ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..!

ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಶಿವಮೊಗ್ಗ ನಂದನ್ ಇನ್ನಿಲ್ಲ..! ಖ್ಯಾತ ಫೋಟೋ ಜರ್ನಲಿಸ್ಟ್ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಶಿವಮೊಗ್ಗ ನಂದನ್ (57ವರ್ಷ ) ಹೃದಯಾಘಾತದಿಂದ ನಿಧನರಾಗಿದ್ದಾರೆ. ತಡರಾತ್ರಿ 1:30ರ ಸುಮಾರಿಗೆ ನಂದನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಂದನ್ ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇಂದು ರೈಲ್ವೆ ನಿಲ್ದಾಣ ಬಳಿ ಇರುವ ಎ.ಎ.ಕಾಲೋನಿಯಲ್ಲಿರುವ ನಿವಾಸದಲ್ಲಿ…

Read More

ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ | Arrested

ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ | Arrested ಶಿವಮೊಗ್ಗ : ರಾಗಿಗುಡ್ಡ ಚಾನಲ್‌ನ ಬಳಿಯಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ ಗಾಂಜಾ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.   ಆರೋಪಿಗಳಾದ ಸಂಕೇತ, 23 ವರ್ಷ, ಗೋಪಾಳ, ಶಿವಮೊಗ್ಗ ಟೌನ್, ಅಂಬರೀಶ, 26 ವರ್ಷ, ನ್ಯೂ ಮಂಡ್ಲಿ, ಶಿವಮೊಗ್ಗ ಟೌನ್ ಮತ್ತು ಧನುಷ್, 20 ವರ್ಷ, ಪುರಲೆ, ಶಿವಮೊಗ್ಗ ಟೌನ್ ರವರನ್ನು…

Read More

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು ರಿಪ್ಪನ್‌ಪೇಟೆ : ತಳಲೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದಚುನಾವಣೆಯಲ್ಲಿ ತಳಲೆ ಹೆಚ್.ಎಸ್.ದಿನೇಶ ತಂಡ ಭರ್ಜರಿ ಗೆಲುವಿನೊಂದಿಗೆ ಅಡಳಿತದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಳಲೆ ಗ್ರಾಮದಲ್ಲಿ ಭಾನುವಾರದಂದು ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಸಾಮಾನ್ಯ ಸಾಲಗಾರ ಕ್ಷೇತ್ರದಿಂದ ಹೆಚ್ ಎಸ್ ದಿನೇಶ್ ಗೌಡ್ರು ತಳಲೆ,ಹೆಚ್ ಎಸ್ ಗಂಗಾಧರ್ , ಹಾರಂಬಳ್ಳಿ ,ಬಸಪ್ಪ ಕೆ…

Read More

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ”

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ” ರಿಪ್ಪನ್‌ಪೇಟೆ – ಮಹಾಮಾರಿ ಕ್ಯಾನ್ಸರ್ ಗೆ ಇನ್ನೂ ಬಾಳಿ ಬದುಕಬೇಕಾಗಿದ್ದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಪಟ್ಟಣದ ವ್ಯಾಪ್ತಿಯಲ್ಲಿ ನಡೆದಿದೆ. ಗವಟೂರು ಗ್ರಾಮದ 33 ವರ್ಷದ ಗೀತಾ ಎಂಬ ಯುವತಿ ಮಹಾಮಾರಿ ಕ್ಯಾನ್ಸರ್‌ನಿಂದ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಪತಿ ಅನಿಲ್ ಕುಮಾರ್ ಅವರನ್ನು ಅಗಲಿದ ಗೀತಾ ಕಳೆದ ಕೆಲವು ತಿಂಗಳಿನಿಂದ ದುಸ್ತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮೂಲತಃ ಆರೋಗ್ಯವಂತಳಾಗಿದ್ದ…

Read More

ರಿಪ್ಪನ್ ಪೇಟೆ :: ದೂನ ಗ್ರಾಮದ ನಾರಾಯಣರಾವ್ ಇನ್ನಿಲ್ಲ!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯಿತಿಯ ದೂನ ಗ್ರಾಮದ ಹಿರಿಯರಾದ ನಾರಾಯಣರಾವ್ (76) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತಿದ್ದ ಇವರು ಮಧ್ಯರಾತ್ರಿ ಸುಮಾರು 12.30 ಕ್ಕೆ  ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಮೂವರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದು, ಇವರ ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮ ದೂನದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

Read More

ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಓಮಿನಿ ಕಾರು ಡಿಕ್ಕಿ – ಓರ್ವ ಗಂಭೀರ|accident

ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಓಮಿನಿ ಕಾರು ಡಿಕ್ಕಿ – ಓರ್ವ ಗಂಭೀರ, ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಶನಿವಾರ ಸಂಜೆ ಮಾರುತಿ ಓಮಿನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಓರ್ವನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ.  ತೀರ್ಥಹಳ್ಳಿ ಕಡೆಯಿಂದ ಸಾಗರಕ್ಕೆ ತೆರಳುತಿದ್ದ ಮಾರುತಿ ಓಮಿನಿ ಕಾರು ಗರ್ತಿಕೆರೆ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಘಟನೆ ಇಂದು ಸಂಜೆ ನಡೆದಿದೆ. ಕಾರಿನಲ್ಲಿ ಸಾಗರ ಮೂಲದ ಒಂದೇ…

Read More

ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ತೀರ್ಥಹಳ್ಳಿ ಗೌರವ ಉಳಿಸಿ : ಕಿಮ್ಮನೆ ರತ್ನಾಕರ್

ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ಸಿಕ್ಕಿದಾಗ ನಮ್ಮ ಕ್ಷೇತ್ರಕ್ಕೆ ಒಳ್ಳೆಯ ಹುದ್ದೆ ಸಿಕ್ಕಿದೆ ಎಂದು ಖುಷಿಪಟ್ಟಿದ್ದೆ. ನಾನೇ ಸನ್ಮಾನ ಮಾಡಿದ್ದೆ. ತೀರ್ಥಹಳ್ಳಿ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ. ಶಾಂತವೇರಿ ಗೋಪಾಲಗೌಡರ ಹೆಸರು ಹೇಳದೆ ಅಧಿವೇಶನ ಸಹ ನಡೆಯುವುದಿಲ್ಲ. ಆದರೆ, ಇಂದು ಜ್ಞಾನೇಂದ್ರ ನಮ್ಮ ಕ್ಷೇತ್ರಕ್ಕೆ ಕಳಂಕ ತರುತ್ತಿದ್ದಾರೆ. ರಾಜ್ಯದ ಜನರು ಅವರಿಗೂ, ತೀರ್ಥಹಳ್ಳಿ ಕ್ಷೇತ್ರಕ್ಕೂ ಬೈಯುತ್ತಿದ್ದಾರೆ. ಹೀಗಾಗಿ ಆರಗ ಜ್ಞಾನೇಂದ್ರ ರಾಜೀನಾಮೆ ಕೊಟ್ಟು ತೀರ್ಥಹಳ್ಳಿ ಗೌರವವನ್ನು ಉಳಿಸಬೇಕು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ…

Read More

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ ರಿಪ್ಪನ್ ಪೇಟೆ : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಗ್ರಾಪಂ ಸದಸ್ಯರಾದ ಗಣಪತಿ ಗವಟೂರು ರವರ ತಾಯಿ ಗೌರಮ್ಮ (80) ವಯೋಸಹಜ ನಿಧನರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತಿದ್ದ ಅವರು ಪಟ್ಟಣದ ಸಮೀಪದ ನೇರಲೆಮನೆಯ ಸ್ವಗೃಹದಲ್ಲಿ ಇಂದು ಸಂಜೆ ಕೊನೆಯುಸಿರೆಳೆದರು.ನೇರಲೆಮನೆ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬುಧವಾರ ಬೆಳಿಗ್ಗೆ ನೇರಲೆಮನೆ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ…

Read More

ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ವಾಹನ ಚಾಲನೆ ಕಲಿಕಾ ಪರವಾನಗಿ ನೋಂದಣಿ ಶಿಬಿರ (LLR)

ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆಯಲ್ಲಿ ವಾಹನ ಚಾಲನೆ ಕಲಿಕಾ ಪರವಾನಗಿ ನೋಂದಣಿ ಶಿಬಿರ (LLR) ರಿಪ್ಪನ್‌ಪೇಟೆ : ಪತ್ರಿಕಾ ದಿನಾಚರಣೆ ಅಂಗವಾಗಿ ರಿಪ್ಪನ್‌ಪೇಟೆ ಪತ್ರಕರ್ತರ ಬಳಗ , ಪೊಲೀಸ್ ಇಲಾಖೆ ,ಪ್ರಾದೇಶಿಕ ಸಾರಿಗೆ ಇಲಾಖೆ ಸಾಗರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಜುಲೈ 06 ರ ಶನಿವಾರ ವಾಹನ ಪೂರ್ವ ಚಾಲನ ಪರವಾನಗಿ(LLR) ಶಿಬಿರವನ್ನು ಆಯೋಜಿಸಲಾಗಿದೆ. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಬೆಳಿಗ್ಗೆ 10.30ಕ್ಕೆ ಆಯೋಜಿಸಿರುವ ವಾಹನ ಪೂರ್ವ ಚಾಲನ ಪರವಾನಗಿ…

Read More

ಸಾಗರದಲ್ಲಿ ಇಂಜೆಕ್ಷನ್‌ ಪಡೆದ 14 ಮಕ್ಕಳು ಅಸ್ವಸ್ಥ : ಸ್ಥಳಕ್ಕೆ ದೌಡಾಯಿಸಿದ ಶಾಸಕ ಹರತಾಳು ಹಾಲಪ್ಪ

ಸಾಗರ : ಜ್ವರ, ಕೆಮ್ಮು, ನೆಗಡಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದ 14  ಮಕ್ಕಳು ಅಸ್ವಸ್ಥಗೊಂಡ ಘಟನೆ ರವಿವಾರ ಸಂಜೆ ನಡೆದಿದೆ. ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ಸಂಜೆ ವೇಳೆ ಆಸ್ಪತ್ರೆಯ ದಾದಿ ಆಂಟಿಬಯೋಟಿಕ್ ಇಂಜೆಕ್ಷನ್ ನೀಡಿದ್ದಾರೆ. ಇಂಜೆಕ್ಷನ್ ಕೊಟ್ಟ ತಕ್ಷಣ ಮಕ್ಕಳು ಚಳಿ ಚಳಿ ಎಂದು ನಡುಗುತ್ತ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ.  ಕರ್ತವ್ಯದಲ್ಲಿದ್ದ ವೈದ್ಯರು ಅಸ್ವಸ್ಥಗೊಂಡ 14 ಮಕ್ಕಳಲ್ಲಿ 4 ಮಕ್ಕಳನ್ನು ಆ್ಯಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನುಳಿದ ಮಕ್ಕಳಿಗೆ ಉಪವಿಭಾಗೀಯ ಆಸ್ಪತ್ರೆಯಲ್ಲೇ ಚಿಕಿತ್ಸೆ…

Read More