Headlines

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!!

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!! ಶಾಸಕರು, ವಿಧಾನಪರಿಷತ್ ಸದಸ್ಯರೂ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಸೇರಿದಂತೆ 40 ಮಂದಿಯನ್ನು ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದ್ದು ಒಂದೆರಡು ದಿನಗಳಲ್ಲಿ ಅಂತಿಮ ಪಟ್ಟಿ ಹೊರಬಿಳಲಿದೆ.ತಪ್ಪಿದಲ್ಲಿ ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ಅಂತಿಮ ಪಟ್ಟಿ ಹೊರ ಬೀಳುವುದು ಗ್ಯಾರಂಟಿಯಾಗಿದೆ. ಮೂರು ಬಾರಿ ಶಾಸಕರಾಗಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರಿಗೆ ನಿಗಮ ಮಂಡಳಿ ಸ್ಥಾನಮಾನ ದೊರೆಯುವ…

Read More

ಬೇಲಿ ಸವರುವಾಗ ಹೆಜ್ಜೇನು ದಾಳಿ – ಗಂಡ,ಹೆಂಡತಿಗೆ ಐಸಿಯು ನಲ್ಲಿ ಚಿಕಿತ್ಸೆ|honeybee

ಬೇಲಿ ಸವರುವ ವೇಳೆ ಹೆಜ್ಜೇನು ದಾಳಿ ಮಾಡಿದ ಹಿನ್ನಲೆಯಲ್ಲಿ ದಂಪತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇ ಇಡಗೋಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಕೃಷ್ಣಪ್ಪ ಮತ್ತು ರೇಣುಕಮ್ಮ ದಂಪತಿ ಇವತ್ತು ಮನೆ ಹಿಂಭಾಗದಲ್ಲಿ ಬೇಲಿ ಸವರುತ್ತಿದ್ದರು. ಈ ವೇಳೆ ಹೆಜ್ಜೇನುಗಳು ದಾಳಿ ನಡೆಸಿವೆ. ಕೂಡಲೆ ಅವರನ್ನು ಆನವಟ್ಟಿ ಸಮುದಾಯ ಕೇಂದ್ರಕ್ಕೆ ದಾಖಲು ಮಾಡಲಾಯಿತು. ಇವತ್ತು ಬೆಳಗ್ಗೆ ಮತ್ತೆ ಹಿತ್ತಲ ಬಳಿಯಲ್ಲಿ ಬೇಲಿ…

Read More

ಕಾರು ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ಗಾಯ|accident

ಶಿವಮೊಗ್ಗ : ಮಂಡಗದ್ದೆ ರಸ್ತೆಯಲ್ಲಿ ಕಾರು ಮತ್ತು ಕ್ಯಾಂಟರ್ ನಡುವೆ  ರಸ್ತೆ ಅಪಘಾತ ಸಂಭವಿಸಿದ್ದು ಓರ್ವರಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ಕಡೆಯಿಂದ ತೀರ್ಥಹಳ್ಳಿ ಕಡೆ ಹೋಗುತ್ತಿದ್ದ ಕೆಎ 14 ಪಿ 2982 ಕ್ರಮ ಸಂಖ್ಯೆಯ ಟಾಟಾ ಸಂಸ್ತೆಯ ಕಾರಿಗೆ ಸಕ್ರೇಬೈಲಿನ ಬಳಿಯ ತಿರುವಿನಲ್ಲಿ  ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕೆಎ 11-7360 ಕ್ಯಾಂಟರ್ ಗೆ  ಡಿಕ್ಕಿ ಹೊಡೆದಿದೆ. ಅಪಘಾತ ನಡೆದ ಸ್ಥಳದಿಂದ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ. ಕಾರಿನಲ್ಲಿ ಇಬ್ಬರು ಇದ್ದಾರೆ ಎಂಬ ಮಾಹಿತಿ ಇದ್ದು ಅದರಲ್ಲಿ…

Read More

ಬಿ.ಜೆ.ಪಿ ಪಕ್ಷದ ಬೆಂಬಲದಲ್ಲಿ ಗೆದ್ದ ಗ್ರಾಮ ಪಂಚಾಯತಿ ಸದಸ್ಯರಿಗೆ ಮತಯಾಚಿಸುವ ಅಗತ್ಯವಿಲ್ಲ ಅವರೇ ಸ್ವಪ್ರೇರಣೆಯಿಂದ ಅನ್ಯ ಪಕ್ಷದ ಸದಸ್ಯರನ್ನು ಮನವೊಲಿಸಿ ಮತ ಹಾಕಿಸುತ್ತಾರೆ : ಕೆ ಎಸ್ ಈಶ್ವರಪ್ಪ

ರಿಪ್ಪನ್‌ಪೇಟೆಯ : ಬಿ.ಜೆ.ಪಿ ಪಕ್ಷದ ಬೆಂಬಲದಲ್ಲಿ ಗೆದ್ದ ಗ್ರಾಮ ಪಂಚಾಯತಿ ಸದಸ್ಯರಿಗೆ ಮತಯಾಚಿಸುವ ಅಗತ್ಯವಿಲ್ಲ ಅವರೇ ಸ್ವಪ್ರೇರಣೆಯಿಂದ ಅನ್ಯ ಪಕ್ಷದ ಸದಸ್ಯರನ್ನು ಮನವೊಲಿಸಿ ಮತ ಹಾಕಿಸುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ವಿನಾಯಕ ಸರ್ಕಲ್‌ನಲ್ಲಿರುವ ಸತ್ಕಾರ್ ಕಾಂಪ್ಲೆಕ್ಸ್ ನಲ್ಲಿ ಬಿ.ಜೆ.ಪಿ ಕಛೇರಿಯನ್ನು ಉದ್ಘಾಟಿಸಿ ನಂತರ ಗ್ರಾಮ ಪಂಚಾಯತಿ ಸದಸ್ಯ ಮತದಾರರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನರೇಗಾ ಮತ್ತು ಜನಜೀವನ ಯೋಜನೆ ಅನುಷ್ಠಾನದಲ್ಲಿ…

Read More

ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ

ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ ಸರ್ಕಾರಿ ಅಧಿಕಾರಿ, ನೌಕರರು ಕೇವಲ ಭ್ರಷ್ಟಾಚಾರ ರಹಿತವಾಗಿ ಮಾತ್ರವಲ್ಲ ಜೊತೆಗೆ ತಮ್ಮ ವೃತ್ತಿಪರವಾದ ಸಣ್ಣ ಸಣ್ಣ ವಿಷಯಗಳನ್ನು ಅರಿತುಕೊಂಡು ಉತ್ತಮ ನಡತೆಯೊಂದಿಗೆ ಕರ್ತವ್ಯ ನಿರ್ವಹಣೆ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್ ಹೇಳಿದರು.  ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಇವರ ವತಿಯಿಂದ ಸೋಮವಾರ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ…

Read More

ಉರುಳಿಗೆ ಸಿಲುಕಿ ಚಿರತೆ ಸಾವು | Leopard died after falling

ಉರುಳಿಗೆ ಸಿಲುಕಿ ಚಿರತೆ ಸಾವು  ಕಾಡು ಹಂದಿ ಹಿಡಿಯಲು ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆ ವೃತ್ತದ ಮೇಲಿನ ಕಿರುಗುಣಸೆ ಗ್ರಾಮದಲ್ಲಿ ಬುಧವಾರ ನಡೆದಿದೆ. ಚಿರತೆ ಉರುಳಿಗೆ ಸಿಲುಕಿ ಕೂಗುವುದನ್ನು ಕಂಡು ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಶಿವಮೊಗ್ಗದಿಂದ ಅರವಳಿಕೆ ತಜ್ಞರು ಆಗಮಿಸಿ ಗಾಯಗೊಂಡಿದ್ದ ಚಿರತೆಗೆ ಚಿಕಿತ್ಸೆ ನೀಡುವಷ್ಟರಲ್ಲಿ ಚಿರತೆ ಮೃತಪಟ್ಟಿದೆ. ಜಮೀನಿನೊಂದರ ತಂತಿ ಬೇಲಿಗೆ ಹಂದಿ‌ ಹಿಡಿಯಲು ಅಳವಡಿಸಿದ್ದ ಉರುಳಿಗೆ ಸಿಲುಕಿ ಸುಮಾರು…

Read More

ಗೋವಿನ ‍ಚರ್ಮ ಸಾಗಾಟ ತಡೆದಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಪೊಲೀಸ್ ಠಾಣೆ ಎದುರು ಹಲ್ಲೆ|assault

ಗೋವಿನ ಚರ್ಮ ಸಾಗಾಟ ತಡೆದ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ಪೊಲೀಸ್ ಠಾಣೆ ಎದುರೇ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಅಕ್ರಮವಾಗಿ ಗೋವುಗಳಚರ್ಮ ಸಾಗಿಸುತ್ತಿದ್ದ ವಿಚಾರ ತಿಳಿದ ಗುಂಪೊಂದು ಅದನ್ನು ತಡೆದು ಪೊಲೀಸ್ ಠಾಣೆಗೆ ಒಪ್ಪಿಸಿದೆ. ಈ ವಿಚಾರವಾಗಿ ಯುವಕರ ಮತ್ತೊಂದು ತಂಡ ಪೊಲೀಸರ ಎದುರೇ ಹಲ್ಲೆ ನಡೆಸಿದೆ. ಬಕ್ರಿದ್ ಹಬ್ಬದ ಪ್ರಯುಕ್ತ ಗೋವನ್ನು ಹತ್ಯೆ ಮಾಡಿ ಅದರ ಚರ್ಮವನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಗುಂಪೊಂದು ಅದನ್ನು ತಡೆದು ಶಿಕಾರಿಪುರ…

Read More

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಅಮ್ಮನಘಟ್ಟಜೇನುಕಲ್ಲಮ್ಮದೇವಸ್ಥಾನ ಸುಮಾರು 5 ಕೋಟಿ ರೂ ವೆಚ್ಚದ  ನೂತನ ಶಿಲಾಮಯ ದೇವಸ್ಥಾನ ಕಟ್ಟಡ ಜೂನ್೪ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಆಧ್ಯಕ್ಷ ಬಿ.ಸ್ವಾಮಿರಾವ್ ಹೇಳಿದರು. ಅಮ್ಮನಘಟ್ಟದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜನಕಲಮ್ಮ ಶಿಲಾಮಯ ದೇವಸ್ಥಾನ  ಜೂನ್ 4ರಂದು ಲೋಕಾರ್ಪಣೆಗೊಳ್ಳಲಿದೆ. ಲೋಕಾರ್ಪಣೆ ಮತ್ತು ಧರ್ಮಸಭೆಯ ದಿವ್ಯ ಸಾನಿಧ್ಯವನ್ನು…

Read More

ಆಗುಂಬೆ : ಟಿವಿ ನೋಡಲು ಬಂದ ಪಕ್ಕದ ಮನೆಯ ಯುವತಿಯನ್ನು ಅತ್ಯಾಚಾರಗೈದ ವಿವಾಹಿತ : ಆರೋಪಿ ಅಂದರ್

ತೀರ್ಥಹಳ್ಳಿ : ಟಿ.ವಿ.ನೋಡಲು ಬರುತ್ತಿದ್ದ ಯುವತಿಯನ್ನ ರೇಪ್ ಮಾಡಿ ಗರ್ಭಾವತಿಯನ್ನಾಗಿ ಮಾಡಿದ  ಆರೋಪದ ಅಡಿಯಲ್ಲಿ ವ್ಯಕ್ತಿಯೋರ್ವನನ್ನು ಇಂದು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ತಾಲೂಕಿನ ನಾಲೂರಿನಲ್ಲಿ ಪರಿಶಿಷ್ಟ ಜಾತಿಯ ಯುವತಿಯು 2021 ರ ಡಿಸೆಂಬರ್ ನಲ್ಲಿ ಕಾಲೇಜು ಇಲ್ಲದ ಕಾರಣ ಮನೆಯಲ್ಲೇ ಇದ್ದ ಯುವತಿ ಪಕ್ಕದ ಮನೆಯ ಮುರುಳೀಧರ್ ಭಟ್ ಎಂಬುವರ ಮನೆಗೆ ಟಿವಿ ನೋಡಲು ಹೋಗುತ್ತಿದ್ದಳು.ಟಿವಿ ನೋಡುವ ವೇಳೆ ಯುವತಿಯನ್ನ ಮುರುಳೀಧರ್ ಬಲತ್ಕರಿಸಿರುವುದಾಗಿ ಯುವತಿ ಆರೋಪಿಸಿದ್ದಾಳೆ. .   (ಅತ್ಯಾಚಾರದ ಆರೋಪಿ ಮುರುಳಿಧರ್ ಭಟ್) ಇದಾದ ನಂತರ ದಾರಿಯಲ್ಲಿ…

Read More