ದೇವಸ್ಥಾನ ಹುಂಡಿಗೆ ಕನ್ನ ಹಾಕಿದ ಇಬ್ಬರು ಖದೀಮರ ಬಂಧನ : ಹತ್ತು ಲಕ್ಷ ಮೌಲ್ಯದ ಚಿನ್ನಾಭರಣ ವಶ
ಭದ್ರಾವತಿ : ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ ಹುಂಡಿಗೆ ಕನ್ನ ಹಾಕಿದ ಇಬ್ಬರನ್ನು ಸೋಮವಾರ ಬಂಧಿಸಲಾಗಿದೆ. ಭದ್ರಾವತಿಯ ಹೊಸಮನೆ ನಿವಾಸಿ ವಸಂತರಾಜು ಅಲಿಯಾಸ್ ವಸಂತ(37), ಬೇಡರ ಹೊಸಳ್ಳಿಯ ಶ್ವೇತಾ ಅಲಿಯಾಸ್ ಆಸ್ಮಾ(32) ಬಂಧಿತರು. ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು ₹20,000 ರಿಂದ ₹30,000 ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡು…