ರಿಪ್ಪನ್ಪೇಟೆ : ಕಳಪೆ ರಸ್ತೆ ಕಾಮಗಾರಿ ಕಂಡು ಸಿಡಿಮಿಡಿಗೊಂಡ ಶಾಸಕ ಹರತಾಳು ಹಾಲಪ್ಪ |Ripponpet
ರಿಪ್ಪನ್ಪೇಟೆ: ಇಲ್ಲಿನ ವಿನಾಯಕ ನಗರದ ದುರ್ಗಾ ಪರಮೇಶ್ವರಿ ದೇವಸ್ಥಾನದ ರಸ್ತೆ ಮತ್ತು ಬಾಕ್ಸ್ ಚರಂಡಿ ಕಾಮಗಾರಿಗೆ 35 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುತ್ತಿರುವ ಕಾಮಗಾರಿ ಕಳಪೆ ಗುಣಮಟ್ಟದಲ್ಲಿ ಮಾಡಲಾಗುತ್ತಿದೆ ಎಂದು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಿಡಿಮಿಡಿಗೊಂಡು ತರಾಟೆಗೆ ತೆಗೆದುಕೊಂಡರು. ಇಂದು ಕಾಮಗಾರಿ ನಡೆಯುವ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಕೆಲಸಗಾರರ ಬಳಿ ಎಷ್ಟು ಸಿಮೆಂಟ್ ಹಾಕುತ್ತಿದ್ದೀರಾ ? ಎಂದು ಕೇಳಿದಾಗ ತಡವರಿಸಿ ಕೆಲಸಗಾರ 10 ಚೀಲ ಎಂದು…