Headlines

ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಕಾಫಿ ಸವಿದ ಗೃಹ ಸಚಿವ ಆರಗ ಜ್ಞಾನೇಂದ್ರ – ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರು|Ripponpet

ರಿಪ್ಪನ್ ಪೇಟೆ :ಆನವಟ್ಟಿಯಲ್ಲಿ ಜನ ಸಂಕಲ್ಪ  ಕಾರ್ಯಕ್ರಮ ಮುಗಿಸಿಕೊಂಡು ತೀರ್ಥಹಳ್ಳಿ ಗೆ ತೆರಳುವ ಮಾರ್ಗ ಮಧ್ಯದಲ್ಲಿ ರಿಪ್ಪನ್ ಪೇಟೆಯ ವಿನಾಯಕ ವೃತ್ತದ ಗಣೇಶ್ ಪ್ರಸಾದ್ ಹೊಟೇಲ್ ನಲ್ಲಿ  ಇಂದು ಸಂಜೆ ರಾಜ್ಯ ಗೃಹ ಸಚಿವರಾದ  ಆರಗ ಜ್ಞಾನೇಂದ್ರ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು. ಹೊಟೇಲ್ ನಲ್ಲಿ ಕಾಫ಼ಿ ಸವಿಯುವುದರೊಂದಿಗೆ ಜನಸಾಮಾನ್ಯರೊಂದಿಗೆ ಬೆರೆತು ಸರಳತೆ ಮೆರೆದಿದ್ದಾರೆ.ಈ ಸಂಧರ್ಭದಲ್ಲಿ ಜನಸಾಮಾನ್ಯರು ಗೃಹ ಸಚಿವರೊಂದಿಗೆ ಸೆಲ್ಪಿಗೆ ಮುಂದಾದಗ ನಗುಮೊಗದಲ್ಲೇ ಎಲ್ಲಾರೊಂದಿಗೆ ಸೆಲ್ಪಿ ಕ್ಲಿಕ್ಕಿಸಿಕೊಂಡರು. ಗೃಹ ಸಚಿವರ ಆಗಮನದ ಸುದ್ದಿ ತಿಳಿಯುತಿದ್ದಂತೆ…

Read More

Ripponpete | ರಜತ ಉತ್ಸವದ ಗಣಪತಿ ಮೂರ್ತಿ ಸಿದ್ದಿವಿನಾಯಕ ದೇವಸ್ಥಾನಕ್ಕೆ ಸಮರ್ಪಣೆ

Ripponpete | ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ  ರಿಪ್ಪನ್‌ಪೇಟೆ : ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ ದೀಪಾ ಎಸ್.ಹೆಬ್ಬಾರ್, ಹೆಚ್.ಎಸ್.ಸುದೀಂದ್ರಹೆಬ್ಬಾರ್ ಮತ್ತು ಸಹೋದರಿಯರು ರಜತ ಉತ್ಸವದ ಗಣಪತಿ ಮೂರ್ತಿಯನ್ನು’ ದೇವಸ್ಥಾನಕ್ಕೆ ಇಂದು ಮೆರವಣಿಗೆಯ ಮೂಲಕ ತರುವುದರೊಂದಿಗೆ ಸಮರ್ಪಿಸಿದರು. ಚಂಡೆ ವಾದ್ಯಮೇಳದೊಂದಿಗೆ ಶಿವಮೊಗ್ಗ ರಸ್ತೆಯಲ್ಲಿರುವ ಮನೆಯಿಂದ ರಜತ ಉತ್ಸವ ಮೂರ್ತಿಯನ್ನು ಹೆಚ್.ಎಸ್ ಸುದೀಂದ್ರ ಹೆಬ್ಬಾರ್ ಹೊತ್ತು ಮೆರವಣಿಗೆ ಮೂಲಕ ಸಿದ್ದಿವಿನಾಯಕ ದೇವಸ್ಥಾನಕ್ಕೆ…

Read More

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ.! – ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ! ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಮನೆಯ ಬಾಲ್ಕನಿಯಲ್ಲಿ ಹೂವಿನ ಪಾಟ್ ಗಳ ನಡುವೆ ಮಾದಕವಸ್ತು ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಎಂ.ಎಸ್.ರಾಮಯ್ಯ ನಗರದ 3ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ನಿವಾಸಿಗಳಾದ 37 ವರ್ಷದ ಊರ್ಮಿಳಾ ಕುಮಾರಿ ಮತ್ತು 38 ವರ್ಷದ ಸಾಗರ್ ಗುರುಂಗ್ ಬಂಧಿತ ದಂಪತಿ ಎನ್ನಲಾಗಿದೆ. ಆರೋಪಿಗಳಿಂದ 54 ಗ್ರಾಂ ಗಾಂಜಾ ಸೊಪ್ಪು, ಎರಡು ಪಾಟ್…

Read More

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News

ಲಾಂಗು ಮಚ್ಚು ಹಿಡಿದು ಅಪ್ರಾಪ್ತ ಯುವಕರ ರೀಲ್ಸ್ ಹುಚ್ಚಾಟ – ಪ್ರಕರಣ ದಾಖಲು | Crime News ಶಿವಮೊಗ್ಗ : ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ವಯಸ್ಕ ಆರು ಮಂದಿ ಮಾಡಿದ ರೀಲ್ಸ್ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಐವರು ಹುಡುಗರು ಸಾರ್ವಜನಿಕ ಸ್ಥಳದಲ್ಲಿ ನಿಂತು ಕೈಯಲ್ಲಿ ಲಾಂಗ್ ಮಚ್ಚು ಹಿಡಿದು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಸಾರ್ವಜನಿಕ ಜೀವ ಮತ್ತು ವೈಯಕ್ತಿಕ ಸುರಕ್ಷತೆಗೆ ಅಪಾಯ ಉಂಟು ಮಾಡುವಂತೆ ವರ್ತಿಸಿದ ಕಾರಣ,…

Read More

ತೀರ್ಥಹಳ್ಳಿ: ತಾಲೂಕು ಪಂಚಾಯತ್ ಅಧಿಕಾರವದಿ ಮುಕ್ತಾಯ,ವಿದಾಯ ಸಭೆ:

ತೀರ್ಥಹಳ್ಳಿ: 5 ವರ್ಷಗಳ ಕಾಲ  ಆಡಳಿತ ನಡೆಸಿ ತೀರ್ಥಹಳ್ಳಿ ತಾಲ್ಲೂಕು ಪಂಚಾಯಿತಿ ಇಂದು ತನ್ನ ಅವಧಿಯನ್ನು ಪೂರೈಸಿದೆ. ಜನಪ್ರತಿನಿಧಿಗಳಾಗಿ ಸೇವೆ ಸಲ್ಲಿಸಿದ 13 ಜನ ಸದಸ್ಯರುಗಳ ಅಂತಿಮ ವಿಧಾಯಸಭೆ ಇಂದು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು  ತಾಲ್ಲೂಕು  ಅಧ್ಯಕ್ಷೆ ಶ್ರೀಮತಿ ನವಮಣಿ ರವಿಕುಮಾರವರು ಉಪಾಧ್ಯಕ್ಷೆ ಶ್ರೀಮತಿ ಯಶೋಧ ಮಂಜುನಾಥ .ಸದಸ್ಯರುಗಳಾದ ಸಾಲೆಕೊಪ್ಪ ರಾಮ ಚಂದ್ರ. ಕುಕ್ಕೆ ಪ್ರಶಾಂತ್ ,ಕೆಳಕೆರೆ ದಿವಾಕರ್ .ಶ್ರುತಿ ವೆಂಕಟೇಶ್.   ಲಕ್ಷ್ಮಿ ಉಮೇಶ್,  ಗೀತಾ ಸದಾನಂದ ಶೆಟ್ಟಿ,  ವೀಣಾ ಗಿರೀಷ್,ಸುಮಾ ಉದಯ . ಚಂದವಳ್ಳಿ ಸೋಮಶೇಖರ್. ಬೇಗುವಳ್ಳಿ…

Read More

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್ ಹೊಸನಗರ ತಾಲೂಕಿನ ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಕ್ಷಾ ಆರ್ ನಾಯಕ್ ಎಂಬ ವಿದ್ಯಾರ್ಥಿನಿ ಎಸ್ಎಸ್ಎಲ್’ಸಿ ಪರೀಕ್ಷೆಯಲ್ಲಿ 625 ಕ್ಕೆ 620 ಅಂದರೆ ಶೇಕಡಾ 99.2 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸೊನಲೆಯ ಸಮೀಕ್ಷಾ ಟ್ರೇಡರ್ಸ್ ನ ಮಾಲೀಕರಾದ ಡಿ ರಾಮಚಂದ್ರ ಹಾಗೂ ಸುಮಾ ಆರ್ ನಾಯಕ್ ದಂಪತಿಗಳ ಪುತ್ರಿಯಾದ ಸಮೀಕ್ಷಾ ಹೊಸನಗರದ ಶ್ರೀ ಗುರೂಜೀ ಇಂಟರ್ ನ್ಯಾಷನಲ್…

Read More

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಗಾಂಜಾ ಮಾರಾಟ ಮಾಡುತ್ತಿದ್ದರುವುದರ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾನೆಂದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ 8 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ (Life Imprisonment) ನೀಡಿ ತೀರ್ಪು ಪ್ರಕಟಿಸಿದೆ. ಅಪರಾಧಿಗಳನ್ನು ಲತೀಫ್, ಪರ್ವೇಜ್, ಸೈಯದ್ ಜಿಲಾನ್, ಜಾಫರ್ ಸಾದಿಕ್, ಸೈಯದ್ ರಾಜೀಕ್, ಮಹಮ್ಮದ್ ಶಾಬಾಜ್, ಸಾಬಿರ್ ಮತ್ತು ಮಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ….

Read More

ರಿಪ್ಪನ್ ಪೇಟೆ: ಕಾರ್ ಟೈರ್ ಸ್ಪೋಟ, ಚಲಿಸುತ್ತಿದ್ದ ಬಸ್ ಗೆ ಹಿಮ್ಮುಖವಾಗಿ ಡಿಕ್ಕಿ :

ರಿಪ್ಪನ್ ಪೇಟೆ : ರಿಪ್ಪನ್ ಪೇಟೆ ಯಿಂದ ತೀರ್ಥಹಳ್ಳಿ ಕಡೆ ಹೋಗುತಿದ್ದ ರಾಜಲಕ್ಷ್ಮಿ ಬಸ್ ಗೆ ಅದೇ ದಿಕ್ಕಿನಲ್ಲಿ ಹೋಗುತಿದ್ದ ಕಾರಿನ ಟೈರ್ ಸ್ಫೋಟಗೊಂಡು ಬಸ್ ಗೆ ಹಿಮ್ಮುಖ ವಾಗಿ ಡಿಕ್ಕಿ ಹೊಡೆದಿದೆ.. ಬಸ್ ಚಾಲಕನ ಸಮಯ ಪ್ರಜ್ಞೆ ಯಿಂದ ಸಂಭವಿಸಬಹುದಾಗಿದ್ದ ಬಾರಿ ಅನಾಹುತ ತಪ್ಪಿದೆ. ಕಾರ್ ನಲಿದ್ದ ಮೂವರು ಸುರಕ್ಷಿತ ರಾಗಿದ್ದಾರೆ.. ಕಾರ್ ನ ಮುಂಬಾಗ ಸಂಪೂರ್ಣ ಜಖಂಗೊಂಡಿದೆ. ವರದಿ : ರಾಮನಾಥ್ ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು…

Read More

ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಶ್ರೀನಿವಾಸಚಾರಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಹೊರಗುತ್ತಿಗೆ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಮುಷ್ಕರ

ಹೊಸನಗರ : ಸರ್ಕಾರವೇ ರಚಿಸಿದ ಶ್ರೀನಿವಾಸಾಚಾರಿ ಸಮಿತಿ ವರದಿ ಅನುಷ್ಠಾನ ಹಾಗೂ ಗುತ್ತಿಗೆ, ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಂದು ಹೊಸನಗರ ತಾಲ್ಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಪ್ಪು ಪಟ್ಟಿ ಕಟ್ಟಿಕೊಂಡು ಕರ್ತವ್ಯ ನಿರ್ವಹಿಸುವುದರ ಮೂಲಕ ಹೊರಗುತ್ತಿಗೆದಾರರು ಸಾಂಕೇತಿಕವಾಗಿ ಮುಷ್ಕರಕ್ಕೆ ಕರೆ ನೀಡಿದ ಘಟನೆ ಇಂದಿನಿಂದ ನಡೆಯುತ್ತಿದೆ. 2019 -20, 2020-21ರ ಸಮಯದಲ್ಲಿ ಕೋವೀಡ್-19 ವಿರುದ್ಧ ಹೋರಾಟಕ್ಕಾಗಿ ಗುತ್ತಿಗೆ, ಹೊರಗುತ್ತಿಗೆ ನೌಕರರನ್ನು ನಿಯೋಜನೆ ಮಾಡಿಸಿಕೊಂಡ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ…

Read More

ಸೊರಬದಲ್ಲಿ ಎತ್ತು ತೊಳೆಯುವಾಗ ಕಾಲುಜಾರಿ ಬಿದ್ದು ವ್ಯಕ್ತಿ ಸಾವು :

ಸೊರಬ : ನದಿಯಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿ ಕಾಲು ಜಾರಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ತಾಲೂಕಿನ ಮೂಡಿ ಗ್ರಾಮದಲ್ಲಿ ನಡೆದಿದೆ. ಮೂಡಿ ಗ್ರಾಮದ ಶಶಿಧರ ಗೂಳೇರ್ (42) ಮೃತ ದುರ್ದೈವಿ. ಇಂದು ಬೆಳಗ್ಗೆ ಗ್ರಾಮದ ವರದಾ ನದಿಯಲ್ಲಿ ಎತ್ತುಗಳ ಮೈತೊಳೆಯಲು ಹೋದ ಸಂದರ್ಭದಲ್ಲಿ ಶಶಿಧರ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ….

Read More