ಕೊಡಚಾದ್ರಿ ಬೆಟ್ಟಕ್ಕೆ ಕೇಬಲ್ ಕಾರ್ ಗೆ ಅನುಮೋದನೆ : ಸಂಸದ ಬಿ ವೈ ರಾಘವೇಂದ್ರ
1200 ಕೋಟಿ ರೂ. ವೆಚ್ಚದ 7 ಕಿ.ಮೀ. ಉದ್ದದ ಕೊಡಚಾದ್ರಿ ಬೆಟ್ಟದಿಂದ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ಕೇಬಲ್ ಕಾರ್ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೊದನೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಕೊಡಚಾದ್ರಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಮಾಡಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 20 ಕೋಟಿ ರೂ. ನೀಡಿದ್ದರು.ಆದರೆ, ಕಾನೂನು ತೊಡಕಿನಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ…