Headlines

ಮೇಗರವಳ್ಳಿ ಬಿಜೆಪಿ ಘಟಕದ ವತಿಯಿಂದ ಆರೋಗ್ಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಸನ್ಮಾನ

ತೀರ್ಥಹಳ್ಳಿ : ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೋವಿಡ್ ಸಮಯದಲ್ಲಿ ವಹಿಸಿದ ಸೂಕ್ತ ಮುನ್ನೆಚ್ಚರಿಕೆ ಹಾಗೂ ವ್ಯಾಕ್ಸಿನ್ ನೀಡಿಕೆಯ ವೇಳೆಯಲ್ಲಿ ಮಾಡಿದ ಪ್ರಾಮಾಣಿಕ ಸೇವೆಯಿಂದ ದೇಶ ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಮತ್ತೆ ಜನಜೀವನ ಚುರುಕುಗೊಂಡಿದೆ. 100 ಕೋಟಿಗೂ ಅಧಿಕ ಲಸಿಕೆ ನೀಡಿ ಭಾರತವು ವಿಶ್ವ ದಾಖಲೆ ಬರೆಯುವಲ್ಲಿ  ಇವರ ಕೊಡುಗೆ ಅಪಾರ. ಈ ಹಿನ್ನೆಲೆಯಲ್ಲಿ ಮೇಗರವಳ್ಳಿ ಮಹಾಶಕ್ತಿ ಕೇಂದ್ರದ ವತಿಯಿಂದ ಆರೋಗ್ಯ ಅಧಿಕಾರಿಗಳಿಗೆ ಮತ್ತು ಅಲ್ಲಿಯ ಸಿಬ್ಬಂದಿ ವರ್ಗದವರಿಗೆ ಸನ್ಮಾನಿಸಿ ಗೌರವ ಸಲ್ಲಿಸುವ ಕಾರ್ಯಕ್ರಮ ನಡೆಯಿತು….

Read More

ವಿವಾದಗಳ ಸುತ್ತ ಜೈ ಭೀಮ್ ಚಿತ್ರ : ನಿಜ ಸತ್ಯ ಮರೆಮಾಚಿ ….ಅರ್ಧ ಸತ್ಯವನ್ನಷ್ಟೇ ಹೇಳಿತಾ ಚಿತ್ರ ತಂಡ ????

ಒಬ್ಬಳು ಅಮಾಯಕ ಹೆಣ್ಣು ಮಗಳಿಗೆ ನ್ಯಾಯ ಸಿಗಲಿ ಅಂತಾ ಹೋರಾಡ್ತಿದ್ದೀನಿ.. ಕೋರ್ಟಿನಲ್ಲಿ ನ್ಯಾಯ ಸಿಗ್ಲಿಲ್ಲ ಅಂದ್ರೆ, ಬೀದಿಗಿಳಿದು ಹೋರಾಟ ಮಾಡ್ತೀನಿ.. ನನ್ನ ಈ ಹೋರಾಟಕ್ಕೆ ಕಾನೂನೇ ನನ್ನ ಅಸ್ತ್ರ.. ಅಷ್ಟೇ..ಈ ಡೈಲಾಗ್​ನ ಕೇಳ್ತಿದ್ರೆ ಮೈ ಜುಮ್​ ಅನ್ನುತ್ತೆ ಅಲ್ವಾ.. ಈ ಸಿನಿಮಾದಲ್ಲಿ ತಮಿಳಿನ ಖ್ಯಾತ ನಟ ಸೂರ್ಯ ಹೊಡೆದಿರೋ ಡೈಲಾಗ್​, ಬಡವರಿಗೆ ನ್ಯಾಯಕೊಡಿಸಲು ಆತನ ಹೋರಾಟ ನೋಡಿದವರು, ಹೇಳ್ತಿರೋ ಮಾತು ಒಂದೇ.. ಜೈ ಭೀಮ್ ಸಿನಿಮಾ ಸೂಪರ್ ಅಂತಾ.. ಇದೇ ನವಂಬರ್ 2ನೇ ತಾರೀಖು ಅಮೆಜಾನ್‌ ಪ್ರೈಮ್‌ನಲ್ಲಿ…

Read More

ಹೊಸನಗರ ಸಮೀಪ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ : ಕಾರು ಚಾಲಕ ಶ್ರೀರಾಮ್ ಫ಼ೈನಾನ್ಸ್ ಉದ್ಯೋಗಿ ಸ್ಥಳದಲ್ಲೆ ಸಾವು :

ಹೊಸನಗರ: ಮಾರುತಿಪುರ ಸಮೀಪ ಹೊಸಕೆಸರೆ-  ದರೋಡೆಕಾನ್  ಸಮೀಪ ಸರಕು ತುಂಬಿದ ಲಾರಿ  ಹಾಗೂ ಮಾರುತಿ ಆಲ್ಟೊ ಕಾರಿನ ಮದ್ಯೆ ನಿನ್ನೆ ರಾತ್ರಿ ಸುಮಾರು 10-30 ರ ಸಮಯದಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಅಪಘಾತದ ರಭಸಕ್ಕೆ ಕಾರು ಸಂಪೂರ್ಣ  ನಜ್ಜು – ಗುಜ್ಜಾಗಿದ್ದು ಚಾಲಕ ವಿನಯ ಗೌಡ( 26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನ ಚಾಲಕ ವಿನಯ ಗೌಡ ಸಾಗರದಲ್ಲಿ ಶ್ರೀರಾಮ್ ಫೈನಾನ್ಸ್ ಉದ್ಯೋಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ಚಾಲಕ ವಿನಯ್ ಗೌಡ (26) ಬಾಣಿಗದಿಂದ ಊಟವನ್ನು ಮುಗಿಸಿಕೊಂಡು ಸಾಗರಕ್ಕೆ…

Read More

ಕಿಮ್ಮನೆ ಹಾಗೂ ಮಂಜುನಾಥ್ ಗೌಡ ನಡುವೆ ತೀರ್ಥಹಳ್ಳಿ ಕಾಂಗ್ರೆಸ್‌ನಲ್ಲಿ ಟಿಕೆಟ್ ಫೈಟ್ ತಾರಕಕ್ಕೆ!!!!!!

ಶಿವಮೊಗ್ಗ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಎರಡು ವರ್ಷ ಬಾಕಿ ಇದ್ದರು ಈಗಲೇ ವಿವಿಧ ಪಕ್ಷಗಳಲ್ಲಿ  ಟಿಕೆಟ್ ಪೈಪೋಟಿ ಆರಂಭವಾಗಿದೆ. ಇತ್ತ ಕಾಂಗ್ರೆಸ್‌ನಲ್ಲಿಯು ಟಿಕೆಟ್‌ಗಾಗಿ ಜಟಾಪಟಿ ಜೋರಾಗಿಯೇ ಇದೆ. ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ಗಾಗಿ ಇಬ್ಬರು ಪ್ರಭಾವಿ ಮುಖಂಡರ ನಡುವೆ ಜಿದ್ದಾ ಜಿದ್ದಿ ಏರ್ಪಟ್ಟಿದ್ದೆ.  ಒಂದು ಕಡೆ ಜೆಡಿಎಸ್  ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ ಆಕಾಂಕ್ಷಿಯಾಗಿರುವ ಮಂಜುನಾಥ್ ಗೌಡ  ಆದರೆ ಇನ್ನೊಂದು ಕಡೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್  ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಟಿಕೆಟ್‌ಗಾಗಿ ಈಗಲೇ ಇಬ್ಬರ…

Read More

ಶಿಕಾರಿಪುರ : ಮೂರು ವರ್ಷದ ಮಗುವಿನ ಮೇಲೆ ಅಮಾನವೀಯ ಅತ್ಯಾಚಾರ :ಆರೋಪಿ ಪದವಿ ವಿದ್ಯಾರ್ಥಿ ಪೊಲೀಸ್ ವಶಕ್ಕೆ

ಶಿಕಾರಿಪುರ : ನಗರದ ಬಡಾವಣೆಯೊಂದರಲ್ಲಿ ಕಾಮುಕನ ಅಟ್ಟಹಾಸಕ್ಕೆ ಏನು ಅರಿಯದ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಪೈಶಾಚಿಕ ಕೃತ್ಯ ಎಸಗಿದ ಘಟನೆ ನಗರದಲ್ಲಿ ನಡೆದಿದೆ. ಮೂರು ವರ್ಷದ ಮಗುವಿನ ಮೇಲೆ ಪಕ್ಕದ ಮನೆಯಲ್ಲಿ ಪದವಿ ಓದುತ್ತಿರುವ ಯುವಕನೇ ಅತ್ಯಚಾರ ಮಾಡಿರುವ ಘಟನೆ ಇಂದು ಶಿಕಾರಿಪುರದಲ್ಲಿ ನಡೆದಿದೆ.ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಿಕಾರಿಪುರ ತಾಲ್ಲೂಕಿನ ವಾಸಿ ಮೂರು ವರ್ಷದ ಅಪ್ರಾಪ್ತ ಬಾಲಕಿಯು ತನ್ನ ಮನೆಯ ಅಂಗಳದಲ್ಲಿ ಆಟವಾಡುತ್ತಾ ಪಕ್ಕದ ಮನೆಗೆ ಹೋಗಿದ್ದಾಗ, ಆ ಮನೆಯ ಪದವಿ ಓದುತ್ತಿರುವ…

Read More

ಅಪ್ಪು ಅoತ್ಯ ಕ್ರಿಯೆಗೆ ಅಮೆರಿಕದಿಂದ ಬಂದ ಮಗಳು ಧೃತಿ ಯಾಕೆ ಕಣ್ಣೀರಿಟ್ಟಿಲ್ಲ ಗೊತ್ತಾ? ಅಸಲಿ ಕಾರಣ ಕೇಳಿದ್ರೆ ಭಾವುಕರಾಗ್ತೀರಾ

 46 ವರ್ಷಕ್ಕೆ ಪವರ್ ಸ್ಟಾರ್ ಅಪ್ಪು ಅವರು ಈ ಲೋಕ ಬಿಟ್ಟು ಹೋದ್ರು ಅನ್ನೋದನ್ನ ಇನ್ನು ನಂಬೋದಕ್ಕೆ ಸಾಧ್ಯ ಆಗ್ತಾ ಇಲ್ಲ. ಪುನೀತ್ ಅವರು ಇದ್ದಾಗ ಅವರನ್ನು ಒಬ್ಬ ನಟನಾಗಿ ಎಲ್ಲರೂ ಇಷ್ಟಪಟ್ಟರು. ಆದರೆ ಪುನೀತ್ ಅವರು ಇಲ್ಲವಾದ ನಂತರ ಅವರು ಮಾಡಿದ್ದ ಎಲ್ಲಾ ಸಮಾಜದ ಕಾರ್ಯಗಳು ಹೊರಬರುತ್ತಿದೆ. ಇಂತಹ ಅದ್ಭುತವಾದ ವ್ಯಕ್ತಿಯನ್ನ ನಾವೆಲ್ರು ಕಳೆದುಕೊಂಡಿದ್ದೇವೆ ಎನ್ನುವ ನೋವು ಇಡೀ ರಾಜ್ಯದ ಜನರಲ್ಲಿದೆ.. ಪುನೀತ್ ಅವರು ಇಲ್ಲವಾಗಿರುವುದು ಅಭಿಮಾನಿಗಳಿಗೆ ಬಹಳ ನೋವು ನೀಡಿರುವುದು ನಿಜ. ಆದರೆ ಇದರಿಂದ…

Read More

ಡಿ ಕೆ ಶಿವಕುಮಾರ್ ಆಪ್ತ ಸಹಾಯಕ ಎಂದು 15 ಲಕ್ಷ ವಂಚಿಸಿದ ಭೂಪ !!

ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಕೆಎಸ್ಆರ್‌ಟಿಸಿ ಚಾಲಕರೊಬ್ಬರಿಗೆ 15 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಎಸ್ಆರ್‌ಟಿಸಿ ನಿವೃತ್ತ ಚಾಲಕ ಕೆಂಚಪ್ಪ ಮೋಸ ಹೋದವರು. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಂಚಪ್ಪ ಅವರಿಂದ 15 ಲಕ್ಷ ರೂ. ಪಡೆದಿದ್ದ ಆರೋಪಿಗಳು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ಸತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. 2106ರಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ…

Read More

ಸಕ್ರೆಬೈಲಿನಲ್ಲಿ ಮರಿ ಆನೆಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಲು ಕಾರಣವೇನು ? ಕಳೆದ ಬಾರಿ ಪುನೀತ್ ಆ ಮರಿ ಆನೆಯನ್ನು ಮುದ್ದಾಡಿದ್ದೇಕೆ? ಶರಾವತಿ ಇನ್ನುಮುಂದೆ ಪುನೀತ್ ರಾಜ್ ಕುಮಾರ್ !!!

ಶಿವಮೊಗ್ಗ : ಸಕ್ರೆಬೈಲು ಬಿಡಾರದ ಮರಿ ಆನೆಯೊಂದಕ್ಕೆ ನಟ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿದೆ. ಇವತ್ತು ವೀನಿಂಗ್ ಪ್ರಕ್ರಿಯೆ ವೇಳೆ ಮರಿ ಆನೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸಕ್ರೆಬೈಲು ಬಿಡಾರದ ನೇತ್ರಾವತಿ ಅನೆಯ ಮರಿಗೆ ಪುನೀತ್ ರಾಜಕುಮಾರ್ ಅವರ ಹೆಸರನ್ನು ಇಡಲಾಗಿದೆ. ಡಾಕ್ಯೂಮೆಂಟರಿ ಒಂದರ ಚಿತ್ರೀಕರಣಕ್ಕಾಗಿ ನಟ ಪುನೀತ್ ರಾಜಕುಮಾರ್ ಅವರು ಸಕ್ರೆಬೈಲು ಬಿಡಾರಕ್ಕೆ ಭೇಟಿ ನೀಡಿದ್ದರು. ಆಗ ನೇತ್ರಾವತಿಯ ಮರಿ ಜೊತೆಗೆ ನಟ ಪುನೀತ್ ಕೆಲವು…

Read More

ರಿಪ್ಪನ್ ಪೇಟೆಯ ಸಾಮಿಲ್ ಡ್ರೈವರ್ ಗುಂಡಪ್ಪ ನಿಧನ

ರಿಪ್ಪನ್ ಪೇಟೆ : ಇಲ್ಲಿನ ಸಿದ್ದಪ್ಪನಗುಡಿ ಬಳಿಯ ಕೆರೆಹಳ್ಳಿ ನಿವಾಸಿ ಗುಂಡಪ್ಪ (67) ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾದರು. ರಿಪ್ಪನ್ ಪೇಟೆಯ ಪ್ರಸಿದ್ದ ನೆಹರು ಸಾಮಿಲ್ ನಲ್ಲಿ ಮಿಲ್ ಡ್ರೈವರ್ ಆಗಿ ಸುಮಾರು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದ ಇವರು ಪ್ರಸ್ತುತ ಆಯನೂರು ಸಾಮಿಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮೃತರಿಗೆ ಓರ್ವ ಪುತ್ರ, ಓರ್ವ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ ಸಿದ್ದಪ್ಪನಗುಡಿಯ ಸ್ಮಶಾನದಲ್ಲಿ ನಡೆಯುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಗುಂಡಪ್ಪರವರ ನಿಧನಕ್ಕೆ…

Read More

ರಿಪ್ಪನ್ ಪೇಟೆಯಲ್ಲಿ ನಡದಿದ್ದೇ 2 ವರ್ಷಗಳ ನಂತರ ಗ್ರಾಮಸಭೆ ಆದರೂ ಹಿರಿಯ ಪತ್ರಕರ್ತ ಧರಣಿ ನಡೆಸಿದ್ದೇಕೆ ? ಹಲವು ರೋಚಕ ಸನ್ನಿವೇಶಕ್ಕೆ ಸಾಕ್ಷಿಯಾಯಿತೇ ರಿಪ್ಪನ್ ಪೇಟೆಯ ಗ್ರಾಮಸಭೆ!!

ರಿಪ್ಪನ್ ಪೇಟೆ: ಬರೊಬ್ಬರಿ ಎರಡು ವರ್ಷಗಳ ನಂತರ  ರಿಪ್ಪನ್ ಪೇಟೆಯ ಕುವೆಂಪು ಸಭಾಂಗಣದಲ್ಲಿ  ಗ್ರಾಮಪಂಚಾಯಿತಿಯಲ್ಲಿ ನಡೆದ ಗ್ರಾಮಸಭೆ ಹಲವು ರೋಚಕ ಸನ್ನಿವೇಶಗಳಿಗೆ ಸಾಕ್ಷಿಯಾಗಿತ್ತು. ಹೌದು,ಎರಡು ವರ್ಷಗಳ ನಂತರ ನಡೆಯುತ್ತಿದ್ದ ಗ್ರಾಮ ಸಭೆಯಲ್ಲಿ ರಿಪ್ಪನ್ ಪೇಟೆ  ಗ್ರಾಮ ಪಂಚಾಯತಿಯ ಆಡಳಿತ ಕಾರ್ಯ ವೈಖರಿ ಖಂಡಿಸಿ ಹಿರಿಯ ಪತ್ರಕರ್ತ ಹಾಗೂ ಬಿಜೆಪಿ ಹಿರಿಯ ಮುಖಂಡ ಸಭೆಯಲ್ಲಿ ಏಕಾಂಗಿ ಧರಣಿ ನಡೆಸಿದ ಪ್ರಸಂಗವು ನಡೆಯಿತು. ಈ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಬರೀಶ್ ನಗರದಲ್ಲಿ ಒಂದೇ ಕುಟುಂಬದ ಇಬ್ಬರ ನಡುವೆ ಇದ್ದ ಖಾತೆಗೆ…

Read More