ಕುಂಸಿ ಸಮೀಪದ ಬಾಳೆಕೊಪ್ಪದಲ್ಲಿ ಭೀಕರ ಅಪಘಾತ : ಇಬ್ಬರು ಬೈಕ್ ಸವಾರರು ಸಾವು
ಬೊಲೆರೋ ಪಿಕಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಸಂಜೆ 7 ಗಂಟೆಗೆ ನಡೆದಿದೆ. ಸಾಗರದ ಮೂಲಕ ಹಾರನಹಳ್ಳಿ – ಸವಳಂಗ – ನ್ಯಾಮತಿ – ಹೊನ್ನಾಳಿ ಮೂಲಕ ರಾಣೇಬೆನ್ನೂರಿಗೆ ಮೀನು ತೆಗೆದುಕೊಂಡು ಹೋಗುತ್ತಿದ್ದ ಬೊಲೆರೋ ಪಿಕಪ್ ವಾಹನ ಮತ್ತು ಬಾಳೆಕೊಪ್ಪಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಉಂಟಾಗಿದ್ದು ಬೈಕ್ ಸವಾರರು ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ಯುವಕರನ್ನು ಬಾಳೆಕೊಪ್ಪದ ಗಿರೀಶ್ ( 23),…


