Headlines

ರಿಪ್ಪನ್‌ಪೇಟೆ : ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ರವರಿಗೆ ಹಿಂದೂಪರ ಸಂಘಟನೆಗಳಿಂದ ಶ್ರದ್ದಾಂಜಲಿ

ರಿಪ್ಪನ್ ಪೇಟೆ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಸಂಜೆ ಬಿಜೆಪಿ ಯುವ ಮೋರ್ಚಾ ಧುರೀಣ ಪ್ರವೀಣ್‌ ನೆಟ್ಟಾರು ಅವರನ್ನು ಅಮಾನುಷವಾಗಿ ಹತ್ಯೆಗೈದ ಘಟನೆಯನ್ನು ಖಂಡಿಸಿ ರಿಪ್ಪನ್‌ಪೇಟೆಯ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮೇಣದ ಬತ್ತಿ ಹಚ್ಚಿ ಶ್ರದ್ದಾಂಜಲಿ ಸಲ್ಲಿಸಿದರು. ಪಟ್ಟಣದಲ್ಲಿ ಇಂದು ಹಿಂದೂಪರ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಮೊಂಬತ್ತಿ ಹಚ್ಚಿ,2ನಿಮಿಷ ಮೌನಾಚರಣೆ ನಡೆಸಿ ಬಳಿಕ ಪ್ರವೀಣ್ ನೆಟ್ಟಾರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಮುಖಂಡರಾದ ಆರ್…

Read More

ಜಿಪಂ ಟಿಕೇಟ್ ಸಿಗದೇ ವೀರೇಶ್ ಆಲುವಳ್ಳಿ ರಾಜಕೀಯ ಅಲೆಮಾರಿಯಾಗುವ ದಿನ ದೂರವಿಲ್ಲ : ಉಮಾಕರ್ ಕಾನುಗೋಡು

ರಿಪ್ಪನ್‌ಪೇಟೆ : ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ವಿರುದ್ದ ನಾಲಗೆ ಹರಿಯಬಿಟ್ಟಿರುವ ವೀರೇಶ್ ಆಲುವಳ್ಳಿಯವರಿಗೆ ಗೋಪಾಲಕೃಷ್ಣ ರವರ ಬಗ್ಗೆ ಆಗಲಿ ಅಥವಾ ಕಾಂಗ್ರೆಸ್ ಪಕ್ಷದ ಮುಖಂಡರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಅರಸಾಳು ಗ್ರಾಪಂ ಅಧ್ಯಕ್ಷರಾದ ಉಮಾಕರ್ ಕಾನುಗೋಡು ಹೇಳಿದ್ದಾರೆ. ಇಂದು ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಆಲುವಳ್ಳಿ ವೀರೇಶ್ ರವರು ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರಿದವರೇ.ಕಳೆದ ವಿಧಾನಸಬೆ ಚುನಾವಣ ಸಂಧರ್ಭದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರ ಸಾಗರ ಕ್ಷೇತ್ರದಲ್ಲಿ…

Read More

ರಾಜ್ಯದಲ್ಲಿರುವುದು ಕೊಲೆಗಡುಕ ಸರ್ಕಾರ : ಬೇಳೂರು ಗೋಪಾಲಕೃಷ್ಣ

ತೀರ್ಥಹಳ್ಳಿ :  ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷದ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಜನ ಜಾಗೃತಿಯ ಪಾದಯಾತ್ರೆಯಲ್ಲಿ  ಭಾಗಿಯಾಗಿ ಮಾತನಾಡಿದ ಬೇಳೂರು ಗೋಪಾಲ ಕೃಷ್ಣ ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆ ನೆಡೆಸಲು ಆದೇಶ ಬಂದಿರುವುದರಿಂದ ಇವತ್ತು ಪ್ರಥಮ ಬಾರಿಗೆ ಕಡಿದಾಳ್ ಮಂಜಪ್ಪ ಅವರ ಸಮಾಧಿಯ ಸ್ಥಳದಲ್ಲಿ ಪೂಜೆ ಮಾಡಿ ಆರ್ ಎಂ ಮಂಜುನಾಥ್…

Read More

ಶಿವಮೊಗ್ಗ ಪೊಲೀಸರ ವಿಶೇಷ ಕಾರ್ಯಾಚರಣೆ : ತಲವಾರ್,ಡ್ರ್ಯಾಗರ್ ಗಳು ಪತ್ತೆ

ಶಿವಮೊಗ್ಗ ನಗರದಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಅನುಮಾನಾಸ್ಪದವಾಗಿ ಓಡಾಡುತ್ತಿರುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಮಾರಾಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ನಗರದಲ್ಲಿ 50 ಚೆಕ್ ಪೋಸ್ಟ್ ತೆರೆದು ಅನುಮಾನಾಸ್ಪವಾಗಿ ಓಡಾಡುವ ವಾಹನಗಳು ಮತ್ತು ವ್ಯಕ್ತಿಗಳನ್ನು ತಪಾಸಣೆ ಹಾಗೂ ಅಪರಾಧ ಹಿನ್ನೆಲೆಯುಳ್ಳವರ ಮನೆಗಳ ಮೇಲೆ ಪೊಲೀಸರು ದಾಳಿ‌ ನಡೆಸಿ ತಪಾಸಣೆ ನಡೆಸಿದ್ದಾರೆ. ಅಲ್ಲದೇ ನಿರ್ಜನ‌ ಪ್ರದೇಶದಲ್ಲಿ ಕುಡಿದು ಸಾರ್ವಜನಿಕರಿಗೆ ತೊಂದರೆ ಕೊಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಅವರ ವಿರುದ್ಧ 11 ಅಬಕಾರಿ ಪ್ರಕರಣ, 350 ಸಂಚಾರಿ…

Read More

ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಮುಂದಾದ ರಿಪ್ಪನ್‌ಪೇಟೆಯ ಠಾಣಾಧಿಕಾರಿ ಶಿವಾನಂದ್ ಕೋಳಿ : ಸಾರ್ವಜನಿಕರಿಂದ ವ್ಯಕ್ತವಾದ ಭಾರಿ ಪ್ರಶಂಸೆ

ಪೊಲೀಸ್ ಇಲಾಖೆ ಜನರ ರಕ್ಷಣೆ ಹಾಗೂ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದೆ.ಜನ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ವಾಹನ ಸವಾರರಿಗೆ ಅನೇಕ ರೀತಿಯ ಅಭಿಯಾನ ಹಾಗೂ ಅರಿವು ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಮೂಡಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತಗಳ ಸಂಖ್ಯೆ  ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅದೆಷ್ಟೋ ಕುಟುಂಬಗಳು ಅನಾಥವಾಗಿವೆ.ಈ ದಿಸೆಯಲ್ಲಿ ಅಪಘಾತ ತಡೆಯಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ  ರಿಪ್ಪನ್ ಪೇಟೆ ಪೊಲೀಸ್ ಇಲಾಖೆ ವಿಶಿಷ್ಟ ರೀತಿಯಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ರಿಪ್ಪನ್ ಪೇಟೆಯ ಪೊಲೀಸ್…

Read More

ಆಗಸ್ಟ್ 2ಕ್ಕೆ ಇತಿಹಾಸ ಪ್ರಸಿದ್ಧ ನಾಗರಹಳ್ಳಿ ಜಾತ್ರಾ ಮಹೋತ್ಸವ :

ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ನಾಗರಹಳ್ಳಿಯ ಶ್ರೀ ನಾಗೇಂದ್ರಸ್ವಾಮಿಯ ದೇವಸ್ಥಾನದಲ್ಲಿ 02-08-2022  ರ ಮಂಗಳವಾರ ನಾಗರಪಂಚಮಿ ಅಂಗವಾಗಿ ವಾರ್ಷಿಕ ಜಾತ್ರಾ ಮಹೋತ್ಸವ ಏರ್ಪಡಿಸಲಾಗಿದೆ. ಅಗಸ್ಟ್ 02 ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚಾ ಸಮೀಪದ ನಾಗರಹಳ್ಳಿಯ ಶ್ರೀ ನಾಗೇದ್ರಸ್ವಾಮಿಯ ದೇವಸ್ಥಾನದಲ್ಲಿ ನಾಗರಪಂಚಮಿ ಅಂಗವಾಗಿ ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ ಹಾಗೂ ಮಧ್ಯಾಹ್ನ ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ನಾಗೇಂದ್ರಸ್ವಾಮಿ ದೇವಸ್ಥಾನದ ಅಧ್ಯಕ್ಷರಾದ ಗೇರುಗಲ್ ಸತೀಶ್ ತಿಳಿಸಿದ್ದಾರೆ.

Read More

ಬಿಜೆಪಿ ಪಕ್ಷದ ಯುವ ಮುಖಂಡನ ಬರ್ಬರ ಹತ್ಯೆ : ಶಿವಮೊಗ್ಗ ನಗರ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ

ಬಿಜೆಪಿ ಯುವ ಮುಖಂಡನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಮಂಗಳೂರು ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಬೆಳ್ಳಾರೆಯ ನೆಟ್ಟಾರು ನಿವಾಸಿ ಪ್ರವೀಣ್ ನೆಟ್ಟಾರು(32) ಎಂದು ಗುರುತಿಸಲಾಗಿದೆ. ಇವರು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಫಾರ್ಮ್ ಹೊಂದಿರುವ ಪ್ರವೀಣ್ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಫಾರ್ಮ್ ಮುಚ್ಚಿ ಮನೆಗೆ ಹೋಗಲು ಸಿದ್ಧವಾಗುತ್ತಿದ್ದ ವೇಳೆ ಈ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ. ಬೈಕ್‌ನಲ್ಲಿ ಬಂದ ಇಬ್ಬರು…

Read More

ಒಂದು ಬೈಕ್ ಕಳ್ಳತನದ ತನಿಖೆ ಕೈಗೊಂಡ ಪೊಲೀಸರಿಗೆ ಕಳ್ಳರು ಕೊಟ್ಟರು ಬಿಗ್ ಶಾಕ್.!!!!!! : 16 ಬೈಕ್ ಸೇರಿ 1 ಕಾರು ವಶ

ಒಂದು ಬೈಕ್ ಬೆನ್ನತ್ತಿದ್ದ ಪೊಲೀಸರಿಗೆ ದೊರೆತಿದ್ದು ಬರೋಬ್ಬರಿ 16 ಬೈಕ್,ಒಂದು ಕಾರು ಜೊತೆಗೆ ಶ್ರೀಗಂಧವೂ ಪತ್ತೆಯಾಗಿದೆ. ಬೈಕ್ ವೊಂದರ ಕಳ್ಳತನ ಪ್ರಕರಣದ ಬೆನ್ನತ್ತಿದ ಶಿರಾಳಕೊಪ್ಪ ಪೊಲೀಸರಿಗೆ ಕಳ್ಳರು ಕೊಟ್ಟರು ಬಿಗ್ ಶಾಕ್. ಶಿರಾಳಕೊಪ್ಪ ಪಟ್ಟಣದ ಬಸ್ ನಿಲ್ದಾಣದ ಹತ್ತಿರ ನಿಲ್ಲಿಸಿದ್ದ ಕೆ.ಎ-17 ಇ.ಎ-4008 ನೋಂದಣಿ ಸಂಖ್ಯೆಯ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳುವು ಆಗಿರುವ ಬಗ್ಗೆ ಠಾಣೆಯಲ್ಲಿ ದೂರು‌ ದಾಖಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಪ್ರಾರಂಭಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಈ ಸಂಬಂಧ ಪಿಎಸ್ಐ…

Read More

ಕೋಡೂರು ಬಳಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು,ಇನ್ನೊಬ್ಬನ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ: ಕೋಡೂರಿನ ಮಂದಾರ ಹೋಟೆಲ್ ಎದುರುಗಡೆ ಇಂದು ಮಧ್ಯಾಹ್ನ 03 ಗಂಟೆ ಸುಮಾರಿಗೆ ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿದ್ದು ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ‌. ಮೃತನನ್ನು ಹೆಚ್ ಕುನ್ನೂರು ನಿವಾಸಿ ಶೇಷಪ್ಪ ಎಂದು ಗುರುತಿಸಲಾಗಿದೆ. ಕೋಡೂರಿನಿಂದ ಹೊಸನಗರ ಕಡೆ ಹೋಗುವಾಗ ಮಂದಾರ ಹೋಟೆಲ್ ಬಳಿ ಹೊಸನಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತ್ತಿದ್ದ ಇಬ್ಬರು ಸವಾರರಿದ್ದ ಪಲ್ಸರ್ ಬೈಕ್ ಗುದ್ದಿದ ಪರಿಣಾಮ ಸೂಪರ್ ಎಕ್ಸ್ಎಲ್ ಬೈಕ್ ನಲ್ಲಿ ತೆರಳುತ್ತಿದ್ದ ಶೇಷಪ್ಪನ…

Read More

ಕೆಂಚನಾಲ ಮಾರಿಕಾಂಬ ಜಾತ್ರೆಗೆ ಹರಿದು ಬಂದ ಭಕ್ತಸಾಗರ :

ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು.  ಜಗತ್ತನ್ನೇ ತಲ್ಲಣ ಗೊಳಿಸಿದ ಕೊರೊನಾ ಸೋಂಕಿನಿಂದ ಕಳೆದ ಎರಡು ವರ್ಷ ಜಾತ್ರೆಯನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಜಾತ್ರೆಗೆ ಯಾವುದೇ ನಿರ್ಬಂಧಗಳು ಇಲ್ಲದೆ ಇರುವ ಕಾರಣದಿಂದ ಮಾರಿಕಾಂಬೆ ದೇವಿಯ ಭಕ್ತರು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ…

Read More