Headlines

ಹೊಸನಗರ ತಾಲೂಕಿನ ಮರಳು ಮಾಫ಼ಿಯಾದ ಗರ್ಭಗುಡಿ – “ರಿಪಬ್ಲಿಕ್ ಆಫ್ ಹರಿದ್ರಾವತಿ”

ಹೊಸನಗರ ತಾಲೂಕಿನ ಹರಿದ್ರಾವತಿ ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು,ಸ್ಥಳೀಯ ಪ್ರಭಾವಿ ವ್ಯಕ್ತಿಯೊಬ್ಬ “ರಿಪಬ್ಲಿಕ್ ಆಫ್ ಹರಿದ್ರಾವತಿ” ಅಧಿಪತ್ಯ ಘೋಷಣೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಹೌದು ಮಲೆನಾಡಿನಾದ್ಯಂತ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದರು ಅಲ್ಪ ಮಟ್ಟಿಗೆ ಅದಕ್ಕೆ ಕಡಿವಾಣ ಹಾಕುವಲ್ಲಿ‌ ಜಿಲ್ಲೆಯ ಪೊಲೀಸ್ ಇಲಾಖೆ ಹಾಗೂ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಯಶಸ್ವಿಯು ಆಗಿದೆ.ಆದರೆ ಹೊಸನಗರ ತಾಲೂಕಿನ ಹರಿದ್ರಾವತಿ ಎಂಬ ಸುಸಂಸ್ಕೃತ ಗ್ರಾಮದ ಶರಾವತಿ ಹಿನ್ನೀರಿನ ಕೆರೆಹಳ್ಳಿ ಪಾಯಿಂಟ್ ನಲ್ಲಿ ಸ್ಥಳೀಯ ಪ್ರಭಾವಿ…

Read More

ರಿಪ್ಪನ್ ಪೇಟೆ ಸಮೀಪದಲ್ಲಿ ಟಿಪ್ಪರ್ ಲಾರಿ ಅಪಘಾತ : ತಪ್ಪಿದ ಭಾರೀ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಅಪಘಾತವಾದ ಘಟನೆ ರಿಪ್ಪನ್ ಪೇಟೆ ಸಮೀಪದ ಶೆಟ್ಟಿಬೀಡು ಗ್ರಾಮದಲ್ಲಿ ನಡೆದಿದೆ. ಹೊಸನಗರದಿಂದ ರಿಪ್ಪನ್ ಪೇಟೆಗೆ ತೆರಳುತ್ತಿದ್ದ KA55 3809 ಟಿಪ್ಪರ್ ಲಾರಿಯು ಶೆಟ್ಟಿಬೀಡು ಸಮೀಪದಲ್ಲಿ ಬ್ರೇಕ್ ಜಾಮ್ ಆಗಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ  ಧರೆಗೆ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ನ ಮುಂಭಾಗ ನಜ್ಜುಗುಜ್ಜಾಗಿದೆ.ಅದೃಷ್ಟವಶಾತ್ ಚಾಲಕನಿಗೆ ಯಾವುದೇ  ಗಂಭೀರ ಗಾಯಗಳಾಗಿಲ್ಲ. ಶೆಟ್ಟಿಬೀಡು ಕ್ರಾಸ್ ನಲ್ಲಿ ಬ್ರೇಕ್ ಜಾಮ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯು…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿದ್ದ ಟ್ರಾಕ್ಟರ್ ಕಳ್ಳತನದ ಆರೋಪಿ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಎಸ್ಕೇಪ್!!!!!!

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿದ್ದ ಕಳ್ಳತನದ ಆರೋಪಿಯೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.  ಕಳೆದ ಶನಿವಾರದಂದು ರಾತ್ರಿ ಸಾಗರ ರಸ್ತೆಯ ವಡಗೆರೆಯಲ್ಲಿರುವ ಉದ್ಯಮಿ ವೆಂಕಪ್ಪ ಶೆಟ್ಟಿ ರವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳ್ಳತನವಾಗಿತ್ತು.ಈ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ CR 66/22, IPC 379 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಟ್ರಾಕ್ಟರ್ ಕಳ್ಳತನದ ಸಂಶಯದ ಮೇಲೆ ವಡಗೆರೆಯ ನಿವಾಸಿ ಪ್ರತಾಪ್…

Read More

ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವ ಪತ್ತೆ :

ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವವೊಂದು ಪತ್ತೆಯಾಗಿದೆ.ಗಣಪತಿ ಕೆರೆಯ ದಡದ ನೀರಿನಲ್ಲಿ ಶವ ತೇಲುತ್ತಿತ್ತು, ಮೂಲಗಳ ಪ್ರಕಾರ ಮೃತಪಟ್ಟವರು  ಬೆಳಲಮಕ್ಕಿ ವಾಸಿ ರಕ್ಷಿತಾ ಎಂದು ಹೇಳಲಾಗುತ್ತಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಕ್ಷಿತಾ ಸಾವು ಕೊಲೆಯೋ, ಆತ್ಮಹತ್ಯೆಯೋ ಎಂಬ ನಿಗೂಢ ಅಂಶಗಳು ಪೊಲೀಸರ ತನಿಖೆಯಿಂದ ಹೊರಬರಬೇಕಾಗಿದೆ. ಇತ್ತೀಚಿಗೆ  ಸಾಗರದ ಕೇಶವ ಜ್ಯುವೆಲ್ಲರ್ಸ್ ನ ಸುಚಿತ್ರ ಸಾವಿನ ಪ್ರಕರಣದ ಹಿಂದೆಯೇ ರಕ್ಷಿತಾ ಪ್ರಕರಣವು ನಡೆದಿದ್ದು ಸುಚಿತ್ರ ಪ್ರಕರಣ ಕೊಲೆಯೋ ಆತ್ಮಹತ್ಯೆಯೋ ಎನ್ನುವುದು ಇನ್ನೂ ಬಗೆಹರಿದಿಲ್ಲ . ಇದು ಯಾವ ಹಂತಕ್ಕೆ…

Read More

ಹಾಕಿ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ರಿಪ್ಪನ್ ಪೇಟೆಯ ಯುವ ಪ್ರತಿಭೆ ಪೂಜಿತಾ

ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ, ಸತತ ಪರಿಶ್ರಮ, ನಿಖರ ಗುರಿ ಇದ್ದಲ್ಲಿ ಎಲ್ಲವೂ ಸಾಧ್ಯವೆಂದು ರಿಪ್ಪನ್ ಪೇಟೆಯ ಬರುವೆ ಗ್ರಾಮದ ಯುವತಿ ಹಾಕಿ ಕ್ಷೇತ್ರದಲ್ಲಿ ಸಾಧಿಸಿ ತೋರಿಸಿದ್ದಾಳೆ. ರಿಪ್ಪನ್‌ಪೇಟೆ ಬರುವೆ ಗ್ರಾಮದ ನಿವಾಸಿಗಳಾದ ನಾಗೇಶ್ ಗೌಡ ಹಾಗೂ ಪೂರ್ಣಿಮಾ ದಂಪತಿಗಳ ಮಗಳಾದ ಪೂಜಿತ ರಾಷ್ಟ್ರ ಮಟ್ಟದಲ್ಲಿ ಹಾಕಿ ಕ್ರೀಡೆಯಲ್ಲಿ ಮಿಂಚುತ್ತಿದ್ದಾಳೆ. ಕುಮಾರಿ ಪೂಜಿತ ಪ್ರಸ್ತುತ ಕರ್ನಾಟಕ ಮಹಿಳಾ ಹಾಕಿ ತಂಡದ ಸಹ ಆಟಗಾರ್ತಿಯಾಗಿದ್ದಾಳೆ. ಮಧ್ಯ ಪ್ರದೇಶದ ಭೂಫಾಲ್ ನಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕ…

Read More

ತೀರ್ಥಹಳ್ಳಿಯ ನೂತನ ಸಿಪಿಐ ಆಗಿ ಅಶ್ವಥ್ ಗೌಡ ನೇಮಕ :

ತೀರ್ಥಹಳ್ಳಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ರಾಜ್ಯ ಗುಪ್ತಚರ ಇಲಾಖೆಯಲ್ಲಿದ್ದ  ಅಶ್ವಥ್ ಗೌಡ.ಜೆ ರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಈಗಿನ ಸರ್ಕಲ್ ಇನ್ಸ್ ಪೆಕ್ಟರ್ ಆಗಿದ್ದ  ಸಂತೋಷ್ ಕುಮಾರ್ ರವರ ಸ್ಥಾನಕ್ಕೆ ನೂತನ ಸಿಪಿಐ‌ ಆಗಿ ಅಶ್ವಥ್ ಗೌಡ ರವರು ವರ್ಗಾವಣೆಗೊಂಡಿದ್ದಾರೆ. ಸಂತೋಷ್ ಕುಮಾರ್‌ ನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ರಾಜ್ಯ ಗುಪ್ತಚರ ಇಲಾಖೆಯಲ್ಲಿದ್ದ ಅಶ್ವಥ್ ಗೌಡ ತೀರ್ಥಹಳ್ಳಿ ಸಿಪಿಐ ಆಗಿ ವರ್ಗಾವಣೆಗೊಂಡಿದ್ದಾರೆ. ಸಂತೋಷ್ ಕುಮಾರ್ ಕಳೆದೆರಡು ವರ್ಷಗಳಿಂದ ತೀರ್ಥಹಳ್ಳಿ ಸಿಪಿಐ…

Read More

ರಿಪ್ಪನ್‌ಪೇಟೆಯ ಗಾನ ಪ್ರತಿಭೆಗೆ ಗೃಹ ಸಚಿವರಿಂದ ಸನ್ಮಾನ :

ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಿಪ್ಪನ್ ಪೇಟೆಯ ಯುವ ಗಾನ ಪ್ರತಿಭೆ ಪ್ರಣತಿ ಅಣ್ಣಪ್ಪನವರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸನ್ಮಾನಿಸಿ ಗೌರವಿಸಿದರು. ತೀರ್ಥಹಳ್ಳಿಯಲ್ಲಿ ನಡೆದ ಶಬ್ದ ಟ್ರಸ್ಟ್ ನ ಹಾಗೂ ವಿದ್ಯಾ ಸಿರಿ ಸಂಸ್ಥೆ ಅವರ  ಸಹ ಯೋಗದೊಂದಿಗೆ ನಡೆದ 50 ಶಾಲೆಗಳಿಗೆ ನೋಟ್ ಬುಕ್ ವಿತರಣೆ ,ನುಡಿನಮನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಿಕ್ಕವಯಸ್ಸಿನಲ್ಲೇ ಅದ್ಭುತ ಸಾಧನೆ ತೋರಿದ ತನ್ನ ಕಂಠಸಿರಿಯಿಂದ ಗಾಯನ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿ ಸಂಗೀತ…

Read More

ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಜೆ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿ

ಶಿವಮೊಗ್ಗದ ಜೆಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ಓದುತ್ತಿರುವ ಸಂದೀಪ್ ಮೂರನೇ ಸೆಮಿಸ್ಟರ್ ಪರೀಕ್ಷೆ ಬರೆದಿದ್ದನು.  ಈತನ ಜೊತೆ ಹಾಸ್ಟೆಲ್ ನಲ್ಲಿದ್ದ ಸಹಪಾಠಿಗಳು ರಜೆಯ ಕಾರಣ ತಮ್ಮ ಊರಿಗೆ ಹೋಗಿದ್ದರು. ಎರಡು ದಿನಗಳಿಂದ ಕೊಠಡಿಯಿಂದ‌ಹೊರಗೆ ಬಾರದ ವಿದ್ಯಾರ್ಥಿ ಸಂದೀಪ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು ಎನ್ನಲಾಗಿದೆ. ಸಂದೀಪ್ ಮೂಲತ ಕಲಬುರ್ಗಿ ವಾಸಿಯಾಗಿದ್ದು ಶಿವಮೊಗ್ಗದ ಜೆ ಎನ್ ಸಿಸಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು.  ಕೊಠಡಿಯಲ್ಲಿ ಫ್ಯಾನ್ ಗೆ ಸಂದೀಪ್…

Read More

ತೀರ್ಥಹಳ್ಳಿಯಲ್ಲಿ ಅಕ್ರಮ ಮರಳು ಸಾಗಾಟ : ಲಾರಿಗಳು ಸೀಜ಼್ !!!!!!

ತೀರ್ಥಹಳ್ಳಿ ತಾಲೂಕಿನ ಹಲವು ಮರಳು ಕ್ವಾರೆಗಳಲ್ಲಿ ನಿರಂತರವಾಗಿ ಮರಳು ಅಕ್ರಮ ಸಾಗಾಣಿಕೆ ಆಗುತ್ತಿದ್ದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತು ಪೊಲೀಸ್ ಇಲಾಖೆಗಳು  ಕಣ್ಣುಮುಚ್ಚಿ ಮೌನವಸ್ಥೆಯಲ್ಲಿ ಇರುವುದಕ್ಕೆ   ಗೃಹಸಚಿವರ ತವರೂರಿನ ಅಕ್ರಮ ಮರಳು ಸಾಗಾಟ ಪ್ರಕರಣವೇ ಸಾಕ್ಷಿಯಾಗಿದೆ. ಭಾನುವಾರ ಸಂಜೆಯ ವೇಳೆ ಮರಳನ್ನ ಡಬ್ಲಿಂಗ್ ಮಾಡಿಕೊಂಡು ಬರುತ್ತಿದ್ದ ಲಾರಿಯನ್ನ ಯಾರೋ ಒಬ್ಬರು ಪೊಲೀಸ್ ಇಲಾಖೆ ಮಾಹಿತಿ ನೀಡಿ ಅದನ್ನು ಕುಶಾವತಿ ಬಳಿ  ಹಿಡಿಸುವ ಸ್ಥಿತಿ ಬಂದಿದೆ ಎಂದರೆ ಗೃಹಸಚಿವರ ತವರಿನಲ್ಲಿ ಎಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಅರ್ಥವಾಗುತ್ತದೆ.  ತಾಲೂಕಿನ…

Read More

ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎಲ್ಲರಿಗೂ ಭಾವ..!!!: ಬೇಳೂರು ಗೋಪಾಲ ಕೃಷ್ಣ ವ್ಯಂಗ್ಯ…

ರಿಪ್ಪನ್ ಪೇಟೆ: ರಾಜ್ಯದ ಬಿಜೆಪಿ ಸರಕಾರದ ಆಡಳಿತ ಕಳಪೆಯಾಗಿದ್ದು ಜನಸಾಮಾನ್ಯರ ಬದುಕು ದುಸ್ತರವಾಗಿದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಲ್ಲರಿಗೂ ಭಾವ ಅನ್ನೋ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಉತ್ತಮ ಆಡಳಿತವನ್ನು ನೀಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು.  ಪಟ್ಟಣದಲ್ಲಿ ಇಂದು ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು  ಬೆಲೆ ಏರಿಕೆಯಿಂದ  ರಾಜ್ಯದಲ್ಲಿ ಜನಸಾಮಾನ್ಯರ ಬದುಕುವುದು ದುಸ್ತರವಾಗಿದೆ. ಕೂಲಿ ಕಾರ್ಮಿಕರು ಬಡವರು ಹಾಗೂ ಮಧ್ಯಮವರ್ಗದವರು  ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದು ಕೇಂದ್ರ ಹಾಗೂ ರಾಜ್ಯದ…

Read More
Exit mobile version