ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಾಜ್ಯಕ್ಕೆ ಮಾದರಿ : ಆರಗ ಜ್ಞಾನೇಂದ್ರ|araga
ರಿಪ್ಪನ್ಪೇಟೆ : ಸಮಾಜದ ಶ್ರೇಯೋಭಿವೃದ್ದಿಗೆ ಶ್ರಮಿಸುವ ಮೂಲಕ ಹೊಸನಗರ ತಾಲೂಕ್ ಒಕ್ಕಲಿಗ ಸಂಘ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ವಿಶ್ವಮಾನವ ಸಭಾ ಭವನದಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ಆಯೋಜಿಸಿದ್ದ ಸಂಸ್ಥಾಪಕ ಆಡಳಿತ ಮಂಡಳಿ ಮತ್ತು ಮಾಜಿ ನಿರ್ದೇಶಕರಿಗೆ ಬೀಳ್ಕೋಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಒಕ್ಕಲಿಗ ಸಮುದಾಯದ ಶಕ್ತಿಯನ್ನು ಬಲಪಡಿಸಲು ಆ ಕಾಲದಲ್ಲಿಯೇ ಹೊಸನಗರ ತಾಲೂಕಿನ ಒಕ್ಕಲಿಗ ಸಂಘ ಅಸ್ತಿತ್ವಕ್ಕೆ ಬಂದು ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು…