ಹೊಸನಗರ ಎಪಿಎಂಸಿ ವಿವಾದ : ಸಿಡಿದೆದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ,ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ——- ಎಪಿಎಂಸಿ ಮಾರುಕಟ್ಟೆಯನ್ನು ಸಾಗರಕ್ಕೆ ಸಂಯೋಜಿಸಿರುವ ಕ್ರಮವನ್ನು ಖಂಡಿಸಿ ರಿಪ್ಪನ್ಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ
ಮಲೆನಾಡಿನ ತವರೂರು ಹೊಸನಗರಕ್ಕೆ ಶರಾವತಿಯ ಶಾಪ ಮುಗಿದರೂ, ರಾಜಕೀಯದ ಶಾಪ ಮಾತ್ರ ಇನ್ನೂ ಮುಗಿವಂತೆ ಕಾಣುತ್ತಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ಹೊಸನಗರ ಅಭಿವೃದ್ಧಿಯಾಗುತ್ತಿಲ್ಲ. ಬದಲಾಗಿ ಅಲ್ಲಿರುವುದನ್ನೆಲ್ಲವೂ ಸ್ಥಳಾಂತರ ಮಾಡಲಾಗುತ್ತಿದೆ. ಅದು ಕೂಡ ಸಮರ್ಪಕ ಕಾರಣಗಳಿಲ್ಲದೆ. ಈ ಹಿಂದೆ ವಿಧಾನಸಭೆ ಕ್ಷೇತ್ರವನ್ನೆ ಕಿತ್ತುತೆಗೆದು,ಹೊಸನಗರ ತಾಲ್ಲೂಕನ್ನು ಬೇರೆ ಬೇರೆ ಕ್ಷೇತ್ರಗಳಿಗೆ ಚಾಕಲೇಟ್ ರೀತಿಯಲ್ಲಿ ಹಂಚಲಾಗಿತ್ತು. ಇದೀಗ, ತಾಲ್ಲೂಕಿನ ಎಪಿಎಂಸಿಯನ್ನು ಪಕ್ಕದ ಸಾಗರ ತಾಲ್ಲೂಕಿನ ಎಪಿಎಂಸಿ ಜೊತೆ ವಿಲೀನಗೊಳಿಸಲಾಗಿದೆ. ವಿಶೇಷ ಅಂದರೆ, ಇದಕ್ಕೆ ಯಾವುದೇ ಚರ್ಚೆ ನಡೆದಿಲ್ಲ ಎಂಬುದು ಹೊಸನಗರ ನಾಗರಿಕರ ಆರೋಪ. …