Headlines

ರಿಪ್ಪನ್‌ಪೇಟೆಯ ಸಿದ್ದಪ್ಪನಗುಡಿ ಬಳಿ ಭೀಕರ ಅಪಘಾತ : ಓರ್ವ ಸಾವು

ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಸಿದ್ದಪ್ಪನಗುಡಿ ಬಳಿ ಸ್ವಿಫ್ಟ್ ಕಾರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. class=”separator” style=”clear: both; text-align: center;”> ಬೆಂಗಳೂರಿನಿಂದ ಎಂ ಗುಡ್ಡೆಕೊಪ್ಪ ಗ್ರಾಮಕ್ಕೆ ಬರುತ್ತಿದ್ದಾಗ ಇಂದು ಬೆಳಗಿನಜಾವ ಸಿದ್ದಪ್ಪನಗುಡಿ ಬಳಿಯ ಸೇತುವೆಯ ತಡೆಗೋಡೆಗೆ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.ಕಾರಿನ ಎಡಬಾಗದಲ್ಲಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಹೊಸನಗರ ಸಮೀಪದ ಎಂ ಗುಡ್ಡೆಕೊಪ್ಪ ಗ್ರಾಮದ ಪ್ರದೀಪ್(32) ಮೃತಪಟ್ಟ ದುರ್ದೈವಿಯಾಗಿದ್ದಾರೆ.ಕಾರು ಚಾಲಕ ನಾಗರಾಜ್ ಎಂಬುವವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂ…

Read More

ತೀರ್ಥಹಳ್ಳಿ ಗಾಂಧಿಚೌಕ್ ನಲ್ಲಿ ದಂಪತಿಗಳ ಹೈಡ್ರಾಮ : ಮಗುವಿಗೆ ಹಿಂಸೆ ನೀಡಿದ ಪ್ರಕರಣದಲ್ಲಿ ತಂದೆ ಅರೆಸ್ಟ್

ತೀರ್ಥಹಳ್ಳಿ: ಹುಚ್ಚುತನದ ಪರಮಾವಧಿಯಾಗಿ ಧರ್ಮದ ಅಮಲಿನಲ್ಲಿ ತನ್ನ ಎಳೆಯ ಕಂದಮ್ಮನನ್ನು ಮಳೆಯಲ್ಲಿ ನೆನೆಸುತ್ತಾ ಹುಚ್ಚು ಹುಚ್ಚಾಗಿ ಅರಚುತ್ತಿದ್ದ ತಂದೆಯನ್ನು ಅನುಮಾನದ ಮೇಲೆ ಪೊಲೀಸರು ವಿಚಾರಣೆ ನಡೆಸಿ ಆತನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ತೀರ್ಥಹಳ್ಳಿಯ ಗಾಂಧಿ ಚೌಕದಲ್ಲಿ ಸಣ್ಣ ಮಗುವನ್ನು ಹಿಡಿದುಕೊಂಡು ಮಳೆಯಲ್ಲೇ ಅದನ್ನು ಮೇಲೆತ್ತಿ ಹಾಕುತ್ತ ಹಿಂಸೆ ನೀಡುತ್ತಿರುವ ದೃಶ್ಯವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ತೀರ್ಥಹಳ್ಳಿಯ ಫರ್ನಾಂಡಿಸ್ ಎಂದು ಗುರುತಿಸಿದ್ದು ಈತ ಕಾರಿನ ಮೇಲೆ ವಿವಿಧ ಧರ್ಮದ ಅಮಲಿನಲ್ಲಿ ಬರಹ ಬರೆದು…

Read More

ಮಾಸ್ತಿಕಟ್ಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಗುದ್ದಿದ ಖಾಸಗಿ ಬಸ್ :

ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್’ಗೆ ಖಾಸಗಿ ಬಸ್ ಗುದ್ದಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಕುಂದಾಪುರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಗೆ ಡಿಕ್ಕಿ ಹೊಡೆದಿದ್ದು ಮನೆಯ ಮುಂಭಾಗದ ಕಾಂಪೌಡ್ ಪುಡಿಪುಡಿಯಾಗಿವೆ.  ಕುಂದಾಪುರದಿಂದ ಹೊಸನಗರ ಮಾರ್ಗವಾಗಿ ಹೋಗುತ್ತಿದ್ದ KA 20 ಸಿ 6293 ಸಂಖ್ಯೆಯ ಶ್ರೀ ದುರ್ಗಾಂಬಾ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ ಕಾಂಪೌಂಡ್ ಗೆ ಗುದ್ದಿದೆ. ಹಾನಿಗೊಳಗಾದ…

Read More

ರಿಪ್ಪನ್ ಪೇಟೆ : ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ

ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು.  ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ  ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು.     ರಿಪ್ಪನ್ ಪೇಟೆಯಲ್ಲಿ ಮಳೆ ಹಿನ್ನಲೆಯಲ್ಲಿ  ಮೆರವಣಿಗೆಯನ್ನು ಸ್ಥಗಿತಗೊಳಿಸಿ ಗುಂಪು…

Read More

ಆಗುಂಬೆ ಘಾಟಿಯಲ್ಲಿ ಗುಡ್ದ ಕುಸಿತ : ಮೂರು ಬದಲಿ ಮಾರ್ಗ ವ್ಯವಸ್ಥೆ!!!!!ಯಾವ್ಯಾವುದು ಗೊತ್ತಾ??? ಈ ಸುದ್ದಿ ನೋಡಿ

ತೀರ್ಥಹಳ್ಳಿ : ಆಗುಂಬೆ ಘಾಟಿಯ  10ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ (DC) ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಭೂ ಕುಸಿತದ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಮೂರು…

Read More

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ : ಸಂಚಾರ ಸಂಪೂರ್ಣ ಬಂದ್

ಆಗುಂಬೆ ಘಾಟಿಯಲ್ಲಿ ವ್ಯಾಪಕ ಮಳೆಯಾಗಿರುವ ಹಿನ್ನಲೆಯಲ್ಲಿ ತಿರುವಿನಲ್ಲಿ ಮಣ್ಣುಕುಸಿದಿದ್ದು, ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಮರಬಿದ್ದಿದೆ. ಪರಿಣಾಮ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಈ ಮಾರ್ಗದಲ್ಲಿ ಹೋದವರು ಸಂಚಾರ ಬಂದ್ ಆಗಿರುವ ಹಿನ್ನಲೆಯಲ್ಲಿ ವಾಪಾಸ್ ಆಗುತಿದ್ದಾರೆ. ಆಗುಂಬೆ ಘಾಟಿ ಕೆಳಗೆ ಸೋಮೇಶ್ವರ ಚೆಕ್​​ಪೋಸ್ಟ್​ ಬಳಿಯಲ್ಲಿಯೇ ವಾಹನಗಳನ್ನು ತಡೆಯಲಾಗುತ್ತಿದೆ.  ಮೇಲ್ಬಾಗ ಆಗುಂಬೆ ಘಾಟಿ ಚೆಕ್​ಪೋಸ್ಟ್​ ಬಳಿಯೇ ವಾಹನಗಳನ್ನು ವಾಪಸ್​ ಕಳುಹಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಚಲಿಸುತ್ತಿದ್ದ ಕಾರಿನ ಚಾಲಕ ಹೃದಯಾಘಾತದಿಂದ ಸಾವು : ನಿಯಂತ್ರಣ ತಪ್ಪಿ ಸರಣಿ ಅಪಘಾತ

ಕಾರು ಚಲಾಯಿಸುವಾಗಲೇ ಚಾಲಕ ಹೃದಯಾಘಾತಕ್ಕೊಳಗಾದ ಹಿನ್ನಲೆಯಲ್ಲಿ ಎದುರುಗಡೆ ಇದ್ದ ನಾಲ್ಕೈದು ವಾಹನಗಳಿಗೆ ಡಿಕ್ಕಿ ಹೊಡೆದಿದೆ.ನಂತರ ಕಾಂಪೌಂಡ್ ಗೋಡೆಗೆ ವಾಹನ ಅಪ್ಪಳಿಸಿ ನಿಂತಿದೆ.ಅಷ್ಟರಲ್ಲಾಗಲೇ ಕಾರು ಚಾಲಕ ಮೃತಪಟ್ಟಿದ್ದಾನೆ. ಶಿವಮೊಗ್ಗ ಗೋಪಾಳದ ಚಾಲುಕ್ಯನಗರದಲ್ಲಿ ಈ ಘಟನೆ ಸಂಭವಿಸಿದೆ. ಮಲವಗೊಪ್ಪ ನಿವಾಸಿ ಬಾಬು ಯಾನೆ ಕ್ರೇನ್ ಬಾಬು (58) ಎಂಬ ವ್ಯಕ್ತಿ ಸಾವಿಗೀಡಾಗಿದ್ದು, ಅವರು ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತವಾಗಿದ್ದರಿಂದ ಈ ದುರಂತ ಸಂಭವಿಸಿದೆ. ಚಾಲಕ ಚಲಿಸುತಿದ್ದ ಹೊಂಡಾ ಸಿಟಿ ಕಾರು ನಾಲ್ಕಾರು ವಾಹನಗಳಿಗೆ ಡಿಕ್ಕಿ ಹೊಡೆದು, ಗೋಡೆಯೊಂದಕ್ಕೆ ಡಿಕ್ಕಿಯಾಗಿ ನಿಂತಿದೆ. ಸ್ಥಳೀಯರು…

Read More

ಕುಮುಧ್ವತಿ ನದಿಯಲ್ಲಿ ಕೊಚ್ಚಿಹೋದ ವೃದ್ದೆ : ಶೋಧ ಕಾರ್ಯಾಚರಣೆ ಚುರುಕು

ಮಲೆನಾಡು ಭಾಗದಲ್ಲಿ ಅಧಿಕ ಮಳೆಯಿಂದಾಗಿ ಕುಮಧ್ವತಿ ನದಿಯು ಭೋರ್ಗರೆಯುತ್ತಿದ್ದು ಇಂದು ಓರ್ವ ವೃದ್ದೆ ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದುಬಂದಿದೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವೃದ್ಧೆಯನ್ನು ನಾಗರತ್ನ(64) ಎಂದು ಗುರುತಿಸಲಾಗಿದೆ.  ಚೋರಡಿ ನದಿಯ ದಡದಲ್ಲಿರುವ ಚೌಡೇಶ್ವರಿ ದೇವಸ್ಥಾನಕ್ಕೆನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವೃದ್ಧೆಯನ್ನು ನಾಗರತ್ನ ಎಂದು ಗುರುತಿಸಲಾಗಿದೆ.  ಪೂಜೆಗೆ ಹೋಗಿದ್ದ 64 ವರ್ಷದ ವೃದ್ಧೆ ಕುಮಧ್ವತಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.  ನೀರಿನಲ್ಲಿ ಮುಳುಗಿರುವ ವೃದ್ದೆಗಾಗಿ ಶೋಧಕಾರ್ಯ ನಡೆದಿದೆ.ವೃದ್ದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೊ ಅಥವಾ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೋ…

Read More

ಕಾಲುಜಾರಿ ತೋಟದ ಬಾವಿಗೆ ಬಿದ್ದು ವ್ಯಕ್ತಿ ಸಾವು :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡಬಿಳಗೋಡು ಗ್ರಾಮದ ಜಿ.ಕೆ.ಗಣಪತಿ (74) ಕೃಷಿ ಕೆಲಸದ ನಿಮಿತ್ತ ತೋಟಕ್ಕೆ ಹೋಗಿದ್ದಾಗ ಕಾಲುಜಾರಿ ತೋಟದ ರಿಂಗ್ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಪುರಪ್ಪೆಮನೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಗಿರಿಜಮ್ಮ ರವರ ಪತಿಯಾದ ಜಿ ಕೆ ಗಣಪತಿ ರವರು ಬೆಳಿಗ್ಗೆ 9.30 ರ ಸಮಯದಲ್ಲಿ ಕೃಷಿ ಕೆಲಸದ ನಿಮಿತ್ತ ತೋಟಕ್ಕೆ ಕೆಲಸಕ್ಕೆ ಹೋದಾಗ ಕಾಲು ಜಾರಿ ರಿಂಗ್ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರಿಗೆ…

Read More

ಬುಕ್ಕಿವರೆ – ಬೆಳ್ಳೂರು – ರಿಪ್ಪನ್‌ಪೇಟೆ ಮಾರ್ಗಕ್ಕೆ ನೂತನ KSRTC ಬಸ್ ಸೌಲಭ್ಯ : ಕುಗ್ರಾಮದ ಜನರ ಮೊಗದಲ್ಲಿ ಮೂಡಿದ ಸಂತಸ

ರಿಪ್ಪನ್‌ಪೇಟೆ : ಬೆಳ್ಳೂರು-ಬುಕ್ಕಿವರೆ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಸರ್ಕಾರಿ ಬಸ್ ಸೌಲಭ್ಯವು ಪ್ರಾರಂಭವಾಗಿದ್ದು ಎಲ್ಲರ ಮೊಗದಲ್ಲಿ ಮಂದಹಾಸ ತಂದಿದೆ. ಶರಾವತಿ, ಚಕ್ರಾ, ವರಾಹಿ, ಮಾಣಿ, ಮಡೆನೂರು ಡ್ಯಾಂ ನಿರ್ಮಾಣಕ್ಕಾಗಿ ಮನೆ ಮಠಗಳನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಮುಳುಗಡೆ ಸಂತ್ರಸ್ತ ಕುಟುಂಬದವರೇ ಹೆಚ್ಚು ವಾಸಿಸುತ್ತಿರುವ ಕುಗ್ರಾಮಗಳಾದ ಬೆಳ್ಳೂರು, ಬುಕ್ಕಿವರೆ, ಚಾಣಬೈಲು, ದೋಬೈಲು, ಮಸ್ಕಾನಿ, ಕಳಸೆ, ಹಾರೋಹಿತ್ತಲು, ಬಸವಾಪುರ, ಕಲ್ಲುಹಳ್ಳ, ಗುಳಿಗುಳಿ ಶಂಕರ, ಗುಬ್ಬಿಗಾ ಇನ್ನಿತರ ಗ್ರಾಮಗಳ ಗ್ರಾಮಸ್ಥರು ಮತ್ತು ಶಾಲಾ – ಕಾಲೇಜ್ ವಿದ್ಯಾರ್ಥಿಗಳು ಮತ್ತು ಅನಾರೋಗ್ಯ ಪೀಡಿತರು…

Read More