Headlines

ಮಾರುತಿಪುರ :ಆಟವಾಡುತ್ತಿದ್ದ ಬಾಲಕನ ಜೀವನದಲ್ಲಿ ವಿಧಿಯ ಕ್ರೂರ ಆಟ : ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿ ಬಡ ವಿದ್ಯಾರ್ಥಿ ,

ಹೊಸನಗರ : ಮಾರುತಿಪುರದಲ್ಲಿ ಎಂಟನೇ ತರಗತಿ ಓದುತ್ತಿರುವ ಬಾಲಕ  ಕೌಶಿಕ್ ಇದೇ ತಿಂಗಳ 4ರಂದು ಶಾಲೆಯಲ್ಲಿ ಆಡುತ್ತಿರುವಾಗ ಬಿದ್ದು ತಲೆಯ  ಬಲಬಾಗದಲ್ಲಿ ಬಲವಾಗಿ ಪೆಟ್ಟಾಗಿದ್ದು ಬ್ರೈನ್ ನಲ್ಲಿ ಬ್ಲಾಡ್ ಕ್ಲೋಟ್ ಆಗಿರುವ ಕಾರಣ  ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆ ಗೆ ಮ್ಯಾಕ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು ಸುಮಾರು 2 ಲಕ್ಷ ಕ್ಕೂ ಹೆಚ್ಚು ಚಿಕಿತ್ಸಾ ವೆಚ್ಚವಾಗುವದೆಂದು ಆರೋಗ್ಯ ಸಿಬ್ಬಂದಿಗಳು ತಿಳಿಸಿರುತ್ತಾರೆ. ತಂದೆಯನ್ನು ಬಾಲ್ಯದಲ್ಲಿಯೇ ಕಳೆದುಕೊಂಡಿರುವ ಈ ಬಾಲಕ ತಾಯಿ ವಿಶಾಲ ಜೊತೆ ವಾಸಿಸುತ್ತಿದ್ದು ಯಾವದೇ ಆದಾಯವಿರುವದಿಲ್ಲ, ಕೂಲಿ…

Read More

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ: ರೈಲ್ವೆ ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ..!

ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಮಹಿಳೆ ಆಯತಪ್ಪಿ ಬಿದ್ದ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಸಂಬಂಧಿಕರನ್ನು ಬಿಡಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಮಹಿಳೆ ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುವ ಇಂಟರ್‌ಸಿಟಿ ರೈಲಿನ ಒಳಗೆ ಪ್ರಯಾಣಿಕರೊಂದಿಗೆ ಹತ್ತಿದ್ದಾರೆ. ಬಳಿಕ ರೈಲು ಚಲಿಸಲು ಆರಂಭವಾಗುತ್ತಿದ್ದಂತೆ ಕೆಳಗೆ ಇಳಿಯಲು ಪ್ರಯತ್ನಿಸಿದ್ದು, ಈ ವೇಳೆ ಆಯತಪ್ಪಿ ರೈಲಿನಿಂದ ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಆರ್‌ಪಿಎಫ್ ಸಿಬ್ಬಂದಿ ಜಗದೀಶ್, ರೈಲ್ವೆ ಪೊಲೀಸ್ ಅಣ್ಣಪ್ಪ ಹಾಗೂ ಸಂತೋಷ್ ಮಹಿಳೆಯನ್ನು ರಕ್ಷಿಸಿದ್ದಾರೆ. ರೈಲ್ವೆ ಪೊಲೀಸರ ಸಮಯ ಪ್ರಜ್ಞೆ ಅದೃಷ್ಟವಶಾತ್​ ಯಾವುದೇ…

Read More

ರಿಪ್ಪನ್ ಪೇಟೆ , ಸಿಂಗನ ಮನೆ ಹಾಗೂ ತುಮರಿ ಗ್ರಾಪಂ ನ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ :

ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಗ್ರಾ.ಪಂ ಗ್ರಂಥಾಲಯಗಳಿಗೆ ಗ್ರಂಥಾಲಯ ಮೇಲ್ವಿಚಾರಕರನ್ನು ಗೌರವ ಸಂಭಾವನೆ ಆಧಾರದ ಮೇಲೆ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. ತೀರ್ಥಹಳ್ಳಿ ತಾಲ್ಲೂಕು ಬಾಂಡ್ಯಕುಕ್ಕೆ(ಪರಿಶಿಷ್ಟ ಜಾತಿ ಗ್ರಾಮೀಣ ಅಭ್ಯರ್ಥಿ), ಹೊಸನಗರ ತಾಲ್ಲೂಕು ರಿಪ್ಪನಪೇಟೆ(ಸಾಮಾನ್ಯ ಅಭ್ಯರ್ಥಿ), ಭದ್ರಾವತಿ ತಾಲ್ಲೂಕು ಸಿಂಗನಮನೆ(ಸಾಮಾನ್ಯ ಅಭ್ಯರ್ಥಿ), ಸಾಗರ ತಾಲ್ಲೂಕು ತುಮರಿ(ಸಾಮಾನ್ಯ ಅಭ್ಯರ್ಥಿ) ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಗ್ರಂಥಾಲಯ ಮೇಲ್ವಿಚಾರಕರನ್ನು ಮಾಸಿಕ ಗೌರವ ಸಂಭಾವನೆ ರೂ.12,000 ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯ್ತಿ…

Read More

ಹೊಸನಗರ : ಅಭಿಮಾನಿಗಳ ನೆಚ್ಚಿನ ಆಟೋರಾಜ ಶಂಕರ್ ನಾಗ್ ಜನ್ಮದಿನ ವಿಶೇಷವಾಗಿ ಆಚರಣೆ :

ಹೊಸನಗರ: ಕನ್ನಡ ಚಿತ್ರರಂಗದಲ್ಲಿ ಕಡಿಮೆ ಅವಧಿಯಲ್ಲಿ ತನ್ನದೇ ಆದ ಚಾಪು ಮೂಡಿಸಿ, ಕಣ್ಮರೆಯಾದ ಅಭಿಮಾನಿಗಳ ನೆಚ್ಚಿನ ಆಟೋ ರಾಜ ಶಂಕರ್ ನಾಗ್​ ಅವರ ಹುಟ್ಟುಹಬ್ಬ ಇಂದು. ಕನ್ನಡ ಚಿತ್ರ ರಂಗವನ್ನು ಹಾಲಿವುಡ್ ಸಿನಿಮಾ ಮಟ್ಟಿಗೆ ಬೆಳೆಸಬೇಕು ಎಂದು ಶಂಕರ್ ನಾಗ್ ಕನಸು ಕಂಡಿದ್ದರು. ಆದರೆ, ಅದು ನನಸಾಗುವ ಮೊದಲೇ ಕರಾಟೆ ಕಿಂಗ್ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಶಂಕರ್ ನಾಗ್ ನಮ್ಮೊಂದಿಗೆ ಇದ್ದಿದ್ದರೆ, ಇಂದು 67ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ಹೊಸನಗರದ ಚೌಡಮ್ಮ ರಸ್ತೆಯ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್​ಡೌನ್​ ಬಳಿಕ ಹೆಚ್ಚಿದ ಪೋಕ್ಸೋ ಪ್ರಕರಣಗಳು :

ಶಿವಮೊಗ್ಗ: ಜಿಲ್ಲೆಯಲ್ಲಿ ಪೋಕ್ಸೋ ಕಾಯಿದೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು‌ ಹೆಚ್ಚಳವಾಗುತ್ತಿದೆ ಎಂದು ಶಿವಮೊಗ್ಗ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಕೊರೊನಾ ಬಳಿಕ ಪೋಕ್ಸೋ ಕಾಯಿದೆ  ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುತ್ತಿದೆ. ಕಳೆದ 4 ವರ್ಷದಿಂದ ಪ್ರತಿವರ್ಷ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. 2017ರಲ್ಲಿ 87 ಪ್ರಕರಣಗಳು, 2018ರಲ್ಲಿ 99 ಪ್ರಕರಣಗಳು, 2019ರಲ್ಲಿ 117 ಪ್ರಕರಣಗಳು ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿತ್ತು. ಆದರೆ ಕಳೆದ ವರ್ಷ 2020ರಲ್ಲಿ ಜಿಲ್ಲೆಯಲ್ಲಿ…

Read More

ಸಾಗರ : ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಚರಣೆ , 150 ಲೀ ಬೆಲ್ಲದ ಕೊಳೆ ವಶ

ಸಾಗರ : ಅಕ್ರಮವಾಗಿ ಕಳ್ಳ ಭಟ್ಟಿ ಸಾರಾಯಿ ತಯಾರಿಕೆಗೆ ಬಳಸುವ ಬೆಲ್ಲ ಕೊಳೆಯನ್ನು ಸಂಗ್ರಹಿಸಿಟ್ಟಿದ್ದ ಮನೆಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ಸಾಗರ ತಾಲೂಕಿನ ಸುಳ್ಳೂರು ಗ್ರಾಮದಲ್ಲಿ ನಡೆದಿದೆ. ಈ ವೇಳೆ ಹೊಲದಲ್ಲಿ ಸಂಗ್ರಹಿಸಿದ್ದ 150 ಲೀಟರ್ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸುಳ್ಳೂರು ಗ್ರಾಮದ ಕಾಳಿ ಕಟ್ಟೆ ಎಂಬಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಕೆಗೆ ಸಂಗ್ರಹಿಸಿದ್ದ ಬೆಲ್ಲದ ಕೊಳೆಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಲಕ್ಷಣ ಬಿನ್ ಬಸಪ್ಪ…

Read More

ರಿಪ್ಪನ್ ಪೇಟೆಯ ರೈತನ ಮಗನ ಚಿನ್ನದ ಬೇಟೆ ! ಗ್ರಾಮೀಣ ಯುವಕ ಚಿನ್ನ ಬೇಟೆಯಾಡಿದ್ದಾದರೂ ಎಲ್ಲಿ ? ಈ ಯುವಕನಿಗೆ ಕೃಷಿಸಚಿವ ಬಿ ಸಿ ಪಾಟೀಲ್ ಕಿವಿಯಲ್ಲಿ ಹೇಳಿದ್ದೇನು !!

ರಿಪ್ಪನ್ ಪೇಟೆ : ಪುಟ್ಟ ಹಳ್ಳಿಯಲ್ಲಿ ಅಪ್ಪ ಅಮ್ಮ ಹೊಲದಲ್ಲಿ ಹಸು ನೋಡಿಕೊಳ್ಳುತ್ತ ಕೃಷಿಯಲ್ಲಿ ತೊಡಗಿದ್ದರೆ, ಅತ್ತ ಮಗ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಚಿನ್ನದ ಪದಕಗಳಿಗೆ ಕೊರಳೊಡ್ಡುತ್ತಿದ್ದ.  ಹೌದು, ಇಂತಹ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ರಿಪ್ಪನ್ ಪೇಟೆಯ ಸಮೀಪದ ಹೊಸಮನೆಯ ಕೃಷಿಕ ದಂಪತಿಗಳಾದ ಸರಸ್ವತಿ ಮತ್ತು ಮಂಜುನಾಥ್ ರವರ ಪುತ್ರ ಮಧುಸೂದನ್ ಎಂ. ಬೆಂಗಳೂರಿನ ಕೃಷಿ ವಿಶ್ವ ವಿದ್ಯಾಲಯದ  ಘಟಿಕೋತ್ಸವದ ಪದವಿ ಪ್ರದಾನ ಸಮಾರಂಭದಲ್ಲಿ ಈ ಹಳ್ಳಿಯ ಪ್ರತಿಭೆ ಬರೋಬ್ಬರಿ ಮೂರು ಚಿನ್ನದ ಪದಕಗಳನ್ನು ಬಾಚಿದ್ದಾನೆ. ಬೆಂಗಳೂರು…

Read More

ಮೆಗ್ಗಾನ್ ಆಸ್ಪತ್ರೆ ಐಸಿಯು ಮಕ್ಕಳ ವಿಭಾಗದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ

ಶಿವಮೊಗ್ಗ : ಶಾರ್ಟ್ ಸರ್ಕ್ಯೂಟ್ ನಿಂದ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಿಭಾಗದ ಐಸಿಯುನಲ್ಲಿ ಬೆಂಕಿ ಹತ್ತಿಕೊಂಡ ಘಟನೆ ನಡೆದಿದೆ. ನವಜಾತ ಶಿಶುಗಳ ವಾರ್ಡ ನ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಲ್ಲಿದ್ದ ರೋಗಿಗಳನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ.ಐಸಿಯು ನಲ್ಲಿ ಮೂರು ಜನ ಹಾಗೂ ಜನರಲ್ ವಾರ್ಡಿನಲ್ಲಿ 10 ರಿಂದ 15 ಜನ ಇದ್ದರು ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡದಲ್ಲಿ ರೋಗಿಗಳಿಗೆ ತಪಾಸಣೆ ಮಾಡುವ ಹಾಗೂ ಚಿಕಿತ್ಸೆ ನೀಡುತ್ತಿದ್ದ…

Read More

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಯುವಕ ಸಾವು

ಶಿಕಾರಿಪುರ : ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಯುವಕನೋರ್ವನಿಗೆ ಹೋರಿ ತಿವಿದು ಮೃತಪಟ್ಟಿರುವ  ಶಿಕಾರಿಪುರ ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹೆಚ್.ಕಡದಕಟ್ಟೆ ನಿವಾಸಿ ರಾಕೇಶ್ (25) ಎಂದು ಗುರುತಿಸಲಾಗಿದೆ. ಜಿಲ್ಲೆಯ ಹಲವೆಡೆಗಳಲ್ಲಿ ದೀಪಾವಳಿ ಹಬ್ಬದ ನಂತರ ಹೋರಿ ಬೆದರಿಸುವ ಸ್ಪರ್ಧೆ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಆದರೆ ಕೋವಿಡ್-19 ಭೀತಿ ಹಾಗೂ ಕಳೆದ ಎರಡು ವರ್ಷದ ಹಿಂದೆ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಜಿಲ್ಲೆಯಲ್ಲಿ ಮೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಈಗಾಗಿಯೇ ಜಿಲ್ಲಾಡಳಿತ…

Read More

ಶಿವಮೊಗ್ಗಕ್ಕೆ ಆಗಮಿಸಿದ್ದ ನಟ ರಮೇಶ್ ಅರವಿಂದ್ : ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್

ಶಿವಮೊಗ್ಗ : ನಟ, ನಿರ್ದೇಶಕ ರಮೇಶ್ ಅರವಿಂದ್ ಇಂದು ಶಿವಮೊಗ್ಗದ ಶೋ ರೂಂ ಉದ್ಘಾಟನೆಗಾಗಿ ಆಗಮಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಅವರ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಫ್ಯಾನ್ಸ್ ಗಳು ಮುಗಿಬಿದ್ದರು.  ಶೋ ರೂಂ ಉದ್ಘಾಟನೆ ನಂತರ ಮಾಧ್ಯಮದ ಜೊತೆ ಮಾತನಾಡಿ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡು ಅತೀ ದೊಡ್ಡ ನಷ್ಟ ಅನುಭವಿಸುತ್ತಿದ್ದೇವೆ. ನಮ್ಮೆಲ್ಲರೊಂದಿಗೆ ಅವರ ನೆನಪುಗಳಿವೆ. ನ. 16 ರಂದು ಅಪ್ಪು ವಿಗೆ ವಾಣಿಜ್ಯ ಮಂಡಳಿಯಿಂದ ನಮನ ಸಲ್ಲಿಸುವ ಕಾರ್ಯಕ್ರಮ ಇದೆ ಎಂದರು.  ಇನ್ನು ಬಿಡುಗಡೆಗೆ ಸಿದ್ದವಾಗಿರುವ…

Read More