ವಿದ್ಯಾರ್ಥಿನಿಯರ ಮೇಲೆ ಟಿಪ್ಪರ್ ಲಾರಿ ಹರಿದ ಪ್ರಕರಣ -ಚಿಕಿತ್ಸೆ ಫಲಕಾರಿಯಾಗದೇ ಓರ್ವ ವಿದ್ಯಾರ್ಥಿನಿ ಸಾವು|Accident death

ಸಾಗರ ಟೌನ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಈ ಪೈಕಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿತ್ತು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿಯೇ ಆಕೆ ಸಾವನ್ನಪ್ಪಿದ್ದಾರೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಶಿಕಾರಿಪುರ ಮೂಲದ ಪ್ರತಿಮಾ(19) ಎಂದು ಗುರುತಿಸಲಾಗಿದೆ. ಬಿಸಿಎಂ ಹಾಸ್ಟೆಲ್​ನ ವಿದ್ಯಾರ್ಥಿನಿಯರು ಶಿಕಾರಿಪುರ ಹಾಗೂ ಸೊರಬ ಮೂಲದವರು ಎನ್ನಲಾಗಿದ್ದು, ಬೆಳಗ್ಗೆ ಕಾಲೇಜಿಗೆ ಅಂತಾ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.  ಸಾಗರ…

Read More

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ young-woman-who-went-to-college-goes-missing-police-appeal-for-help-in-finding-her ಕಾಲೇಜಿಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 19 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಳೂರು ಠಾಣಾ ವ್ಯಾಪ್ತಿಯ ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಎಂಬುವವರ ಮಗಳು ಈಶಾನ್ಯ ಎಂಬ 19 ವರ್ಷದ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್‌ನಲ್ಲಿದ್ದುಕೊಂಡು ನಗರದ ಸ.ಪ್ರ.ದ.ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಮನೆಯಿಂದ ಕಾಲೇಜ್‌ಗೆ ಹೋಗುವುದಾಗಿ ನ….

Read More

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು; ಹೃದಯಾಘಾತ ಶಂಕೆ!

ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು; ಹೃದಯಾಘಾತ ಶಂಕೆ! A 6-year-old boy collapsed while playing in a school playground and died in Halasasi village of Sagar taluk, Shivamogga district. Heart attack is suspected as the cause of death. ಸಾಗರ: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕನೊಬ್ಬ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ…

Read More

ಬಸ್ ಹತ್ತುವಾಗ ಆಯತಪ್ಪಿ ಬಿದ್ದು ಮಹಿಳೆ ಸಾವು|accident

ಬಸ್ ಹತ್ತುವಾಗ ಆಯತಪ್ಪಿ ಬಿದ್ದು ಮಹಿಳೆ ಸಾವು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಮಾಚೇನಹಳ್ಳಿ ಸಮೀಪ ಕೆಎಸ್‌ಆರ್ಟಿಸಿ ಬಸ್ ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಜೇಶ್ವರಿ ಮೃತಪಟ್ಟ ಮಹಿಳೆ ಎನ್ನಲಾಗಿದೆ. ಶಿವಮೊಗ್ಗ -ಭದ್ರಾವತಿ ನಡುವೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಒಂದೇ ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭದ್ರಾವತಿಯ ರಾಜೇಶ್ವರಿ ಮಾಚೇನಹಳ್ಳಿಗೆ ಕೆಲಸಕ್ಕೆ ಹೋಗಿ ಬರುವಾಗ ಬಸ್ ಹತ್ತಲು ಮುಂದಾಗಿದ್ದಾರೆ….

Read More

ಸರ್ಕಾರಿ ಶಾಲೆಗೆ ಖಾಯಂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ – ಬಿಇಒ ಕಚೇರಿ ಮುಂದೆ ಧರಣಿ

ಸರ್ಕಾರಿ ಶಾಲೆಗೆ ಖಾಯಂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ ಹೊಸನಗರ : ತಾಲ್ಲೂಕಿನ ಮೂಡುಗೊಪ್ಪ – ನಗರ ವ್ಯಾಪ್ತಿಯ ದುಬಾರ್‌ತಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಖಾಯಂ ಶಿಕ್ಷಕರಿಲ್ಲ ಈ ಬಗ್ಗೆ ಶಿಕ್ಷಣಾಧಿಕಾರಿಗಳಿಗೆ ಸಾಕಷ್ಟು ಬಾರಿ ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಆ ಶಾಲೆಯ ವಿದ್ಯಾರ್ಥಿಗಳು ಹಾಗೂ ಮಕ್ಕಳ ಪೋಷಕರು ಗ್ರಾಮ ಪಂಚಾಯಿತಿ ಸದಸ್ಯ ಕರುಣಾಕರ ಶೆಟ್ಟಿಯವರ ನೇತೃತ್ವದಲ್ಲಿ ಸುಮಾರು 16 ಕಿ.ಮೀ. ಕಾಲ್ನಡಿಗೆಯಲ್ಲಿ ಹೊಸನಗರ…

Read More

ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಖ್ಯಾತ ನಟ ಸೂಪರ್‌ ಸ್ಟಾರ್ ಮೋಹನ್ ಲಾಲ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಖ್ಯಾತ ನಟ, ಮಲಯಾಳಂ ಸೂಪರ್‌ ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ಪ್ರಕಟಿಸಿದೆ. ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ದಂತಕಥೆಯ ನಟ, ನಿರ್ದೇಶಕ ಮತ್ತು ನಿರ್ಮಾಪಕರನ್ನು ಗೌರವಿಸಲಾಗುತ್ತಿದೆ” ಎಂದು ಸಚಿವಾಲಯ ಎಕ್ಸ್ ಪೋಸ್ಟ್‌ ನಲ್ಲಿ ತಿಳಿಸಿದೆ. ಸೆಪ್ಟೆಂಬರ್ 23 ರಂದು ನಡೆಯಲಿರುವ 71 ನೇ ರಾಷ್ಟ್ರೀಯ…

Read More

SAGARA | ಒಮಿನಿ ಕಾರು ಹಾಗೂ ಅಡಿಕೆ ಕಳ್ಳತನವೆಸಗಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಿದ ಪೊಲೀಸರು

SAGARA | ಒಮಿನಿ ಕಾರು ಹಾಗೂ ಅಡಿಕೆ ಕಳ್ಳತನವೆಸಗಿದ್ದ ಆರೋಪಿಯನ್ನು ಮಾಲು ಸಮೇತ ಬಂಧಿಸಿದ ಪೊಲೀಸರು 81 ಸಾವಿರ ರೂ. ಮೌಲ್ಯದ ಅಡಕೆ, ಕಾಳುಮೆಣಸು ಮತ್ತು ಗೇರು ಬೀಜಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಮಾಲು ಸಹಿತ ಹಾಗೂ ಕೃತ್ಯಕ್ಕೆ ಬಳಸಿದ್ದ ಕಳ್ಳತನದ ಕಾರನ್ನು ಸಾಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶಿವಪ್ಪ ನಾಯಕ ನಗರ  ನಿವಾಸಿಯಾದ ಮಹಮದ್ ಜಾಕೀರ್ (33) ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಫೆಬ್ರವರಿಯಲ್ಲಿ ಸಾಗರ ನಗರದ ಸೈಯದ್ ಷಫಾಜ್‍ರವರ ಅರೆಕಾನೆಟ್ ಎನ್ನುವ ಚಿಲ್ಲರೆ ಮಳಿಗೆಯಲ್ಲಿ ಅಡಕೆ, ಕಾಳುಮೆಣಸು,…

Read More

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ|kimmane

ಶಿವಮೊಗ್ಗ : ಕಾಂಗ್ರೆಸ್ ಗ್ಯಾರೆಂಟಿಯ ಬಗ್ಗೆ ಮಾತನಾಡುವ ಮತ್ತು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಯವರು ಕೇಂದ್ರದಲ್ಲಿ ಮೋದಿಯವರು ಅಧಿಕಾರ ಹಿಡಿಯುವಾಗ ನೀಡಿದ್ದ ಭರವಸೆಯಲ್ಲಿ  15 ಲಕ್ಷ ರೂ ಜನರ ಅಕೌಂಟ್ ಗೆ ಹಾಕುವುದಾಗಿ ಹೇಳಿಕೆ ನೀಡಿದ್ದರು, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆಯನ್ನ ನೀಡಿದ್ದರು. ಆದರೆ 9 ವರ್ಷದಿಂದ ಇದ್ಯಾವುದನ್ನು ಈಡೇರಿಸಿಲ್ಲ ಎಂದು ಕಿಮ್ಮನೆ ರತ್ನಾಕರ್ ಆರೋಪಿಸಿದರು. ಕೇಂದ್ರದ ಮೋದಿ ಸರ್ಕಾರವನ್ನು ವಿರೋಧಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನಗರದ ಗಾಂಧಿ ಪಾರ್ಕ್ ನಲ್ಲಿ ಗಾಂಧಿ ಪ್ರತಿಮೆಯ…

Read More

ಶಿವಮೊಗ್ಗ: ಪ್ರಧಾನಿ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ಕಟು ಪದ ಬಳಕೆ: ಬಿಜೆಪಿ ಐಟಿ ಸೆಲ್ ನಿಂದ ದೂರು

ಶಿವಮೊಗ್ಗ : ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಬಗ್ಗೆ ಫೇಸ್‌ಬುಕ್‌  ಖಾತೆಯಲ್ಲಿ ಕಟು ಪದಗಳಲ್ಲಿ ನಿಂದಿಸಿದ ಮೋಹನ್ ಕುಮಾರ್ ಎಂಬುವವರನ್ನು ಶೀಘ್ರದಲ್ಲೇ ಬಂಧಿಸಿ ಕಾನೂನು ಕ್ರಮ ಜರುಗಿಸಿಬೇಕೆಂದು ನಗರದ ದೊಡ್ಡಪೇಟೆ ಠಾಣೆಯಲ್ಲಿ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ವತಿಯಿಂದ ದೂರು ನೀಡಲಾಯಿತು. ಸಾಮಾಜಿಕ ಜಾಲಾತಾಣದಲ್ಲಿ ಪ್ರಧಾನಿಯವರ ಬಗ್ಗೆ ಕಟು ಪದಗಳನ್ನು ಬಳಸಿದ್ದಾರೆ, ಈ ಕೂಡಲೇ ಮೋಹನ್ ಕುಮಾರ್ ಎಂಬಾತನನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಯಿತು  ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶರತ್ ಕಲ್ಯಾಣಿ,ಜಿಲ್ಲಾ ಸಹ…

Read More

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸ್ಥಳದಲ್ಲಿಯೇ ಸಾವು

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಕೆರೆ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅರಸಾಳು ಗ್ರಾಮದ ಅನೂಪ್ ( 22) ಎಂದು ಗುರುತಿಸಲಾಗಿದೆ. ಖಾಸಗಿ ಮೆಡಿಕಲ್ ಕಂಪನಿಯಲ್ಲಿ ರೆಪ್ ಆಗಿ ಕಾರ್ಯನಿರ್ವಹಿಸುತಿದ್ದ ಅನೂಪ್ ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ತೆರಳಿ ಅರಸಾಳುವಿಗೆ ಹಿಂದಿರುಗುತಿದ್ದಾಗ ಅರಸಾಳು ಗ್ರಾಮದ ಕೆರೆ ಏರಿ ಮೇಲಿನ…

Read More