Headlines

ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕನೆಕ್ಷನ್ ಇಲ್ಲದೇ ನೇತಾಡುತ್ತಿರುವ ಸಿಸಿ ಕ್ಯಾಮೆರಾಗಳು : ಕಾಟಾಚಾರಕ್ಕೆ ಹಾಕಿದ್ದೀರಾ ಅಧಿಕಾರಿಗಳೇ ????

ರಿಪ್ಪನ್ ಪೇಟೆ: ನಾಲ್ಕೂ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಿಪ್ಪನ್ ಪೇಟೆ ವಿನಾಯಕ ವೃತ್ತದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ  ಸಿಸಿ ಕ್ಯಾಮೆರಾಗಳು ಕನೆಕ್ಷನ್ ಇಲ್ಲದೇ ಕ್ಯಾಮೆರಾಗಳು ವೈರ್ ಗಳ ಜೊತೆ ನೇತಾಡುತ್ತಿವೆ. ಇದನ್ನು ನೋಡಿದರೆ “ನೇತಾಡುತ್ತಿರುವೆವೋ ನಾವು ಜೋತಾಡುತ್ತಿರುವೆವು” ಎಂದು ಯುಗಳ ಗೀತೆ ಹಾಡುತ್ತಿರುವಂತೆ ಭಾಸವಾಗುತ್ತದೆ !!! ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯು ನಾಲ್ಕು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವಂತಹ ಪಟ್ಟಣವಾಗಿದೆ.ಇಲ್ಲಿನ ವಿನಾಯಕ ವೃತ್ತ ದಲ್ಲಿ ಅಧಿಕಾರಿಗಳು ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ ಆದರೆ ಅದೀಗ ಸಂಪೂರ್ಣವಾಗಿ…

Read More

ರಿಪ್ಪನ್ ಪೇಟೆ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗೆ ಕರೊನಾ ಪಾಸಿಟಿವ್ : ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಲ್ಲಿ ಆತಂಕ

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿರುವ ಯುವಕನೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಡಿ.1 ರಂದು ವಿದ್ಯಾರ್ಥಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ನಿನ್ನೆ ಪಾಸಿಟಿವ್ ಎಂದು ಬಂದಿದೆ. ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಆರೋಗ್ಯ ಕೇಂದ್ರ ಸಿಬ್ಬಂದಿಗಳು ಇಂದು ವಿದ್ಯಾರ್ಥಿಯ ಮನೆಗೆ ಬಂದಿದ್ದಾರೆ.ಆದರೆ ಆತ ಮನೆಯಲ್ಲಿ ಇರದೇ ರಿಪ್ಪನ್…

Read More

ಸಾಗರದ ಗುಡ್ಡೆಕೌತಿ ಬಳಿ ಮೈಸೂರು-ತಾಳಗುಪ್ಪ ರೈಲಿಗೆ ಸಿಲುಕಿ ಯುವತಿ ಸಾವು.!! ಇದು ಆತ್ಮಹತ್ಯೆಯೋ ?ಅಪಘಾತವೋ?

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗುಡ್ಡೆಕೌತಿ ಬಳಿ ಮಧ್ಯಾಹ್ನ 12:30 ರ ವೇಳೆಗೆ ಮೈಸೂರು- ತಾಳಗುಪ್ಪ ರೈಲಿಗೆ ಅಂದಾಜು 18 ವರ್ಷದ ಯುವತಿ ರೈಲಿಗೆ  ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನ ಸ್ಥಳದಲ್ಲಿ ರೈಲ್ವೆ ಇಲಾಖೆಯ ಪೋಲಿಸ್ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಸಾಗರ ಗ್ರಾಮಾಂತರ ಪೊಲೀಸರು ಧಾವಿಸಿದ್ದಾರೆ. ಇನ್ನೂ ಯುವತಿಯ ಬಗ್ಗೆ ಮಾಹಿತಿ ತಿಳಿದಿಲ್ಲ ಇದು ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂಬ ಪ್ರಶ್ನೆಗೆ ತನಿಖೆಯಿಂದ ಉತ್ತರ ದೊರೆಯಬೇಕಾಗಿದೆ. ಮೈಸೂರು to ತಾಳಗುಪ್ಪ ಗಾಡಿ ಸಂಖ್ಯೆ 16206 ರೈಲು Runover…

Read More

ಬಿ.ಜೆ.ಪಿ ಪಕ್ಷದ ಬೆಂಬಲದಲ್ಲಿ ಗೆದ್ದ ಗ್ರಾಮ ಪಂಚಾಯತಿ ಸದಸ್ಯರಿಗೆ ಮತಯಾಚಿಸುವ ಅಗತ್ಯವಿಲ್ಲ ಅವರೇ ಸ್ವಪ್ರೇರಣೆಯಿಂದ ಅನ್ಯ ಪಕ್ಷದ ಸದಸ್ಯರನ್ನು ಮನವೊಲಿಸಿ ಮತ ಹಾಕಿಸುತ್ತಾರೆ : ಕೆ ಎಸ್ ಈಶ್ವರಪ್ಪ

ರಿಪ್ಪನ್‌ಪೇಟೆಯ : ಬಿ.ಜೆ.ಪಿ ಪಕ್ಷದ ಬೆಂಬಲದಲ್ಲಿ ಗೆದ್ದ ಗ್ರಾಮ ಪಂಚಾಯತಿ ಸದಸ್ಯರಿಗೆ ಮತಯಾಚಿಸುವ ಅಗತ್ಯವಿಲ್ಲ ಅವರೇ ಸ್ವಪ್ರೇರಣೆಯಿಂದ ಅನ್ಯ ಪಕ್ಷದ ಸದಸ್ಯರನ್ನು ಮನವೊಲಿಸಿ ಮತ ಹಾಕಿಸುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ವಿನಾಯಕ ಸರ್ಕಲ್‌ನಲ್ಲಿರುವ ಸತ್ಕಾರ್ ಕಾಂಪ್ಲೆಕ್ಸ್ ನಲ್ಲಿ ಬಿ.ಜೆ.ಪಿ ಕಛೇರಿಯನ್ನು ಉದ್ಘಾಟಿಸಿ ನಂತರ ಗ್ರಾಮ ಪಂಚಾಯತಿ ಸದಸ್ಯ ಮತದಾರರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನರೇಗಾ ಮತ್ತು ಜನಜೀವನ ಯೋಜನೆ ಅನುಷ್ಠಾನದಲ್ಲಿ…

Read More

ಸಾಗರದ ಕೆ ಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯ ಆನಂದಪುರದಲ್ಲಿ ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ!!!!!! ಸಾಗರ ಬಸ್ ಡಿಪೋ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಬೆಳಿಗ್ಗೆ 9.15 ರ ಸಂದರ್ಭದಲ್ಲಿ ಶಿವಮೊಗ್ಗದಿಂದ ಸಾಗರದ ಕಡೆ ಬಸ್ ಹೊರಟ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಬಸ್ ಹತ್ತುತ್ತಿದ್ದರು ಇನ್ನೂ ಹತ್ತು ಜನ ಹುಡುಗರು ಬಸ್ ಹತ್ತುತ್ತಿರುವಂತಹ ಸಂದರ್ಭದಲ್ಲಿ ಕೆಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯತನದಿಂದ ಒಬ್ಬ ವಿದ್ಯಾರ್ಥಿನಿ ಬಸ್  ಹತ್ತುತ್ತಿರುವಾಗಲೇ ಬಸ್ಸನ್ನು ಚಲಾಯಿಸಿದ್ದರಿಂದ  ವಿದ್ಯಾರ್ಥಿನಿಯೊಬ್ಬಳು ಬಸ್ಸಿನಿಂದ ಕೆಳಗೆ ಬಿದ್ದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಉಳಿದ ವಿದ್ಯಾರ್ಥಿಗಳು ಆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ…

Read More

ಬಿಜೆಪಿ ಆಡಳಿತ ಈಗಾಗಲೇ ಜನಕ್ಕೆ ವಾಕರಿಕೆ ಬಂದಂತಾಗಿದೆ : ಮಾಜಿ ಶಾಸಕ ಮಧು ಬಂಗಾರಪ್ಪ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ವಿಧಾನಪರಿಷತ್ ಚುನಾವಣೆಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಧು ಬಂಗಾರಪ್ಪನವರು  ಆರ್ ಪ್ರಸನ್ನಕುಮಾರ್ ಅತ್ಯುತ್ತಮ ಅಭ್ಯರ್ಥಿಯಾಗಿದ್ದರೆ ಪ್ರಾಮಾಣಿಕವಾಗಿ ಈಗಾಗಲೇ ಕೆಲಸವನ್ನ ಮಾಡಿದ್ದಾರೆ ಹಾಗಾಗಿ ಅವರನ್ನು ಸರ್ವಾನುಮತದಿಂದ ಗೆಲ್ಲಿಸಬೇಕೆಂದು ಕಾರ್ಯಕರ್ತರಿಗೆ ಮನವಿ ಮಾಡಿದರು. ಬಿಜೆಪಿಯ ಆಡಳಿತ ಈಗಾಗ್ಲೇ ಜನಕ್ಕೆ ವಾಕರಿಕೆ ಬಂದಂತಾಗಿದೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ ಕಾರ್ಯಗಳು ನಡಿತಲ್ಲಾ ಮನೆ ಕೊಡದೆ ಇರುವವರು ಹಾಗೂ ಎನರ್ಜಿಯ ಹಣ ಬಿಡುಗಡೆ ಮಾಡದೆ ಇರುವವರು  ಬಿಜೆಪಿಯವರು. ಗ್ರಾಮ ಪಂಚಾಯಿತಿ ಸದಸ್ಯರ ಹಕ್ಕನ್ನು ಮೊಟಕು ಗೊಳಿಸಿದ…

Read More

ರೈಲ್ವೆ ಲೆವೆಲ್ ಕ್ರಾಸಿಂಗ್ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ:…!

ಶಿವಮೊಗ್ಗ: ಮೂರು ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಈ ಕೆಳಕಂಡ ಪರ್ಯಾಯ ಮಾರ್ಗವನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ನಗರ-ಕುಂಸಿ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.49, 50 ಮತ್ತು 79 ರ ಲೆವೆಲ್ ಕ್ರಾಸಿಂಗ್‍ನಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದಕ್ಕಾಗಿ ಗೇಟ್‍ಗಳನ್ನು ಮುಚ್ಚಿ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಂಡಲಾಗಿದೆ. ಎಲ್‍ಸಿ ನಂ 50,ಶಿವಮೊಗ್ಗ – ಸವಳಂಗಮಾರ್ಗ ಡಿ.06 ರ ರಾತ್ರಿ 10.30…

Read More

ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ :

ಶಿವಮೊಗ್ಗ: ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಇಂದು ವಿದ್ಯಾರ್ಥಿ ಸಂಘಟನೆ ವತಿಯಿಂದ ನೆಹರೂಕ್ರೀಡಾಂಗಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು. ನಂತರ ಜಯನಗರ ಪೊಲೀಸ್ ಠಾಣೆಗೆ ಆರಗ ಜ್ಞಾನೇಂದ್ರ ವಿರುದ್ಧ ದೂರು ನೀಡಿದರು. ಪೊಲೀಸರು ಒಂದು ಗಂಟೆ ಖಾಕಿ ಕಳಚಿ ಮನೆ ಸೇರಿಕೊಂಡರೆ ನಿಮ್ಮ ಸಚಿವ ಸ್ಥಾನವೂ ಇರುವುದಿಲ್ಲ. ಸರ್ಕಾರವೂ ಇರುವುದಿಲ್ಲ. ಒಳ್ಳೆಯವರು,ಕೆಟ್ಟವರು ಎಲ್ಲಾ ಇಲಾಖೆಯಲ್ಲೂ ಇದ್ದಾರೆ ಎಂದರು. ಪ್ರತಿಭಟನೆಗೆ ಕರುನಾಡ ಯುವ ಶಕ್ತಿ ಸಂಘಟನೆ ಬೆಂಬಲ ನೀಡಿತ್ತು. ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಸಂಘಟನೆ…

Read More

ಆಲುವಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ವಾಲಿಬಾಲ್ ಪಂದ್ಯಾವಳಿ : ಸೋಲು, ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಭಾಗವಹಿಸುವುದೇ ಮುಖ್ಯ : ವೀರೇಶ್ ಆಲುವಳ್ಳಿ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಆಲುವಳ್ಳಿ ಗ್ರಾಮದಲ್ಲಿ ಶ್ರೀ ಸಿದ್ದಿವಿನಾಯಕ ಗೆಳೆಯರ ಬಳಗ ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಯನ್ನು ಹೊಸನಗರ ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಉದ್ಘಾಟಿಸಿದರು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಆಟದಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಭಾಗವಹಿಸುವುದೇ ಮುಖ್ಯ. ಸೋಲು ಗೆಲುವಿನ ಮೊದಲ ಮೆಟ್ಟಿಲು ಎಂಬುದನ್ನು ಅರಿತು ಆಟಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು, ಸಿದ್ದಿ ವಿನಾಯಕ ಗೆಳೆಯರ ಬಳಗಕ್ಕೆ ಈ ಬಾರಿ ಕೊಟ್ಟಂತಹ ಸಲಹೆ ಸಹಕಾರವನ್ನು ಮುಂದಿನ ಬಾರಿಯು ನೀಡುತ್ತೇನೆ…

Read More

ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷ ಸ್ಥಾನದಿಂದ ವಜಾ : ಜಾತ್ಯಾತೀತತೆ ಎಂಬ ಮಾತು ಕೇವಲ ಬಾಯಿ ಮಾತಿಗೆ ಸೀಮಿತವಾಗಿದೆಯಾ ?????

ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷರನ್ನು ಸ್ಥಾನದಿಂದ ವಜಾ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸಿ.ಎನ್.ಅಕ್ಮಲ್ ಜಾಮಿಯಾ ಮಸೀದಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಂಡವರು. ಅಕ್ಮಲ್ ಅವರು ಕಿಸಾನ್ ಕಾಂಗ್ರೆಸ್ ರಾಜ್ಯ ಸಂಚಾಲಕ ಕೂಡ. ಇತ್ತೀಚೆಗೆ ನಗರದ ರಾಮನಹಳ್ಳಿಯಲ್ಲಿ ನೂತನವಾಗಿ ಆರಂಭಗೊಂಡ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಗ್ರಾಮಸ್ಥರ ಮನವಿ ಮೇರೆಗೆ ಅನ್ನದಾನ ಏರ್ಪಡಿಸಿದ್ದರು. ಈ ವೇಳೆ ಅಕ್ಮಲ್ ಅವರು ದೇವಸ್ಥಾನಕ್ಕೂ ಹೋಗಿದ್ದರು. ಅಲ್ಲಿ ಪೂಜೆ ಬಳಿಕ ಮಂಗಳಾರತಿ ಪಡೆದಿದ್ದರು. ಈ ಕಾರಣಕ್ಕೆ ಅವರನ್ನು ಜಾಮೀಯ ಮಸೀದಿ ಅಧ್ಯಕ್ಷ ಸ್ಥಾನದಿಂದ…

Read More