Headlines

ರಿಪ್ಪನ್ ಪೇಟೆಯಲ್ಲಿ ನೂತನವಾಗಿ ಶುಭಾರಂಭಗೊಂಡ ಸ್ತ್ರೀ ಮತ್ತು ಮಕ್ಕಳ ಕ್ಲಿನಿಕ್ : ಮಾಜಿ ಶಾಸಕರಿಂದ ಉದ್ಘಾಟನೆ

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಸ್ತ್ರೀ ಮತ್ತು ಮಕ್ಕಳ ಕ್ಲಿನಿಕ್ ಮತ್ತು ಪರಮೇಶ್ ಮೆಡಿಕಲ್ ಇಂದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ಶುಭಾರಂಭಗೊಂಡಿದೆ. ಇಂದು ಬೆಳಿಗ್ಗೆ ಸಾಗರದ ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ಉದ್ಘಾಟಿಸಿ ಶುಭ ಹಾರೈಸಿದರು.ಮಾಜಿ ಶಾಸಕ ಹಾಗೂ ವೈದ್ಯಕೀಯ ಕ್ಷೇತ್ರದ ಹಿರಿಯರಾದ ಡಾ ಜಿ ಡಿ ನಾರಾಯಣಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶುಭ ಹಾರೈಸಿದರು. ರಿಪ್ಪನ್ ಪೇಟೆ ಹಾಗೂ ಸುತ್ತ ಮುತ್ತಲ ಭಾಗಗಳ ಜನರಿಗೆ ಅದರಲ್ಲೂ…

Read More

ತೀರ್ಥಹಳ್ಳಿಯಲ್ಲಿ ಗೋರಕ್ಷಕರ ಮೇಲೆ ವಾಹನಹತ್ತಿಸಿ ಹತ್ಯೆಗೆ ಯತ್ನಿಸಿದ್ದ ಆರೋಪಿಗಳಾದ ಅಪ್ರೋಜ್ ಮತ್ತು ಇರ್ಫಾನ್ ಬಂಧನ

ತೀರ್ಥಹಳ್ಳಿ : ಗೋರಕ್ಷಣೆ ಮಾಡಲು ತೆರಳಿದ್ದ ಇಬ್ಬರು ಯುವಕರ ಮೇಲೆ ವಾಹನ ಹತ್ತಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಐದು ದಿನಗಳ ಹಿಂದೆ  ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಸಮೀಪ ವಾಹನವೊಂದರಲ್ಲಿ ಅಕ್ರಮವಾಗಿ  ಸಾಗಾಟ ನಡೆಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಲು ಇಬ್ಬರು ಯುವಕರು ಬೈಕಿನಲ್ಲಿ ತೆರಳಿದ್ದರು. ಈ ಸಂದರ್ಭದಲ್ಲಿ ಅಕ್ರಮ ಗೋಸಾಗಾಟಗಾರರು ಯುವಕರ ಮೇಲೆ ವಾಹನ ಹತ್ತಿಸಿ ಅವರನ್ನು ಗಂಭೀರವಾಗಿ ಗಾಯಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದರು. ಘಟನೆಯ ಕುರಿತಾಗಿ ಜಿಲ್ಲೆಯಾದ್ಯಂತ ಹಿಂದೂ ಪರ ಸಂಘಟನೆಗಳು ತೀವ್ರ…

Read More

ಹರಿದ್ರಾವತಿ ಸರ್ಕಾರಿ ವೈದ್ಯರನ್ನು ಬದಲಾಯಿಸುವಂತೆ ಬೃಹತ್ ಪ್ರತಿಭಟನೆ : ಪ್ರತಿಭಟನೆಗೆ ಮಣಿದ ತಾಲ್ಲೂಕು ಆರೋಗ್ಯಧಿಕಾರಿ

ಹರಿದ್ರಾವತಿ : ಇಲ್ಲಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಕಳೆದ ಎರಡು ತಿಂಗಳಿನಿಂದ ನಿರಂತರ ಗೈರಾಗಿರುವ ವೈದ್ಯಧಿಕಾರಿಗಳ ಬದಲಿಗೆ ಬೇರೆ ವೈದ್ಯರನ್ನು ನೇಮಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ನಡೆದ ಪ್ರತಿಭಟನೆಗೆ ಸ್ಪಂದಿಸಿರುವ ತಾಲ್ಲೂಕು ವೈದ್ಯಾಧಿಕಾರಿಗಳು ಸೋಮವಾರದಿಂದಲೇ ಬದಲಿ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಇಂದು ಹರಿದ್ರಾವತಿ ಪ್ರಾಥಮಿಕ ಅರೋಗ್ಯ ಕೇಂದ್ರದ ಎದುರು ಕರ್ನಾಟಕ ರಕ್ಷಣಾ ವೇದಿಕೆ, ನಮ್ಮ ಹಳ್ಳಿ ಬಟ್ಟೆಮಲ್ಲಪ್ಪ -ಆಲಗೇರಿಮಂಡ್ರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಡಾ. ಸುರೇಶ್…

Read More

ನ್ಯಾಯಲಯದ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ : ಮಹಾಲಕ್ಷ್ಮಿ ಅಣ್ಣಪ್ಪ

ರಿಪ್ಪನ್‌ಪೇಟೆ: ಕಳೆದ ವರ್ಷ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯ ಸಂದರ್ಭದಲ್ಲಿ ಬರುವೆ 1ನೇ ವಾರ್ಡ್ ನಲ್ಲಿ ನಡೆದ ಮತದಾನದಲ್ಲಿ ಅಕ್ರಮವಾಗಿದೆ ಎಂದು ದಾಖಲಾಗಿದ್ದ ಮೊಕದ್ದಮೆಯನ್ನು ಹೊಸನಗರ ಜೆ ಎಂಎಫ್ ಸಿ ನ್ಯಾಯಾಲಯ ವಜಾ ಮಾಡಿದೆ. ಘಟನೆಯ ಹಿನ್ನಲೆ:  ಒಬ್ಬನೇ ವ್ಯಕ್ತಿ ಎರಡು-ಮೂರು ವಾರ್ಡ್‌ಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಮತದಾನದ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನಕ್ಕೆ ಬರುವೆ 1ನೇ ವಾರ್ಡ್ ನಲ್ಲಿ ಸ್ಪರ್ಧಿಸಿದ್ದ ಪರಾಜಿತ ಅಭ್ಯರ್ಥಿ ಮೆಣಸೆ ಆನಂದ್ ರವರು ತಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿ…

Read More

ಸಾಗರ ಬಳಿ ಭೀಕರ ಅಪಘಾತ : ಬೈಕ್ ಸವಾರ ಸಾವು, ಇನ್ನೊಬ್ಬನ ಸ್ಥಿತಿ ಗಂಭೀರ

ಸಾಗರ: ತಾಳಗುಪ್ಪದ ನಾಯರ್ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ಸಂಜೆ ಸುಮಾರಿಗೆ ದ್ವಿಚಕ್ರವಾಹನ ಅಪಘಾತವಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶುಕ್ರವಾರ ಸಂಜೆ ಸಾಗರ ತಾಲೂಕಿನ ತಾಳಗುಪ್ಪದ ನಾಯರ್ ಪೆಟ್ರೋಲ್ ಬಂಕ್ ಬಳಿ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.  ಮತ್ತೋರ್ವ ವ್ಯಕ್ತಿಗೆ ಬಲವಾದ ಪೆಟ್ಟು ಬಿದ್ದಿದೆ ಸಾಗರ ಉಪವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟ ವ್ಯಕ್ತಿ ಶಿವಮೊಗ್ಗ ಮೂಲದ…

Read More

ಸಂಘದ ಕಾರ್ಯವೈಖರಿಗೆ ಬೇಸತ್ತು ಭಂಡಾರಿ ಸಮಾಜದ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ !!!

ರಿಪ್ಪನ್ ಪೇಟೆ : ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳನ್ನೊಳಗೊಂಡ ಭಂಡಾರಿ ಸಮಾಜದ ಸಂಘದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ದೇವರಾಜ್ ಭಂಡಾರಿ ಬಾಳೂರು ರಾಜಜೀನಾಮೆ ನೀಡಿದ್ದಾರೆ.  ಡಿ,3 ಶುಕ್ರವಾರ ಪಟ್ಟಣದ ಶ್ರೀ ಸಿದ್ದೇಶ್ವರ ದೇವಸ್ಥಾನ ಸಿದ್ದಪ್ಪನ ಗುಡಿ ದೇವಸ್ಥಾನ ಇಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ಸಂಘದ ಕಾರ್ಯವೈಖರಿಗೆ ಬೇಸತ್ತು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿ ಸಂಘದ ಅಧ್ಯಕ್ಷ ಹಿರಿಯಣ್ಣ ಭಂಡಾರಿ ಯವರಿಗೆ ರಾಜೀನಾಮೆಯನ್ನು ಸಲ್ಲಿಸಿದರು. ಈ ಸಭೆಯಲ್ಲಿ ಭಂಡಾರಿ ಸಮಾಜದ ಮುಖಂಡರಾದ ನಾಗರಾಜ್ ಭಂಡಾರಿ ಅರಸಾಳು,ವಾಸು ಎಂ,ಬಾಲು ದೂನ,ಪಾಂಡುರಂಗ…

Read More

ಅಪಘಾತಕ್ಕೀಡಾದ ಕುಟುಂಬದ ನೆರವಿಗೆ ತಕ್ಷಣ ಧಾವಿಸಿ ಉಪಚಾರಗೈದಾ ಸಾಗರದ ಯುವ ಪತ್ರಕರ್ತ ಜಮೀಲ್ ಸಾಗರ್

ಇಂದು ಬೆಳಿಗ್ಗೆ ಹತ್ತು ಗಂಟೆ ಸುಮಾರಿಗೆ ರಟ್ಟಿಹಳ್ಳಿ ತಾಲ್ಲೂಕಿನ  ಒಂದು ಕುಟುಂಬದವರು ಸಿಗಂದೂರು ಶ್ರೀಚೌಡೇಶ್ವರಿ ದರ್ಶನಕ್ಕೆ ತೆರಳುತ್ತಿದ್ದ ಮಾರ್ಗ ಮಧ್ಯೆ ಅಪಘಾತ ಸಂಭವಿಸುತ್ತದೆ ತಕ್ಷಣ ಅವರು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಬರುತ್ತಾರೆ.ಇದೇ ಸಮಯಕ್ಕೆ ಸಾಗರದ ಆಸ್ಪತ್ರೆಗೆ ಧಾವಿಸಿದ ಯುವ ಪತ್ರಕರ್ತ ಜಮೀಲ್ ಸಾಗರ್ ರವರು ಮುತವರ್ಜಿ ವಹಿಸಿ ವೈದ್ಯರ ಬಳಿ ಇವರನ್ನು ಕರೆದುಕೊಂಡು ಹೋಗಿ ವಿಶೇಷ ಚಿಕಿತ್ಸೆಯನ್ನು ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಇಬ್ಬರು ಪುಟ್ಟ ಮಕ್ಕಳೊಂದಿಗೆ ವೃದ್ಧರೂ ಆಗಮಿಸಿದಂತಹ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಇವರ ಜೊತೆಗಿದ್ದು ಇವರಿಗೆ ಚಿಕಿತ್ಸೆಯನ್ನು…

Read More

ದನಗಳ್ಳರಿಗೆ ಸಹಕರಿಸುವ ಪೊಲೀಸರ ವಿರುದ್ದ ಕಿಡಿಕಾರಿದ ಗೃಹ ಸಚಿವ ಆರಗ ಜ್ಞಾನೇಂದ್ರ :ಸ್ವಪಕ್ಷದ ಕಾರ್ಯಕರ್ತರಿಂದಲೇ ವೈರಲ್ ಆಯ್ತಾ ವಿಡಿಯೋ :

ಕರ್ನಾಟಕ ರಾಜ್ಯದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು ತಮ್ಮ ನಿವಾಸದ ಕಚೇರಿಯಿಂದ ಪಕ್ಷದ ಕಾರ್ಯಕರ್ತರ ಎದುರಲ್ಲೇ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧಿಕಾರಿಗೆ ಕರೆ ಮಾಡಿ ದನಕಳ್ಳತನದ ಬಗ್ಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.  ಪೊಲೀಸರಿಗೆ ಸರ್ಕಾರದಿಂದ ಕೈ ತುಂಬಾ ಸಂಬಳ ಕೊಡಲಾಗಿದೆ. ಆದರೂ ನಾಯಿ ಎಂಜಲು ಕಾಸನ್ನು ತಿಂದು ಹಾಗೆ ಬಿದ್ದಿರ್ತಾರೆ. ಯೋಗ್ಯತೆ ಇಲ್ಲವೆಂದರೆ ಯೂನಿಫಾರ್ಮ್ ಬಿಚ್ಚಿಟ್ಟು ಮನೆಗೆ ಹೋಗಲಿ. ಮಣ್ಣು ಹೊರಲಿ ಎಂದು ಕೂಗಾಡಿದ್ದಾರೆ. ಪ್ರತಿನಿತ್ಯ ಗೋವು ಸಾಗಾಟ ಮಾಡುವವರು ಯಾರೆಂದು ಪೊಲೀಸರಿಗೆ. ಆದರೂ ಲಂಚ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಬಹುತೇಕ ಜೆಡಿಎಸ್ ಬೆಂಬಲಿತ ಸದಸ್ಯರು ಕಾಂಗ್ರೆಸ್ ಬಗ್ಗೆ ಒಲವು : ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ – ಎಂ ಶ್ರೀಕಾಂತ್

ಶಿವಮೊಗ್ಗ: ಜೆಡಿಎಸ್ ಕಚೇರಿಯಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಬೆಂಬಲಿತ ಚುನಾಯಿತ ಜನಪ್ರತಿನಿಧಿಗಳ ಸಭೆ ನಡೆಯಿತು. ಭದ್ರಾವತಿ ಹೊರತುಪಡಿಸಿ ಬೇರೆ ತಾಲೂಕಿನ ಜೆಡಿಎಸ್ ಬೆಂಬಲಿತ ಬಹುತೇಕ ಸದಸ್ಯರು ಕಾಂಗ್ರೆಸ್ ಬೆಂಬಲಿಸಲು ಒಲವು ತೋರಿದ್ದು, ಇನ್ನೂ ಎರಡು ತಾಲೂಕಿನ ಸದಸ್ಯರ ಜೊತೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸದಸ್ಯರ ತೀರ್ಮಾನವನ್ನು ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ ತೆಗೆದುಕೊಳ್ಳುವುದಾಗಿ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ತಿಳಿಸಿದ್ದಾರೆ. ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಎಂ. ಶ್ರೀಕಾಂತ್…

Read More

ಆರ್ಯ ಈಡಿಗ ನೌಕರರ ಕ್ರಿಯಾವೇದಿಕೆಯಿಂದ ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಆರ್ಥಿಕ ನೆರವು :

ರಿಪ್ಪನ್ ಪೇಟೆ : ಕಳೆದ ಎರಡು ತಿಂಗಳ ಹಿಂದೆ ರಿಪ್ಪನ್ ಪೇಟೆ ಪಟ್ಟಣದ ಮೇರಿ ಮಾತಾ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ಭರತ್ ಬೆಳ್ಳಿ (14)ಎಂಬ ವಿದ್ಯಾರ್ಥಿ ಆಕಸ್ಮಿಕವಾಗಿ ಕಾಲುಜಾರಿ ತಮ್ಮ ಮನೆಯ ಸಮೀಪದಲ್ಲಿರುವ ಹಳ್ಳಕ್ಕೆ ಬಿದ್ದು ಮೃತನಾಗಿದ್ದ.  ಮೃತನ ತಂದೆ ವಾಸು ರವರು ರಿಪ್ಪನ್ ಪೇಟೆಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಗುಮಾಸ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕುಟುಂಬಕ್ಕೆ ಹೊಸನಗರ ತಾಲೂಕು ಆರ್ಯ ಈಡಿಗ ನೌಕರರ ಕ್ರಿಯಾ ವೇದಿಕೆಯ ವತಿಯಿಂದ 31 ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ನೀಡಿದರು. …

Read More