Headlines

ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ. ನಾಲ್ಕು ಜೀಪು, ಮನೆ ತುಂಬ ಪೊಲೀಸರು ಕೊಟ್ಟಿದ್ದರು. ಅಲಂಕಾರಕ್ಕಾಗಿ ಇದೆಲ್ಲ ಬೇಡ ಎಂದು ನಾನು ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ಅವರು ಹೇಳಿದರು.  ನಗರದ ಸರ್ಕಾರಿ ಭವನದಲ್ಲಿ ಇಂದು ರಾಜ್ಯ ಸೌಹರ್ದ ಸಂಯುಕ್ತ ಸಹಕಾರಿ ನಿಯಮಿತ ಹಾಗೂ ಸಹ್ಯಾದ್ರಿ ಸೌಹರ್ದ ಸಹಕಾರಿ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಗೃಹ ಸಚಿವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸನ್ಮಾನ ಸ್ವೀಕರಿಸಿ ಗೃಹ ಸಚಿವರು ಮಾತನಾಡಿದರು. ಬಹಳ ಜನ ನನಗೆ…

Read More

ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು|amrutha

ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ;-ಕ್ರೀಡಾ ಕೂಟಗಳಿಗೆ ಸರ್ಕಾರ ನೀಡುವ ಅನುದಾನ ಬಹಳ ಕಡಿಮೆಯಿದ್ದು ಇದರಿಂದ ಒಂದು ಶಾಮಿಯಾನ ಹಾಕುವುದು ಕಷ್ಟವಾಗಿದೆ ಇನ್ನೂ ಬಹುಮಾನ ಮತ್ತು ಕ್ರೀಡಾ ಸಾಮಗ್ರಿಗಳ ಖರೀಧಿ ಸೇರಿದಂತೆ ಊಟೋಪಚಾರಕ್ಕೆ ಗ್ರಾಮದಲ್ಲಿ ಕೊಡುಗೈ ದಾನಿಗಳನ್ನು ಅವಲಂಭಿಸಬೇಕಾದ ಅನಿರ್ವಾತೆ ಇದೆ ಎಂದು ಎಂ.ಎಲ್.ಸಿ ಎಸ್.ಎಲ್.ಭೋಜೇ ಗೌಡರು ವಿಷಾದ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಹೊಸನಗರ ತಾಲ್ಲೂಕ್ ಪದವಿ ಪೂರ್ವ ಕಾಲೇಜ್‌ಗಳ…

Read More

ವಿಸಿ ನಾಲೆಗೆ ಉರುಳಿದ ಕಾರು – ಐವರು ಜಲಸಮಾಧಿ|accident

ವಿಸಿ ನಾಲೆಗೆ ಉರುಳಿದ ಕಾರು – ಐವರು ಜಲಸಮಾಧಿ ಮಂಡ್ಯ ತಾಲ್ಲೂಕಿನ ಪಾಂಡವಪುರದಲ್ಲಿರುವ ವಿಸಿ ನಾಲೆಗೆ ಬಿದ್ದ ಕಾರೊಂದರಲ್ಲಿ ಶಿವಮೊಗ್ಗದ ಐವರು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಮೃತಪಟ್ಟವರನ್ನು ಭದ್ರಾವತಿ ಮೂಲದ ಚಂದ್ರಪ್ಪ(61), ಕೃಷ್ಣಪ್ಪ (60), ಧನಂಜಯ್ಯ (55), ಬಾಬು ಮತ್ತು ಜಯಣ್ಣ ಎಂದು ಗುರುತಿಸಲಾಗಿದೆ. ಮೈಸೂರಿನಿಂದ ಭದ್ರಾವತಿಗೆ ವಾಪಸ್ ಹೋಗುವಾಗ ಘಟನೆ ನಡೆದಿದೆ‌. ಮೃತರು ಗುಂಗರಹಳ್ಳಿ, ನೊಣವಿನಕೆರೆ, ತಿಪಟೂರು ಮೂಲದರಾಗಿದ್ದು, ಭದ್ರಾವತಿಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಚಂದ್ರಪ್ಪಗೆ ಸೇರಿದ (ಕೆಎ -14, ಎ 2457)…

Read More

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದ ಮೊಹೀಯುದ್ದೀನ್ ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಸೀದಿ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಸಖಾಫಿ ಉಬೇದುಲ್ಲಾ , ಹಾಗೂ ಅಬ್ದುಲ್ಲಾ , ಮಹಮ್ಮದ್ ರಫಿ, ರೆಹಮಾನ್, ಜಯರಾಮ್ ಶೆಟ್ಟಿ, ಭಾಸ್ಕರ್ ಗುಂಡಿ, ಕೈ ಮೊಮ್ಮದ್ , ಅಸ್ಲಾಂ ಹಾಗೂ ಇನ್ನಿತರರು ಹಾಜರಿದ್ದರು

Read More

ಚಂದ್ರಯಾನ -3 ಇಸ್ರೋ ತಂಡದಲ್ಲಿ ಕೋಣಂದೂರಿನ ಮಹಿಳೆ – ಮಾಜಿ ಶಾಸಕರ ಪುತ್ರಿಗೆ ಅಭಿನಂದನೆಗಳ ಮಹಾಪೂರ

ಚಂದ್ರಯಾನ -3 ಲ್ಯಾಂಡರ್ ಬುಧವಾರ ಸಂಜೆ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದ್ದು, ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಇಸ್ರೋ ವಿಜ್ಞಾನಿಗಳಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಮಹಿಳೆಯೊಬ್ಬರು ಇದ್ದಾರೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಹೌದು, ಶಿವಮೊಗ್ಗ ಮೂಲದ ಶಿವಾನಿ (ISRO deputy director) ಎಂಬ ಮಹಿಳೆ ಇಸ್ರೋದಲ್ಲಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಪಟ್ಟಣದ ಮಾಜಿ…

Read More

ತೀರ್ಥಹಳ್ಳಿಯಲ್ಲಿ ಗುಂಡಿನ ಸದ್ದು : ನೊಣಬೂರು ಗ್ರಾಪಂ ಮಾಜಿ ಉಪಾಧ್ಯಕ್ಷ ಸಾವು

ಬೇಟೆಯಾಡಲು ಹೋದವರಿಂದ ಹಾರಿದ ಗುಂಡೊಂದು ಮಾಜಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷನನ್ನ ಬಲಿಪಡೆದಿದೆ.ಈ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ‌ ನೊಣಬೂರು ಮತ್ತು ಅರಳಸುರಳಿ ಗ್ರಾಮ ಪಂಚಾಯಿತಿ ನಡುವಿನ ಅರಣ್ಯ ಪ್ರದೇಶದಲ್ಲಿ ಬೇಟೆಯಾಡಲು ಬಂದಿದ್ದವರಿಂದ ಹಾರಿದ ಗುಂಡೊಂದು ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ನಿಗೆ ತಗುಲಿದೆ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾಂತರಾಜು(38) ಎಂಬುವರು ಗುಂಡಿಗೆ ಬಲಿಯಾಗಿದ್ದಾರೆ. 12 ಜನರ ಗುಂಪೊಂದು ಬೆಟೆಯಾಡಲು ಹೋಗಿ ಮಿಸ್ ಫೈರ್ ಆಗಿ ಕಾಂತರಾಜು ಸಾವಿಗೆ ಕಾರಣ ಎನ್ನಲಾಗುತ್ತಿದೆ. ಗುಂಡು ಹಾರಿಸಿದ 12 ಜನರು ಯಾರು…

Read More

ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಟಿಪ್ಪ‌ರ್ ಲಾರಿ – ಸ್ಥಳದಲ್ಲೇ ತ್ಯಾಗರ್ತಿ ಮೂಲದ ಕಾರ್ಮಿಕ ಸಾವು | accident

ಸಾಗರ ತಾಲೂಕಿನ ತ್ಯಾಗರ್ತಿ ಸಮೀಪದ ಕೊರ್ಲಿಕೊಪ್ಪ ಮೂಲದ ಬಾಳೆಕಾಯಿ ಲೋಡ್ ಮಾಡುವ ವ್ಯಕ್ತಿಯೊಬ್ಬನ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಶಿವರಾಜ್(38) ಸಾಗರ ತಾಲೂಕಿನ ಕೊರ್ಲಿ ಕೊಪ್ಪದ ನಿವಾಸಿಯಾಗಿದ್ದು. ಶಿವರಾಜ್ ಹಾಗೂ ಮಹೇಂದ್ರ ಎಂಬವರು ಪೆಟ್ರೋಲ್ ಪಂಪ್ ಹತ್ತಿರ ತಮ್ಮ ವಾಹನ ಇಟ್ಟು ಮಲಗಿದ್ದರು. ಈ ಸಂದರ್ಭದಲ್ಲಿಯೇ ಟಿಪ್ಪರ್ ಹರಿದಿದೆ. ಇದರಿಂದ ಶಿವರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಮಹೇಂದ್ರ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,…

Read More

ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ| Life imprisonment

 ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ – ಹಳೆಯ ದ್ವೇಷದ‌ ಹಿನ್ನಲೆಯಲ್ಲಿ ಬಾರ್ ಎಂಡ್ ರೆಸ್ಟೋರೆಂಟ್ ನ ಎದುರು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ 10 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಇಲ್ಲಿನ ರಾಜೀವ್ ಗಾಂಧಿ ಬಡಾವಣೆಯ ವಾಸಿ ಪರಶುರಾಮ ಎಂಬಾತನು ಚಂದ್ರಶೇಖರ್, ಎಂಬುವನ ಮೇಲೆ ಹಳೆಯ ದ್ವೇಶದ ಹಿನ್ನೆಲೆಯಲ್ಲಿ, ದಿನಾಂಕಃ 02-03-2022 ರಂದು ಮಧ್ಯ ರಾತ್ರಿ ಶಿವಮೊಗ್ಗ ಟೌನ್ ಪಿಂಗಾರ…

Read More

ಪರಂಪರೆಯ ಜಾಡನ್ನು ವಿಶಿಷ್ಟವಾಗಿ ಶೋಧಿಸುವ ಕೃತಿ ‘ಬೇರು ಬಿಳಲು’ – ಡಾ. ಎ. ಬಿ. ರಾಮಚಂದ್ರಪ್ಪ.

ರಿಪ್ಪನ್ ಪೇಟೆ :ಪುರಾಣ ಇತಿಹಾಸ ಜಾನಪದದ ಬೇರುಗಳು ಕಾಲ ದೇಶಗಳ ಗತಿಯಲ್ಲಿ ಪಡೆದುಕೊಂಡ ರೂಪಾಂತರಗಳನ್ನು ಮತ್ತು ವರ್ತಮಾನದಲ್ಲಿ ಅವುಗಳ ಬಿಳಲುಗಳು ವಿಸ್ತಾರಗೊಂಡ  ವಿಶಿಷ್ಟತೆಯನ್ನು, ಸೂಕ್ಷ್ಮ ಸಂವಾದಕ್ಕೆ ಒಳಪಡಿಸಿರುವ ಕೃತಿ ‘ಬೇರು ಬಿಳಲು’ ಎಂದು ಚಿಂತಕರಾದ ಡಾ. ಎ. ಬಿ. ರಾಮಚಂದ್ರಪ್ಪ ಹರಿಹರ ಅವರು ಹೇಳಿದರು. ಸಾರ ಕೇಂದ್ರ ದೊಂಬೆಕೊಪ್ಪ, ವಂಶಿಪ್ರಕಾಶನ ಬೆಂಗಳೂರು, ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ಜಾನಪದ ಪರಿಷತ್,ಹೊಸನಗರ.ಸಹಮತ ವೇದಿಕೆ,ತುಮರಿ. ಕಲಾ ಸಿಂಚನ, ಸಾಗರ. ರೇಣುಕಪ್ಪಗೌಡ ಪ್ರತಿಷ್ಠಾನ ಮಸರೂರು ಇವರುಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಲಾಗಿದ್ದ; ಡಾ….

Read More

ವಿಧಾನಸಭಾ ಚುನಾವಣೆಗೆ ಈ ಬಾರಿ ನನ್ನ ಸ್ಪರ್ಧೆ ಇಲ್ಲ – ಕಾಗೋಡು ತಿಮ್ಮಪ್ಪ|congress

ಈ ಬಾರಿ ನನ್ನ ಸ್ಪರ್ಧೆ ಇಲ್ಲ – ಕಾಗೋಡು ತಿಮ್ಮಪ್ಪ ರಿಪ್ಪನ್‌ಪೇಟೆ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲಾ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ಪಷ್ಟನೆ ನೀಡಿದರು. ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಈ ಬಾರಿ ನಾನು ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಕಳೆದ ಕೆಲವು ದಿನಗಳಿಂದ ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಪುನಃ ಕಾಗೋಡು ತಿಮ್ಮಪ್ಪ ಸ್ಪರ್ಧೆ ಮಾಡುತ್ತಾರೆ…

Read More