Headlines

ಈ ಗ್ರಾಮದ ಯುವಕರಿಗೆ ಎಲ್ಲೂ ಕಸ ಕಾಣುವಂತಿಲ್ಲ ಕಸ ಕಂಡರೆ ಕೆಂಡಾಮಂಡಲವಾಗುತ್ತಾರೆ.ಯಾವ ಊರಿನ ಯುವಕರು ಇವರು?! ಒಮ್ಮೆ ಈ ಸುದ್ದಿ ನೋಡಿ.

ಸಾಗರ : ಸದ್ಯದ ಪರಿಸ್ಥಿತಿಯಲ್ಲಿ ಜನ ಸಾಮಾನ್ಯವಾಗಿ ಕಸವನ್ನು ಅಥವಾ ಕೈಯಲ್ಲಿರುವ ಚೀಟಿ ,ಪೇಪರ್ ಗಳನ್ನು ಅಲ್ಲಿ ಇಲ್ಲಿ ಬಿಸಾಡುವುದು ಸಾಮಾನ್ಯ.ಸ್ವಚ್ಚತೆ ಬಗ್ಗೆ ಅಷ್ಟೊಂದು ತಲೆ ಕೆಡಿಸಿಕೊಳ್ಳುವುದು ಕಡಿಮೆ ಆದರೆ ಇಲ್ಲೊಂದು ಯುವಕರ ತಂಡ ಕಸವನ್ನು ಕಂಡರೆ ಕೆಂಡಾಮಂಡಲವಾಗುತ್ತಾರೆ ಆ ಗ್ರಾಮದಲ್ಲಿ ಕಸವನ್ನು ನಿರ್ಮೂಲನೆ ಮಾಡಬೇಕೆಂಬ ಪಣ ತೊಟ್ಟಿದ್ದಾರೆ ಸ್ವಚ್ಚತೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಐಗಿನಬೈಲು ಗ್ರಾಮದ ಯುವಕರು ಇದೀಗ ಸ್ವಚ್ಚತೆಗಾಗಿ ಗ್ರಾಮದಲ್ಲಿ ಪಣತೊಟ್ಟಿದ್ದಾರೆ.ಗ್ರಾಮದ ಶಾಲೆ ಅಂಗನವಾಡಿ ಹಾಗೂ ದೇವಸ್ಥಾನಗಳ ಸುತ್ತಮುತ್ತ ಸ್ವಚ್ಚತೆಗಾಗಿ ಯುವಕರು…

Read More

ಸಮಾಜದಲ್ಲಿ ಶಾಂತಿ ಕದಡುವ ದುಷ್ಟ ಶಕ್ತಿಗಳ ವಿರುದ್ದ ಕಠಿಣ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ: ಆರ್‌ಎಸ್‌ಎಸ್‌, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ನೂತನ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಇಂದಿಲ್ಲಿ ಹೇಳಿದರು. ಅವರು ಇಂದು ಶಿಕಾರಿಪುರಕ್ಕೆ ತೆರಳುವ ಮಾರ್ಗದ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಶಾಂತಿ ಸೌಹಾರ್ದತೆಯಿಂದ ನಡೆದುಕೊಳ್ಳುವಂತೆ ಹೇಳಲಾಗಿದ್ದರೂ ಕೂಡಾ ಕೆಲವು ವ್ಯಕ್ತಿಗಳು ದೇಶದ್ರೋಹದ ಕೃತ್ಯದಲ್ಲಿ ತೊಡಗಿಕೊಂಡಿದ್ದು ಆಂತಹವರನ್ನು ಆರಂಭದಲ್ಲಿ ಚಿವುಟುವ ಕಾರ್ಯ…

Read More

ರಿಪ್ಪನ್ ಪೇಟೆ: ಸ್ವಾತಂತ್ರ್ಯೋತ್ಸವದ ದಿನದಂದು ಮೌನ ಹೋರಾಟಕ್ಕಿಳಿದ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ:

ರಿಪ್ಪನ್ ಪೇಟೆ:ದೇಶಕ್ಕೆ ಸ್ವಾತಂತ್ರ್ಯಬಂದು ಎಪ್ಪತ್ತೈದು ವರ್ಷವಾಯಿತು,  ಭ್ರಷ್ಟಾಚಾರ ಮಾಡುವವರು,ಲೂಟಿ ಹೊಡೆಯುವವರು ಸ್ವಾತಂತ್ರ್ಯ ಸಿಕ್ಕಿದೆ.ದೇಶಕ್ಕೆ ಸ್ವಾತಂತ್ರ್ಯ ಕೊಟ್ಟಿದ್ದೇವೆ,ಕೊಡಿಸಿದ್ದೇವೆ ಎಂಬ ಕೀಳು ಮಟ್ಟದ ಮಾತುಗಳನ್ನಾಡುತ್ತಿದ್ದಾರೆಯೇ ಹೊರತು ದೇಶದ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಆಸಕ್ತಿ ಇಲ್ಲಾ ಇಚ್ಚಾಶಕ್ತಿ ಇಲ್ಲದ ರಾಜಕಾರಣಿಗಳಿಂದ ದೇಶಕ್ಕೆ ಏನೂ ಪ್ರಯೋಜನ ಇಲ್ಲಾ. ಎಲ್ಲಾ ಆಡಂಬರದ ಆಚರಣೆ ಎಂದು ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಪೋಲಿಸರನ್ನು ಸದ್ಬಳಕೆ ಮಾಡಿಕೊಂಡ್ಡಿದ್ದರೆ ದೇಶ ಪ್ರಪಂಚಕ್ಕೆ ಮಾದರಿಯಾಗುತ್ತಿತ್ತು,ಆದರೆ ಅವರನ್ನು ಸದ್ಬಳಕೆ ಮಾಡಿಕೊಳ್ಳದೆ ದುರ್ಬಳಕೆ ಮಾಡಿಕೊಂಡು ಕೆಟ್ಟ ನೀತಿಯನ್ನು ಮಾಡಿಕೊಂಡು…

Read More

ಶೈಕ್ಷಣಿಕ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಆರಗ ಜ್ಞಾನೇಂದ್ರ

 ರಿಪ್ಪನ್ ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರತಿಭೆ ಇದ್ದರೂ ಅವಕಾಶವಿರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಲಿ ಎಂಬ ಸದುದ್ದೇಶದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ರಾಜ್ಯದ ಗೃಹ ಮಂತ್ರಿ ಆರಗ ಜ್ಞಾನೇಂದ್ರ  ಹೇಳಿದರು.  ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತ್ಯುತ್ತಮ ಕಾಲೇಜ್ ಎಂದು ಖ್ಯಾತಿ ಗಳಿಸಿರುವ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರು  ಹಾಗೂ ಗೃಹಸಚಿವರಾದ ಆರಗ ಜ್ಞಾನೇಂದ್ರ ಅವರು ಸೋಮವಾರ ಭೇಟಿ ನೀಡಿ…

Read More

ಶಿವಮೊಗ್ಗ: ನೂತನ ಸುದ್ದಿವಾಹಿನಿ ಟಿವಿ12 ಕನ್ನಡ ರಾಜ್ಯಾದ್ಯಂತ ಏಕಕಾಲದಲ್ಲಿ ಲೋಕಾರ್ಪಣೆ

  ಶಿವಮೊಗ್ಗ: 75ನೇ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ TV12 ಕನ್ನಡ ಸುದ್ದಿವಾಹಿನಿಯ “ಲೋಗೋ” ವನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಸುನೀತಾ ಅಣ್ಣಪ್ಪ ರವರು ಜ್ಯೋತಿ ಬೆಳಗಿಸುವುದರ ಮೂಲಕ ಲೋಕಾರ್ಪಣೆ ಮಾಡಿದರು. ನಗರದ ಮಥುರಾ ಸೆಂಟ್ರಲ್ ಸಭಾಂಗಣದಲ್ಲಿ ನಡೆದ ಟಿವಿ೧೨ ಕನ್ನಡ ಸುದ್ದಿ ವಾಹಿನಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿ ಮಾತನಾಡಿದ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ರವರು ಶಾಸಕಾಂಗ,ಕಾರ್ಯಾಂಗ,ನ್ಯಾಯಾಂಗ ಹಾಗೂ ಪತ್ರೀಕಾರಂಗದ ಕ್ಷೇತ್ರವು ನಮ್ಮ ಸಾಮಾಜಿಕ ಕ್ಷೇತ್ರದ…

Read More

ಸೊರಬ:ಎಬಿವಿಪಿಯ ವತಿಯಂದ ಒಂದು ಗ್ರಾಮ ಒಂದು ತಿರಂಗ ಅಭಿಯಾನ:

ಸೊರಬ: ತಾಲೂಕಿನಾದ್ಯಂತ 75ನೇ ಸ್ವಾತಂತ್ರ್ಯ ದಿವಸದ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕಿನ ವಿವಿಧಡೆ ಧ್ವಜಾರೋಹಣ ಮಾಡಲಾಯಿತು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಷ್ಟ್ರಾದ್ಯಂತ ಒಂದು ಲಕ್ಷಕ್ಕೂ ಹೆಚ್ಚಿನ ಸ್ಥಳದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಒಂದು ಗ್ರಾಮ ಒಂದು ತಿರಂಗ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ.  ಈ ನಿಟ್ಟಿನಲ್ಲಿ ಸೊರಬ ತಾಲೂಕಿನ ವಿವಿಧಡೆ ಧ್ವಜಾರೋಹಣ ಕಾರ್ಯಕ್ರಮ ಮಾಡಲಾಯಿತು. ತಾಲೂಕಿನ ಕೆರೆಕೊಪ್ಪ, ಕಮಲಾಪುರ, ಕಂಚಿಕೊಪ್ಪ , ಶಿಂಡ್ಲಿ ,ಮಣ್ಣತ್ತಿ,, ಸಂಭಾಪುರ ,ಮಾವಿನಬಳ್ಳಿ ಕೊಪ್ಪ,ಮಂದಲಿಕೊಪ್ಪ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಎಬಿವಿಪಿ…

Read More

ರಿಪ್ಪನ್ ಪೇಟೆ: ಗುರು ರಾಘವೇಂದ್ರ ಸ್ವಾಮಿಗಳವರ 350ನೇ ಆರಾಧನ ಮಹೋತ್ಸವ:

ರಿಪ್ಪನ್‌ಪೇಟೆ:ಇಲ್ಲಿನ ಬೈರಾಪುರದ ಕಿರುಮಂತ್ರಾಲಯ ಶ್ರೀಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 23 ರಿಂದ 25 ರವರೆಗೆ ಗುರುರಾಘವೇಂದ್ರ ಸ್ವಾಮಿಗಳವರ 350ನೇ ಆರಾಧನಾ ಮಹೊತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಅಧ್ಯಕ್ಷ ಟಿ.ಪುರುಷೋತ್ತಮ್‌ರಾವ್ ಮತ್ತು ಕಾರ್ಯದರ್ಶಿ ಕೆ.ದೇವರಾಜ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊರೊನಾ ಮಾರ್ಗಸೂಚಿಯನ್ವಯ ಸರಳ ಸಂಪ್ರದಾಯದಂತೆ 23ರಂದು ಸೋಮವಾರ ಬೆಳಗ್ಗೆ ಪೂರ್ವಾರಾಧನೆ ಮತ್ತು ವಿಶೇಷ ಪೂಜೆಗಳು ತೀರ್ಥಪ್ರಸಾದ ವಿತರಣೆ, ಆಗಸ್ಟ್ 24 ರಂದು ಮಂಗಳವಾರ ಗುರುರಾಯರ ಆರಾಧನೆ ವಿಶೇಷ ಪೂಜೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿತರಣೆ…

Read More

ಚಿಕ್ಕಜೇನಿ ಪ್ರೌಢಶಾಲೆ ಎಸ್ ಡಿಎಂಸಿ ಅಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ:

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕ ಜೇನಿ ಸರ್ಕಾರಿ ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಉಮೇಶ್ ಗೌಡ ಚಿಕ್ಕಜೇನಿ ಆಯ್ಕೆಯಾಗಿದ್ದಾರೆ. ಶನಿವಾರ ಪ್ರೌಢಶಾಲಾ ಆವರಣದಲ್ಲಿ ನಡೆದ ಪೋಷಕರಿಂದ ಆಯ್ಕೆಯಾದ ಸದಸ್ಯರು ಉಮೇಶ್ ಗೌಡ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರು.  ಸಮಿತಿಯ ಸದಸ್ಯರಾಗಿ ಶ್ರೀಮತಿ ಆಶಾ ನರಸಿಂಹ, ಶ್ರೀಮತಿ ಮೀನಾಕ್ಷಿ, ಶ್ರೀಮತಿ ಯಶೋಧ, ಧನಂಜಯ ಹಿರೇಜೇನಿ, ನಾಗರಾಜ್ ಬಿಳಿಕಿ, ಹರೀಶ್ ಕುಮಾರ್ ಕಾರೆಮಟ್ಟಿ, ಜಿಎಲ್ ಲಿಂಗರಾಜ್ ಹಿರೇಮೈತೆ, ಶಿವಕುಮಾರ್ ಶೆಟ್ಟಿಬೀಡು ಇವರುಗಳು ಆಯ್ಕೆಯಾದರು.  ಸಭೆಯ ಅಧ್ಯಕ್ಷತೆಯನ್ನು ಶಾಲಾ…

Read More

ತಮ್ಮ ಆಕ್ರೋಶದ ಹೇಳಿಕೆಯನ್ನ ವಾಪಸ್ ಪಡೆದ ತೀ. ನಾ .ಶ್ರೀನಿವಾಸ್:

ಸಾಗರ: ಕಾಂಗ್ರೆಸ್ ಪಕ್ಷ ಬಗರಹುಕುಂ ಸಾಗುವಳಿ ಮಂಜೂರಾತಿಗಾಗಿ11/8/21ರಂದು  ನಡೆಸಿದ ಪ್ರತಿಭಟನೆ ವೇಳೆ ಮಾಜಿ ಪುರಸಭಾಧ್ಯಕ್ಷ  ತೀ ನಾ ಶ್ರೀನಿವಾಸ್ ಬಿಜೆಪಿ ನಾಯಕರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದರು ಎಂದು ಆರೋಪಿಸಿ ಸಾಗರ ಬಿಜೆಪಿ ಘಟಕ ದಿನಾಂಕ12/8/21 ರಂದು ಪ್ರತಿಭಟನೆ ನಡೆಸಿತ್ತು  ಇಂದು ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡಿರುವ ಮಾಜಿ ಪುರಸಭಾ ಅಧ್ಯಕ್ಷ ತೀ ನಾ ಶ್ರೀನಿವಾಸ್ ನಾನು ಯಾವುದೇ ನಾಯಕರನ್ನು ಉದ್ದೇಶಿಸಿ ಹೇಳಿಕೆ ನೀಡಿಲ್ಲ ಸಂಕಷ್ಟದಲ್ಲಿರುವ ರೈತರ ಸ್ಥಿತಿಗತಿ ಮತ್ತು ಜನಸಾಮಾನ್ಯರ ಪರಿಸ್ಥಿತಿಯಿಂದ ಆಕ್ರೋಶಗೊಂಡು ಮಾತನಾಡಿದ್ದು ಅಷ್ಟೆ ಅದನ್ನು…

Read More

ವಿದ್ಯಾರ್ಥಿಗಳ ಅನುಪಸ್ಥಿತಿ ಇದ್ದರೂ ಶಾಲೆಗಳು ಸ್ವಾತಂತ್ರ್ಯೋತ್ಸವ ಆಚರಿಸುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.  ಕೋವಿಡ್ ನಿಯಮಾವಳಿಗಳನ್ನು ಅನುಸರಿಸುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಈ ಆಚರಣೆ ನಡೆಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮುಖ್ಯಸ್ಥರಿಗೆ ಸೂಚಿಸಿದೆ.   ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ವಿಡಿಯೋವನ್ನು ಶಾಲೆಗಳು ರೆಕಾರ್ಡ್ ಮಾಡಿಕೊಂಡು ಆನ್ ಲೈನ್ ಮೂಲಕ ಮಕ್ಕಳಿಗೆ ಶೇರ್ ಮಾಡಬೇಕು. ದೈಹಿಕ ತರಗತಿಗಳಿಗೆ ಹಾಜರಾಗಲು ಅನುಮತಿಸದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮ್ಮತಿಯಿಲ್ಲ….

Read More