ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸಿಕೊಳ್ತೇವೆ: ಸಿದ್ದರಾಮಯ್ಯಗೆ ಈಶ್ವರಪ್ಪ ಟಾಂಗ್
ಶಿವಮೊಗ್ಗ: ಹಾನಗಲ್ನಲ್ಲಿ ಮುಳುಗುವ ಹಂತದಲ್ಲಿ ಕಡ್ಡಿ ಹಿಡಿದು ಬದುಕುವ ಪ್ರಯತ್ನ ಮಾಡಿದ್ದಾರೆ. ಅದೇ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ಸಿಗರಿಗೆ ಸುನಾಮಿ ಎನಿಸಿಬಿಟ್ಟಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಆಡಳಿತ ವಿರೋಧಿ ಸುನಾಮಿ ಎಂಬ ಸಿದ್ದಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚಾಮುಂಡೇಶ್ವರಿ ಸುನಾಮಿಯಲ್ಲಿ ಸಿದ್ದರಾಮಯ್ಯನವರೇ ಕೊಚ್ಚಿ ಹೋದರು. ಉಪಚುನಾವಣೆ ಸುನಾಮಿಯಲ್ಲಿ ಕಾಂಗ್ರೆಸ್ನವರು ಸಿಂದಗಿಯಲ್ಲಿ ಸಹ ಈಗ ಕೊಚ್ಚಿ ಹೋಗಿದ್ದಾರೆ. ಹಾನಗಲ್ನಲ್ಲಿ ಕಡಿಮೆ ಅಂತರದಲ್ಲಿ ಆಕಸ್ಮಿಕವಾಗಿ ಗೆದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸಿಕೊಳ್ತೇವೆ ಎಂದರು. ಪ್ರಾದೇಶಿಕ ಪಕ್ಷಗಳಿಗೆ ಯಾವುದೇ…