ಪೆಟ್ರೋಲ್ ಟ್ಯಾಂಕರ್ ಪಲ್ಟಿ : ಜೀವ ಭಯ ಬಿಟ್ಟು ಪೆಟ್ರೋಲ್ ತುಂಬಿಸಿಕೊಳ್ಳಲು ಜನರಿಂದ ನೂಕು‌ನುಗ್ಗಲು

ಶಿವಮೊಗ್ಗ: ಜಾವಳ್ಳಿ ಸಮೀಪದಲ್ಲಿ ಇಂದು ಮದ್ಯಾಹ್ನ ಪೆಟ್ರೋಲ್ ತುಂಬಿದ ಟ್ಯಾಂಕರ್‌ವೊಂದು ಪಲ್ಟಿಯಾಗಿರುವ ಘಟನೆ ವರದಿಯಾಗಿದೆ. ಜಾವಳ್ಳಿ ಅರಬಿಂದೂ ಶಾಲೆಯ ಸಮೀಪ ಸೊಲ್ಲಾಪುರ ಮತ್ತು ಮಂಗಳೂರು ಹೈವೆ ರಸ್ತೆಯಲ್ಲಿ ಸಾಗುತ್ತಿದ್ದ ಪೆಟ್ರೋಲ್ ತುಂಬಿದ ಲಾರಿಯೊದು ಪಕ್ಕಕ್ಕೆ ಉರುಳಿ ಬಿದ್ದಿದೆ. ಮಂಗಳೂರಿನಿಂದ 12½ ಸಾವಿರ ಲೀಟರ್ ಪೆಟ್ರೋಲ್ ನ್ನ ಹೊತ್ತು ಹೋಗುತ್ತಿದ್ದ ಲಾರಿ ರಸ್ತೆಗೆ ಉರುಳಿದೆ. ಅಕ್ಕಪಕ್ಕದ ಜನ ಕೊಡಪಾನ ಬಕೆಟ್ ನಲ್ಲಿ ತುಂಬಿಸಿಕೊಂಡು ಹೋಗಿರುವ‌ಮಾಹಿತಿ ಲಭ್ಯವಾಗಿದ್ದು ಸ್ಥಳಕ್ಕೆ ಪೊಲೀಸರು ಬಂದು ಸಾರ್ವಜನಿಕರನ್ನ ಚದುರಿಸಿದ್ದಾರೆ. ಟ್ಯಾಂಕರ್ ಪಲ್ಟಿಯಾದ ಸಮಯದಲ್ಲಿ ಜನರು…

Read More

SHIVAMOGGA | ವೈದ್ಯೆಯ ವಾಟ್ಸಪ್ ಹ್ಯಾಕ್ ಮಾಡಿ ಹಣ ವಂಚನೆ

SHIVAMOGGA | ವೈದ್ಯೆಯ ವಾಟ್ಸಪ್ ಹ್ಯಾಕ್ ಮಾಡಿ ಹಣ ವಂಚನೆ ಶಿವಮೊಗ್ಗ: ವೈದ್ಯೆಯೊಬ್ಬರ ವಾಟ್ಸಪ್ ಹ್ಯಾಕ್  ಮಾಡಿ ವೈದ್ಯರೊಬ್ಬರ ಮೊಬೈಲ್‌ಗೆ ಮೆಸೇಜ್ ಕಳುಹಿಸಿ ೯೫,೦೦೦ ಹಣ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಶಿವಮೊಗ್ಗದ ವೈದ್ಯೆಯೊಬ್ಬರ ವಾಟ್ಸಪ್ ನಂಬರ್ ಹ್ಯಾಕ್ ಮಾಡಿದ ದುಷ್ಕರ್ಮಿಗಳು ಹಣದ ತುರ್ತು ಅಗತ್ಯವಿದೆ ಎಂದು ಸಹೋದ್ಯೋಗಿಗೆ ಮೆಸೇಜ್ ಕಳುಹಿಸಿದ್ದರು. ಅದನ್ನು ನಂಬಿದ ಸಹೋದ್ಯೋಗಿ ಆ ವಾಟ್ಸಪ್ ಮೆಸೇಜ್‌ನಲ್ಲಿ ಕಳುಹಿಸಲಾಗಿದ್ದ ಮತ್ತೊಂದು ಮೊಬೈಲ್ ನಂಬರ್‌ಗೆ ಫೋನ್ ಪೇ ಮೂಲಕ ಎರಡು…

Read More

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು

ಶಾಸಕನ ಪುತ್ರನ ಹತ್ಯೆಗೆ ಜೈಲ್ ನಲ್ಲಿ ಸ್ಕೆಚ್ – ದೂರು ದಾಖಲು ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ರನ್ನ ಹತ್ಯೆಗೆ ಜೈಲಿನಲ್ಲಿ ಸ್ಕೆಚ್ ನಡೆದಿರುವ ಬಗ್ಗೆ ಎಫ್ಐಆರ್ ದಾಖಲಾಗಿರಿವ ಘಟನೆ ನಡೆದಿದೆ. ಭದ್ರಾವತಿ ನಗರದ ಜಟ್ ಪಟ್ ನಗರದ ವಾಸಿಯಾದ ಮುಬಾರಕ್ ಮುಬ್ಬು ಕಳೇದ 17 ನೇ ತಾರೀಖು ಗುತ್ತಿಗೆದಾರನ ಬಳಿ ಬಂದು ಬಸಣ್ಯ ಎಲ್ಲಿದ್ದಾರೆ ಎಂದು ಕೇಳಿದ್ದಾನೆ. ಆ ಬಳಿಕ ಆತ ಡಿಚ್ಚಿ ಮುಬಾರಕ್‌ ಜೈಲಿನಿಂದ  ಎರಡು ಪ್ರತ್ಯೇಕ ಫೋನ್‌ ನಂಬರ್‌ನಿಂದ ಕರೆ ಮಾಡಿ,…

Read More

2023ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದನ್ನು ಯಾವ ಶಕ್ತಿಯಿಂದಲೂ ತಡೆಯಲು ಸಾಧ್ಯವಿಲ್ಲ : ಶಾರದ ಪೂರ್ಯನಾಯ್ಕ್

ಹೊಸನಗರ : 2023ರಲ್ಲಿ ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿ ಆಗುವುದನ್ನು ಯಾವ ಶಕ್ತಿಯಿಂದಲೂ ತಡೆಯಲು ಸಾಧ್ಯವಿಲ್ಲವೆಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯ ನಾಯ್ಕ್ ಹೇಳಿದರು. ಪಟ್ಟಣದ ಗಾಯತ್ರಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು ಶಿವಮೊಗ್ಗ ಜಿಲ್ಲೆಯಲ್ಲಿ ಮೊಟ್ಟ ಮೊದಲು ಜೆಡಿಎಸ್ ಪಕ್ಷವು ಬೇರೂರಿ ಅತ್ಯಂತ ಕ್ರಿಯಾಶೀಲವಾಗಿ ಇದ್ದದ್ದು ಈ ಹೊಸನಗರ ತಾಲ್ಲೂಕಿನಲ್ಲಿ ಕೆಲ ರಾಜಕೀಯ ಸ್ಥಿತ್ಯಂತರಗಳಿಗೆ ಕಾರ್ಯಕರ್ತರು ಚದುರಿದ್ದು ಅವರನ್ನು…

Read More

ಡಿಕೆಶಿ ಸಂಧಾನ ಸಭೆ ಯಶಸ್ವಿ – ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಅಂತಿಮ|dk-rmm-kimmane

ಶಿವಮೊಗ್ಗ: ಕಿಮ್ಮನೆ ರತ್ನಾಕರ್ ಅವರಿಗೆ ಚುನಾವಣೆಗೆ ಟಿಕೆಟ್ ನೀಡುವುದು ಮತ್ತು  ಆರ್.ಎಂ.ಮಂಜುನಾಥಗೌಡ ಅವರನ್ನು ವಿಧಾನ ಪರಿಷತ್ ಗೆ ಕಳುಹಿಸುವ  ಭರವಸೆಯನ್ನು ಕೆಪಿಸಿಸಿ  ನೀಡಿದೆ ಎಂದು ತಿಳಿದುಬಂದಿದೆ. ತೀರ್ಥಹಳ್ಳಿ ವಿದಾನಸಭಾ ಕ್ಷೇತ್ರದ ಉಮೇದರುವಾರಿಕೆ ಸಂಬಂಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥಗೌಡ ಮಧ್ಯೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.  ಕಾಂಗ್ರೆಸ್ ಪಕ್ಷದ ಟಿಕೆಟ್‌ಗಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥ ಗೌಡ ಅವರ ನಡುವೆ ಪ್ರಬಲ…

Read More

Ripponpete | ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ದಿಗೆ ಶ್ರಮಿಸಬೇಕು – ಪಿಎಸ್‌ಐ ಪ್ರವೀಣ್ ಎಸ್ ಪಿ

ರಿಪ್ಪನ್‌ಪೇಟೆ : ಸರ್ಕಾರಿ ಕನ್ನಡ ಶಾಲೆಗಳಲ್ಲಿ ಹಳೆ ವಿದ್ಯಾರ್ಥಿಗಳ ಸಂಘವನ್ನು ರಚಿಸಿ ಆ ಮೂಲಕ ಶಾಲೆಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದು ರಿಪ್ಪನ್ ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಕರೆ ನೀಡಿದರು. ರಿಪ್ಪನ್‌ಪೇಟೆ ಪಟ್ಟಣದ ಹಳೇ ಸಂತೆ ಮಾರುಕಟ್ಟೆ ರಸ್ತೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗ ಆಯೋಜಿಸಿದ್ದ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣ ಬಣ್ಣ  ಅಭಿಯಾನ” ಕ್ಕೆ ಚಾಲನೆ ನೀಡಿ, ಶ್ರಮದಾನ ನೆರವೇರಿಸಿ ಮಾತನಾಡಿದ ಅವರು ಸರ್ಕಾರಿ ಶಾಲೆಗಳಲ್ಲಿ ಮೂಲ…

Read More

ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ

ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ವೃದ್ದೆ ಸಾವು – ಹಲವರಿಗೆ ಗಾಯ ಶಿವಮೊಗ್ಗ , ಜೂ. 16: ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ, ವೃದ್ದೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟು ಮನೆಯಲ್ಲಿದ್ದ ಇತರೆ ಸದಸ್ಯರಿಗೆ ಸಣ್ಣಪುಟ್ಟ ಗಾಯವಾದ ಘಟನೆ ತಡರಾತ್ರಿ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಅಡಗಡಿ ಗ್ರಾಮದಲ್ಲಿ ನಡೆದಿದೆ. 100 ವರ್ಷದ  ಸಿದ್ದಮ್ಮ ಮೃತಪಟ್ಟವರು.ಇವರು  ಹೊನ್ನಾಳಿ ತಾಲೂಕಿನ ಕುಂಕೋವ ಗ್ರಾಮದ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಅಡಗಡಿ ಗ್ರಾಮದಲ್ಲಿರುವ ಸಂಬಂಧಿ ಹೇಮಾವತಿ ಎಂಬುವರ ಮನೆಗೆ ಆಗಮಿಸಿದ್ದಾಗ ದುರ್ಘಟನೆ…

Read More

Humcha | ಕೋರಂ ಕೊರತೆ – ಹುಂಚ ಗ್ರಾಮ ಪಂಚಾಯತಿಯ ಗ್ರಾಮಸಭೆ ಮುಂದೂಡಿಕೆ

ಕೋರಂ ಕೊರತೆ – ಹುಂಚ ಗ್ರಾಮ ಪಂಚಾಯತಿಯ ಗ್ರಾಮಸಭೆ ಮುಂದೂಡಿಕೆ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯತ್‌ನಲ್ಲಿ ಗ್ರಾಮಸ್ಥರು (ಕೋರಂ) ಇಲ್ಲದೆ ಗ್ರಾಮ ಸಭೆ ಮುಂದೂಡಿಕೆಯಾಗಿದೆ. 2023-24 ನೇ ಸಾಲಿನ ಪ್ರಥಮ ಸಾಮಾಜಿಕ ಲೆಕ್ಕ ಪರಿಶೋಧನ ಗ್ರಾಮ ಸಭೆ ಇದಾಗಿದ್ದು ಗ್ರಾಮಸ್ಥರ ಹಾಜರಿ ಕಡಿಮೆ ಇದ್ದ ಕಾರಣ ಸಭೆ ಮುಂದೂಡಿಕೆಯಾಗಿದೆ. ಪಂಚಾಯತ್‌ ಅಧ್ಯಕ್ಷೆ ಸುಮಂಗಳ ರವರ  ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆ ಬೆಳಗ್ಗೆ 11-30 ಕ್ಕೆ ಪ್ರಾರಂಭವಾಗಿದ್ದು, ಆರಂಭದಲ್ಲಿ ಬೆರೆಳೆಣಿಕೆಯಷ್ಟು ಜನರಿದ್ದರು.  ಕೋರಂ ಇಲ್ಲದೆ ಸಭೆ ನಡೆಸುವಂತಿಲ್ಲ…

Read More

ಅಪ್ರಾಪ್ತ ಬಾಲಕಿಯ ಮೇಲೆ 70 ವರ್ಷದ ವೃದ್ದನಿಂದ ಅತ್ಯಾಚಾರ – ಆರೋಪಿ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ 70 ವರ್ಷದ ವೃದ್ದನಿಂದ ಅತ್ಯಾಚಾರ – ಆರೋಪಿ ಬಂಧನ ಅಪ್ರಾಪ್ತ ಬಾಲಕಿಯ ಮೇಲೆ ವೃದ್ದನೊಬ್ಬ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಳೆಹೊನ್ನೂರು ವ್ಯಾಪ್ತಿಯ ಕೂಡ್ಲಿ ಗ್ರಾಮದ 76 ವರ್ಷ ವಯಸ್ಸಿನ ವ್ಯಕ್ತಿಯೋರ್ವ ,10 ವರ್ಷ ವಯಸ್ಸಿನ ಬಾಲಕಿಯನ್ನು ಚಾಕಲೇಟ್ ಕೊಡಿಸುವುದಾಗಿ ಹೇಳಿ ಕರೆದಿದ್ದಾನೆ. ಬಳಿಕ ಹೊಳೆ ಹತ್ತಿರ ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.   ಇನ್ನೂ ಈ ಘಟನೆ ನಂತರ ಮನೆಗೆ…

Read More

ಹಿಜಾಬ್ – ಕೇಸರಿ ಘರ್ಷಣೆ ಹಿನ್ನಲೆ ರಾಜ್ಯಾದ್ಯಂತ ಮೂರು ದಿನ ಶಾಲಾ-ಕಾಲೇಜು ಬಂದ್ !!!! ಹಿಜಾಬ್ ಕೋರ್ಟ್ ತೀರ್ಪು ಮುಂದೂಡಿಕೆ ಹಿನ್ನಲೆ ಸಿಎಂ ಘೋಷಣೆ

ಹಿಜಾಬ್ ಮತ್ತು ಕೇಸರಿ ಶಾಲಿನ ವಿಷಯದಲ್ಲಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಲೇಜುಗಳಿಗೆ‌ ಮುಂಜಾಗ್ರತಾ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳವರೆಗೆ ರಜೆ‌ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಸಿಎಂ ಮನವಿ ಮಾಡಿಕೊಂಡಿದ್ದಾರೆ. ಹಿಜಾಬ್ ವಿವಾದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದ್ದು ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು…

Read More