ಬೇಳೂರು ಅಲೆಮಾರಿ ರಾಜಕಾರಣ ಬಿಟ್ಟು ರಾಜಕೀಯ ಭವಿಷ್ಯ ರೂಪಿಸಿಕೊಳ್ಳಲಿ : ವೀರೇಶ್ ಆಲುವಳ್ಳಿ ವಾಗ್ದಾಳಿ
ಹೊಸನಗರ: ನೀವು ಇನ್ನೂ ಮುಂದೆಯು ರಾಜಕೀಯ ಅಲೆಮಾರಿಯಾಗೆ ಇರ್ತಿರಿ, ಮೊದಲು ನಿಮ್ಮ ರಾಜಕೀಯ ಭವಿಷ್ಯ ಕಟ್ಟಿಕೊಳ್ಳಲು ಮುಂದಾಗಿ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಕಿಡಿಕಾರಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಇದುವರೆಗೂ ಬಿ ಫಾರಂ ಸಿಗದೆ ಹತಾಶರಾಗಿರುವ ಗೋಪಾಲಕೃಷ್ಣ ಬೇಳೂರು ರವರು ಶಾಸಕ ಹರತಾಳು ಹಾಲಪ್ಪ ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರಿಗೆ ಏಕವಚನದಲಲ್ಲದೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಂಗಾರಪ್ಪವರು…