ಅ.16ಕ್ಕೆ ತಳಲೆಯಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಹುಸೇವಾ ವಾಣಿಜ್ಯ ಸಂಕೀರ್ಣ ಉದ್ಘಾಟನೆ |Ripponpet
ರಿಪ್ಪನ್ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಬಾರ್ಡ್ ಯೋಜನೆಯಿಂದ ನಿರ್ಮಾಣಗೊಂಡ ಜಿಲ್ಲೆಯಲ್ಲಿಯೇ ಪ್ರಥಮ ಬಹುಸೇವಾ ವಾಣಿಜ್ಯ ಸಂಕೀರ್ಣ ಗೋದಾಮು ಅಕ್ಟೋಬರ್ 16 ರ ಭಾನುವಾರ ಬೆಳಿಗ್ಗೆ 11 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಎಸ್. ದಿನೇಶ್ಗೌಡ ಹೇಳಿದರು. ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಸುಮಾರು 70 ಲಕ್ಷ ರೂ. ಅನುದಾನದಲ್ಲಿ ಸುಸಜ್ಜಿತವಾದ ಬಹುಮಹಡಿ ಸಂಕೀರ್ಣವನ್ನು ನಿರ್ಮಿಸಲಾಗಿದೆ. ನಬಾರ್ಡ್ ಯೋಜನೆಯಂತೆ…