Headlines

Shivamogga | ಮಣ್ಣು ಕುಸಿದು ಕಾರ್ಮಿಕ ಸಾವು

ಶಿವಮೊಗ್ಗ : ರೈಲ್ವೆ ಮೇಲ್ಸೇತುವೆ ಕೆಳಭಾಗದ ಅಂಡರ್ ಗ್ರೌಂಡ್ ಪೈಪ್​ಲೈನ್​ ಅಳವಡಿಕೆಗಾಗಿ ಮಣ್ಣು ತೆಗೆಯುವಾಗ ಮಣ್ಣು ಕುಸಿದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ಮಣ್ಣು ಕುಸಿದು ಮೃತಪಟ್ಟ ಕಾರ್ಮಿಕನನ್ನು ಶಿವಮೊಗ್ಗ ತಾಲೂಕು ಮಂಡೆನಕೊಪ್ಪದ ಸತೀಶ್ ನಾಯ್ಕ ಎಂದು ಗುರುತಿಸಲಾಗಿದೆ.  ಶಿವಮೊಗ್ಗದ ನವಲೆ ರಸ್ತೆಯ ಭಾಗದಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯಲ್ಲಿ ಮೇಲ್ಸೇತುವೆ ಕೆಳಭಾಗದಲ್ಲಿ ಅಂಡರ್ ಗ್ರೌಂಡ್ ಪೈಪ್ ಅಳವಡಿಕೆ ಕಾರ್ಯ ನಡೆಸಲಾಗುತ್ತಿದೆ. ಜೆಸಿಬಿ ಮೂಲಕ ಮಣ್ಣು ತೆಗೆದು ಪೈಪ್ ಅಳವಡಿಸಲಾಗುತ್ತಿತ್ತು. ಪೈಪ್ ಅಳವಡಿಕೆ ಮಾಡಲು ಮಣ್ಣು…

Read More

ತೀರ್ಥಹಳ್ಳಿಯಲ್ಲಿ ರೋಹಿತ್ ಚಕ್ರತೀರ್ಥ ವಿರುದ್ದ ಗೋಬ್ಯಾಕ್ ಪ್ರತಿಭಟನೆ – ಪ್ರತಿಭಟನಾಕಾರರ ಪೊಲೀಸ್ ವಶಕ್ಕೆ|thirthahalli

ರೋಹಿತ್ ಚಕ್ರತೀರ್ಥ ವಿರುದ್ದ ಭಾರಿ ಪ್ರತಿಭಟನೆ  ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಕಡೆಗೋಲು ವಿಚಾರ ಮಂಥನ ವೇದಿಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ ಅವರು ಕುವೆಂಪು ಸಾಹಿತ್ಯ ಮತ್ತು ರಾಷ್ಟ್ರೀಯತೆ ವಿಷಯ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ.ಇದು ಕುವೆಂಪು ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಗಿದೆ. ಕುವೆಂಪು ಅವರನ್ನು ಅವಮಾನಿಸುವ ಮೂಲಕ ರೋಹಿತ್ ಚಕ್ರತೀರ್ಥ ವಿಕೃತಿ ಮೆರೆದಿದ್ದಾರೆ. ಇವರಿಗೆ ಕುವೆಂಪು ಅವರ ಬಗ್ಗೆ ಮಾತನಾಡಲು ಅವಕಾಶ ನೀಡಬಾರದು ಎಂದು ಸಾಮಾಜಿಕ ಜಾಲತಾಣದಲ್ಲಿ ಹಿಂದಿನಿಂದಲೇ ಪ್ರತಿಭಟನೆ ವ್ಯಕ್ತವಾಗಿತ್ತು. ಗೋ ಬ್ಯಾಕ್ ಪ್ರತಿಭಟನೆಯೂ…

Read More

ಮೆಗ್ಗಾನ್ ಆಸ್ಪತ್ರೆ ಐಸಿಯು ಮಕ್ಕಳ ವಿಭಾಗದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ

ಶಿವಮೊಗ್ಗ : ಶಾರ್ಟ್ ಸರ್ಕ್ಯೂಟ್ ನಿಂದ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಿಭಾಗದ ಐಸಿಯುನಲ್ಲಿ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ನವಜಾತ ಶಿಶುಗಳ ವಾರ್ಡ ನ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಲ್ಲಿದ್ದ ರೋಗಿಗಳನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ.ಐಸಿಯು ನಲ್ಲಿ ಮೂರು ಜನ ಹಾಗೂ ಜನರಲ್ ವಾರ್ಡಿನಲ್ಲಿ 10 ರಿಂದ 15 ಜನ ಇದ್ದರು ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡದಲ್ಲಿ ರೋಗಿಗಳಿಗೆ ತಪಾಸಣೆ ಮಾಡುವ ಹಾಗೂ ಚಿಕಿತ್ಸೆ ನೀಡುತ್ತಿದ್ದ…

Read More

ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ

ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಹೊಸನಗರ: ಡ್ರೋಣ್ ಮೂಲಕ ನ್ಯಾನೋ ಯೂರಿಯ ಸಿಂಪಡಣೆ ಕುರಿತು ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ತಾಲೂಕಿನ ಕೆರೆಹಳ್ಳಿ ಹೋಬಳಿ ಬಾಳೂರು ಗ್ರಾಮದ ರೈತ ಧನಂಜಯ ಮತ್ತು ಮಂಜಪ್ಪ ಅವರ ಭತ್ತದ ಕೃಷಿ ಜಮೀನಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೃಷಿ ಇಲಾಖೆ ಆಯೋಜಿಸಿದ್ದ ಈ ಪ್ರಾತ್ಯಕ್ಷಿಕೆಯಲ್ಲಿ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ರೈತರಿಗೆ ಡ್ರೋಣ್ ಬಳಸಿ ಔಷಧಿ ಸಿಂಪಡಣೆ, ಸದುಪಯೋಗ ಹಾಗೂ ಆಗುವ ಅನುಕೂಲ ಕುರಿತು…

Read More

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು | Caste barrier for lovers married in love

ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು  ಶಿವಮೊಗ್ಗ:  ಪ್ರೀತಿ ಮಾಡಬಾರದು, ಮಾಡಿದರೆ ಜಗಕೆ ಹೆದರಬಾರದು’ ಹಾಡಿನಂತೆ ಪ್ರೇಮಿಗಳಿಬ್ಬರು ಪ್ರೀತಿ ಮಾಡಿ ಎಲ್ಲರನ್ನೂ ಎದುರಿಸಿ ನಿಂತಿದ್ದಾರೆ, ಇದೀಗ ಈ ಪ್ರೇಮಿಗಳು ಜಾತಿ ಕಾರಣಕ್ಕೆ ಭಯದಲ್ಲೇ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಶಿವಮೊಗ್ಗ ನಗರದ ನವುಲೆ ನಿವಾಸಿಗಳಾದ ಲೇಖನ ಹಾಗೂ ಬಸವರಾಜ್ ಕಳೆದ ಎರಡು ವರ್ಷದಿಂದ ಪ್ರೀತಿ ಮಾಡಿದ್ದರು. ಇದೀಗ ಪ್ರೀತಿ ಮಾಡಿದ ಪರಸ್ಪರ ಒಪ್ಪಿಗೆ ಮೇರೆಗೆ ಕಳೆದ ನಾಲ್ಕು ದಿನದ ಹಿಂದೆ ಮದುವೆಯಾಗಿದ್ದಾರೆ….

Read More

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು

RIPPONPETE | ಗಂಡು ಮಗು ಆಗಿಲ್ಲವೆಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಒಂದು ವರ್ಷದ ಹೆಣ್ಣು ಮಗುವನ್ನು ನೆಲಕ್ಕೆ ಅಪ್ಪಳಿಸಿ ಸಾಯಿಸಲು ಮುಂದಾದನಾ ಪಾಪಿ ತಂದೆ..!!?? ರಿಪ್ಪನ್‌ಪೇಟೆ : ಗಂಡು ಮಗು ಆಗಿಲ್ಲ ಎನ್ನುವ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪಟ್ಟಣದ ಸಮೀಪದ ಅರಸಾಳು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅರಸಾಳು ಗ್ರಾಮದ ಕಿರಣ್ ಡಿಸೋಜಾ , ಅತ್ತೆ ಸೂರಿನ್ ಡಿಸೋಜಾ , ನಾದಿನಿ ನಿರ್ಮಲ ಮತ್ತು…

Read More

ಗೃಹ ಸಚಿವರ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆಯ ಫೋಟೋ ತೆಗೆದಿದ್ದಕ್ಕೆ ಪತ್ರಕರ್ತನಿಗೆ ಟಾರ್ಚರ್ : ಕಣ್ಮುಚ್ಚಿ ಕುಳಿತಿವೆ ಸಂಬಂಧಪಟ್ಟ ಇಲಾಖೆಗಳು

ತೀರ್ಥಹಳ್ಳಿಯ ಹಿರಿಯ ಪತ್ರಕರ್ತ ಲಿಯೋ ಅರೋಜರವರನ್ನು ತೀರ್ಥಹಳ್ಳಿಯ ಪ್ರತಿಷ್ಠಿತ ಸಮಾಜದ ಮುಖಂಡರೆಲ್ಲಾ ಸೇರಿ ಕುಶಾವತಿ ಸೇತುವೆ ಬಳಿ ಸುಮಾರು ನಾಲ್ಕುಗಂಟೆಯ ವರೆಗೆ ಕೂರಿಸಿಕೊಂಡು ಮಾನಸಿಕ ಹಿಂಸೆ ನೀಡಿರುವ ಘಟನೆ ನಡೆದಿದೆ. ಗೃಹ ಸಚಿವರ ಕ್ಷೇತ್ರದಲ್ಲಿ ಪತ್ರಕರ್ತನೋರ್ವನಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಸಜ್ಜನರ ನಾಡಾಗಿದ್ದ ತೀರ್ಥಹಳ್ಳಿ ಮರಳು ಮಾಫಿಯಾದ ಗೂಂಡಾರಾಜ್ಯವಾಗಿ ನಿರ್ಮಾಣವಾಗಿ ಬಿಟ್ಟಿತೇ ಎಂಬ ಆತಂಕ ಎದುರಾಗಿದೆ. ಯಾವುದೇ ನದಿ ಸೇತುವೆಗಳ ಕೆಳಗಡೆ ಮರಳು ತೆಗೆಯದಂತೆ ಸುಪ್ರೀಕೋರ್ಟ್ ಆದೇಶವಿದೆ. ಆದರೆ ಕುಶಾವತಿ ಸೇತುವೆ ಕೆಳಗೆ ತೀರ್ಥಹಳ್ಳಿಯ ಪ್ರತಿಷ್ಠಿತ…

Read More

ಉತ್ತಮ ಆರೋಗ್ಯವೆನ್ನುವುದು ಶ್ರೀಮಂತರಿಗೆ ಮಾತ್ರ ಸೀಮಿತವೇ.!?

ಉತ್ತಮ ಆರೋಗ್ಯವೆನ್ನುವುದು ಶ್ರೀಮಂತರಿಗೆ ಮಾತ್ರ ಸೀಮಿತವೇ.!? ನಾನೊಬ್ಬ ಮಾಧ್ಯಮ ವರ್ಗದ ಸಾಮಾನ್ಯ ಗೃಹಿಣಿ ಯಾಗಿದ್ದು ನನ್ನ ಕೆಲಸ ಪ್ರತಿದಿನ ನನ್ನ ಕುಟುಂಬ ಆರೋಗ್ಯವಂತವಾಗಿ ಮತ್ತು ಸಂತೋಷದಿಂದ ಇರುವಂತೆ ನೋಡಿಕೊಳ್ಳುವುದು. ಅದಕ್ಕಾಗಿ ನಾನು ಪ್ರತಿ ಗಳಿಗೆಯು ಶ್ರಮಿಸುತ್ತಿರುತ್ತೇನೆ.ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಉತ್ತರವೇ ಸಿಗದ ಪ್ರಶ್ನೆಗಳು ನನ್ನನ್ನು ಸದಾ ಕಾಡುತ್ತಿರುತ್ತವೆ. ಪ್ರತಿಯೊಬ್ಬರಿಗೂ ಒಳ್ಳೆಯ ಆರೋಗ್ಯ ಸಿಗಬೇಕೆಂದರೆ, ಒಳ್ಳೆಯ ಆಹಾರವೇ ಪ್ರಥಮ ಆದ್ಯತೆ. ಇದನ್ನು ಆಯುರ್ವೇದ ಗ್ರಂಥಗಳಲ್ಲೂ ಉಲ್ಲೆಖಿಸಿದ್ದಾರೆ. ಈ ಹಿನ್ನಲೆಯಲ್ಲಿ ನನ್ನ ಕುಟುಂಬದ ಉತ್ತಮ ಆರೋಗ್ಯಕ್ಕಾಗಿ ಹೊರಗಿನ ತಿಂಡಿ…

Read More

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಗ್ರಾಪಂ ಸದಸ್ಯ ಆಸೀಫ಼್ ಭಾಷಾಸಾಬ್ ಅವಿರೋಧ ಆಯ್ಕೆ :

ಹೊಸನಗರ: ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅವಿರೋಧವಾಗಿ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಯುವ ಮುಖಂಡ ಆಸೀಫ಼್ ಭಾಷಾಸಾಬ್ ಆಯ್ಕೆಯಾಗಿದ್ದಾರೆ. ಇಂದು ಹೊಸನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪದಗ್ರಹಣ ಹಾಗೂ ಜವಬ್ದಾರಿ ಹಂಚಿಕೆ ಸಭೆಯಲ್ಲಿ ತಾಲೂಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಜಿ ನಾಗರಾಜ್  ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದು,ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಉಪಸ್ಥಿತಿಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪರವರು ಆದೇಶದ ಪ್ರತಿಯನ್ನು ಆಸೀಫ಼್ ಭಾಷಾಸಾಬ್ ಅವರಿಗೆ ಹಸ್ತಾಂತರಿಸಿದರು. ಆಸೀಫ಼್…

Read More

ಹೊಸನಗರದ ಕೊಡಚಾದ್ರಿ ಕಾಲೇಜು,ಗರ್ತಿಕೆರೆ ಕಾಲೇಜಿನಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರ ಬಂಧನ – ಕುಖ್ಯಾತ ಅಂತರ್ ಜಿಲ್ಲಾ ಕಳ್ಳರು ಎಷ್ಟು ಶಾಲೆಯ ಬೀಗ ಮುರಿದಿದ್ದಾರೆ ಗೊತ್ತಾ.???? ಈ ಸುದ್ದಿ ನೋಡಿ|Arested

ಇತ್ತೀಚೆಗೆ ಮಲೆನಾಡಿನಾದ್ಯಂತ ಶಾಲಾ ಕಾಲೇಜುಗಳಲ್ಲಿ ಕಳ್ಳತನ ಮಾಡುತಿದ್ದ ನಟೋರಿಯಸ್ ಕಳ್ಳರನ್ನು ಉಡುಪಿ ಜಿಲ್ಲೆಯ ಕೋಟ ಪೊಲೀಸರು ಬಂಧಿಸಿದ್ದಾರೆ. ಹೊಸನಗರದ ಕೊಡಚಾದ್ರಿ ಕಾಲೇಜು,ಗರ್ತಿಕೆರೆ ಕಾಲೇಜು,ಕೋಣಂದೂರು ಕಾಲೇಜು ,ನಗರ ಕಾಲೇಜಿನಲ್ಲಿ ಬೀಗ ಮುರಿದು ಕಳ್ಳತನ ಮಾಡಿದ್ದರು. ಇಂದು ಉಡುಪಿ ಜಿಲ್ಲೆಯ ಕೋಟ ಠಾಣಾ ಸರಹದ್ದಿನ ಆವರ್ಸೆ ಗ್ರಾಮದ ಬಳಿ ಬೈಕ್ ನಲ್ಲಿ  ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಕಳ್ಳತನ ಮಾಡಿರುವ ವಿಚಾರ ಬಾಯಿಬಿಟ್ಟಿದ್ದಾರೆ. ತಮಿಳುನಾಡಿನ ಸೇಲಂ ನಿವಾಸಿ ಕುಮಾರಸ್ವಾಮಿ(59),ಉಡುಪಿ ಜಿಲ್ಲೆಯ…

Read More