ಹೊಸನಗರ : ರೈತನ ಬೆಳೆ ನಾಶಪಡಿಸಿದ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ದ ಆರಗ ಮತ್ತು ಹಾಲಪ್ಪ ನೇತ್ರತ್ವದಲ್ಲಿ ಅಹೋರಾತ್ರಿ ಧರಣಿ|hosanagar
ಹೊಸನಗರ : ರೈತನ ಸಾಗುವಳಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು ನಾಶಪಡಿಸಿದ ಅಧಿಕಾರಿಗಳು ಹಾಗೂ ರೈತ ವಿರೋಧಿ ಸರ್ಕಾರದ ವಿರುದ್ದ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ತಾಲೂಕ್ ಕಛೇರಿ ಮುಂಭಾಗದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ. ಹೊಸನಗರ ತಾಲೂಕಿನ ಕಚ್ಚಿಗೆಬೈಲು ಗ್ರಾಮದಲ್ಲಿ ರೈತರು ಸಾಗುವಳಿ ಮಾಡಿಕೊಂಡ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು JCB ಯಂತ್ರದ ಮೂಲಕ ತೆರವುಗೊಳಿದ ಅಧಿಕಾರಿಗಳ ದೌರ್ಜನ್ಯ ಹಾಗೂ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ…