Headlines

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ :

ಹೊಸನಗರ ವಿಧಾನಸಭಾ ಕ್ಷೇತ್ರವು ತಾಲ್ಲೂಕಿನಲ್ಲಿ 2001 ರ ಹಿಂದೆ ಅಸ್ತಿತ್ವದಲ್ಲಿತ್ತು. ಆದರೆ ನಂತರದ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆಯ ಸಮಯದಲ್ಲಿ ಹೊಸನಗರ ಕ್ಷೇತ್ರವನ್ನು ತೀರ್ಥಹಳ್ಳಿ ಮತ್ತು ಸಾಗರ ಕ್ಷೇತ್ರಕ್ಕೆ ಸೇರಿಸಿ ಹೊಸನಗರ ತಾಲ್ಲೂಕು ವಿಧಾನಸಭಾ ಕ್ಷೇತ್ರವನ್ನು ಕೈಬಿಡಲಾಗಿತ್ತು. ಇಂದು ಹೊಸನಗರ ತಾಲ್ಲೂಕಿನ ಎಲ್ಲ ಪಕ್ಷದ ನಾಯಕರು ಪಕ್ಷಾತೀತವಾಗಿ ಪಾಲ್ಗೊಂಡು ಮಾಜಿ ಶಾಸಕ ಬಿ.ಸ್ವಾಮಿರಾವ್‌ ರವರ ನೇತೃತ್ವದಲ್ಲಿ ಹಳೇ ಕೋರ್ಟ್ ರಸ್ತೆಯಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ ಹೊಸನಗರದ ತಹಶೀಲ್ದಾರ್‌ ಕಛೇರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು….

Read More

ಮಣಿಪುರದಲ್ಲಿ ಮಡಿದ ರಿಪ್ಪನ್‌ಪೇಟೆ ಯೋಧನಿಗೆ ಯುವ ಕಾಂಗ್ರೆಸ್ ವತಿಯಿಂದ ಶ್ರದ್ದಾಂಜಲಿ|Tribute

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿ ಯುವ ಕಾಂಗ್ರೆಸ್ ವತಿಯಿಂದ ಸೋಮವಾರ ಬೆಳಗಿನಜಾವ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದಾಗ ಮರಣವನ್ನಪ್ಪಿದ ರಿಪ್ಪನ್‌ಪೇಟೆಯ ಯೋಧ ಸಂದೀಪ್ ರವರಿಗೆ ಶದ್ಧಾಂಜಲಿ ಅರ್ಪಿಸಲಾಯಿತು. ಅಸ್ಸಾಂನ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ರಿಪ್ಪನ್‌ಪೇಟೆಯ ಶಬರೀಶನಗರದ ನಿವಾಸಿ ಸಂದೀಪ್(27) ಅಸ್ಸಾಂ ನ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟಿರುವುದು ನಮ್ಮ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಯುವ ಕಾಂಗ್ರೆಸ್ ಸಾಗರ ತಾಲೂಕು ಅಧ್ಯಕ್ಷ ಅಶೋಕ ಬೇಳೂರು ಹೇಳಿದರು. ಈ ಸಂಧರ್ಭದಲ್ಲಿ ರಾಷ್ಟೀಯ ಯುವ ಕಾಂಗ್ರೆಸ್ ನ…

Read More

Ripponpete | ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಜಖಂ..!!

Ripponpete | ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ಜಖಂ..!! ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರಿನಲ್ಲಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ನಡೆದಿದೆ. ಕೋಡೂರು ಮೂಲದವರ ಕಿಯಾ ಕಾರು ಹಾಗೂ ಹೀರೋ ಹೋಂಡ ಡಿಲಕ್ಸ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಘಟನೆಯಲ್ಲಿ ಯಾರಿಗೂ ಗಂಭೀರ ಗಾಯವಾಗಿರುವುದಿಲ್ಲ… ಬೈಕ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಿಯಾ ಕಾರಿನ ಮುಂಭಾಗ…

Read More

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ

IND vs AUS | ಮೈದಾನದಲ್ಲಿದ್ದವರ ಕಣ್ಣಂಚಲ್ಲಿ ನೀರು ತುಂಬಿಕೊಳ್ಳುವಂತೆ ಮಾಡಿದ ನಿತೀಶ್ ಕುಮಾರ್ ಶತಕ ಚೊಚ್ಚಲ ಶತಕವನ್ನು ತನ್ನ ಪಾಲಿನ ಹೀರೋಗೆ ಅರ್ಪಿಸಿದ ನಿತೀಶ್ ರೆಡ್ಡಿ ಆಸ್ಟ್ರೇಲಿಯಾ(Australia) ನೆಲದಲ್ಲಿ ಶತಕ ಗಳಿಸುವುದು ಅಷ್ಟು ಸುಲಭವಲ್ಲ. ಆದರೆ ಭಾರತ ಈ ಬಾರಿ ಆಸೀಸ್ ಪ್ರವಾಸದಲ್ಲಿ ಹೊಸ ತಾರೆಯನ್ನು ಕಂಡುಕೊಂಡಿದೆ. ಇಂದು ನಿತೀಶ್ ಕುಮಾರ್ ರೆಡ್ಡಿ(Nithish kumar reddy) ಎಂಬ ಯುವ ಪ್ರತಿಭೆ ಶತಕ ಸಿಡಿಸುವಾಗ ಇಡೀ ಮೈದಾನವೇ ಖುಷಿಯಿಂದ ಕಣ್ಣೀರು ಹಾಕಿದೆ. ಒಂದು ಹಂತದಲ್ಲಿ ಭಾರತ 250…

Read More

ಹೆಣ್ಣು ಕೊಟ್ಟ ಮಾವನನ್ನೆ ಹತ್ಯೆಗೈದ ಅಳಿಯ

ಅಳಿಯನಿಂದ ಮಾವನ ಹತ್ಯೆ ಹೊಳೆಹೊನ್ನೂರು : ಇಲ್ಲಿನ ಸಮೀಪದ ಹನುಮಂತಾಪುರ ಗ್ರಾಮದಲ್ಲಿ ವಯಕ್ತಿಕ ಕಾರಣಕ್ಕಾಗಿ ರಾಜಪ್ಪ(55) ಎಂಬ ವ್ಯಕ್ತಿಯನ್ನು ಬುಧವಾರ ರಾತ್ರಿ ಕೊಲೆ ಮಾಡಲಾಗಿದೆ. ಅರೋಪಿ ಮಂಜುನಾಥ (45) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ರಾಜಪ್ಪನ ಮಗಳು ಮನೆಗೆ ಹೋಗಿ ಬಾಗಿಲು ತೆರೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿರುವ ಶಂಕೆಯಿದೆ. ಮಂಜುನಾಥನು ಮೃತ ರಾಜಪ್ಪ ಅವರ ಅಳಿಯ ಅಂದರೆ ಮಗಳ ಪತಿ ಆಗಿದ್ದಾನೆ. ಆರೋಪಿ ಮಂಜುನಾಥನು ಇತ್ತೀಚೆಗೆ ಅಪರಾಧ ಪ್ರಕರಣದಲ್ಲಿ ಜೈಲಿನಲ್ಲಿದ್ದು…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೊಟ್ಟಮೊದಲ ವಿಮಾನ|airport

ಶಿವಮೊಗ್ಗದ ಸೋಗಾನೆಯ ನೂತನ ಕುವೆಂಪು ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಇವತ್ತು ಮಧ್ಯಾಹ್ನ ಬಂದಿಳಿದಿದೆ. ಪ್ರಾಯೋಗಿಕವಾಗಿ ವಾಯು ಸೇನೆಯ ಬೋಯಿಂಗ್ ವಿಮಾನ ಸೋಗಾನೆಯ ಕುವೆಂಪು ವಿಮಾನ ನಿಲ್ದಾಣದ ರನ್ ವೇಯಲ್ಲಿ ಬಂದಿಳಿದಿದ್ದು ಯಾವುದೇ ಅಡೆತಡೆ ಉಂಟಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ವಾಯು ಸೇನೆಯ ಬೋಯಿಂಗ್ 737 – 7HI ಮಾದರಿಯ ವಿಮಾನ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿದೆ. ಮಧ್ಯಾಹ್ನ 12 ಗಂಟೆಗೆ ಈ ವಿಮಾನ ದೆಹಲಿಯಿಂದ ಹೊರಟಿತ್ತ್ತು. ಮಧ್ಯಾಹ್ನ 2.30ರ ಹೊತ್ತಿಗೆ ವಿಮಾನ ಲ್ಯಾಂಡ್…

Read More

ರಿಪ್ಪನ್‌ಪೇಟೆ : ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಸಾವು

ರಿಪ್ಪನ್‌ಪೇಟೆ: ಚಲಿಸುತಿದ್ದ ಟ್ರ್ಯಾಕ್ಟರ್ ನಿಂದ ಆಯತಪ್ಪಿ ಕೆಳಕ್ಕೆ  ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಮೈಥೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಹಿರೇಮೈಥೆ ಗ್ರಾಮದ ವಾಸಿ ರಾಘವೇಂದ್ರ (43) ಮೃತ ದುರ್ದೈವಿಯಾಗಿದ್ದಾನೆ.  ಮನೆ ಕೆಲಸಕ್ಕೆ ಬೇಕಾಗಿದ್ದ ಮರಳು ತರಲು ಬಾಡಿಗೆ ಕೆಎ-15-TA-9879 ಟ್ರ್ಯಾಕ್ಟರ್ ನಲ್ಲಿ ಮನೆ ಸಮೀಪವಿರುವ ಹಳ್ಳದಿಂದ ಮರಳು ತುಂಬಿಸಿಕೊಂಡು ಬರುತ್ತಿರುವಾಗ   ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯಿಂದ ರಾಘವೇಂದ್ರ ಕೆಳಗೆ ಬಿದ್ದು ಹೊಟ್ಟೆ ಭಾಗಕ್ಕೆ ತೀವ್ರ ಗಾಯವಾಗಿದೆ ತಕ್ಷಣ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ…

Read More

ನವಜಾತ ಶಿಶುವನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಬಿಟ್ಟು ಹೋದ ಹೆತ್ತಮ್ಮ | ಬೇಡವಾದ ಪಲ್ಲಂಗದಾಟಕ್ಕೆ ಸಾಕ್ಷಿಯಾದ ಮಗು|Shivamogga

ತಾಯಿಯೊಬ್ಬಳು ತನ್ನ ನವಜಾತ ಹೆಣ್ಣು ಮಗುವನ್ನು ಆಸ್ಪತ್ರೆಯ ಬಾತ್ ರೂಂನಿಂದ ಹೊರಗೆ ಬಿಸಾಡಿರುವ ಘಟನೆ ಶಿವಮೊಗ್ಗ ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹೊಟ್ಟೆ ನೋವು ಮತ್ತು ಹೊಟ್ಟೆಯಲ್ಲಿ ಗಡ್ಡೆ ಬೆಳೆದಿದೆ ಎಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಶರಾವತಿ ನಗರದ ಯುವತಿ ದಾಖಲಾಗಿದ್ದಾಳೆ. ಬಳಿಕ ಶನಿವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇಂದು ಬೆಳಗ್ಗೆ ನವಜಾತ ಹೆಣ್ಣು ಮಗುವನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಬಿಟ್ಟು ಬಂದಿದ್ದಾಳೆ. ಮಗುವಿನ ಅಳುವಿನ ಶಬ್ಧ ಸರ್ಜರಿ ವಿಭಾಗದಿಂದ ಕೇಳಿ ಬಂದಿದ್ದಕ್ಕೆ ಮೆಗ್ಗಾನ್ ಸಿಬ್ಬಂದಿಗಳು ಎಚ್ಚೆತ್ತುಕೊಂಡು ಹುಡುಕಿದ್ದಾರೆ. ಶೌಚಾಲಯದ…

Read More

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!?

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!? ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್‌ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗುಂಡ ಅಲಿಯಾಸ್ ರವಿ, ಪೊಲೀಸ್ ಸಿಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಪಿಎಸ್‌ಐ ಕೃಷ್ಣ, ಶರಣಾಗುವಂತೆ ಸೂಚಿಸಿದರು.ಕೇಳದೇ ಇದ್ದಾಗ…

Read More

ತೀರ್ಥಹಳ್ಳಿ : ಶಾರೀಕ್ ಮನೆ ಸೇರಿದಂತೆ ನಾಲ್ಕು ಮನೆಗಳ ಮೇಲೆ ಪೊಲೀಸ್ ರೈಡ್|Manglore blast

ತೀರ್ಥಹಳ್ಳಿ : ಪಟ್ಟಣದ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಪೊಲೀಸರು ರೈಡ್ ಮಾಡಿದ್ದಾರೆ. ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಶಾರಿಕ್ ಆರೋಪಿಯಾಗಿರಬಹುದು ಎಂಬ ಕಾರಣಕ್ಕಾಗಿ ಒಟ್ಟು ಮೂರು ತಂಡಗಳಾಗಿ ಪೊಲೀಸರು ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿ, ಮಾಳೂರು ಹಾಗೂ ಆಗುಂಬೆ ಪೊಲೀಸ್ ಠಾಣೆಯ ಎಸೈಗಳು ದಾಳಿಯಲ್ಲಿ ಭಾಗಿಯಾಗಿದ್ದಾರೆ. ಶಾರೀಕ್ ಚಿಕ್ಕಮ್ಮನ ಮನೆ ಸೇರಿದಂತೆ ಸಂಬಂಧಿಕರ  ಒಟ್ಟು ನಾಲ್ಕು ಮನೆಗಳ ಮೇಲೆ ಪೊಲೀಸರು ರೈಡ್ ಮಾಡಿದ್ದಾರೆ. ಹಲವು ದಾಖಲೆಗಳನ್ನು ತೀರ್ಥಹಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದು ಹಲವು ಆಯಾಮಗಳಲ್ಲಿ  ಪೊಲೀಸರು…

Read More