Headlines

ದೇವರ ಮೊರೆಹೋದ ಶರಾವತಿ ಸಂತ್ರಸ್ಥರು : ಕಲ್ಲುಕೊಪ್ಪ ದಿಂದ ಧರ್ಮಸ್ಥಳದ ವರೆಗೆ ಪಾದಯಾತ್ರೆ !

ತೀರ್ಥಹಳ್ಳಿ : ತಾಲೂಕಿನಾದ್ಯಂತ ಇತ್ತೀಚಿಗೆ ಅತೀ ಹೆಚ್ಚು ಸುದ್ದಿ ಮಾಡಿದ್ದೂ ಎಂದರೆ ಅದು ಶರಾವತಿ ಸಂತ್ರಸ್ತರ ಹೋರಾಟ. ಹೌದು ಈಗಾಗಲೇ ತಾಲೂಕಿನ ಹಣಗೇರೆ ಕಟ್ಟೆ ಸಮೀಪ ಕಲ್ಲುಕೊಪ್ಪದಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ ಮಾಡಿ ರಾಜ್ಯಾದ್ಯಂತ ಸುದ್ದಿ ಮಾಡಿದ್ದ ಶರಾವತಿ ಮುಳುಗಡೆ ಸಂತ್ರಸ್ತರು ಈಗ ದೇವರ ಮೊರೆ ಹೋಗಿದ್ದಾರೆ.   ಕಲ್ಲುಕೊಪ್ಪದಿಂದ ಸುಮಾರು 21 ಜನ  ಧರ್ಮಸ್ಥಳಕ್ಕೆ ಕಾಲ್ನಡಿಗೆ ಮೂಲಕ ಪಾದಯಾತ್ರೆ ಸಂಚರಿಸಲಿದ್ದಾರೆ. ಬರಿ ಕಾಲಿನಲ್ಲಿ ಅಂದಾಜು 200 ಕಿ ಮೀ ನೆಡೆದು ಧರ್ಮಸ್ಥಳದ  ಮಂಜುನಾಥನಿಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ.  ಸಂಕ್ಲಾಪುರ ಮತ್ತು…

Read More

ರಿಪ್ಪನ್ ಪೇಟೆ : ಜಿಂಕೆಯ ಅಕ್ರಮ ಬೇಟೆ, ಮಾಲು ಸಹಿತ ಆರೋಪಿಗಳ ಬಂಧನ

ರಿಪ್ಪನ್ ಪೇಟೆ: ಸಮೀಪದ ಆಲುವಳ್ಳಿ ಗ್ರಾಮದ ಮನ್ನಾ ಜಂಗಲಿ ಎಂಬಲ್ಲಿ ಬುಧವಾರ ಸಂಜೆ ಬೇಟೆಗಾರರು ಅಕ್ರಮವಾಗಿ ಜಿಂಕೆಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಸಂಜೆ 4 ಗಂಟೆಯ ಸಮಯದಲ್ಲಿ ಆಲುವಳ್ಳಿ ಗ್ರಾಮದ ಮನ್ನಾಜಂಗಲಿ ಯ ಜೋಡು ಕೆರೆಯ ಆಸುಪಾಸಿನಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿದ್ದ ಗಂಡು ಜಿಂಕೆಯನ್ನು ಮೂರು ಜನ ಮಾಂಸ ಭಕ್ಷಣೆಯ ಉದ್ದೇಶಕ್ಕಾಗಿ ಹತ್ಯೆ ಮಾಡಲಾಗಿದೆ. ಖಚಿತ ಮಾಹಿತಿ ಅರಿತ ಅರಣ್ಯ ಇಲಾಖೆಯ ಅಧಿಕಾರಿಗಳು ಎಸಿಎಫ್ ಮಾರ್ಗದರ್ಶನದಂತೆ ದಾಳಿ ನಡೆಸಿ ಜಿಂಕೆಯ ಕಳೆಬರ ಸಹಿತ ಹತ್ಯೆಯಲ್ಲಿ ಭಾಗಿಯಾದ ಸಾಗರ…

Read More

ಕುಂಸಿ : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

ಕುಂಸಿ : ಪಟ್ಟಣದ ಇಂದಿರಾ ಕಾಲೋನಿ ಮೊದಲ ಕ್ರಾಸ್ ಬಳಿ ಅಕ್ರಮವಾಗಿ ಎರಡು ಎತ್ತುಗಳು ಒಂದು ಆಕಳು ಮತ್ತು 3 ಕೋಣಗಳನ್ನು ಶಿವಮೊಗ್ಗದ ಕಸಾಯಿಖಾನೆಗೆ ಸಾಗಿಸುವಾಗ ಪೊಲೀಸರು ತಡೆದು ಮೂಕ ಪ್ರಾಣಿಗಳನ್ನು ರಕ್ಷಿಸಿದ್ದಾರೆ. ಸಾಗರ ರಸ್ತೆಯಲ್ಲಿ ಜಾನುವಾರುಗಳನ್ನು  KA 14 B 0941 ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದಲ್ಲಿ ತುಂಬಿಸಿಕೊಂಡು ಶಿವಮೊಗ್ಗದ ಕಡೆ ಹೋಗುವಾಗ ಗಸ್ತಿನಲ್ಲಿರುವ ಪೊಲೀಸರು ತಡೆದು ವಿಚಾರಿಸಲು ಹೋದಾಗ ಪೊಲೀಸರನ್ನು ಕಂಡು ವಾಹನದ ಚಾಲಕ ಕುಂಸಿಯ ಇಂದಿರಾ ಕಾಲೋನಿಯ ಮೊದಲ ಕ್ರಾಸ್ ಕಡೆ ತಿರುಗಿಸಿದ್ದಾನೆ.ಚಾಲಕನ…

Read More

ತೀರ್ಥಹಳ್ಳಿ : ಕಾಲು ಜಾರಿ ನದಿಗೆ ಬಿದ್ದು ಮಹಿಳೆ ಸಾವು !

ತೀರ್ಥಹಳ್ಳಿ :  ನದಿಯನ್ನು ದಾಟುವಾಗ ಆಯತಪ್ಪಿ ಕಾಲು ಜಾರಿ ಬಿದ್ದು ಮಹಿಳೆಯೊಬ್ಬರು ಸಾವನ್ನಪಿದ ಘಟನೆ ತಾಲೂಕಿನ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆದಿದೆ.  ಮೃತಪಟ್ಟ ಮಹಿಳೆಯನ್ನು ಜಸೋಪ್ರಿನ್ ಮಚಾದೋ (36) ಎಂದು ಗುರುತಿಸಲಾಗಿದೆ. ಮಗನೊಂದಿಗೆ ಅಂಗಡಿಗೆ ಹೋಗಿ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ವರದಿ : ಪ್ರಶಾಂತ್ ಮೇಗರವಳ್ಳಿ

Read More

ಕುಮಾರಸ್ವಾಮಿ ನಾಲ್ಕು ದಿನ ಆರ್​​ಎಸ್​​​ಎಸ್​​ ಶಾಖೆಗೆ ಬಂದು ಆಮೇಲೆ ಟೀಕಿಸಲಿ: ನಳಿನ್ ಕುಮಾರ್ ಕಟೀಲ್

ಶಿವಮೊಗ್ಗ: ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆಗೆ ಒಂದು ವಾರ ಬರುವಂತೆ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಆಹ್ವಾನಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವುದೇ ಸಂಘ- ಸಂಸ್ಥೆಯನ್ನು ಟೀಕೆ ಮಾಡುವ ಮುನ್ನ ಮೊದಲು ಅದರ ಬಗ್ಗೆ ತಿಳಿದುಕೊಳ್ಳಬೇಕು ಎಂದರು. ಕುಮಾರಸ್ವಾಮಿ ನಾಲ್ಕು ದಿನ ಶಾಖೆಗೆ ಬರಲಿ, ಆಮೇಲೆ ಸಂಘದ ಬಗ್ಗೆ ಟೀಕೆ ಮಾಡಲಿ. ಅವರು ಅಧಿಕಾರದಲ್ಲಿದ್ದಾಗ ಅವರ ಕುಟುಂಬದವರಿಗೆ ಸಹಾಯ ಮಾಡಿಕೊಂಡು ಬಂದವರು. ಅವರಿಗೆ ರಾಷ್ಟ್ರಭಕ್ತಿ, ದೇಶದ ಪರಿಕಲ್ಪನೆ, ಚಿಂತನೆಗಳಿಲ್ಲ. ಪಾರ್ಟಿಯನ್ನೇ…

Read More

ತೀರ್ಥಹಳ್ಳಿ : ಅಕ್ರಮ ಮಧ್ಯ ಮಾರಾಟ ಪ್ರಶ್ನಿಸಿದ್ದ ಗ್ರಾಪಂ ಪಿಡಿಓ ಮೇಲೆ ಹಲ್ಲೆ : ಆರೋಪಿ ವಶಕ್ಕೆ

ತೀರ್ಥಹಳ್ಳಿ: ತಾಲೂಕಿನ ಮೇಳಿಗೆ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಕೆಳಕೆರೆ ನಾಗೇಶ್ ಎನ್ನುವ ವ್ಯಕ್ತಿಗೆ ಮದ್ಯ ಮಾರಾಟ ಮಾಡಬೇಡಿ ಎಂದಿದ್ದಕ್ಕೆ ಅಲ್ಲಿನ ಪಿಡಿಓ ಮೇಲೆ ಹಲ್ಲೆ ನೆಡೆಸಿದ್ದ ಕೆಳಕೆರೆ ನಾಗೇಶ್ ನನ್ನು ತೀರ್ಥಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೇಳಿಗೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೆಳಕೆರೆ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ನಾಗೇಶ್ ಗೆ ಮಹಿಳಾ ಪಿಡಿಓ ಅದರ ಬಗ್ಗೆ ಪ್ರಶ್ನಿಸಿದ್ದಾರೆ.  ಇದಕ್ಕೆ ನಾಗೇಶ್ ಪಿಡಿಓ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರ ಮೇಲೆ ಹಲ್ಲೆ…

Read More

ಅಂತೂ ಪತ್ತೆಯಾಯ್ತು ಕೂಡ್ಲಿಗಿಯಲ್ಲಿ ನೀರುಪಾಲಾಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ :

  ಶಿವಮೊಗ್ಗ : ಕೂಡ್ಲಿಯಲ್ಲಿ ನೀರುಪಾಲಾಗಿದ್ದ ಹರೀಶ್ ಎಂಬ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ನೀರುಪಾಲಾದ ಹರೀಶ್ ಮೃತದೇಹ ಮೂರು ದಿನಗಳವರೆಗೆ ಪತ್ತೆಯಾಗಿರಲಿಲ್ಲ.ಸತತ ಶೋಧಕಾರ್ಯದ ಪರಿಣಾಮ ಇಂದು ಸಂಜೆ ಆತನ ಮೃತದೇಹ ಪತ್ತೆಯಾಗಿದೆ. ಮಡಿಕೆ ಚೀಲೂರಿನ ಬಳಿ ಹರೀಶ್ ಮೃತದೇಹ ಪತ್ತೆಯಾಗಿದೆ. ಭಾನುವಾರ ಪಿತೃಪಕ್ಷದ ಸ್ನಾನಕ್ಕೆ ಕೂಡಲಿಯ ಸಂಗಮಕ್ಕೆ ಬಂದಿದ್ದ ಬೀರೂರಿನ ಪಿನಿಯಾಚಾರ್ ಕುಟುಂಬದ ಹರೀಶ್ (24) ನೀರಿಗೆ ಇಳಿದಾಗ ಕೊಚ್ಚಿಹೋಗಿದ್ದನು. ಮೃತದೇಹವನ್ನು ಅಗ್ನಿಶಾಮಕ ದಳದವರು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ಹಸ್ತಾಂತರಿಸಿದ್ದಾರೆ.

Read More

ಸಾಗರ : ಗಾಂಜಾ ಸೇವನೆ ಮಾಡಿದ್ದ ಮೂವರ ಬಂಧನ : ವಿಶೇಷ ಟೆಸ್ಟಿಂಗ್ ಕಿಟ್ ಮೂಲಕ ಪತ್ತೆ :

ಸಾಗರ: ಗಾಂಜಾ ಸೇವಿಸಿದ ಮೂವರನ್ನು ತಪಾಸಣೆಗೆ ಒಳಪಡಿಸಿದ್ದು, ಅವರು ಮಾದಕ ವಸ್ತು ಸೇವಿಸಿದ ವಿಚಾರ ದೃಢಪಟ್ಟಿದ್ದು, ಅವರನ್ನು ಎನ್.ಡಿ.ಪಿ.ಎಸ್.ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ತಾಲೂಕಿನ ಆವಿನಹಳ್ಳಿ ಸಮೀಪ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರು ಯುವಕರನ್ನು ಸಾಗರ ಗ್ರಾಮಾಂತರ ಪೊಲೀಸರು ಸೋಮವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.  ಆಗ ಗಾಂಜಾ ಸೇವಿಸಿರಬಹುದು ಎಂಬ ಅನುಮಾನ ಮೂಡಿದೆ.  ನಂತರ ಅವರನ್ನು ಗಾಂಜಾ ಟೆಸ್ಟಿಂಗ್ ಕಿಟ್ ಮೂಲಕ ಪರೀಕ್ಷಿಸಲಾಗಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಸೊರಬ ಮೂಲದ ಶಶಾಂಕ್, ಸುಮಂತ್, ಶಿಕಾರಿಪುರದ ಮಹೇಶ್ ಎಂಬುವವರನ್ನು…

Read More

ರಿಪ್ಪನ್ ಪೇಟೆ : ಅತ್ಯಂತ ಯಶಸ್ವಿಯಾಗಿ ನಡೆದ ಹೃದಯ ತಪಾಸಣಾ ಶಿಬಿರ

ರಿಪ್ಪನ್ ಪೇಟೆ : ಭಾರತದ ಪ್ರಧಾನಿ ನರೇಂದ್ರ ಮೋದಿಯವರ 71 ನೇ ವರ್ಷದ ಜನ್ಮದಿನದ ಅಂಗವಾಗಿ ಸೇವಾ ಮತ್ತು ಸಮರ್ಪಣ ಅಭಿಯಾನ ಅಡಿಯಲ್ಲಿ ಸಾರ್ವಜನಿಕರಿಗೆ ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು ಭಾರತೀಯ ಜನತಾ ಪಕ್ಷದ ರಿಪ್ಪನ್ ಪೇಟೆ ಮಹಾಶಕ್ತಿ ಕೇಂದ್ರದ ವ್ಯೆದ್ಯಕೀಯ ಪ್ರಕೋಷ್ಟದ ವತಿಯಿದ ಆಯೋಜಿಸಲಾಗಿತ್ತು.           ಪಟ್ಟಣದ ಗೌಡ ಸಾರಸ್ವತ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿವಮೊಗ್ಗ ಮ್ಯಾಕ್ಸ್ ಆಸ್ಪತ್ರೆಯ ಹೃದಯ ರೋಗ ತಜ್ಞರಾದ ಡಾ. ರಾಕೇಶ್ ಈ…

Read More

ಶಿವಮೊಗ್ಗ : ಹರಿಗೆ ಹಿಂಭಾಗದ ರೈಲ್ವೆ ಹಳಿ ಮೇಲೆ ಅನಾಮಧೇಯ ಶವ ಪತ್ತೆ :

ಶಿವಮೊಗ್ಗ : ನಗರದ ಹರಿಗೆ ಹಿಂಬಾಗದಲ್ಲಿ  ರೈಲ್ವೆ ಹಳಿಯ ಮೇಲೆ ಅನಾಮಧೇಯ ಶವ ದೊರೆತಿದೆ.ಸುಮಾರು 35 ವಯಸ್ಸಿನ ಅನಾಮಧೇಯ ಗಂಡಸಿನ ಶವ ರೈಲ್ವೆ ಹಳಿಯ ಪಕ್ಕದಲ್ಲಿ ದೊರೆತಿದ್ದು. ಚಹರೆ ಹೀಗಿದೆ ದುಂಡು ಮುಖ ದೃಢಕಾಯ ಮೈಕಟ್ಟು  ಬಿಳಿಯ ಬಣ್ಣ ಹೊಂದಿದ್ದು  ಸಿಮೆಂಟ್ ಬಣ್ಣದ ಟೀಶರ್ಟ್ ಮತ್ತು ನೀಲಿ ಜೀನ್ಸ್ ಪ್ಯಾಂಟ್ ಹಾಕಿಕೊಂಡಿದ್ದಾನೆ. ಒಂದು ಅಂದಾಜಿನ ಪ್ರಕಾರ ಶಿವಮೊಗ್ಗದ ಕಡೆಯಿಂದ ಭದ್ರಾವತಿಯ ಕಡೆ ಮುಖ ಮಾಡಿ ರೈಲ್ವೆ ಹಳಿಯ ಪಕ್ಕದಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ರೈಲು ಡಿಕ್ಕಿ ಹೊಡೆದು…

Read More