Headlines

ದಲಿತ ಮಹಿಳೆಯ ಶವಸಂಸ್ಕಾರಕ್ಕೆ ಅಡ್ಡಿ: ಪೊಲೀಸರ ಮಧ್ಯಸ್ಥಿಕೆಯಿಂದ ಸಮಸ್ಯೆ ಇತ್ಯರ್ಥ:

ಹೊಸನಗರ: ಆದಿವಾಸಿ ಬುಡಕಟ್ಟು ಜನಾಂಗದವರಿಗೆ ಮೀಸಲಿಟ್ಟಿದ್ದ ರುದ್ರಭೂಮಿಯನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿ ಶವಸಂಸ್ಕಾರಕ್ಕೆ ಅಡ್ಡಿ ಪಡಿಸಿದ ಘಟನೆ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಯೋಗಿ ಎಂಬಲ್ಲಿ ನಡೆದಿದೆ. ಆದಿವಾಸಿ ಬುಡಕಟ್ಟು ಜನಾಂಗಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಖಾಸಗಿ ವ್ಯಕ್ತಿಗಳು ಆಕ್ರಮಿಸಿದ್ದರಿಂದ ಬುಡಕಟ್ಟು ಜನಾಂಗದ ಮೃತಪಟ್ಟ ಮಹಿಳೆಯೊಬ್ಬರ ಶವ ಸಂಸ್ಕಾರಕ್ಕೆ ಮುಂಜಾನೆಯಿಂದ ಮಧ್ಯಾಹ್ನದವರೆಗೂ ಕಾಯಿಸಿದ ಘಟನೆ ಮುಂಬಾರು ಗ್ರಾಮದ ಹಿರಿಯೋಗಿಯಲ್ಲಿ ನಡೆದಿದೆ. ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರಿಯೋಗಿ ಗ್ರಾಮದ ಸರ್ವೆ ನಂ16 ರಲ್ಲಿ 2 ಎಕರೆ ಪ್ರದೇಶವನ್ನು ಆದಿವಾಸಿ…

Read More

ರೈತರ ಬದುಕು ಹಸನಾಗಿಸುವ ಕಾರ್ಯವನ್ನು ಕೃಷಿ ಇಲಾಖೆ ನಡೆಸಬೇಕು : ಶಾಸಕ ಹೆಚ್ ಹರತಾಳು ಹಾಲಪ್ಪ .

ಸಾಗರ: ರೈತರ ಬದುಕನ್ನು ಹಸನು ಗೊಳಿಸುವಂತಹ ಕಾರ್ಯವನ್ನು ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ನಡೆಸಬೇಕು.ಕೃಷಿ ಇಲಾಖೆಯ ಯೋಜನೆಗಳು ಕೇವಲ ಬಳಕೆಯಾಗದೆ ರೈತರಿಗೆ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಶಾಸಕರಾದ ಹರತಾಳು ಹಾಲಪ್ಪ ಹೇಳಿದರು. ಅವರು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಪ್ರಸಕ್ತ ವರ್ಷದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮ ದೇಶದಲ್ಲಿ ರೈತ ದಿನದ ಹನ್ನೆರಡು ಗಂಟೆ ಕೆಲಸ ಮಾಡುತ್ತಾನೆ ಆದ್ದರಿಂದಲೇ ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ದೇಶವಾಗಿ ನೆರೆ ದೇಶಕ್ಕೆ ಆಹಾರ ಸಾಮಗ್ರಿಗಳನ್ನು ರಫ್ತು…

Read More

ದಾವಣಗೆರೆ: ಕಾಂಗ್ರೆಸ್‌ ಮುಖಂಡನ ಭೀಕರ ಹತ್ಯೆ:ನಾಲ್ವರ ಬಂಧನ

ದಾವಣಗೆರೆ: ಕಾಂಗ್ರೆಸ್ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಇಲ್ಲಿನ ಬಸವರಾಜಪೇಟೆ ನಿವಾಸಿ ಸೀಮೆಎಣ್ಣೆ ಪರಮೇಶ್(43) ತಮ್ಮ ಮನೆ ಪಕ್ಕದ ಬೀದಿ ಹುಬ್ಬಳ್ಳಿ ಚೌಡಪ್ಪ ಗಲ್ಲಿಯಲ್ಲಿರುವ ಪರಿಚಿತರ ಮನೆಗೆ ಹೋಗಿ ಬರುತ್ತಿದ್ದಾಗ ಆಟೋದಲ್ಲಿ ಬಂದ ಮೂವರು ಪರಮೇಶ್‍ಗೆ ಹೊಡೆದು ಕೆಳಗೆ ಬೀಳಿಸಿದ್ದಾರೆ. ನಂತರ ಪರಮೇಶ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿದ್ದ ಪರಮೇಶ್ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದರು. ಈ ಹಿಂದೆ…

Read More

ಶಿವಮೊಗ್ಗ:ಕೋವಿಡ್19 ಮೂರನೇ ಅಲೆ ನಿಯಂತ್ರಣ ಮಾರ್ಗಸೂಚಿ ತಿದ್ದುಪಡಿ ಆದೇಶ:

ಶಿವಮೊಗ್ಗ: ನೆರೆಹೊರೆ ರಾಜ್ಯಗಳಲ್ಲಿ ಕೋವಿಡ್ 19 ರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದೆ ಸಂಭವಿಸಬಹುದಾದ ಕೋವಿಡ್ 19 ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಕೆಳಕಂಡಂತೆ ತಿದ್ದುಪಡಿ ಮಾಡಿ ಆದೇಶಿಸಿರುತ್ತಾರೆ. • ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್‍ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‍ಟಿಪಿಸಿಆರ್ ನೆಗೆಟಿವ್ ವರದಿ/ಆರ್‍ಎಟಿ ನೆಗೆಟಿವ್…

Read More

ಶಿವಮೊಗ್ಗ: ಒತ್ತುವರಿ ಕೆರೆಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯಿಂದ ಖಡಕ್ ಆದೇಶ:

ಶಿವಮೊಗ್ಗ: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೆರೆಗಳ ಒತ್ತುವರಿ ತೆರವು ಪ್ರಗತಿ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಜಿಲ್ಲಾ ಮಟ್ಟದಲ್ಲಿ ಈ ಕುರಿತಾದ ಸಮಿತಿಯನ್ನು ರಚಿಸಲಾಗಿದೆ. ಎಲ್ಲಾ ಕೆರೆಗಳ ಸರ್ವೇ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಎಲ್ಲಾ ತಹಶೀಲ್ದಾರ್ ಕ್ರಮ ವಹಿಸಬೇಕು. ಪ್ರತಿ ತಿಂಗಳು…

Read More

ಗಣೇಶ ಚತುರ್ಥಿ, ಮೊಹರಂ ಹಬ್ಬ; ರಾಜ್ಯ ಸರ್ಕಾರದಿಂದ ಅಧಿಕೃತ ಮಾರ್ಗಸೂಚಿ ಬಿಡುಗಡೆ:

ಬೆಂಗಳೂರು: ಗಣೇಶ ಚತುರ್ಥಿ ಮತ್ತು ಮೊಹರಂ ಆಚರಿಸುವ ಕುರಿತು ರಾಜ್ಯ ಸರ್ಕಾರ ಅಧಿಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿನ ಹಬ್ಬಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಹಬ್ಬಗಳಲ್ಲಿ ಕೊರೊನಾ ನಿಯಮ ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮೆರವಣಿಗೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಗಣೇಶ ಮೂರ್ತಿ ತರುವಾಗ ಮತ್ತು ವಿಸರ್ಜನೆ ವೇಳೆ ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಗಣೇಶ ಹಬ್ಬ ಆಚರಿಸುವ ದೇಗುಲಗಳಲ್ಲಿ ನಿತ್ಯ ಸ್ಯಾನಿಟೈಸೇಷನ್ ನಡೆಸಬೇಕು. ದೇಗುಲಗಳಲ್ಲಿ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ದೇಗುಲಗಳಲ್ಲಿ ಭಕ್ತರಿಗೆ ಕನಿಷ್ಠ 6 ಅಡಿ…

Read More

ಕೆಂಚನಾಲ ನೂತನ ಮಾರಿಕಾಂಬಾ ದೇವಾಲಯ ಲೋಕಾರ್ಪಣೆ:

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಇತಿಹಾಸ ಪ್ರಸಿದ್ಧ ಕೆಂಚನಾಲ ಮಾರಿಕಾಂಬಾ ದೇವಾಲಯವು ಇಂದು ಧಾರ್ಮಿಕ ವಿಧಿ ವಿಧಾನಗಳ ಮೂಲಕ ಲೋಕಾರ್ಪಣೆಗೊಂಡಿತು. ಕೆಂಚನಾಲ ಮಾರಿಕಾಂಬಾ ದೇವಾಲಯದ ಲೋಕಾರ್ಪಣ ಕಾರ್ಯಕ್ರಮವು ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ನಡೆಯಿತು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮವು ಕೆಂಜಿಗಾಪುರ ಶ್ರೀಧರ ಭಟ್ ನೇತ್ರತ್ವದಲ್ಲಿ ಜರುಗಿತು.ಹಾಗೂ ಕೊರೊನಾ ರೋಗದ ಭೀತಿಯಿಂದ ಇಲ್ಲಿಗೆ ಆಗಮಿಸುವ ಭಕ್ತಾದಿಗಳ ಸಂಖ್ಯೆಯೂ ಗಣನೀಯವಾಗಿ ಇಳಿಕೆಯಾಗಿತ್ತು.  ರಾಜ್ಯ ಸರ್ಕಾರದ ಆದೇಶದಂತೆ ಕೊರೋನ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತಿತ್ತು. ತಾಲೂಕು ಆಡಳಿತ, ಗ್ರಾಮಾಡಳಿತ, ಕಂದಾಯ…

Read More

ಬಗರ್ ಹುಕುಂ ಸಾಗುವಳಿ ಅರ್ಜಿದಾರರಿಗೆ ತಕ್ಷಣದಲ್ಲೇ ಸಾಗುವಳಿ ಚೀಟಿಯನ್ನು ನೀಡಿ : ಕಾಗೋಡು ತಿಮ್ಮಪ್ಪ

ಸಾಗರ :ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಪ್ರಕರಣಗಳ ಸಾಗುವಳಿ ಚೀಟಿಯನ್ನು ತಕ್ಷಣದಲ್ಲಿ ನೀಡುವಂತೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಾಗರ ವತಿಯಿಂದ ಸಾಗರ ತಹಶೀಲ್ದಾರ್ ರಿಗೆ ಮನವಿಯನ್ನು ಸಲ್ಲಿಸಿದರು.  ಪ್ರತಿಭಟನೆಯ ನೇತೃತ್ವವನ್ನು ವಹಿಸಿದ ಮಾಜಿ ಸಚಿವರು ಮಾಜಿ ವಿಧಾನಸಭಾ ಅಧ್ಯಕ್ಷರು ಆದ ಶ್ರೀ ಕಾಗೋಡು ತಿಮ್ಮಪ್ಪನವರು ಮಾತನಾಡುತ್ತಾ ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ  ರೈತರ ಬಗರ್ ಹುಕುಂ ಜಮೀನು ಗಳಿಗೆ ಅರ್ಜಿ ಸಲ್ಲಿಸಿ ಸಾಕಷ್ಟು ಸಮಯ ಆದರೂ ಕೂಡ ಇದುವರೆಗೂ ಸಾಗುವಳಿ ಚೀಟಿಯನ್ನು ನೀಡಿಲ್ಲ ರೈತರು ಅತಂತ್ರ…

Read More

ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಸಕಾಲದ ಮಾಹಿತಿಯ ಫಲಕ ಕಾಣೆ :

ಹೊಸನಗರ: ಇಲ್ಲಿನ ಸಮೀಪದ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಸಾಮಾನ್ಯ ಜನರಿಗೆ ಮಾಹಿತಿ ನೀಡುವ ಸಕಾಲ ದ ಫಲಕ ಕಾಣೆಯಾಗಿದೆ. ಸಾಮಾನ್ಯ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಕಾಲ ದ ಫಲಕ ಹಾಕುವುದು ಕಡ್ಡಾಯವಾಗಿದೆ ಆದರೆ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಹೊಸ ಕಟ್ಟಡಕ್ಕೆ ಕಛೇರಿ ವರ್ಗಗೊಂಡಿದ್ದು ಹಳೆ ಪಂಚಾಯಿತಿಯನ್ನು ಸ್ವಚ್ಚ ಸಂಕೀರ್ಣ ಅಡಿಯಲ್ಲಿ ಸಿದ್ದಪಡಿಸಿದ್ದಾರೆ. ಆದರೆ ಸಾಮಾನ್ಯ ಜನರಿಗೆ ಅರಿವು ಮೂಡಿಸುವ ಸಲುವಾಗಿ ಹಾಕುವ ಸಕಾಲ ಫಲಕ ಇನ್ನೂ ಸ್ವಚ್ಚ ಸಂಕೀರ್ಣ…

Read More

ದೇವೇಗೌಡರು ಹಾಗೂ ಕುಮಾರಸ್ವಾಮಿ ಬೆಂಬಲ ಇರುವ ತನಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ : ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ರಾಜ್ಯದಲ್ಲಿ ನೂತನವಾಗಿ ರಚನೆಗೊಂಡಿರುವ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರಕ್ಕೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಬೆಂಬಲ ಇರುವ ತನಕ ಮಾತ್ರ ಅಸ್ತಿತ್ವದಲ್ಲಿರುತ್ತದೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು.  ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ನೂತನವಾಗಿ ರಚನೆಗೊಂಡಿರುವ ಬಸವರಾಜ್ ಬೊಮ್ಮಾಯಿ ಅವರ ಸರಕಾರಕ್ಕೆ ಅವರ ಪಕ್ಷದಿಂದಲೇ ಬಹಳಷ್ಟು ವಿರೋಧವಿದೆ. ಈಗಾಗಲೇ ಭಿನ್ನಮತೀಯರ ಚಟುವಟಿಕೆ ಹೆಚ್ಚಾಗಿದ್ದು ಕೆಲವೇ ದಿನಗಳಲ್ಲಿ ಕೆಲವು ಮಂತ್ರಿಗಳು ಹಾಗೂ ಶಾಸಕರು…

Read More