Headlines

ಕಾಡುಹಂದಿ ಬೇಟೆಯಾಡಿದ ಇಬ್ಬರ ಬಂಧನ

ಕಾಡುಹಂದಿ ಬೇಟೆಯಾಡಿದ ಇಬ್ಬರ ಬಂಧನ ಶಿಕಾರಿಪುರ: ಕಾಡು ಹಂದಿಯನ್ನು ಬೇಟೆಯಾಡಿದ ಅಪರಾಧ ಸಂಬಂಧ ಇಬ್ಬರನ್ನ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕುನಲ್ಲಿ ಬಂಧಿಸಲಾಗಿದೆ.  ಶಿಕಾರಿಪುರ ತಾಲ್ಲೂಕಿನ ಹಾರೋಗೊಪ್ಪ ಬಳಿಯ ಗಂಗಹೊನಸರ ಅರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅರಣ್ಯಾಧಿಕಾರಿಗಳು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಹಳೇಜೋಗದ ಲೋಕೇಶ್ ಹಾಗೂ ಮೈಲಾರಿ ಎನ್ನುವವರನ್ನು  ಬಂಧಿಸಿದ್ದಾರೆ. ಬೇಟೆಯಾಡಿದ ಕಾಡು ಹಂದಿಯ ಮಾಂಸವನ್ನು ಪಾಲು ಮಾಡಿಕೊಳ್ಳುವಾಗ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನೂ ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಕೆಲವರು ಪರಾರಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಸಾಗರ ವಿಭಾಗದ…

Read More

Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ

Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ,ಬಂಗಾರ ಕಳ್ಳತನವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಅಂದಾಸುರ ಗ್ರಾಮದಲ್ಲಿ ನಡೆದಿದೆ.  ಆನಂದಪುರದ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಅಬ್ದುಲ್ ಅಹಮದ್ ರವರು ವರ್ಗಾವಣೆಯಾದ ಹಿನ್ನೆಲೆ ಮಣಿಪಾಲ್ ಗೆ ಶನಿವಾರ ಸಂಜೆ ತೆರಳಿದ್ದಾರೆ. ಬುಧವಾರ ಸಂಜೆ ಮನೆಗಳ್ಳತನವಾಗಿರುವ ಬಗ್ಗೆ ಸ್ಥಳೀಯರು ಮಾಲೀಕರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಮನೆಯ ಮಾಲೀಕರು ಆನಂದಪುರಕ್ಕೆ…

Read More

ಅನಗತ್ಯ ಬಾಕ್ಸ್ ಚರಂಡಿ ನಿರ್ಮಾಣಕ್ಕೆ ವಿರೋಧ :

ರಿಪ್ಪನ್ ಪೇಟೆ : ಇಲ್ಲಿಯ ಗ್ರಾಮ ಪಂಚಾಯಿತಿ ಮುಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಈ ಹಿಂದೆ ವಿಶ್ವ ಯೋಜನೆಯನ್ವಯ ಮಾಡಿರುವ ಚಪ್ಪಡಿ ಕಲ್ಲಿನಲ್ಲಿ ನಿರ್ಮಾಣಗೊಂಡ ಭದ್ರವಾದ ಚರಂಡಿಯನ್ನು ತೆಗೆದು ಹೊಸ ಬಾಕ್ಸ್ ಚರಂಡಿ ಮಾಡಲು ಹೊರಟಿರುವ ಗ್ರಾಮ ಪಂಚಾಯಿತಿ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ. ಆರ್ .ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿ ಸ್ಥಳದಲ್ಲಿಯೇ ಧರಣಿ ನಡೆಸಿದರು.  ಹಿಂದಿನ ಗ್ರಾಮಪಂಚಾಯಿತಿ ಅವಧಿಯಲ್ಲಿ ಅಂದು ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಈಗ ಹಾಲಿ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ  ಮಹಾಲಕ್ಷ್ಮಿ ಅಣ್ಣಪ್ಪ ಇವರು ತಮ್ಮ ವಿವೇಚನಾ…

Read More

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್|DK

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್  ತೀರ್ಥಹಳ್ಳಿ : ಬಿಜೆಪಿ ಸರ್ಕಾರ ಬಂದು ಆರಗ ಜ್ಞಾನೇಂದ್ರ ಗೃಹ ಸಚಿವರಾದಾಗ ಸಂತೋಷವಾಗಿತ್ತು. ಅವರಿಗೆ ಒಳ್ಳೆಯ ಸಂಸ್ಕೃತಿ ಇದೆ ಅಂದುಕೊಂಡಿದ್ದೆ ಆದರೆ ಪೊಲೀಸ್ ಅನ್ನು ಉಪಯೋಗಿಸಿಕೊಂಡು ದುರಾಡಳಿತ ಮಾಡುತ್ತಿದ್ದಾರೆ. ನಿಮ್ಮ ಆಡಳಿತಾವಧಿಯಲ್ಲಿ ಇನ್ಸ್ಪೆಕ್ಟರ್ ಹುದ್ದೆಗೆ ಓ.ಎಂ.ಆರ್. ಶೀಟ್ ತಿದ್ದುವ ಕೆಲಸ ಮಾಡಿದ್ರು. ಆರಗ ಜ್ಞಾನೇಂದ್ರ ಅವರೇ ಕೇಸ್ ಹಾಕಿಸ್ತೀರೋ ಹಾಕಿಸಿ ಇನ್ನು 60 ದಿನದಲ್ಲಿ ಎಲ್ಲಾ ಬದಲಾಗಲಿದೆ ನಿಮ್ಮ ಅಧಿಕಾರ ಕೊನೆಗೊಳ್ಳಲಿದೆ…

Read More

ಸಾಗರ: ನಿಗೂಢವಾಗಿ ಕಣ್ಮರೆಯಾಗಿದ್ದ “”ಪ್ರಕಾಶ್ ಟ್ರಾವೆಲ್ಸ್” ಮಾಲೀಕ ಶವವಾಗಿ ಪತ್ತೆ! ನಿಜಕ್ಕೂ ಇದು ಆತ್ಮಹತ್ಯೆಯೇ…? “ಪಟಗುಪ್ಪೆ” ಸುತ್ತಾ, ಈಗ ಅನುಮಾನದ ಹುತ್ತ…!

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ರವರ ಅಳಿಯ ಕಾಫೀ ಡೇ ಸಿದ್ಧಾರ್ಥ್ ಆತ್ಮಹತ್ಯೆಯ ಪ್ರಕರಣದಂತೆಯೇ ಸಾಗರದ ಪ್ರಕಾಶ್ ಟ್ರಾವೆಲ್ಸ್ ನ ಮಾಲೀಕರಾದ ಪ್ರಕಾಶ್ ರವರ ನಿಗೂಢ ನಾಪತ್ತೆ ಪ್ರಕರಣವೂ ಸಹ ನೋಡಲು ಒಂದೇ ರೀತಿಯಾಗಿ ಕಾಣುತ್ತಿದೆ! ಯಾಕಂದ್ರೇ, ಎಲ್ ಎನ್ ಟಿ ಇನ್ನಿತರೆ ತೀರಾ ಟಾರ್ಚರ್ ಕೊಡುವ ಸಂಸ್ಥೆಗಳಿಂದ ಸಾವಿರಾರು ಕೋಟಿ ರೂಪಾಯಿಗಳ ಸಾಲ ಮಾಡಿಕೊಂಡಿದ್ದ ಸಿದ್ಧಾರ್ಥ್ ರವರು ದಿಕ್ಕೇ ಕಾಣದಂತಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು, ಇದೇ ಪ್ರಕರಣದಂತೆಯೆ ಪ್ರಕಾಶ್ ರವರು ಸಹ ಸಾಲ ಸೋಲಕ್ಕೆ ಅಂಜಿ…

Read More

ಕೆಂಚನಾಳದಲ್ಲಿ ರೈಲ್ವೆ ಹಳಿ ಮೇಲೆ ಉರುಳಿಬಿದ್ದ ಬೃಹದಾಕಾರದ ಮರ : ರೈಲ್ವೆ ಸಂಚಾರ ಅಸ್ತವ್ಯಸ್ತ

ರಿಪ್ಪನ್‌ಪೇಟೆ : ಕೆಂಚನಾಳ ರೈಲ್ವೆ ನಿಲ್ದಾಣದ ಮುಂಭಾಗದ ರೈಲು ಹಳಿಯ ಮೇಲೆ ಮರವೊಂದು ಉರುಳಿಬಿದ್ದ ಘಟನೆ ರವಿವಾರ ಬೆಳಗಿನ ಜಾವ ನಡೆದಿದೆ. ಕೆಂಚನಾಳ ರೈಲ್ವೆ ನಿಲ್ದಾಣದ ಎದುರುಗಡೆ ಇರುವ ಸುಮಾರು ನೂರು ವರ್ಷಕ್ಕೂ ಹಳೆಯ ಮರಕ್ಕೆ ನೆಲಕ್ಕುರುಳಿದೆ.ಇದರಿಂದ ತಾಳಗುಪ್ಪ-ಬೆಂಗಳೂರು ರೈಲು ಎರಡು ಗಂಟೆ ತಡವಾಗಿ ಸಂಚರಿಸಿತು. ತಾಳಗುಪ್ಪ-ಬೆಂಗಳೂರು ರೈಲು ಸಾಗರ ರೈಲ್ವೆ ನಿಲ್ದಾಣಕ್ಕೆ 06.30ಕ್ಕೆ ಆಗಮಿಸಬೇಕಾಗಿತ್ತು ಆದರೆ ಎರಡು ಗಂಟೆ ತಡವಾಗಿ ಅಂದರೆ 8:30ಕ್ಕೆ ಆಗಮಿಸಿದೆ. ಹಾಗೂ ಸಾಗರದಿಂದ-ಮೈಸೂರಿಗೆ ಹೋಗುವ ರೈಲು ಅರ್ಧ ಗಂಟೆ ತಡವಾಗಿ ಸಂಚರಿಸಿದೆ….

Read More

Shivamogga | ನಾಯಿ ಮೇಲೆ ಗುಂಡಿನ ದಾಳಿ – ದೂರು ದಾಖಲು

Shivamogga | ನಾಯಿ ಮೇಲೆ ಗುಂಡಿನ ದಾಳಿ – ದೂರು ದಾಖಲು ಶಿವಮೊಗ್ಗ : ಸಾಕು ನಾಯಿಯೊಂದು ಮತ್ತೊಂದು ಸಾಕು ನಾಯಿಗೆ ಕಚ್ಚಿದೆ ಎಂಬ ಕಾರಣಕ್ಕೆ ಗುಂಡು ಹಾರಿಸಿದ ಘಟನೆ ನಡೆದಿದ್ದು ಈ ಘಟನೆ ವಿರುದ್ಧ ನಾಇಯ ಮಾಲೀಕರು ದೂರು ದಾಖಲಿಸಲಾಗಿದೆ. ಅಮೀರ್ ಅಹ್ಮದ್ ಕಾಲೋನಿಯಲ್ಲಿ ಚಂದ್ರಿಕಾ ಎಂಬುವರು ಸುರಕ್ಷತೆಯ ದೃಷ್ಟಿಯಿಂದ ಹಾಗೂ ಮನೆಯಲ್ಲಿ ಕಳ್ಳತನವನ್ನ ತಡೆಗಟ್ಟುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಸುಮಾರು 8 ವರ್ಷಗಳಿಂದ ಒಂದು ಹೆಣ್ಣು ನಾಯಿಯನ್ನು ಸಾಕಿಕೊಂಡಿದ್ದರು. ಡಿ.20 ರಂದು ಚಂದ್ರಿಕಾರವರ ಸಾಕು…

Read More

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ | sandalwood

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ ಚಂದನವನದ ಹಿರಿಯ ಹಾಗೂ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತಾದರೂ ಶುಕ್ರವಾರ ಮಧ್ಯಾಹ್ನ ದಿಢೀರ್ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲೀಲಾವತಿ ಕೊನೆಯುಸಿರೆಳೆದರು….

Read More

ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು

ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು ಮನೆಯಲ್ಲಿ ಸಾಕಿದ ಬೆಕ್ಕೊಂದು ಮನೆಯ ಮಹಿಳೆಯನ್ನು ಬಲಿ ಪಡೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ. ಗಂಗೀಬಾಯಿ (50) ಮನೆಯ ಸಾಕು ಬೆಕ್ಕು ಕಚ್ಚಿ ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ತರಲಘಟ್ಟದ ಗಂಗೀಬಾಯಿ ಎನ್ನುವವರಿಗೆ ಎರಡು ತಿಂಗಳ ಹಿಂದೆ ಮನೆಯಲ್ಲೇ ಮುದ್ದಾಗಿ ಸಾಕಿದ್ದ ಬೆಕ್ಕು ಕಚ್ಚಿತ್ತು ಎನ್ನಲಾಗಿದೆ. ಈ ಬೆಕ್ಕು ಮೊದಲು ತರಲಘಟ್ಟದ ಕ್ಯಾಂಪ್​ನಲ್ಲಿರುವ ಯುವಕನ ಮೇಲೆ ದಾಳಿ…

Read More

ಬೈಕ್ ವೀಲಿಂಗ್ ವಿಡಿಯೋ ವೈರಲ್ – ಇಬ್ಬರು ಯುವಕರ ವಿರುದ್ಧ ಪ್ರಕರಣ

ಬೈಕ್ ವೀಲಿಂಗ್ ವಿಡಿಯೋ ವೈರಲ್ – ಇಬ್ಬರು ಯುವಕರ ವಿರುದ್ಧ ಪ್ರಕರಣ Shivamogga traffic police register a case against two youths for performing dangerous wheeling on city roads and posting the video on social media. ಶಿವಮೊಗ್ಗ: ನಗರದ ರಸ್ತೆಗಳಲ್ಲಿ ಅಪಾಯಕಾರಿಯಾಗಿ ವೀಲಿಂಗ್ ಮಾಡಿ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಇಬ್ಬರು ಯುವಕರ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ…

Read More