Headlines

ಸಾಗರ ಪೋಲಿಸರ ಭರ್ಜರಿ ಕಾರ್ಯಾಚರಣೆ : ಮೂವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಸಾಗರ ನಗರ ಪೊಲೀಸ್‌ ಠಾಣೆಯ ಪೊಲೀಸರು ಮೂವರು ಅಂತರ್‌ ಜಿಲ್ಲಾ ಬೈಕ್ ಕಳ್ಳತನದ ಆರೋಪಿತರನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣ,ಭದ್ರಾವತಿ,ಹರಿಹರ ದಾವಣಗೆರೆ ಮತ್ತು ಹಾಸನ ಜಿಲ್ಲೆಯ ಪೊಲೀಸ್‌ ಠಾಣೆಗಳಲ್ಲಿ ನಡೆದಿದ್ದ ಒಟ್ಟು 6  ಪ್ರಕರಣಗಳನ್ನು ಭೇದಿಸಿ 8ಲಕ್ಷ 20ಸಾವಿ ರೂಗಳ ಮೌಲ್ಯದ 6ಬೈಕ್ ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ಎ.ಎಸ್.ಪಿ ರೋಹನ್ ಜಗದೀಶ್ ಮತ್ತು ಇನ್ಸ್ ಪೆಕ್ಟರ್ ಕೃಷ್ಣಪ್ಪ ಅವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಗಳಾದ ತಿರುಮಲೇಶ್,ಸಾಗರ್ಕರ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ರತ್ನಾಕರ್,ಸಂತೋಷ್ ನಾಯ್ಕ್…

Read More

ಪ್ರಿಯತಮೆ ಕೈಕೊಟ್ಟಳೆಂದು ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ :

ಪ್ರೀತಿಸಿದ ಹುಡುಗಿ ಮೋಸ ಮಾಡಿದಳೆಂದು ನೊಂದ ಯುವಕ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ದಿಲೀಪ್ ಎಂಬಾತ ಮೃತ ಯುವಕನಾಗಿದ್ದಾನೆ. ಕೆಲವು ವರ್ಷಗಳಿಂದ ದಿಲೀಪ್ ಮತ್ತು ಕುಟುಂಬಸ್ಥರು ಬೆಂಗಳೂರಿನಲ್ಲಿ ವಾಸವಿದ್ದುಕೊಂಡು ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡುತ್ತಿದ್ದರು. ಯುವಕನಿಗೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದ ಯುವತಿಯೋರ್ವಳ ಪರಿಚಯವಾಗಿದ್ದು, ಬಳಿಕ ಇಬ್ಬರು ಪರಸ್ಪರ ಪ್ರೀತಿಸಿದ್ದಾರೆ. ಆದರೆ ನಂತರದ ದಿನಗಳಲ್ಲಿ ಮನೆಯವರ…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿನಿ ಕೆ ಎಂ ಮಾನಸ ರವರಿಗೆ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಮಾನಸಳಿಗೆ ಭಾಷಣ  ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ದೊರೆತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹೊಸನಗರದಲ್ಲಿ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರುದ್ಧ ಜಾಗೃತಿ ಮಾಸಾಚರಣೆ ಅಂಗವಾಗಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ  ರಿಪ್ಪನ್ ಪೇಟೆಯ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮಾನಸ.ಕೆ.ಎಂ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. …

Read More

ಯುವ ಕಾಂಗ್ರೆಸ್ ವತಿಯಿಂದ ರಾಜಭವನ ಮುತ್ತಿಗೆ ಯತ್ನ : ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ -ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ನಿಹಾಲ್ ಬಂಧನ

ಕರ್ನಾಟಕ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ರಾಜಭವನ್ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೊಸನಗರ ತಾಲೂಕಿನ ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ ಹಾಗೂ ಜಿಲ್ಲಾ ಯುವ  ಕಾಂಗ್ರೆಸ್ ಕಾರ್ಯದರ್ಶಿ ಮೊಹಮ್ಮದ್ ನಿಹಾಲ್ ರವರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಲಾಯಿತು.  ಬೆಂಗಳೂರು ಕೆಪಿಸಿಸಿ ಕಛೇರಿಯಿಂದ ರಾಜಭವನಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಲಪಾಡ್ ರವರ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡಿ ರಾಜಭವನ ಮುತ್ತಿಗೆ ಹಾಕುವ ಸಂದರ್ಭದಲ್ಲಿ  ಯುವ ಕಾಂಗ್ರೆಸ್ ನ ಹಲವಾರು ನಾಯಕರನ್ನು…

Read More

ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಯುವತಿಯ ಖಾಸಗಿ ಫೋಟೋ ವೈರಲ್ ಮಾಡಿದ ಪಾಗಲ್ ಪ್ರೇಮಿ

ಯುವತಿ ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಆಕೆಯೊಂದಿಗೆ ಇದ್ದ ಖಾಸಗಿ ಫೊಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವ ಪ್ರಕರಣ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಮೊಗ್ಗ ನ್ಯೂಮಂಡ್ಲಿಯ ಯುವತಿಯೊಬ್ಬಳು ಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದು ಅಲ್ಲೇ ಕೆಲಸ ಮಾಡಿಕೊಂಡಿದ್ದ ಭರತ್ ಎಂಬ ಯುವಕ ಆಕೆಯೊಂದಿಗೆ ಸಲುಗೆಯಿಂದ ಇದ್ದನು ಎನ್ನಲಾಗುತ್ತಿದೆ. ಸಲುಗೆಯಿಂದ ಇದ್ದ ವೇಳೆ ಯುವತಿಯೊಂದಿಗೆ ತೆಗೆದ ಖಾಸಗಿ ಫೊಟೊಗಳನ್ನ ತನ್ನ‌ ಮೊಬೈಲ್ ನಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದನು.ಕೆಲ ದಿನಗಳ ನಂತರ ಯುವಕ ಭರತ್‌ ಯುವತಿಗೆ ತನ್ನ ಪ್ರೀತಿಯನ್ನು ಯುವತಿಯ…

Read More

ರಿಪ್ಪನ್ ಪೇಟೆಯ ರಿಂಗ್ ಸುಧಾಕರ್ ಹೃದಯಾಘಾತದಿಂದ ನಿಧನ.

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕುಗಳಲ್ಲಿ  ಕಳೆದ ಕೆಲವು ದಶಕಗಳಿಂದ ರಿಂಗ್ ಬಾವಿ ನಿರ್ಮಾಣದಿಂದ ಖ್ಯಾತರಾಗಿದ್ದ ರಿಂಗ್ ಸುಧಾಕರ್ ರವರು ಇಂದು ಮಧ್ಯಾಹ್ನ ಕೇರಳದ ಕೊಲ್ಲಂ ಜಿಲ್ಲೆಯ ಅವರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೇರಳ ಮೂಲದ ರಿಂಗ್ ಸುಧಾಕರ್ ಅವರು ಮೂರು ದಶಕಗಳಿಂದ ರಿಪ್ಪನ್  ಪೇಟೆಯಲ್ಲಿ ನೆಲೆ ನಿಂತು ರಿಂಗ್ ಬಾವಿ ನಿರ್ಮಾಣ ಮಾಡುವುದರ ಮೂಲಕ ರಿಂಗ್ ಸುಧಾಕರ ಎಂದು ಜನಪ್ರಿಯರಾಗಿದ್ದರು. ವಿವಿಧ ಸಮಾಜಸೇವೆಯಲ್ಲಿ ತೊಡಗಿಕೊಂಡಿದ್ದ ಅವರು ವಿವಿಧ ಸಂಘ ಸಂಸ್ಥೆಗಳಿಗೆ…

Read More

ಅಮೃತ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ಅವಿರೋಧವಾಗಿ ಆಯ್ಕೆ

ರಿಪ್ಪನ್‌ಪೇಟೆ: ಅಮೃತ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಮಂಜುಳಾ ರಾಜು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಮಂಜುಳಾ ರಾಘವೇಂದ್ರ ಆಚಾರ್ ಆಯ್ಕೆಯಾಗಿದ್ದಾರೆ. 11 ಜನ ಸದಸ್ಯರಿರುವ ಗ್ರಾಮ ಪಂಚಾಯತಿ 2 ಕಾಂಗ್ರೆಸ್ ಸದಸ್ಯರಿದ್ದು 9 ಸ್ಥಾನ ಬಿಜೆಪಿ ಪಾಲಾಗಿತ್ತು. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರ ನೇತೃತ್ವದಲ್ಲಿ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ರಿಪ್ಪನ್‌ಪೇಟೆ- ಹುಂಚಾ ಬಿಜೆಪಿ ಮಹಾಶಕ್ತಿ…

Read More

ಅಗ್ನಿಪಥ್ ಯೋಜನೆ ಹಿಂಪಡೆಯುವಂತೆ ಆಗ್ರಹಿಸಿ ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ :

ತೀರ್ಥಹಳ್ಳಿ : ತಾಲೂಕಿನಲ್ಲಿ ಲಂಚವಿಲ್ಲದೆ ಎಲ್ಲೂ ಕೂಡ ಕೆಲಸ ನೆಡೆಯುತ್ತಿಲ್ಲ. ಜ್ಞಾನೇಂದ್ರರವರ ಇಲಾಖೆಯ ಪಿಎಸ್ಐ ನೇಮಕಾತಿಯಲ್ಲೂ ಹಗರಣ ಮಾಡಿ ಮೋಸ ಮಾಡಿದರು ಎಂದು ಆರಗ ಜ್ಞಾನೇಂದ್ರ ವಿರುದ್ಧ ವಾಗ್ದಾಳಿ ನೆಡೆಸಿದರು. ಪಟ್ಟಣದ ತಾಲೂಕು ಕಚೇರಿ ಎದುರು ಕೇಂದ್ರ ಬಿಜೆಪಿ  ಸರ್ಕಾರದ ಅವೈಜ್ಞಾನಿಕ ಅಗ್ನಿಪಥ್ ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ  ನೆಡೆದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿ ಭಾರತೀಯ ಸೇನೆಯಲ್ಲಿ ನೇಮಕಾತಿ ಸಂಬಂಧ ಕೇಂದ್ರದ ಬಿಜೆಪಿ ಸರ್ಕಾರ ಇತ್ತೀಚಿಗೆ ಅನುಷ್ಠಾನಗೊಳಿಸಿರುವ ಅಗ್ನಿಪಥ್ ಯೋಜನೆ ಜನವಿರೋಧಿಯಾಗಿದ್ದು ದೇಶದ ಯುವಜನತೆಯ ನಿರುದ್ಯೋಗ ಸಮಸ್ಯೆಯನ್ನು…

Read More

ಸಾಗರದಲ್ಲಿ ಇಂಜೆಕ್ಷನ್‌ ಪಡೆದ 14 ಮಕ್ಕಳು ಅಸ್ವಸ್ಥ : ಸ್ಥಳಕ್ಕೆ ದೌಡಾಯಿಸಿದ ಶಾಸಕ ಹರತಾಳು ಹಾಲಪ್ಪ

ಸಾಗರ : ಜ್ವರ, ಕೆಮ್ಮು, ನೆಗಡಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದ 14  ಮಕ್ಕಳು ಅಸ್ವಸ್ಥಗೊಂಡ ಘಟನೆ ರವಿವಾರ ಸಂಜೆ ನಡೆದಿದೆ. ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ಸಂಜೆ ವೇಳೆ ಆಸ್ಪತ್ರೆಯ ದಾದಿ ಆಂಟಿಬಯೋಟಿಕ್ ಇಂಜೆಕ್ಷನ್ ನೀಡಿದ್ದಾರೆ. ಇಂಜೆಕ್ಷನ್ ಕೊಟ್ಟ ತಕ್ಷಣ ಮಕ್ಕಳು ಚಳಿ ಚಳಿ ಎಂದು ನಡುಗುತ್ತ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ.  ಕರ್ತವ್ಯದಲ್ಲಿದ್ದ ವೈದ್ಯರು ಅಸ್ವಸ್ಥಗೊಂಡ 14 ಮಕ್ಕಳಲ್ಲಿ 4 ಮಕ್ಕಳನ್ನು ಆ್ಯಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನುಳಿದ ಮಕ್ಕಳಿಗೆ ಉಪವಿಭಾಗೀಯ ಆಸ್ಪತ್ರೆಯಲ್ಲೇ ಚಿಕಿತ್ಸೆ…

Read More

ರಿಪ್ಪನ್‌ಪೇಟೆ : ಅಕ್ರಮ ಜಾನುವಾರು ಸಾಗಾಟ : ಮೂವರ ಬಂಧನ

ರಿಪ್ಪನ್‌ಪೇಟೆ : ಅಕ್ರಮವಾಗಿ ಜಾನುವಾರು ಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ  ಜಯಕರ್ನಾಟಕ ಸಂಘಟನೆ ಹಾಗೂ ಹಿಂದೂಪರ ಸಂಘಟನೆಗಳು ಎರಡು ವಾಹನಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9 ಜಾನುವಾರುಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹೊಸನಗರ ತಾಲೂಕಿನ ನಿವಣೆ ಗ್ರಾಮದಲ್ಲಿ ನಡೆದಿದೆ. ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಮುಖ ಆರೋಪಿಗಳಾದ ಕಲ್ಲುಕೊಪ್ಪ ಗ್ರಾಮದ ಕೃಷ್ಣಮೂರ್ತಿ ಮತ್ತು ಎಣ್ಣೆನೋಡ್ಲು ಗ್ರಾಮದ ಮಹಮ್ಮದ್ ಇರ್ಫಾನ್ ಮತ್ತು ಮಹಮ್ಮದ್ ವಸೀಮ್ ನನ್ನು ಬಂಧಿಸಿ 9  ಜಾನುವಾರುಗಳನ್ನು ರಕ್ಷಿಸಲಾಗಿದೆ. ಹುಂಚಾ ಕಡೆಯಿಂದ ಎರಡು ಗೂಡ್ಸ್ ಆಟೋ…

Read More