ಮೇಗರವಳ್ಳಿ ಬಿಜೆಪಿ ಘಟಕದ ವತಿಯಿಂದ ಆರೋಗ್ಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಸನ್ಮಾನ
ತೀರ್ಥಹಳ್ಳಿ : ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೋವಿಡ್ ಸಮಯದಲ್ಲಿ ವಹಿಸಿದ ಸೂಕ್ತ ಮುನ್ನೆಚ್ಚರಿಕೆ ಹಾಗೂ ವ್ಯಾಕ್ಸಿನ್ ನೀಡಿಕೆಯ ವೇಳೆಯಲ್ಲಿ ಮಾಡಿದ ಪ್ರಾಮಾಣಿಕ ಸೇವೆಯಿಂದ ದೇಶ ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಮತ್ತೆ ಜನಜೀವನ ಚುರುಕುಗೊಂಡಿದೆ. 100 ಕೋಟಿಗೂ ಅಧಿಕ ಲಸಿಕೆ ನೀಡಿ ಭಾರತವು ವಿಶ್ವ ದಾಖಲೆ ಬರೆಯುವಲ್ಲಿ ಇವರ ಕೊಡುಗೆ ಅಪಾರ. ಈ ಹಿನ್ನೆಲೆಯಲ್ಲಿ ಮೇಗರವಳ್ಳಿ ಮಹಾಶಕ್ತಿ ಕೇಂದ್ರದ ವತಿಯಿಂದ ಆರೋಗ್ಯ ಅಧಿಕಾರಿಗಳಿಗೆ ಮತ್ತು ಅಲ್ಲಿಯ ಸಿಬ್ಬಂದಿ ವರ್ಗದವರಿಗೆ ಸನ್ಮಾನಿಸಿ ಗೌರವ ಸಲ್ಲಿಸುವ ಕಾರ್ಯಕ್ರಮ ನಡೆಯಿತು….