Headlines

ರಿಪ್ಪನ್ ಪೇಟೆ: ಮಳೆ ಬಂದಾಗ ಈಜುಕೊಳವಾಗುವ ಆಟೋ ಸ್ಟ್ಯಾಂಡ್, ಕಾಟಾಚಾರದ ಬ್ಯಾರಿಕೇಡ್ ನಿಂದ ಸುಗಮ ಸಂಚಾರಕ್ಕೆ ಅಡ್ಡಿ:

ರಿಪ್ಪನ್ ಪೇಟೆ :ಪಟ್ಟಣದ ತೀರ್ಥಹಳ್ಳಿ ಮುಖ್ಯ ರಸ್ತೆಯಲ್ಲಿರುವ ಆಟೋ ಸ್ಟ್ಯಾಂಡ್ ಬಳಿ ಮಳೆ ಬಂದರೆ ಸಾಕು ಮಳೆ ನೀರು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಈಜುಕೊಳದಂತಾಗಿ ರಸ್ತೆಯ ಮೇಲೆ ನೀರು ಹರಿಯುತ್ತದೆ ಇದರಿಂದ ಪಾದಚಾರಿಗಳಿಗೆ ಹಾಗು ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ ಇದರಿಂದ ಅನೇಕ ಸಣ್ಣಪುಟ್ಟ ಅಪಘಾತಗಳು ನಡೆದ ಉದಾಹರಣೆಗಳಿವೆ.  ಒಂದು ಕಡೆ ಮಳೆ ನೀರು ಹೋಗಲು ವ್ಯವಸ್ಥೆ ಇಲ್ಲದೆ ಈಜುಕೊಳವಾಗಿದ್ದರೆ ಇನ್ನೊಂದು ಕಡೆ ಕಾಟಚಾರಕ್ಕೆ ಹಾಕಿರುವ ಬ್ಯಾರಿಕೇಡ್, ತೀರ್ಥಹಳ್ಳಿ ರಸ್ತೆ ಯಲ್ಲಿ ಒಂದು ಕಡೆ…

Read More

ಹೆಣ್ಣು ಮಕ್ಕಳು ಮನೆಯಲ್ಲೆ ಇರಿ ಎನ್ನಲು ಪೊಲೀಸ್ ವ್ಯವಸ್ಥೆ ಬೇಕಾ : ಕಿಮ್ಮನೆ ರತ್ನಾಕರ್:

ತೀರ್ಥಹಳ್ಳಿ : ಆರಗ‌ ಜ್ಞಾನೇಂದ್ರ ರವರ ಹೇಳಿಕೆಯಿಂದ ತೀರ್ಥಹಳ್ಳಿಯ ಘನೆತೆಗೆ ಕುಂದು ಬರುತ್ತಿದೆ. ಅವರು ಪ್ರಭುದ್ಧತೆಯಿಂದ ಹೇಳಿಕೆಗಳನ್ನು ನೀಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ‌ ಜ್ಞಾನೇಂದ್ರ ಅವರ ಹೇಳಿಕೆಯಿಂದ ಗೃಹ ಸಚಿವ ಸ್ಥಾನಕ್ಕೆ ಅರ್ಹರಲ್ಲ ಎಂಬ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್​ನವರನ್ನು ಗುರಿಯಾಗಿಟ್ಟುಕೊಂಡು ಹೇಳಿಕೆಗಳನ್ನು ನೀಡಬಾರದು. ರಾಜ್ಯದ 6 ಕೋಟಿ ಜನರನ್ನು ನೋಡಿಕೊಂಡು ಹೇಳಿಕೆಗಳನ್ನು ನೀಡಬೇಕು. ಅಧಿಕಾರದಲ್ಲಿದ್ದಾಗ ಒಂದು ಪಕ್ಷದ ಪರವಾಗಿ ಮಾತನಾಡಬಾರದು. ಕಾಂಗ್ರೆಸ್​ನವರು ಅತ್ಯಾಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದು…

Read More

ರಿಪ್ಪನ್‌ಪೇಟೆ: ಪ್ರೀತಿಯನ್ನು ಶಂಕಿಸಿ ಯುವತಿಯನ್ನು ಕೊಲೆಗೈದು ವಿಷ ಸೇವಿಸಿದ್ದ ಭಗ್ನ ಪ್ರೇಮಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು!

ರಿಪ್ಪನ್‌ಪೇಟೆ: ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ನ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಾಗರ ತಾಲೂಕಿನ ಜೋಗ ಸಮೀಪದ ಕಾನೂರು ಗ್ರಾಮದ ಯುವತಿ ಕವಿತಾ (21) ಎಂಬಾಕೆಯನ್ನು ರಿಪ್ಪನ್‌ಪೇಟೆಯಲ್ಲಿ ಪಿಯುಸಿ ಓದುತ್ತಿರುವಾಗ ಪರಿಚಯ ಮಾಡಿಕೊಂಡು ಕಳೆದ ಐದಾರು ವರ್ಷದಿಂದ ಪ್ರೀತಿಸಿ ನಂತರ ಆಕೆ ಮೋಸ ಮಾಡಿ ಬೇರೊಂದು ಹುಡುಗನನ್ನು ಪ್ರೀತಿ ಮಾಡುತ್ತಿದ್ದಾಳೆಂಬ ಕಾರಣಕ್ಕೆ ತನ್ನ ಊರಿಗೆ ಕರೆಯಿಸಿಕೊಂಡು ವೇಲ್ ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿ ನಂತರ ತಾನು ಕಳೆನಾಶಕ ಕುಡಿದು ಆಸ್ಪತ್ರೆ ಸೇರಿದ ಯುವಕ ಚಿಕಿತ್ಸೆ…

Read More

ಸಾಗರ : ಕೊರೊನಾ ಜಾಗೃತಿ ಕುರಿತು ಜೋಗಿಪದ ಕಾರ್ಯಕ್ರಮ

ಸಾಗರ :ನೆಹರು ಯುವ ಕೇಂದ್ರ ಶಿವಮೊಗ್ಗ ಮತ್ತು ಸಾಗರ ತಾಲ್ಲೂಕಿನ ಶ್ರೀ ಆನಂದೇಶ್ವರ ಕಲಾ ಸಂಘ ಇವರ ವತಿಯಿಂದ ಕೊರೊನಾ ಜಾಗೃತಿ ಕುರಿತು ಜೋಗಿ ಪದ ಕಾರ್ಯಕ್ರಮವನ್ನು ಸಾಗರದ ದೇವರಾಜ ಅರಸು ಸಭಾ ಭವನದಲ್ಲಿ ಇಂದು ಏರ್ಪಡಿಸಲಾಗಿತ್ತು.  ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್‍ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪನವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿ ಡಾ.ವಾಸುದೇವ, ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಪ್ರಕಾಶ್ ಭೋಸ್ಲೆ, ಆರೋಗ್ಯ ಇಲಾಖೆ ಸಂಘದ ಜಿಲ್ಲಾಧ್ಯಕ್ಷ ಮ.ಸ,ನಂಜುಂಡಸ್ವಾಮಿ, ತಾಲ್ಲೂಕು ಆರೋಗ್ಯ ಇಲಾಖೆ ನೌಕರರ…

Read More

ಆರಗ ಜ್ಞಾನೇಂದ್ರರಿಗೆ ಅಲ್ಪನಿಗೆ ಐಶ್ವರ್ಯ ಸಿಕ್ಕ ಹಾಗೇ ಆಗಿದೆ: ಬಿ.ಕೆ ಸಂಗಮೇಶ್

ಶಿವಮೊಗ್ಗ : ಗೃಹ ಮಂತ್ರಿ ಅರಗ ಜ್ಞಾನೇಂದ್ರ ಅವರು ಅಲ್ಪನಿಗೆ ಐಶ್ವರ್ಯ ಸಿಕ್ಕ ರೀತಿಯಲ್ಲಿ ಆಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಟೀಕಿಸಿದ್ದಾರೆ. ಗ್ಯಾಂಗ್ ರೇಪ್‍ನಲ್ಲಿ ಅರಗ ಜ್ಞಾನೇಂದ್ರ ಅವರ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜ್ಞಾನೇಂದ್ರ ಅವರು ಅಲ್ಪನಿಗೆ ಐಶ್ವರ್ಯ ಸಿಕ್ಕ ರೀತಿಯಲ್ಲಿ ಆಡುತ್ತಿದ್ದಾರೆ. ಪ್ರವಾಸೋದ್ಯಮ ಇಲಾಖೆ ಅವರಿಗೆ ಫಿಟ್ ಆಗಿತ್ತು. ಶಾಂತಿ ಕಾಪಾಡೋದನ್ನು ಬಿಟ್ಟು, ಅಶಾಂತಿ ಮೂಡಿಸುತ್ತಿರುವುದು ದುರಾದೃಷ್ಟಕರವಾದ ಸಂಗತಿಯಾಗಿದೆ. ಅಶಾಂತಿ ಮೂಡಿಸುವ ಗೃಹ ಸಚಿವರು ನಮ್ಮ ಜಿಲ್ಲೆಗೆ ಸಿಕ್ಕಿರುವುದು ದುರಾದೃಷ್ಟ…

Read More

ಕಾಂಗ್ರೆಸ್‌ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾರೆ‘ ಎಂಬ ಹೇಳಿಕೆ ಹಿಂಪಡೆಯುವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಆನೇಕಲ್: ‘ರೇಪ್ ಆಗಿದ್ದು ಅಲ್ಲಿ, ಕಾಂಗ್ರೆಸ್‌ನವರು ನನ್ನನ್ನು ಅತ್ಯಾಚಾರ ಮಾಡುತ್ತಿದ್ದಾರೆ’ ಎಂಬ ಮಾತನ್ನು ಹಿಂಪಡೆಯುವುದಾಗಿ ಸೆಂಟ್ರಲ್ ಜೈಲಿನ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ನನಗೆ ಬಹಳ ಆತಂಕ ಆಗಿತ್ತು, ಆತಂಕದಲ್ಲಿ ಈ ಮಾತು ಹೇಳಿದ್ದೆ. ನಾನು ನೀಡಿದ್ದ ಹೇಳಿಕೆ ಹಿಂಪಡೆಯುತ್ತೇನೆ. ಸಂತ್ರಸ್ತೆಯನ್ನು ನನ್ನ ಮಗಳ ಸ್ಥಾನದಲ್ಲಿ ನೋಡುವೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ತಮ್ಮ ಈ ಮಾತು ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ, ಕಾಂಗ್ರೆಸ್‌ನವರು ಗೃಹ ಸಚಿವರ…

Read More

ರಿಪ್ಪನ್ ಪೇಟೆ: ಶಿವಮೊಗ್ಗದ ನರ್ಸಿಂಗ್ ವಿಧ್ಯಾರ್ಥಿನಿ ಬೆಳ್ಳೂರು ಕಾಡಿನಲ್ಲಿ ಶವವಾಗಿ ಪತ್ತೆ : ಕೊಲೆ ಶಂಕೆ !!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಕಾಡಿನ ಮಧ್ಯೆ ಶಿವಮೊಗ್ಗದ ಪ್ರತಿಷ್ಠಿತ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬಳ ಶವ ಪತ್ತೆಯಾಗಿದೆ. ತಳಲೆ -ಬೆಳ್ಳೂರು ಮಾರ್ಗದ ಮಧ್ಯದಲ್ಲಿ ರಸ್ತೆಯಿಂದ ಸುಮಾರು ಅರ್ಧ ಕಿ.ಮೀ ಕಾಡಿನ ಒಳಗೆ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ.ಯುವತಿಯು ಶಿವಮೊಗ್ಗದ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಳು. ಯುವತಿಯ ಹೆಸರು ಕವಿತಾ(22) ಎಂದು ತಿಳಿದುಬಂದಿದ್ದು ಜೋಗ ಸಮೀಪದ ಕಾನೂರು ನಿವಾಸಿಯಾಗಿದ್ದಾಳೆ. ಕಳೆದ ಐದಾರು ವರ್ಷದ ಹಿಂದೆ ರಿಪ್ಪನ್‌ಪೇಟೆಯ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಕಗ್ಗಲಿ ಗ್ರಾಮದ…

Read More

ಶಿವಮೊಗ್ಗ: ದೇಶದ ಆಸ್ತಿಯನ್ನು ಮಾರಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಯುವ ಕಾಂಗ್ರೆಸ್ ನಿಂದ ರೈಲು ತಡೆಗೆ ಯತ್ನ :

ಶಿವಮೊಗ್ಗ : ರಾಷ್ಟ್ರೀಯ ಹಣಗಳಿಕೆ ನೀತಿ (NMP) ಯೋಜನೆಯಡಿ ದೇಶದ ಆರು ಲಕ್ಷ ಕೋಟಿ ಆಸ್ತಿಯನ್ನು ಖಾಸಗಿ ಒಡೆತನಕ್ಕೆ ಮಾರಾಟ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ನಗರದ ರೈಲ್ವೆ ನಿಲ್ದಾಣ ದಲ್ಲಿ ರೈಲ್ವೆ ತಡೆ ಯತ್ನಿಸಿದ ಮೂವತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.  ದೇಶದಲ್ಲಿ ಅಚ್ಚೆ ದಿನ್ ತರುತ್ತೇನೆಂದು ಅಧಿಕಾರಕ್ಕೆ ಬಂದ ಕೇಂದ್ರದ ಬಿಜೆಪಿ ಸರ್ಕಾರ ದೇಶದ ಸಾರ್ವಜನಿಕ ವಲಯದ ಆಸ್ತಿಗಳನ್ನು ರಾಷ್ಟ್ರೀಯ ಹಣಗಳಿಕೆಯ ನೀತಿಯಡಿಯಲ್ಲಿ…

Read More

ರಿಪ್ಪನ್ ಪೇಟೆ: ಸರಳವಾಗಿ ನಡೆದ ರಾಘವೇಂದ್ರ ಸ್ವಾಮಿಗಳ ಆರಾಧನ ಮಹೋತ್ಸವ

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಸಿದ್ದಪ್ಪನ ಗುಡಿ ಸಮೀಪದಲ್ಲಿರುವ ಶ್ರೀ ಗುರುಸಾರ್ವಭೌಮರ ದೇವಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ  ವಿಜೃಂಭಣೆಯಿಂದ ಮಂಗಳವಾರ ಸರಳವಾಗಿ ಕೋವಿಡ್ ನಿಯಮಾನುಸಾರ ಜರಗಿತು. ವೇದ ಬ್ರಹ್ಮ ಚಂದ್ರಶೇಖರ್ ಭಟ್ ಅವರ ನೇತೃತ್ವದಲ್ಲಿ ಪೂಜಾಕೈಂಕರ್ಯ ಜರಗಿತು.  ಈ ಪೂಜಾ ಸಂದರ್ಭದಲ್ಲಿ ನೂರಾರು ಭಕ್ತರು ದೇವರ ದರ್ಶನವನ್ನು ಪಡೆದು ಪುನೀತರಾದರು .ಈ ಪೂಜಾ ಕಾರ್ಯಕ್ರಮದಲ್ಲಿ ಗುರು ರಾಘವೇಂದ್ರ ಸ್ವಾಮಿ ಸಮಿತಿಯ ಅಧ್ಯಕ್ಷರಾದ ಟಿ. ಪುರುಷೋತ್ತಮ್ ರಾವ್. ಪ್ರಧಾನ ಕಾರ್ಯದರ್ಶಿಯಾದ ಕೆ.ಜಿ.ದೇವರಾಜ್ ಕೆರೆಹಳ್ಳಿ…

Read More

ರಿಪ್ಪನ್ ಪೇಟೆ : ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ

ರಿಪ್ಪನ್‌ಪೇಟೆ, 25 ಆಗಸ್ಟ್ 2021: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಅವರು ವರ್ಚುವಲ್ ವೇದಿಕೆಯ ಮೂಲಕ 2021ರ ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಾವಣೆಗೆ ಚಾಲನೆ ನೀಡಿದರು.  ಉದ್ಘಾಟನೆಯ ನಂತರ ಡಾ.ಬಲ್ಲಾಳ್ ಮಾತನಾಡುತ್ತಾ “ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿದ್ದೇವೆ ಎಂದು ತಿಳಿಸಲು ನನಗೆ ಅಪಾರ ಸಂತೋಷವಾಗುತ್ತಿದೆ. ಕಳೆದ 20 ವರ್ಷಗಳಲ್ಲಿ, ನಾವು ಸಾಮಾಜಿಕ ಕಾಳಜಿಯೊಂದಿಗೆ ಉತ್ಕ್ರಷ್ಟ…

Read More