ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸದ ಶಾಸಕ ಹರತಾಳು ಹಾಲಪ್ಪ : ಬೇಳೂರು ಗೋಪಾಲಕೃಷ್ಣ ಆರೋಪ.
ರಿಪ್ಪನ್ ಪೇಟೆ: ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಹಾಗೂ ಅನುಷ್ಠಾನಗೊಂಡಿರುವ ಸರಕಾರಿ ಯೋಜನೆಗಳು ಜಾರಿಗೊಳ್ಳುತ್ತಿಲ್ಲ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಾಗರ ಪಟ್ಟಣದ ಗಣಪತಿ ಕೆರೆ ಅಭಿವೃದ್ಧಿಗೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದ ಗ್ರಾಮಪಂಚಾಯಿತಿಯ ಕುವೆಂಪು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಉದ್ಯೋಗಖಾತ್ರಿ ಯೋಜನೆ ಹಾಗೂ ಆಶ್ರಯ ಯೋಜನೆಗಳು ಕಾಣೆಯಾಗಿದ್ದು ಕಳೆದ ಕೆಲವು ವರ್ಷಗಳಿಂದ 94ಸಿ ಅಡಿಯಲ್ಲಿ…