Headlines

“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ

“ಧಾರ್ಮಿಕ ಶ್ರದ್ಧೆ, ಭಕ್ತಿಯಿಂದ ಜೀವನ ಐಸಿರಿ” – ಹೊಂಬುಜಾ ಶ್ರೀ ರಿಪ್ಪನ್‌ಪೇಟೆ:-ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರ ಕೃಷ್ಣಪಕ್ಷದ ನವಮಿಯಂದು ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಅಭೀಷ್ಠವರ ಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಇಷ್ಟಾರ್ಥನೆರವೇರಲು ಶ್ರದ್ಧಾ ಪೂರ್ವಕ ಪ್ರಾರ್ಥನೆ ಸಲ್ಲಿಸಿದರು. ಸೀರೆ-ಉಡಿ-ಫಲ-ಪುಷ್ಪ-ಧಾನ್ಯಗಳಿಂದ ಹರಕೆ ಪೂಜೆ ಸಮರ್ಪಿಸಿದರು. ಸಮೀಪದ ಹೊಂಬುಜ ಅತಿಶಯ ಮಹಾಕ್ಷೇತ್ರದ ಹೊಂಬುಜ ಮಠದಲ್ಲಿ ಇಂದು ನಡೆದ ಶ್ರಾವಣ ಮಾಸದ ಚತುರ್ಥ ಸಂಪತ್ ಶುಕ್ರವಾರದ ಧಾರ್ಮಿಕ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ…

Read More

ರಿಪ್ಪನ್‌ಪೇಟೆ ಆರೋಗ್ಯ ಕೇಂದ್ರದಲ್ಲಿ 108 ಆಂಬುಲೆನ್ಸ್ ಸೌಲಭ್ಯವಿಲ್ಲದೆ ನರಳಾಡಿದ ಅಪಘಾತಗೊಂಡ ಗಾಯಾಳುಗಳು :

ಹೊಸನಗರ ತಾಲೂಕಿನ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆಯನ್ನು ಹೊಂದಿರುವ  ರಿಪ್ಪನ್ ಪೇಟೆ ಪಟ್ಟಣದ ಆರೋಗ್ಯ ಕೇಂದ್ರದಲ್ಲಿ  108 ಆಂಬುಲೆನ್ಸ್ ಸೌಲಭ್ಯವಿಲ್ಲದೆ  ಕಳೆದ ಮೂರು ತಿಂಗಳುಗಳಾಗಿವೆ.  ಈ ಬಗ್ಗೆ ಸ್ಥಳೀಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಸಂಬಂಧ  ಪಟ್ಟ ಹಿರಿಯ ಅಧಿಕಾರಿಗಳಿಗೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಹಲವಾರು ಬಾರಿ ಸಾರ್ವಜನಿಕರು ಮನವಿ ಸಲ್ಲಿಸಿದರೂ ಸಹ ಯಾವುದೇ ರೀತಿಯ ಸ್ಪಂದನೆಯನ್ನು ನೀಡಿರಲಿಲ್ಲ. ರಸ್ತೆ ಅಪಘಾತದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿಯಿಂದ ತಂದೆ ಸ್ಥಳದಲ್ಲೇ ಮೃತಪಟ್ಟರೆ ಬದುಕುಳಿದ ಮಗನಿಗೆ…

Read More

ರಿಪ್ಪನ್‌ಪೇಟೆ : ಧರ್ಮಸ್ಥಳಕ್ಕೆ ಹೋಗಿ‌ ಕೇಶ ಮುಂಡನೇ ಮಾಡಿಸಿಕೊಂಡು ಬಂದಿದ್ದ ವ್ಯಕ್ತಿ ಆತ್ಮಹತ್ಯೆ|Sucide

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಮದ ಇಂದಿರಾನಗರ ನಿವಾಸಿ ಸತೀಶ್ (35) ತನ್ನ ಮನೆಯಲ್ಲಿಯೇ ಇಂದು ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಈತ ಮಾನಸಿಕವಾಗಿ ನೊಂದಿದ್ದ. ಕಳೆದ ಮೂರು ದಿನಗಳ ಹಿಂದಷ್ಟೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದು ಪೂಜೆ ಸಲ್ಲಿಸಿ ಕೇಶ ಮುಂಡನ ಮಾಡಿಸಿಕೊಂಡು ಬಂದಿದ್ದ ಎಂದು ತಿಳಿದುಬಂದಿದೆ. ಪತ್ನಿ, ಇಬ್ಬರು (ಪುತ್ರಿ, ಪುತ್ರ) ಚಿಕ್ಕ ಮಕ್ಕಳನ್ನು ಹಾಗೂ ಸಹೋದರ ಸೇರಿದಂತೆ ಅಪಾರ…

Read More

ಹಾರೋಹಿತ್ತಲು ಗ್ರಾಮದಲ್ಲಿ ಚಿರತೆ ದಾಳಿ: ಸಿಸಿಟಿವಿಯಲ್ಲಿ ಸೆರೆ ಬಿದ್ದ ಚಿರತೆ ಓಡಾಟ, ಗ್ರಾಮಸ್ಥರಲ್ಲಿ ಆತಂಕ

ಹಾರೋಹಿತ್ತಲು ಗ್ರಾಮದಲ್ಲಿ ಚಿರತೆ ದಾಳಿ: ಸಿಸಿಟಿವಿಯಲ್ಲಿ ಸೆರೆ ಬಿದ್ದ ಚಿರತೆ ಓಡಾಟ, ಗ್ರಾಮಸ್ಥರಲ್ಲಿ ಆತಂಕ An incident took place on Sunday morning at around 3.45 am when a leopard entered the yard of a person named Vasudeva in Harohittalu village. It is learnt that the leopard attacked the pet dog in the house, but fortunately the dog escaped. ಶಿವಮೊಗ್ಗ:…

Read More

ಲೋಕಕಲ್ಯಾಣಾರ್ಥ ಕೋಣಂದೂರು ಶ್ರೀಗಳಿಂದ ಶಿಖರದಲ್ಲಿ ಏಕಪಾದ ಶಿವಜಪಾನುಷ್ಠಾನ|konanduru shri

ಲೋಕಕಲ್ಯಾಣಾರ್ಥ ಕೋಣಂದೂರು ಶ್ರೀಗಳಿಂದ ಶಿಖರದಲ್ಲಿ ಏಕಪಾದ ಶಿವಜಪಾನುಷ್ಠಾನ ರಿಪ್ಪನ್‌ಪೇಟೆ;-ಸಮೀಪದ ಕೋಣಂದೂರು ಶ್ರೀ ಶಿವಲಿಂಗೇಶ್ವರ ಬೃಹನ್ಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಶ್ರೀಪತಿ ಪಂಡಿತರಾಧ್ಯ ಶಿವಚಾರ್ಯ ಮಹಾಸ್ವಾಮಿಗಳು ಶಿಕಾರಿಪುರ ತಾಲ್ಲೂಕಿನ ತರಲಘಟ್ಟ ಗ್ರಾಮದ ಶ್ರೀ ಸಕ್ರಿ ಸಿದ್ದೇಶ್ವರ ದೇವಸ್ಥಾನದಲ್ಲಿ ಸಕ್ರಿ ಸಿದ್ದೇಶ್ವರ ಕರ್ತೃ ಗದ್ದುಗೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಸಧ್ಬಕ್ತರ ಶ್ರಯೋಭಿವೃದ್ದಿಗಾಗಿ ಅಗಸ್ಟ್ 5 ರಿಂದ 13 ರವರೆಗೆ ~ಏಕಪಾದ ಶಿವಪೂಜಾ ಮೌನ ಶಿವಜಪಾನುಷ್ಠಾನ ಧಾರ್ಮಿಕ ಕೈಂಕರ್ಯವನ್ನು  ಕೈಗೊಂಡಿದ್ದಾರೆ. ಏಕಪಾದ ಶಿವಜಪಾನುಷ್ಠಾನ ಮಂಗಲ ಸಮಾರಂಭದಲ್ಲಿ ತರೀಕರೆ ನಗರ ಹಿರೇಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಜಗದೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳವರು ಸಕ್ರಿ…

Read More

shikaripura|ಗೋಹತ್ಯೆ ಖಂಡಿಸಿ ಶಿಕಾರಿಪುರ ಸ್ವಯಂ ಪ್ರೇರಿತ ಬಂದ್ ಯಶಸ್ವಿ

ಶಿಕಾರಿಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಗೋ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಸೋಮವಾರ ನಡೆದ ಶಿಕಾರಿಪುರ ಸ್ವಯಂ ಪ್ರೇರಿತ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬೆಳಿಗ್ಗೆಯಿಂದಲೇ ಪಟ್ಟಣದಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ವ್ಯಾಪಾರಸ್ಥರು ಬಂದ್ ಗೆ ಬೆಂಬಲ ಸೂಚಿಸಿದರು. ಬಸ್ ಗಳ ಓಡಾಟ ಸಹಜವಾಗಿತ್ತು. ಇದೇ ಸಂದರ್ಭದಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗೋಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಜಾಥಾ ನಡೆಯಿತು. ಸಾವಿರಾರು ಯುವಕರು ಗೋಹತ್ಯೆ ರಕ್ಷಣೆ ಹಾಗೂ ಗೋ ಹತ್ಯೆ ಖಂಡಿಸಿ ಘೋಷಣೆ ಕೂಗುತ್ತಾ ಸಾಗಿದರು. ಜಾಗೃತಿ ಜಾಥಾ ಸಂದರ್ಭದಲ್ಲಿ…

Read More

ಹೋರಿ ಬೆದರಿಸುವ ಸ್ಪರ್ಧೆ : ಇಬ್ಬರು ಸಾವು – 6 ಜನರಿಗೆ ಗಾಯ|bull competition

ಪ್ರತ್ಯೇಕ ಪ್ರಕರಣದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕು ಕೊನಗನವಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ನಿವಾಸಿ ಲೋಕೇಶ್(32) ಸಾವನ್ನಪ್ಪಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಶಿಕಾರಿಪುರ ತಾಲೂಕಿನ ಮಾಳೂರು ಗ್ರಾಮದಲ್ಲೂ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋದ ರಂಗನಾಥ್ (23) ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಲೋಕೇಶ್ ಭಾನುವಾರ ರಜೆ ಇದ್ದ ಕಾರಣ…

Read More

ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾಗಿ ಆದರ್ಶ್ ಹುಂಚದ ಕಟ್ಟೆ ನೇಮಕ :

ರಾಷ್ಟ್ರೀಯ ಯುವ ಕಾಂಗ್ರೆಸ್ ನ ವಕ್ತಾರನ್ನಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ್ ಹುಂಚದಕಟ್ಟೆ ರವರನ್ನು ಆಯ್ಕೆ ಮಾಡಲಾಗಿದೆ. 27 ಜನರನ್ನ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಲಾಗಿದ್ದು, ಕರ್ನಾಟಕದಿಂದ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ ಹುಂಚದ ಕಟ್ಟೆ ಮತ್ತು ಮಂಗಳೂರಿನ ಸುರಯ್ಯ ಅಂಜುಂ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ವಕ್ತಾರರ ಪಟ್ಟಿ ಬಿಡುಗಡೆ ಮಾಡಿರುವ‌ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ‌ ಬಿ.ವಿ.ಶ್ರೀನಿವಾಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್…

Read More

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!??|SMG

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!?? ಸಮಾಜದಲ್ಲಿ ಶಾಂತಿಯನ್ನು ಕದಡುವವರು ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಿವಮೊಗ್ಗ ನಗರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು,…

Read More

ರಿಪ್ಪನ್‌ಪೇಟೆ : ವಿನಾಯಕನಗರದ ಶಾರದಾ ಬಾಳಿಗ ನಿಧನ|RIP

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರ ನಿವಾಸಿ ಶಾರದಾ ಬಾಳಿಗ (80) ವಯೋಸಹಜ ನಿಧನರಾಗಿದ್ದಾರೆ. ಪಟ್ಟಣದ ವಿನಾಯಕ ನಗರ ನಿವಾಸಿಯಾಗಿದ್ದ ಇವರು ಹಲವು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು, ವಿನಾಯಕನಗರದಲ್ಲಿ ಕಿರಾಣಿ ಅಂಗಡಿ ನಡೆಸುತಿದ್ದ ಇವರು ಪಟ್ಟಣದಾದ್ಯಂತ ಎಲ್ಲರಿಗೂ ಚಿರಪರಿಚಿತರಾಗಿದ್ದರು. ಬಾಳಿಗ ಪ್ರಿಂಟರ್ ನ ರಾಜಾರಾಮ್ ಬಾಳಿಗ ಮತ್ತು ಬಾಳಿಗ ಕಮ್ಯೂನಿಕೇಷನ್ ನ ಗೋಪಾಲಕೃಷ್ಣ ಬಾಳಿಗ ಸೇರಿದಂತೆ ನಾಲ್ಕು ಗಂಡು ಮಕ್ಕಳು ಹಾಗೂ ಮೂವರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಹಿಂದೂ ಸಂಪ್ರದಾಯದಂತೆ ಜರುಗಿದೆ.

Read More
Exit mobile version