರಸ್ತೆಗೆ  ಸಂಪರ್ಕಿಸುವ ಗ್ರಾಮ ಪಂಚಾಯ್ತಿ ಹಿಂಭಾಗದ ನಕಾಶೆ ಕಂಡ ರಸ್ತೆಯ ಮಧ್ಯದಲ್ಲಿ ವಿದ್ಯುತ್‌ಕಂಬವನ್ನು  ಅಳವಡಿಸಿರುವುದರ ಬಗ್ಗೆ ಸಾರ್ವಜನಿಕರು  ಮೆಸ್ಕಾಂ ಇಲಾಖೆಯ ವಿರುದ್ದ ತೀವ್ರ ಆಕ್ರೊಶ ವ್ಯಕ್ತಪಡಿಸಿದ್ದಾರೆ. ನಕಾಶೆ ಕಂಡ ರಸ್ತೆಯನ್ನು ಆಕ್ರಮಸಿಕೊಳ್ಳುತ್ತಿದ್ದಾರೆಂದು ನ್ಯಾಯಾಲಯದಲ್ಲಿ  ಈ ಹಿಂದೆ  ರಸ್ತೆಯ ನಿವಾಸಿಗಳು ದೂರು ದಾಖಲಿಸಿದ್ದು ನ್ಯಾಯಾಲಯ ಸಾರ್ವಜನಿಕರ ಮನವಿಗೆ ಸ್ಪಂದಿಸಿ 8 ಅಡಿ ಅಗಲದ ಸಂಪರ್ಕ  ರಸ್ತೆಗೆ…

Read More

Ripponpet | ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ

ನಿವೃತ್ತಿ ಎನ್ನುವುದು ವಿಶ್ರಾಂತ ಜೀವನವಾಗಬಾರದು : ಬಿ ಕೃಷ್ಣಪ್ಪ ರಿಪ್ಪನ್‌ಪೇಟೆ : ಪ್ರತಿಯೊಬ್ಬ ಸರಕಾರಿ ನೌಕರನೂ ಕಡ್ಡಾಯವಾಗಿ ನಿವೃತ್ತಿಯಾಗಲೇ ಬೇಕು ಆದರೆ ನಿವೃತ್ತಿ ಕೇವಲ ವೃತ್ತಿಗೆ ಹೊರತು ದೇಹ ಮತ್ತು ಮನಸ್ಸಿಗಲ್ಲ ಎಂದು ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ ಕೃಷ್ಣಪ್ಪ ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಎ ಮಂಜುನಾಥ್ ಅವರಿಗೆ ಬೀಳ್ಕೊಡುವ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿ…

Read More

72 ಗಂಟೆಗಳ ಶೋಧದ ಬಳಿಕ ಸಿಕ್ಕಿದ ಬೆಂಗಳೂರಿನ ಮಹಿಳೆಯ ಮೃತದೇಹ – ಮೂಕಾಂಬಿಕಾ ಭಕ್ತೆಯ ಅಂತಿಮ ಆಸೆ ನೆರವೇರಿಸಿಮಾನವೀಯತೆ ಮೆರೆದ ಸ್ಥಳೀಯರು

72 ಗಂಟೆಗಳ ಶೋಧದ ಬಳಿಕ ಸಿಕ್ಕಿದ ಬೆಂಗಳೂರಿನ ಮಹಿಳೆಯ ಮೃತದೇಹ – ಮೂಕಾಂಬಿಕಾ ಭಕ್ತೆಯ ಅಂತಿಮ ಆಸೆ ನೆರವೇರಿಸಿಮಾನವೀಯತೆ ಮೆರೆದ ಸ್ಥಳೀಯರು ಕೊಲ್ಲೂರಿನಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಸೌಪರ್ಣಿಕಾ ನದಿಯಲ್ಲಿ ಪತ್ತೆ – ಮಹಿಳೆಯ ಕೊನೆಯಾಸೆಯಂತೆ ಕೊಲ್ಲೂರಿನಲ್ಲಿಯೇ ಅಂತ್ಯಕ್ರಿಯೆ – ಮಾನವೀಯತೆ ಮೆರೆದ ಸ್ಥಳೀಯರು ಕೊಲ್ಲೂರು : ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬೆಂಗಳೂರಿನ ವಸುಧಾ ಚಕ್ರವರ್ತಿ (46) ಅವರ ಮೃತದೇಹ ಶನಿವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸರಹದ್ದಿನ ಸೌಪರ್ಣಿಕಾ ನದಿಯಲ್ಲಿ ಪತ್ತೆಯಾಗಿದೆ. ಅವರು ಮೂಕಾಂಬಿಕಾ ದೇವಿಯ…

Read More

ಹಸಿ ಅಡಿಕೆ ಕಳ್ಳತನ – ಅಡಿಕೆ ಸುಲಿಯುವ ಶೆಡ್‌ನಲ್ಲಿದ್ದ 9 ಚೀಲ ಅಡಿಕೆ ಲೂಟಿ

ಹಸಿ ಅಡಿಕೆ ಕಳ್ಳತನ – ಅಡಿಕೆ ಸುಲಿಯುವ ಶೆಡ್‌ನಲ್ಲಿದ್ದ 9 ಚೀಲ ಅಡಿಕೆ ಲೂಟಿ ಹಾಡಹಗಲೇ ಹಸಿ ಅಡಿಕೆ ಕಳ್ಳತನ ಪ್ರಕರಣ ನಡೆದಿದೆ. ಅಡಿಕೆ ಸುಲಿಯುವ ಶೆಡ್‌ನಲ್ಲಿ ಸಂಗ್ರಹಿಸಿಟ್ಟಿದ್ದ 25 ಚೀಲಗಳ ಪೈಕಿ ₹1.20 ಲಕ್ಷ ಮೌಲ್ಯದ 9 ಚೀಲ ಸುಲಿದ ಹಸಿ ಅಡಿಕೆಯನ್ನು ಕಳ್ಳರು ಲೂಟಿ ಮಾಡಿದ್ದಾರೆ ಎಂದು ಬೈರೆಗೌಡ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಭದ್ರಾವತಿ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ…

Read More

ಆಗುಂಬೆ ಘಾಟಿ ತಿರುವಿನಲ್ಲಿ ಬೃಹತ್ ಗಾತ್ರದ ಮರ ಬಿದ್ದು ಪ್ರಯಾಣಿಕರಿಗೆ ತೊಂದರೆ !

ತೀರ್ಥಹಳ್ಳಿ ::  ತಾಲೂಕಿನ ಆಗುಂಬೆ ಘಾಟಿ ಕೆಳಭಾಗದಿಂದ  ಮೂರನೇ ತಿರುವಿನಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದು ಬೆಳಗ್ಗಿನಿಂದ ಸರಿ ಸುಮಾರು ಇನ್ನೂರಕ್ಕೂ ಹೆಚ್ಚು ವಾಹನಗಳು ಘಾಟಿಯಲ್ಲಿಯೇ ಜಾಮ್  ಆಗಿದ್ದು ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ಅರಣ್ಯ ಇಲಾಖೆ ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದವರು ಈ ಬಗ್ಗೆ ಗಮನಹರಿಸಬೇಕು ಎಂಬುದಾಗಿ ವಾಹನ ಸವಾರರು ಮನವಿ ಮಾಡಿಕೊಂಡಿದ್ದು ಅರಣ್ಯ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಈ ರೀತಿ ರಸ್ತೆ ಬದಿಯಲ್ಲಿರುವ ಬೀಳುವ  ಮರಗಳನ್ನು ಮುಂಜಾಗ್ರತಾ ಕ್ರಮವಾಗಿ ತೆರವುಗೊಳಿಸಿದರೆ ಸೂಕ್ತ…

Read More

ಶ್ರೀಗಂಧ ಕಳ್ಳರ ಬಂಧನ – ಪೊಲೀಸ್ ನಾಯಿಯ ಸಹಾಯದಿಂದ ಕಳ್ಳನ ಬಂಧನ

ಶ್ರೀಗಂಧ ಕಳ್ಳರ ಬಂಧನ – ಪೊಲೀಸ್ ನಾಯಿಯ ಸಹಾಯದಿಂದ ಕಳ್ಳನ ಬಂಧನ ಶಿಕಾರಿಪುರ, ಆ. 12 – ತಾಲ್ಲೂಕಿನ ಕೆಂಗಟ್ಟೆ ಶ್ರೀಗಂಧ ಮೀಸಲಿನಲ್ಲಿ ಶ್ರೀಗಂಧ ಮರ ಕಳ್ಳತನಕ್ಕೆ ಯತ್ನಿಸಿದವರ ವಿರುದ್ಧ ವಲಯ ಅರಣ್ಯಾಧಿಕಾರಿ ರೇವಣಸಿದ್ಧಯ್ಯ ಬಿ. ಹಿರೇಮಠ್ ಹಾಗೂ ತಂಡ ಶೀಘ್ರ ಕಾರ್ಯಾಚರಣೆ ನಡೆಸಿ ಒಬ್ಬ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಶಿವಮೊಗ್ಗದ ಇಂದಿರಾನಗರ ಮೂಲದ ಆರು ಮಂದಿ ಆರೋಪಿಗಳು ರಾತ್ರಿ ವೇಳೆ, ವಿಶೇಷವಾಗಿ ಮಳೆಯ ಸಮಯವನ್ನು ಸದುಪಯೋಗಪಡಿಸಿಕೊಂಡು, ಬೇಲಿ ಕತ್ತರಿಸಿ ಅರಣ್ಯ ಪ್ರದೇಶಕ್ಕೆ ಪ್ರವೇಶಿಸಿದ್ದರು. ಅವರು ಶ್ರೀಗಂಧ…

Read More