ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು

ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು ಮನೆಯಲ್ಲಿ ಸಾಕಿದ ಬೆಕ್ಕೊಂದು ಮನೆಯ ಮಹಿಳೆಯನ್ನು ಬಲಿ ಪಡೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ. ಗಂಗೀಬಾಯಿ (50) ಮನೆಯ ಸಾಕು ಬೆಕ್ಕು ಕಚ್ಚಿ ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ತರಲಘಟ್ಟದ ಗಂಗೀಬಾಯಿ ಎನ್ನುವವರಿಗೆ ಎರಡು ತಿಂಗಳ ಹಿಂದೆ ಮನೆಯಲ್ಲೇ ಮುದ್ದಾಗಿ ಸಾಕಿದ್ದ ಬೆಕ್ಕು ಕಚ್ಚಿತ್ತು ಎನ್ನಲಾಗಿದೆ. ಈ ಬೆಕ್ಕು ಮೊದಲು ತರಲಘಟ್ಟದ ಕ್ಯಾಂಪ್​ನಲ್ಲಿರುವ ಯುವಕನ ಮೇಲೆ ದಾಳಿ…

Read More

ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ರಿಪ್ಪನ್‌ಪೇಟೆ;-ಇಲ್ಲಿನ ಚೌಡೇಶ್ವರಿ ದೇವಸ್ಥಾನ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ  ಶಾಸಕರ ವಿಶೇಷ ಅನುದಾನದಡಿಯಲ್ಲಿ   32 ಲಕ್ಷ ರೂ ಬಿಡುಗಡೆ ಮಾಡುವುದರೊಂದಿಗೆ ಸಿಸಿ ರಸ್ತೆ ಕಾಮಗಾರಿಗೆ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಗುದ್ದಲಿ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿದರು. ನಂತರ ಚೌಡೇಶ್ವರಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡದೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಕ್ಷೇತ್ರದ ಹೊಸನಗರ…

Read More

Humcha | ಹಳೆ ನವೋದಯ ವಿದ್ಯಾರ್ಥಿಗಳಿಂದ ಉಚಿತ ತರಬೇತಿ – ಅರ್ಹತಾ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿಗಳು ಆಯ್ಕೆ

ಹಳೆ ನವೋದಯ ವಿದ್ಯಾರ್ಥಿಗಳಿಂದ ಉಚಿತ ತರಬೇತಿ – ಅರ್ಹತಾ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿಗಳು ಆಯ್ಕೆ ರಿಪ್ಪನ್‌ಪೇಟೆ : ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದೆ ಇದೆ. ಮಕ್ಕಳ ಸರ್ವಾoಗೀಣ ಬೆಳವಣಿಗೆಗೆ ಪೂರಕವಾದಂತಹ ವಾತಾವರಣ ಕಲ್ಪಿಸಿಕೊಡುವ ಶಾಲೆಗಳಲ್ಲಿ ನವೋದಯ ಶಾಲೆ ಕೂಡ ಒಂದು. ಈ ಶಾಲೆಯಲ್ಲಿ ಓದುವ ಆಸೆ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಇದ್ದೆ ಇರುತ್ತದೆ. ನವೋದಯ ಪರೀಕ್ಷೆಯಲ್ಲಿ ತೇರ್ಗಡೆ ಆಗಲು ಮಕ್ಕಳಿಗೆ ಉತ್ತಮ ತರಬೇತಿ ಮತ್ತು ಪರಿಶ್ರಮ ಮುಖ್ಯ. ಈ ನಿಟ್ಟಿನಲ್ಲಿ ಸತತವಾಗಿ ಕಳೆದ ಮೂರು…

Read More

ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್

ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್ ಸಾಗರ: ನಗರಸಭೆ ಆಯುಕ್ತ ನಾಗಪ್ಪನವರು ಬೀದಿ ಬದಿ ವ್ಯಾಪಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಸಾಗರದ ರಾಣಿ ಚೆನ್ನಮ್ಮ ವೃತ್ತದ ಬಳಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ಸ್ಥಳ ಖಾಲಿ ಮಾಡಿಸುವ ವೇಳೆ ನಾಗಪ್ಪನವರು ಸ್ಥಳಕ್ಕೆ ಬಂದು ವ್ಯಾಪಾರಿಗಳಿಗೆ ಜಾಗ ತೆರವುಗೊಳಿಸಲು ಸೂಚಿಸಿದ್ದಾರೆ. ಈ…

Read More

ಪುನೀತ್ ರಾಜ್‍ಕುಮಾರ್ ನಿಧನ ಹಿನ್ನಲೆ ಭದ್ರಾವತಿ ಸ್ವಯಂ ಪ್ರೇರಿತ ಬಂದ್ :

ಭದ್ರಾವತಿ : ನಟ ಪುನೀತ್ ರಾಜ್ ಕುಮಾರ್ ನಿಧನ ಹಿನ್ನಲೆಯಲ್ಲಿ ಭದ್ರಾವತಿಯ ಪಟ್ಟಣದ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಮಾಡುವುದರ ಮೂಲಕ ವರ್ತಕರು ಗೌರವ ಸಲ್ಲಿಸಿದ್ದಾರೆ.  ಇನ್ನು ಚಾಮೇಗೌಡ ಲೈನ್ ನ  ರಾಜ್ ಕುಮಾರ್ ಅಭಿಮಾನಿ ಬಳಗದಿಂದ ಬಂದ್ ಮಾಡುವಂತೆ ಆಟೋಗಳಲ್ಲಿ ಪ್ರಚಾರ ಮಾಡಲಾಗುತ್ತಿದ್ದು ಬಂದ್ ಮಾಡುವಂತೆ ಮನವಿ ಮಾಡುತ್ತಿದ್ದಾರೆ.  ಹುಚ್ಚು ಅಭಿಮಾನಿಗಳು ಟೈರ್ ಗೆ ಬೆಂಕಿ ಹಚ್ಚಿ ಪ್ರಕ್ಷುಬ್ಧ ವಾತವರಣ ನಿರ್ಮಿಸುತ್ತಿದ್ದು ಪೊಲೀಸರು ಹುಚ್ಚು ಅಭಿಮಾನಿಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಯಾವುದೇ ರೀತಿಯಲ್ಲಿ ತೊಂದರೆ ಹಾಗೂ…

Read More

ಮಲ್ಲಿಕಾರ್ಜುನ ಖರ್ಗೆಯವರನ್ನು ಕೀಳು ಮಟ್ಟದಿಂದ ನೋಡುವ ರಾಜಕಾರಣಿ ನಾನಲ್ಲ – ಆರಗ ಜ್ಞಾನೇಂದ್ರ |araga

ಮಲ್ಲಿಕಾರ್ಜುನ ಖರ್ಗೆಯವರನ್ನು ಕೀಳು ಮಟ್ಟದಿಂದ ನೋಡುವ ರಾಜಕಾರಣಿ ನಾನಲ್ಲ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಅರಣ್ಯ ಸಚಿವರ ಹೇಳಿಕೆ ವಿರುದ್ಧ ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಆಡಿದಂತಹ ಕೆಲವು ಮಾತುಗಳನ್ನು ಆಡದೇ ಇರುವ ಮಾತುಗಳನ್ನು ಸೇರಿಸಿ ರಾಜಕಾರಣಕ್ಕೆ ಬಳಸಿ ರಾಜ್ಯಾದ್ಯಂತ ಸುದ್ದಿಯಾಗಿದೆ. ಅದರ ಬಗ್ಗೆ ಯಾರಿಗಾದರೂ ಮನಸ್ಸಿಗೆ ಕಸಿವಿಸಿ ಆಗಿದ್ದರೆ ವಿಶೇಷವಾಗಿ ಮಲ್ಲಿಕಾರ್ಜುನ ಖರ್ಗೆಯವರಿಗೆ ಕ್ಷಮೆಯಾಚನೆ ಮಾಡುತ್ತೇನೆ ಎಂದು ಶಾಸಕ, ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ವಿಷಾದ ವ್ಯಕ್ತಪಡಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನೆಡೆಸಿ…

Read More

ಕಡಸೂರು ಗ್ರಾಮದ ಅರಣ್ಯ ಒತ್ತುವರಿ ತೆರವು

ಹೊಸನಗರ: 2021-22ರ ಅರಣ್ಯ ಪ್ರದೇಶ ಒತ್ತುವರಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗುರುವಾರ ಇಲಾಖೆಯ ಮೇಲಾಧಿಕಾರಿಗಳ ಸೂಚನೆ ಮೇರೆಗೆ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಒತ್ತುವರಿ ತೆರವುಗೊಳಿಸಲಾಯಿತು. ತಾಲೂಕಿನ ಹುಂಚ ಹೋಬಳಿ ಕಡಸೂರು ಗ್ರಾಮದ ಸ.ನಂ.72ರ ಪರಿಭಾವಿತ ಅರಣ್ಯ ಪ್ರದೇಶದಕ್ಕೆ ತೆರಳಿ, ಸ್ಥಳದಲ್ಲಿ ಇಂಗು ಗುಂಡಿ ನಿರ್ಮಿಸಿ, ಕಾಡುಜಾತಿಯ ಗಿಡಗಳನ್ನು ನೆಟ್ಟು, ಸುಮಾರು ಒಂದು ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದಿದ್ದಾರೆ. ಈ ತೆರವು ಕಾರ್ಯವು ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ…

Read More

ಮಾನವೀಯತೆ ಮೆರೆದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು :

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಉಪಚರಿಸಿ ಆಸ್ಪತ್ರೆಗೆ ತನ್ನದೇ ಕಾರಿನಲ್ಲಿ  ಕಳುಹಿಸಿಕೊಡುವ ಮೂಲಕ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಮಾನವೀಯತೆ ಮೆರೆದ ಘಟನೆ ಇಂದು ನಡೆದಿದೆ. ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದರೂ ಮೊಬೈಲ್​ನಲ್ಲಿ ಪೋಟೋ ತೆಗೆಯುವಲ್ಲಿ ತಲ್ಲೀನರಾಗಿರುವವರೇ ಹೆಚ್ಚಾಗಿ ಇರುತ್ತಾರೆ. ಈ ಮಧ್ಯೆ ಅಪಘಾತದಲ್ಲಿ ಗಾಯಗೊಂಡವರನ್ನು ತನ್ನದೇ ಕಾರಿನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಿ ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ. ಸಾಗರದಿಂದ ಹೊಸನಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹುಲಿದೇವರ ಬನ ಗ್ರಾಮದ…

Read More

ಹೆದ್ದಾರಿಪುರದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರ ಅಸ್ತವ್ಯಸ್ತ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಇಲ್ಲಿನ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಮರ ಬಿದ್ದ ಕಾರಣ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ರಿಪ್ಪನ್ ಪೇಟೆಯಿಂದ  ತೀರ್ಥಹಳ್ಳಿಗೆ ಹೋಗುವ ರಸ್ತೆ ಮಧ್ಯ ಹೆದ್ದಾರಿಪುರ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರದಿಂದ ರಿಪ್ಪನ್ ಪೇಟೆ – ತೀರ್ಥಹಳ್ಳಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.ಖಾಸಗಿ ಬಸ್ ಹಾಗೂ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದವು. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯಧಿಕಾರಿ ತಾವರ್ಯ ನಾಯ್ಕ್ ಹಾಗೂ ಅಕ್ಷಯ್ ಕುಮಾರ್…

Read More

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು ಮಲೆನಾಡಿನ ಶರಾವತಿ ಸಂತ್ರಸ್ತರು ದಶಕಗಳಿಂದ ಕಾಯುತ್ತಿದ್ದ ಮಹತ್ವದ ಕನಸು ನನಸಾಗಿದೆ. ಸಿಗಂಧೂರು ಸೇತುವೆ ಇಂದು ಲೋಕಾರ್ಪಣೆಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂಧೂರು ಹೊಳೆಬಾಗಿಲು ಬಳಿ ನಿರ್ಮಿಸಲಾಗಿರುವ ಈ ಸೇತುವೆಯನ್ನು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಸೇತುವೆ ಲೋಕಾರ್ಪಣೆಗೂ ಮುನ್ನ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ವಿವಿಧ ಮುಖಂಡರು…

Read More
Exit mobile version