ರಿಪ್ಪನ್ ಪೇಟೆಯಲ್ಲಿ ವರಮಹಾಲಕ್ಷ್ಮಿ ಹಬ್ಬ ಸಂಭ್ರಮದಿಂದ ಆಚರಣೆ :

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ ಸುತ್ತಮುತ್ತ ಗ್ರಾಮಗಳಲ್ಲಿ ಇಂದು  ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಭಾರಿ ಮಳೆ ಸುರಿಯುತ್ತಿದ್ದರು ಮಹಿಳೆಯರು ಬೆಳಿಗ್ಗೆಯಿಂದಲೇ  ದೇವಾಲಯಗಳಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು.  ಪಟ್ಟಣದ ಶ್ರೀ ಸಿದ್ಧಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ಆದೇಶದ ಅನ್ವಯ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬೆಳಿಗ್ಗೆ 10 ಗಂಟೆಯಿಂದ 11:30ರ ತನಕ ಮುತ್ತೈದೆಯರಿಗೆ ಅರಿಶಿನ–ಕುಂಕುಮ ನೀಡಲಾಯಿತು. ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಶಿವಮೊಗ್ಗ ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ವೇದಿಕೆಯಲ್ಲಿ ಕಾಣಿಸಿಕೊಂಡ ಸಿಎಂ ಸಿದ್ದರಾಮಯ್ಯ ಫೋಟೋ!!|BJP

ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪನವರ ನೂತನ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮಾಜಿ ಸಿಎಂಗಳಾದ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಫೋಟೊದ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಫೋಟೊ ರಾರಾಜಿಸಿದೆ. ಬಿಜೆಪಿಯ ಬಲಪಂಥಿಯ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವ ಸಿದ್ದರಾಮಯ್ಯನವರು ಬಿಜೆಪಿಯ ಶಾಸಕರ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ರಾರಾಜಿಸಿದ್ದು ವಿಶೇಷ ಜೊತೆಗೆ ಕುತೂಹಲಕ್ಕೂ ಕಾರಣವಾಗಿದೆ. ಶಾಸಕರಾಗುವ ಮುನ್ನ ಸಿದ್ದರಾಮಯ್ಯನವರ ವಿರುದ್ಧ ಹಲವು ಬಾರಿ ಹರಿಹಾಯ್ದಿದ್ದ ಚನ್ನಬಸಪ್ಪನವರು,…

Read More

ಮಧ್ಯರಾತ್ರಿ ಹೈಡ್ರಾಮಾ: ಅದು ‘ಸ್ಯಾಂಡ್ ಮಾಫಿಯಾ’ ದ್ವೇಷವೋ? ಅಥವಾ ‘ಜಾತಿ ನಿಂದನೆ’ಯ ಸಂಘರ್ಷವೋ? ಆನಂದಪುರದಲ್ಲಿ ನಡೆದಿದ್ದೇನು?

Questions arise over police procedure in the Anandapur case as counter-complaints, SC/ST Act allegations, and delayed FIR registration trigger demands for a fair investigation. ಮಧ್ಯರಾತ್ರಿ ಹೈಡ್ರಾಮಾ: ಅದು ‘ಸ್ಯಾಂಡ್ ಮಾಫಿಯಾ’ ದ್ವೇಷವೋ? ಅಥವಾ ‘ಜಾತಿ ನಿಂದನೆ’ಯ ಸಂಘರ್ಷವೋ? ಆನಂದಪುರದಲ್ಲಿ ನಡೆದಿದ್ದೇನು? ಮರಳು ಮಾಫ಼ಿಯಾ ದಾಂಧಲೆ ಪ್ರಕರಣಕ್ಕೆ ಟ್ವಿಸ್ಟ್ : ದಲಿತ ಸಂಘರ್ಷ ಸಮಿತಿಯಿಂದ ಪೊಲೀಸರ ವಿರುದ್ಧ ಗಂಭೀರ ಆರೋಪ ಸಾಗರ ತಾಲ್ಲೂಕಿನಲ್ಲಿ ಅಕ್ರಮ ಮರಳು ಸಾಗಣೆ ದೂರು…

Read More

ಸ್ಕೂಟಿ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು|accident

ಕಾರು ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತರಿಕೆರೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಸಂದೀಪಿನಿ ಶಾಲೆಯ ಬಳಿ ನಡೆದಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮೃತರನ್ನು ತರೀಕೆರೆ ಪಟ್ಟಣದ ಬಿಲಾಲ್ (26) ಮತ್ತು ಅಜೀಮ್ (24) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇಬ್ಬರು ಯುವಕರು ಬುಧವಾರ ಬೆಳಗ್ಗೆ ಪಟ್ಟಣದಿಂದ ಸಂದೀಪಿನಿ ಶಾಲೆಯತ್ತ ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ…

Read More

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಎರಡು ವರ್ಷ-PRK

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಎರಡು ವರ್ಷ ಮೊನ್ನೆ ಮೊನ್ನೆ ನಡೆದಿದೆಯೇನೋ.. ಎಂಬ ಭಾವನೆ ಇಂದಿಗೂ ಜನರ ಮನಸ್ಸಿನಲ್ಲಿದೆ. ಅಪ್ಪು ಅಗಲಿಕೆಗೆ ಆಗಲೇ ಎರಡು ವರ್ಷ. ಆ ದಿನ ಇಡೀ ಕರುನಾಡು ಕಣ್ಣೀರಿಟ್ಟಿತ್ತು. ಕರ್ನಾಟಕ ರತ್ನ ಡಾ| ಪುನೀತ್ ರಾಜ್‍ಕುಮಾರ್ ರವರ ದ್ವಿತೀಯ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದ…

Read More

ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಲಿ ಯೋಗೇಂದ್ರ ವಿರುದ್ದ ಅವಿಶ್ವಾಸ ನಿರ್ಣಯ, ಅಧ್ಯಕ್ಷ ಸ್ಥಾನಕ್ಕೆ ಹಕ್ಕು ಚ್ಯುತಿ|Haratalu

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮ ಪಂಚಾಯಿತಿ ಹಾಲಿ‌ ಅಧ್ಯಕ್ಷರಾಗಿದ್ದ ಕಲ್ಲಿ ಯೋಗೇಂದ್ರ ಇವರನ್ನು ಗ್ರಾಮ ಪಂಚಾಯತಿ ಸದಸ್ಯರ ಅವಿಶ್ವಾಸ ನಿರ್ಣಯದಿಂದ ಅಧ್ಯಕ್ಷ ಸ್ಥಾನಕ್ಕೆ ಹಕ್ಕುಚ್ಯುತಿ ನಿರ್ಣಯ ಮಾಡಲಾಗಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕಲ್ಲಿ ಯೋಗೇಂದ್ರ ಇತ್ತಿಚೆಗೆ ಬಿಜೆಪಿ ಸೇರ್ಪಡೆಯಾಗಿದ್ದರೆಂಬ ಕಾರಣವೇ ಅಧ್ಯಕ್ಷ ಸ್ಥಾನದ ಅವಿಶ್ವಾಸ ನಿರ್ಣಯಕ್ಕೆ ಕಾರಣ ಎಂದು ಹೇಳಲಾಗಿದೆ. ಅವಿಶ್ವಾಸ ನಿರ್ಣಯ ಪರವಾಗಿ ಸದಸ್ಯರಾದ ಸಾಕಮ್ಮ ಮನೋಹರ,ಕಣಕಿ ನಾರಾಯಣಪ್ಪ,  ನಾರಿ ರವಿ,ನಾಗರತ್ನ ವಾಸುದೇವ,ಸತ್ಯವತಿ ಚಂದ್ರಪ್ಪ,, ಶಿವಮೂರ್ತಿ ಮತ ಚಲಾಯಿಸಿದರು. 8 ಜನ ಸದಸ್ಯರಲ್ಲಿ…

Read More

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ರೈಲ್ವೆ ಗೇಟ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.  ರಿಪ್ಪನ ಪೇಟೆ ಯಿಂದ ಆನಂದಪುರ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಆನಂದಪುರದಿಂದ ತೀರ್ಥಹಳ್ಳಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಗೆ ಸಣ್ಣಪುಟ್ಟ…

Read More

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ | ಕೇರಳದ ವಯನಾಡಿನಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಭೂಕುಸಿತ ಉಂಟಾಗಿದೆ. ಹಳ್ಳಿಗಳಿಗೆ ಹಳ್ಳಿಗಳೇ ನಾಮಾವಶೇಷವಾಗಿವೆ! ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಣ್ಣಿನಡಿಯಲ್ಲಿ ಇನ್ನೂ ಅದೆಷ್ಟು ಮಂದಿ ಹುದುಗಿದ್ದಾರೋ, ಗೊತ್ತಿಲ್ಲ. ಎಡೆಬಿಡದೇ ಧಾರಕಾರವಾಗಿ ಸುರಿಯುತ್ತಿರುವ ಮಳೆಯಲ್ಲೇ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಮಗ್ನವಾಗಿವೆ.ಹಲವಾರು ಉದ್ಯಮಿಗಳು ಈಗಾಗಲೇ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ರಾಮಕೃಷ್ಣ…

Read More

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ ಶಿವಮೊಗ್ಗ/ ಸಿದ್ದಾಪುರ: ಮೂರು ದಿನಗಳ ಹಿಂದೆ ಶಿವಮೊಗ್ಗ ಕುಂದಾಪುರ ರೋಡ್​ನಲ್ಲಿಯೇ ಬಾಳೆಬರೆ ಘಾಟಿ ಇಳಿದು ಹೊಸಂಗಡಿ ಸಿದ್ದಾಪುರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ ಮೂಡಿಸಿದ್ದ ಒಂಟಿ ಸಲಗ ಕೊನೆಗೂ ಅರಣ್ಯ ಇಲಾಖೆಯ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕಿದೆ. ಈ ಆನೆಯನ್ನು ಹಿಡಿಯಲು 150ಕ್ಕೂ ಹೆಚ್ಚು ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರು. ಚಿಕ್ಕಮಗಳೂರು ಎಲಿಫೆಂಟ್ ಟಾಸ್ಕ್ ಫೋರ್ಸ್ (ETF) ತಂಡದ…

Read More

ಸಂಸದ ಬಿ ವೈ ರಾಘವೇಂದ್ರ ರವರ ವಾಟ್ಸಾಪ್ ಚಾನೆಲ್ ಲೋಕಾರ್ಪಣೆ|byr

ಶಿವಮೊಗ್ಗ : ಸಂಸದ ಬಿ.ವೈ ರಾಘವೇಂದ್ರ ಅವರ ಅಧಿಕೃತ ವಾಟ್ಸಪ್ ಚಾನೆಲ್ ನ್ನ  ಲೋಕಾರ್ಪಣೆ ಮಾಡಲಾಯಿತು. ನಗರದ ರಾಯಲ್ ಆರ್ಕಿಡ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಾಟ್ಸಪ್ ಚಾನೆಲ್ ಗೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಅವರು, ಡಿಜಿಟಲ್ ವಿಶ್ವವಿದ್ಯಾಲಯ, ಡಿಜಿಟಲೀಕರಣದ ಸಾಮಾಜಿಕ ಮಾಧ್ಯಮಗಳಲ್ಲಿ ಜನ ಸಂಪರ್ಕ ಮಾಡಲು ಈ ವಾಟ್ಸಪ್ ಚಾನೆಲ್ ಅನುಕೂಲವಾಗಿದೆ.ಪ್ರಧಾನಿಗಳು ಸಹ ವಾಟ್ಸಪ್ ಚಾನೆಲ್ ನ್ನ ಅಧಿಕೃತ ಚಾನೆಲ್ ಆರಂಭಿಸಿದ್ದಾರೆ. ಮೂಲ ಉದ್ದೇಶ, ಸಾರ್ವಜನಿಕರು ಸ್ಪಂಧನೆಗೆ ಈ ಚಾನೆಲ್ ಅನುಕೂಲವಾಗಲಿದೆ. ಸಾರ್ವಜನಿಕ ಬದುಕನ್ನ…

Read More