Headlines

ಶಿವಮೊಗ್ಗ ಜಿಲ್ಲಾ ಜೆಡಿಎಸ್ ರಾಯಭಾರ ಮತ್ತೆ ಎಂ.ಶ್ರೀಕಾಂತ್ ಹೆಗಲಿಗೆ, ಜಿಲ್ಲಾಧ್ಯಕ್ಷರು ಜೆಡಿಎಸ್ ಗೆಲುವಿಗೆ ರೂಪಿಸಿರುವ ಕಾರ್ಯತಂತ್ರಗಳೇನು!!! ಕಾರ್ಯಕರ್ತರು ಇದರ ಬಗ್ಗೆ ಏನನ್ನುತ್ತಾರೆ.?

ಶಿವಮೊಗ್ಗ: ಜಿಲ್ಲೆಯಲ್ಲಿ ಜೆಡಿಎಸ್ ಮತ್ತೆ ಪುನಶ್ಚೇತನಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ. ಈ ಹಿಂದೆ ಜಿಲ್ಲಾಧ್ಯಕ್ಷರಾಗಿ ಜೆಡಿಎಸ್ ನಲ್ಲಿ ಸಂಚಲನ ಮೂಡಿಸಿದ್ದ ಎಂ. ಶ್ರೀಕಾಂತ್ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಿಂದ ಸ್ವಲ್ಪ ದೂರವೇ ಉಳಿಸಿದ್ದರು. ಆದರೆ, ಮೊನ್ನೆ ನಡೆದ ಜೆಡಿಎಸ್ ವಿಷನ್-2021ರ ಸಮಾವೇಶದಲ್ಲಿ ಪಕ್ಷದ ವರಿಷ್ಟರು ಜಿಲ್ಲಾ ಜೆಡಿಎಸ್ ನ ನಾಯಕತ್ವವನ್ನು ಮತ್ತೆ ಶ್ರೀಕಾಂತ್ ಹೆಗಲಿಗೆ ಹೊರಿಸಿದ್ದಾರೆ. ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಂ. ಶ್ರೀಕಾಂತ್ 20 ಸಾವಿರಕ್ಕೂ ಹೆಚ್ಚು ಮತಗಳಿಸುವ…

Read More

ರಿಪ್ಪನ್ ಪೇಟೆ,ಶಿವಮೊಗ್ಗ ನಗರದಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ

ರಿಪ್ಪನ್ ಪೇಟೆ : ಪಟ್ಟಣದಲ್ಲಿ ಇಂದು ಸಂಜೆಯಿಂದ ಧಾರಾಕಾರ ಮಳೆ ಸುರಿದಿದೆ. ವಿನಾಯಕ ವೃತ್ತ ಸೇರಿ ಹಲವೆಡೆ ಚರಂಡಿ ನೀರು ರಸ್ತೆಯ ಮೇಲೆ ಹರಿದಿದ್ದು, ಜನರ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಪಟ್ಟಣದಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಶುರುವಾಗಿದ್ದು, ಬಿಡುವು ಕೊಡದೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಪಟ್ಟಣದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ವಿವಿಧೆಡೆ ಇವತ್ತು ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ಮಳೆ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. …

Read More

ಗಾಂಜಾ ವಿಚಾರವಾಗಿ ಇಬ್ಬರ ನಡುವೆ ಮಾರಾಮಾರಿ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲು !!!

ಭದ್ರಾವತಿ : ಗಾಂಜಾ ವಿಚಾರದಲ್ಲಿ ಇಬ್ಬರ ನಡುವೆ  ಮಾರಾಮಾರಿ ಉಂಟಾಗಿದೆ. ಗಾಂಜಾ ಪ್ರಕರಣದಲ್ಲಿ ಮೊಹ್ಮದ್ ಗೌಸ್ ಎಂಬುವನನ್ನ ಪೊಲೀಸರು ಇತ್ತೀಚೆಗೆ ಅಂದರ್ ಮಾಡಿದ್ದು, ಈ ಪ್ರಕರಣದಲ್ಲಿ ಇಬ್ಬರ ನಡುವೆ ಬಡಿದಾಡಿಕೊಂಡಿದ್ದಾರೆ. ಇಬ್ಬರೂ ಸಹ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಿಸಿದ್ದಾರೆ. ಭದ್ರಾವತಿಯ ಅನ್ವರ್ ಕಾಲೋನಿಯ ಕಾಫಿಬಾರ್ ನ ಬಳಿ ಮೊಹ್ಮದ್ ಗೌಸ್ ನ ಸಹೋದರ ಮೊಹ್ಮದ್ ಮುಸ್ತಫಾ, ಮೊಹ್ಮದ್ ಅರ್ಶನ್, ಮಾತನಾಡುತ್ತಿದ್ದ ವೇಳೆ ಮೊಹ್ಮದ್ ಅಫ್ತಾಬ್, ಜಾಫರ್ ಸಾದಿಕ್, ಹಾಗೂ ಇನ್ನಿತರೆ ಇಬ್ವರು ಸ್ನೇಹಿತರು ಬಂದು ಏಕಾಏಕಿ…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ.ಶ್ರೀಕಾಂತ್ ಮರುಆಯ್ಕೆ

ಶಿವಮೊಗ್ಗ : ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ ಶ್ರೀಕಾಂತ್ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಈ ಹಿಂದೆ ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿದ್ದ ಶ್ರೀಕಾಂತ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದರು. ಅಪ್ಪಾಜಿಗೌಡ, ಶಾರದಾ ಪೂರ್ಯ ನಾಯಕ್, ಮಧು ಬಂಗಾರಪ್ಪ ಸೇರಿದಂತೆ ಜೆಡಿಎಸ್ ನ 3ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಯಶಸ್ವಿಯಾಗಿದ್ದರು. ವಿಧಾನಪರಿಷತ್ ಸದಸ್ಯರಾದ ಬೋರೇಗೌಡರ ಗೆಲುವಿಗೂ ಹೆಗಲಾಗಿದ್ದರು.  ಎರಡು ಬಾರಿ ಶಿವಮೊಗ್ಗ ನಗರದ ವಿಧಾನಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.ಕೇವಲ ರಾಜಕಾರಣಿ ಮಾತ್ರವಾಗಿರದೆ ಸಮಾಜ ಸೇವಕರಾಗಿದ್ದಾರೆ. ಜಿಲ್ಲೆಯಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು…

Read More

ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ. ನಾಲ್ಕು ಜೀಪು, ಮನೆ ತುಂಬ ಪೊಲೀಸರು ಕೊಟ್ಟಿದ್ದರು. ಅಲಂಕಾರಕ್ಕಾಗಿ ಇದೆಲ್ಲ ಬೇಡ ಎಂದು ನಾನು ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ಅವರು ಹೇಳಿದರು.  ನಗರದ ಸರ್ಕಾರಿ ಭವನದಲ್ಲಿ ಇಂದು ರಾಜ್ಯ ಸೌಹರ್ದ ಸಂಯುಕ್ತ ಸಹಕಾರಿ ನಿಯಮಿತ ಹಾಗೂ ಸಹ್ಯಾದ್ರಿ ಸೌಹರ್ದ ಸಹಕಾರಿ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಗೃಹ ಸಚಿವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸನ್ಮಾನ ಸ್ವೀಕರಿಸಿ ಗೃಹ ಸಚಿವರು ಮಾತನಾಡಿದರು. ಬಹಳ ಜನ ನನಗೆ…

Read More

ಕಾರ್ಗಲ್ ಗ್ರಾಮದಲ್ಲಿ ಕಲುಷಿತ ನೀರು,ಆಹಾರ ಸೇವನೆಯಿಂದ ಸುಮಾರು 80 ಕ್ಕೂ ಹೆಚ್ಚು ಜನ ಅಸ್ವಸ್ಥ : ಶಾಸಕ ಹರತಾಳು ಹಾಲಪ್ಪ ಭೇಟಿ

ಸಾಗರ : ತಾಲೂಕಿನ ಕಾರ್ಗಲ್ ಮತ್ತು ಜೋಗದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ  ಸುಮಾರು 80 ಜನ ಅಸ್ವಸ್ಥರಾಗಿ ಸಾಗರ ತಾಲೂಕು ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಾರ್ಗಲ್ ನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಆಹಾರ ಸೇವನೆ ಮಾಡಿದವರಲ್ಲಿ ವಾಂತಿ ಭೇದಿ, ಜ್ವರ ಕಾಣಿಸಿಕೊಂಡಿದೆ. ಜೋಗದಲ್ಲಿ ಮೆಸ್ ಮತ್ತು ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾದವರಲ್ಲಿ ಈ ರೀತಿಯ ರೋಗ ಲಕ್ಷಣ ಕಂಡುಬಂದಿದೆ. ನ.11 ರಂದು ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದವರಲ್ಲಿ ಈ ರೀತಿ ವಾಂತಿ ಭೇದಿ ಮತ್ತು ಜ್ವರದ…

Read More

ರಸ್ತೆ ಮಧ್ಯದಲ್ಲಿಯೇ ಕುರ್ಚಿ ಹಾಕಿ ಕುಳಿತು ವಿನೂತನ ರೀತಿ ಪ್ರತಿಭಟನೆ ಮಾಡಿದ ಟಿ ಆರ್ ಕೃಷ್ಣಪ್ಪ

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ದೊಡ್ಡ ಗುಂಡಿಯನ್ನು ಕೂಡಲೇ ಮುಚ್ಚುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರಸ್ತೆ ಮಧ್ಯದಲ್ಲಿಯೇ ಕುರ್ಚಿ ಹಾಕಿ ವಿನೂತನ ರೀತಿಯಾಗಿ ಪ್ರತಿಭಟಿಸಿದ್ದಾರೆ. ರಾಜಧಾನಿ ಹಾಗೂ ಕರಾವಳಿಗೆ ನಡುವೆ ಸಂಪರ್ಕ ಕಲ್ಪಿಸುವ ಮುಖ್ಯ ವೃತ್ತ ಇದಾಗಿದ್ದು ಹಲವು ದಿನಗಳಿಂದ ರಸ್ತೆ ಹದಗೆಟ್ಟಿ,ದೊಡ್ಡ ಗುಂಡಿ ಬಿದ್ದಿದ್ದರು ಯಾವ ಅಧಿಕಾರಿಗಳು ಇದರ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಸಾಮಾಜಿಕ ಹೋರಾಟಗಾರರಾದ ಟಿ ಆರ್ ಕೃಷ್ಣಪ್ಪ ಇಂದು ಗುಂಡಿ ಬಿದ್ದ ಜಾಗದಲ್ಲಿಯೇ ಕುರ್ಚಿ…

Read More

ಅಮೃತ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ. ಅರಣ್ಯ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ:ನ್ಯಾಯಧೀಶ ಕೆ ರವಿಕುಮಾರ್.

ರಿಪ್ಪನ್ ಪೇಟೆ :  ಅರಣ್ಯ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಅರಣ್ಯ ಸಂರಕ್ಷಣೆ ಮಾಡದಿದ್ದರೆ ಪ್ರಾಕೃತಿಕ ವಿಕೋಪಗಳು.ಭೂಕುಸಿತಗಳು ಉಂಟಾಗುತ್ತವೆ  ಆದ್ದರಿಂದ ಪ್ರತಿಯೊಬ್ಬ ನಾಗರಿಕರು ಅರಣ್ಯ ಸಂರಕ್ಷಣೆಗೆ ಮುಂದಾಗಬೇಕೆಂದು ಹೊಸನಗರ ತಾಲೂಕ್ ಪ್ರಧಾನ ವ್ಯವಹಾರ ನ್ಯಾಯಧೀಶ  ಮತ್ತು ಪ್ರಾಧಿಕಾರದ  ಸದಸ್ಯ  ಕೆ.ರವಿಕುಮಾರ್ ಹೇಳಿದರು. ಅಮೃತ ಸರಕಾರಿ ಪದವಿಪೂರ್ವ ಕಾಲೇಜುನಲ್ಲಿ ನಡೆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪದವಿ ಪೂರ್ವ ಶಿಕ್ಷಣ ಇಲಾಖೆ, ಗ್ರಾಮಆಡಳಿತ ಅಮೃತ  ಹಾಗೂ ಅಮೃತ ಸರಕಾರಿ ಪದವಿ ಪೂರ್ವ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಅಜಾದಿ ಕಾ…

Read More

ನಿನ್ನೆ ಆರತಕ್ಷತೆಯಲ್ಲಿ ಊಟ ಮಾಡಿದವರು ಇಂದು ಆಸ್ಪತ್ರೆಗೆ ದಾಖಲು : ಸುಮಾರು 150 ಕ್ಕೂ ಹೆಚ್ಚು ಜನರು ಅಸ್ವಸ್ಥ , ಎಲ್ಲಿ ಗೊತ್ತಾ ??

ಶಿವಮೊಗ್ಗ : ಇಲ್ಲಿನ ಸಮೀಪದ ಹರಮಘಟ್ಟದ ಆಲದಹಳ್ಳಿಯಲ್ಲಿ ನಿನ್ನೆ ಮದುವೆಯೊಂದರ ಆರತಕ್ಷತೆ ಕಾರ್ಯಕ್ರಮದಲ್ಲಿ ಊಟ ಮಾಡಿದ್ದ ಸುಮಾರು 60 ಕ್ಕೂ ಹೆಚ್ಚು ಜನರಿಗೆ ಫುಡ್ ಪಾಯಿಸನ್ ಆಗಿದ್ದು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ  21 ಜನ ದಾಖಲಾಗಿದ್ದಾರೆ. ನಿನ್ನೆ ಆಲದಹಳ್ಳಿ ದೊಡ್ಡೇರಿ ಕುಟುಂಬದವರ ಎರಡು ಜೋಡಿ ಮದುವೆಯ ಆರತಕ್ಷತೆಗೆ ಹಾಜರಾದ ಹರಮಘಟ್ಟ ಮತ್ತು ಆಲದಹಳ್ಳಿ ಗ್ರಾಮಸ್ಥರು ನಿನ್ನೆ ರಾತ್ರಿ ಊಟ ಮಾಡಿದ್ದಾರೆ.ಮರುದಿನ ಮಧ್ಯಾಹ್ನದಿಂದ ರಿಯಾಕ್ಷನ್ ಆಗಲು ಆರಂಭವಾಗಿದೆ.ಕೆಲ ಗ್ರಾಮಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವರು ಹೊಳೆಹೊನ್ನೂರು…

Read More

ಸಾಗರ ಕ್ಷೇತ್ರವನ್ನು ಇಲ್ಲಿನ ಶಾಸಕರು ಕುಡುಕರ ಸಾಮ್ರಾಜ್ಯ ಮಾಡಲು ಹೊರಟಿದ್ದಾರೆ : ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ:ಸಾಗರ ಕ್ಷೇತ್ರದ ಶಾಸಕರು ಸಾಗರ ಮತ್ತು ಹೊಸನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೆ ಅಭಿವೃದ್ಧಿ ಕಾಮಗಾರಿಗಳನ್ನು ಮಾಡದೆ ಕೇವಲ ಕೊರೊನಾ ನೆಪದಲ್ಲಿ  ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಗಂಭೀರವಾಗಿ ಆರೊಪಿಸಿದರು.  ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಳೆದ ತಿಂಗಳು ನಡೆದಂತಹ ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆಯಲ್ಲಿ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿಗಳಿಸುವ ಮೂಲಕ ನೈಜ ಮತದಾನ ಮಾಡುವ ಮೂಲಕ ಪಕ್ಷದ ಬಲವರ್ಧನೆಗೆ ಕಾರಣವಾಗಿದೆ. ಅದೆ…

Read More