ಅಂದಾಸುರ ಬಳಿಯಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ : ಯುವಕ ಸ್ಥಳದಲ್ಲೇ ಸಾವು

A 26-year-old man died on the spot after a fatal car and bike collision near Koralikoppa railway gate in Anandapura, Sagar taluk of Shivamogga district. Police have registered a case and begun investigation. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಬೀಸಿನಗದ್ದೆ ಗ್ರಾಮದ ಮಹೇಶ್…

Read More

Hosanagara | ನಿರ್ಮಾಣ ಹಂತದ ಕಳೂರು ಸೊಸೈಟಿ ಸೆಂಟ್ರಿಂಗ್ ಕುಸಿತ – ತಪ್ಪಿದ ಭಾರಿ ಅನಾಹುತ

Hosanagara | ನಿರ್ಮಾಣ ಹಂತದ ಕಳೂರು ಸೊಸೈಟಿ ಸೆಂಟ್ರಿಂಗ್ ಕುಸಿತ – ತಪ್ಪಿದ ಭಾರಿ ಅನಾಹುತ ಹೊಸನಗರ : ಇಲ್ಲಿನ ಖಾಸಗಿ ಬಸ್ ನಿಲ್ದಾಣ ಸಮೀಪ ನಿರ್ಮಾಣವಾಗುತ್ತಿರುವ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಶೀಟ್ ಸೆಂಟ್ರಿಂಗ್ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದು, ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ತೀವ್ರವಾಗಿ ಗಾಯಗೊಂಡು ಪ್ರಾಣಾಪಯದಿಂದ ಪಾರಾಗಿರುವ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಹಾಗೂ ಆರಕ್ಷಕರು ಧಾವಿಸಿದ್ದಾರೆ,  ಈ ಅವಘಡದಲ್ಲಿ…

Read More

ಹೊಂಬುಜ ಜೈನ ಮಠದಲ್ಲಿ ಅದ್ದೂರಿಯ ವಿಜಯದಶಮಿ :

ರಿಪ್ಪನ್ ಪೇಟೆ : ಜೈನರ ದಕ್ಷಿಣದ ಕಾಶಿಯಾಗಿರುವ ಹೊಂಬುಜ ಕ್ಷೇತ್ರದಲ್ಲಿ ನವರಾತ್ರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪದ್ಮಾವತಿ ದೇವಿಗೆ ನವರಾತ್ರಿಯ ಒಂಬತ್ತು ದಿನಗಳು ಬೇರೆ ಬೇರೆ ರೀತಿಯಲ್ಲಿ ಅಲಂಕರಿಸಿ ಪ್ರತಿ ದಿನ ವೈಭವದಿಂದ ಆಚರಿಸಲಾಯಿತು. ಕೆಟ್ಟದ್ದರಿಂದ ನಮ್ಮನ್ನು ರಕ್ಷಿಸುವ ಮಾತೆಯಾಗಿ ದೇವಿಯನ್ನು ಈ ದಿನಗಳಲ್ಲಿ ಕಾಣಲಾಗುತ್ತದೆ.ನವರಾತ್ರಿಯ ಕೊನೆಯ ದಿನವಾದ ಶುಕ್ರವಾರದಂದು ಹೊಂಬುಜ ಕ್ಷೇತ್ರದಿಂದ ಆನೆ ಮತ್ತು ಅಶ್ವ ದೊಂದಿಗೆ ಪಲ್ಲಕ್ಕಿಯ ರಾಜಬೀದಿ ಉತ್ಸವವು ಬನ್ನಿ ಮಂಟಪಕ್ಕೆ ತೆರಳಿ   ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ಬನ್ನಿ ಮುರಿದು ಭಕ್ತರಿಗೆ ಪ್ರಸಾದ…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರು ಗಾಯಾಳು ಮೆಗ್ಗಾನ್ ಗೆ ರವಾನೆ|accident

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿರುವ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಂಪೌಂಡ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಮಾರುತಿ ಜೆನ್ ಕಾರು ಸೋಮವಾರ ರಾತ್ರಿ 11.00 ಗಂಟೆಯ ಸಮಯದಲ್ಲಿ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಮರದ ದಿಬ್ಬಗಳಿಗೆ ಡಿಕ್ಕಿಯಾಗಿ ನಂತರ ಕಾಂಪೌಂಡ್ ಗೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು ಎನ್ನಲಾಗುತ್ತಿದೆ. ಪಟ್ಟಣದಲ್ಲಿ ಜೆಸಿಬಿ…

Read More

ಜಮೀನಿಗೆ ಹೋಗಲು ರಸ್ತೆ ಕಲ್ಪಿಸುವಂತೆ ಆಗ್ರಹಿಸಿ ಯುವ ಕೃಷಿಕನಿಂದ ತಾಲೂಕು ಕಛೇರಿ ಎದುರು ಉಪವಾಸ ಸತ್ಯಾಗ್ರಹ :

ಹೊಸನಗರ: ತಮ್ಮ ಜಮೀನಿಗೆ ತೆರಳಲು ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಯುವ ಕೃಷಿಕನೋರ್ವ ತಾಲೂಕು ಕಛೇರಿ ಆವರಣದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.  ಹೊಸನಗರ ತಾಲೂಕಿನ ಎಚ್.ಮಳವಳ್ಳಿ ನಿವಾಸಿ ಕೆ.ಯು ದಿನೇಶ್ ಅವರು, ತಮ್ಮ ಜಮೀನಿಗೆ ತೆರಳಲು ರಸ್ತೆ ಬಂದ್ ಮಾಡಲಾಗಿದೆ. ಈ ಬಗ್ಗೆ ವರ್ಷಗಳ ಕಾಲ ಹೋರಾಟ ನಡೆಸಿದರೂ ಅಧಿಕಾರಿವರ್ಗ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2019ರಲ್ಲಿಯೇ ತಹಸೀಲ್ದಾರ್, ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದೇನೆ. ನನ್ನ ಕೃಷಿ ಜಮೀನಿಗೆ ತೆರಳುವ ದಾರಿಗೆ ಅಡ್ಡಲಾಗಿ ಗ್ರಾಮದ ಇನ್ನೋರ್ವ ಕೃಷಿಕ…

Read More

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ ರಿಪ್ಪನ್ ಪೇಟೆ : ಪಟ್ಟಣದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಗಣಪತಿ ಬಪ್ಪನ ಪ್ರತಿಷ್ಠಾಪನೆ ನೆರವೇರಿದೆ. ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಬುಧವಾರ (ಗಣೇಶ ಚತುರ್ಥಿ) ದಿನ ಮೆರವಣಿಗೆಯ ಮೂಲಕ ಗಣಪತಿಯನ್ನು ಠಾಣೆಗೆ ತಂದು ಪ್ರತಿಷ್ಠಾಪಿಸಲಾಯಿತು. ಈ ದೃಶ್ಯ ಸ್ಥಳೀಯರಲ್ಲಿ ಭಾರಿ ಕುತೂಹಲ ಹುಟ್ಟಿಸಿತು. ಸಾಮಾನ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ, ಸಂಘಟನೆಗಳ ವತಿಯಿಂದ ಅಥವಾ ಮನೆಗಳಲ್ಲಿ ಮಾತ್ರ…

Read More

ಅಬ್ಬರಿಸಿ ಬೊಬ್ಬಿರಿದರೇ ಇಲ್ಯಾರಿಗೂ ಭಯವಿಲ್ಲ | ಶಿವಣ್ಣ ಅಭಿಮಾನಿಗಳಿಂದ ಮನೆ ಮೇಲೆ ಮುತ್ತಿಗೆ ಬೆನ್ನಲ್ಲೇ ಮತ್ತೊಂದು ಪೋಸ್ಟ್ ಮೂಲಕ ಟಾಂಗ್ ಕೊಟ್ಟ ಕುಮಾರ್ ಬಂಗಾರಪ್ಪ | shivanna-kumar

ಅಬ್ಬರಿಸಿ ಬೊಬ್ಬಿರಿದರೇ ಇಲ್ಯಾರಿಗೂ ಭಯವಿಲ್ಲ | ಶಿವಣ್ಣ ಅಭಿಮಾನಿಗಳಿಂದ ಮನೆ ಮೇಲೆ ಮುತ್ತಿಗೆ ಬೆನ್ನಲ್ಲೇ ಮತ್ತೊಂದು ಪೋಸ್ಟ್ ಮೂಲಕ ಟಾಂಗ್ ಕೊಟ್ಟ ಕುಮಾರ್ ಬಂಗಾರಪ್ಪ | shivanna-kumar ಚಲನಚಿತ್ರ ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆಂದು ಶಿವಣ್ಣ ಅಭಿಮಾನಿಗಳು ಬೆಂಗಳೂರಿನಲ್ಲಿರುವ ಮಾಜಿ ಸಚಿವ‌ ಕುಮಾರ್ ಬಂಗಾರಪ್ಪನವರ ಮನೆ ಮೇಲೆ ಮುತ್ತಿಗೆ ಹಾಕಿರುವ ಬೆನ್ನಲ್ಲೇ ಕುಮಾರ್ ಬಂಗಾರಪ್ಪ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಪೋಸ್ಟ್ ಹಾಕುವ ಮೂಲಕ ಟಾಂಗ್ ಕೊಟ್ಟಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ರವರಿಗೆ ಎಕ್ಸ್ ಖಾತೆ ಮತ್ತು…

Read More

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.  ರಿಪ್ಪನ್ ಪೇಟೆಯಿಂದ‌ ಶಿವಮೊಗ್ಗದ ಕಡೆ ಹೋಗುವಾಗ ಮಾರುತಿ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಮೂಲದ ನಾಲ್ಕು ಜನ ಸಿಗಂದೂರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಹಿಂದಿರುಗುತಿದ್ದಾಗ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ…

Read More

ಪದವಿ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಇಚ್ಚೆಯ ಉಡುಪು ಧರಿಸಿ ಕಾಲೇಜಿಗೆ ಬರಬಹುದು : ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ

ನಾಳೆಯಿಂದ ಪದವಿ ಕಾಲೇಜು ಆರಂಭಿಸಲು ಸರಕಾರ ಬದ್ದವಾಗಿದೆ ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತಮ್ಮ ಇಷ್ಟದ ಉಡುಪನ್ನು ಧರಿಸಿಕೊಂಡು ಹೋಗಬಹುದು. ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯವಿದೆ. ಆದರೆ, ಇದನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‍.ಅಶ್ವತ್ಥನಾರಾಯಣ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಸಚಿವರು ಮಾಧ್ಯಮದವರೊಂದಿಗೆ ಮಾತನಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಾಗಾಗಿ, ನಿಯಮಕ್ಕೆ ಅನುಸಾರವಾಗಿಯೇ ಬರಬೇಕು. ಹಿಜಾಬ್ ಧರಿಸುವುದಕ್ಕೆ ಅವಕಾಶ ಕೊಡುವುದಿಲ್ಲ ಎಂದೂ ಸಚಿವರು…

Read More

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್ ರಿಪ್ಪನ್‌ಪೇಟೆ : ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬರಿಗೂ ಸಮಾನವಾದ ಹಕ್ಕಿನೊಂದಿಗೆ ಜೀವನ ನಡೆಸಲು ಅನುವು ಮಾಡಿಕೊಟ್ಟ ಪವಿತ್ರ ಗ್ರಂಥವಾಗಿದೆ. ಸಂವಿಧಾನದಿಂದ ಇಂದು ದೇಶ ಪ್ರಗತಿ ಕಾಣುವಂತಾಗಿದೆ. ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು ಗ್ರಾಮ ಪಂಚಾಯತ್ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು. ಸೋಮವಾರ ಪಟ್ಟಣಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ…

Read More