ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ – ಓರ್ವ ಆಸ್ಪತ್ರೆಗೆ ದಾಖಲು|Accident
ಕುಂಸಿ ಸಮೀಪದ ತುಪ್ಪೂರು ಬಳಿ ಬಸ್ಸು ಹಾಗೂ ಕಾರಿನ ನಡುವೆ ಭೀಕರ ಅಪಘಾತ ನಡೆದಿದ್ದು ಅಪಘಾತದಲ್ಲಿ ಒಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಕುಂಸಿ ಸಮೀಪದ ತುಪ್ಪೂರು ತಿರುವಿನಲ್ಲಿ ಶಿವಮೊಗ್ಗದಿಂದ ಸಾಗರದ ಕಡೆಗೆ ಬರುತಿದ್ದ ಪ್ರಕಾಶ್ ಟ್ರಾವೆಲ್ಸ್ (KA 51 AB 0913) ಹಾಗೂ ಸಾಗರದಿಂದ ಶಿವಮೊಗ್ಗದ ಕಡೆಗೆ ತೆರಳುತಿದ್ದ ಮಾರುತಿ ಸ್ವಿಫ್ಟ್ (KA 18 Z 0329) ಕಾರಿನ ನಡುವೆ ಅಪಘಾತ ನಡೆದಿದ್ದು ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ವ್ಯಕ್ತಿಗೆ ತಲೆಗೆ ತೀವ್ರತರವಾದ ಪೆಟ್ಟಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ…