ಅಮ್ಮನ ಘಟ್ಟ ಜೇನುಕಲ್ಲಮ್ಮ ದೇವಸ್ಥಾನವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು : ಹಾಲಪ್ಪ ಹೆಚ್ ಹರತಾಳು|Halappa
ರಿಪ್ಪನ್ಪೇಟೆ : ಪುರಾಣ ಪ್ರಸಿದ್ಧವಾದ ಕೋಡೂರಿನ ಜೇನುಕಲ್ಲಮ್ಮ ಘಟ್ಟವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅಮ್ಮನಘಟ್ಟದ ಜೇನುಕಲ್ಲಮ್ಮ ಸಮುದಾಯ ಭವನದಲ್ಲಿ ಶನಿವಾರ ಮುಜರಾಯಿ ಮತ್ತು ಅಭಿವೃದ್ಧಿ ಸಮಿತಿಗಳ ಸಮನ್ವಯ ಸಭೆಯಲ್ಲಿ ಮಾತನಾಡಿ ದೇವಿಯ ದೇವಸ್ಥಾನವನ್ನು ಅಭಿವೃದ್ಧಿ ಪಡಿಸುವಲ್ಲಿ ಈ ಹಿಂದಿನ ಸಮಿತಿ ಕಾರ್ಯ ಪ್ರೌವೃತ್ತವಾಗಿತ್ತು. ಈಗಿನ ನೂತನ ಸಮಿತಿಯು ಅಭಿವೃದ್ಧಿಯ ಮುಂದಾಲೋಚನೆಯನ್ನು ಹೊಂದಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಂತೆ ಒಂದುಗೂಡಿ ಅಭಿವೃದ್ಧಿ ಕೆಲಸ ನಿರ್ವಹಿಸಲು ಸಲಹೆ ನೀಡಿದ್ದೇನೆ. ಸರ್ಕಾರದ…