ತೀರ್ಥಹಳ್ಳಿಯಲ್ಲಿ ಈ ಬಾರಿ ಸಂಭ್ರಮದ ಅದ್ದೂರಿ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ

ತೀರ್ಥಹಳ್ಳಿ: ಮಲೆನಾಡಿನ ಸುಪ್ರಸಿದ್ದ ಜಾತ್ರೆಗಳಲ್ಲಿ ಒಂದಾಗಿರುವ ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆ ಜನವರಿ 2,3,4 ರಂದು ನಡೆಯಲಿದ್ದು  ಈ ಬಾರಿ ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆಜಾತ್ರೆಯನ್ನು ಸಂಭ್ರಮ ಹಾಗೂ ವೈಭವಯುತವಾಗಿ ಆಚರಿಸುವುದಾಗಿ ಸಮಿತಿ ಸಂಚಾಲಕರಾಗಿರುವ ಸೊಪ್ಪುಗುಡ್ಡೆ ರಾಘವೇಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಂದಾಜು 12 ಲಕ್ಷ ರೂ ಮೊತ್ತದ ಬಜೆಟ್ ನೊಂದಿಗೆ  3 ದಿನಗಳ ಕಾಲ ನೆಡೆಯಲಿರುವ ಅದ್ದೂರಿ ಜಾತ್ರೆಗೆ ಸಮಿತಿ ಸಂಚಾಲಕರಾಗಿರುವ ಸೊಪ್ಪುಗುಡ್ಡೆ ರಾಘವೇಂದ್ರ ಸರ್ವರನ್ನು ಸ್ವಾಗತಿಸಿದ್ದಾರೆ.

Read More

ಶಿಕಾರಿಪುರದಲ್ಲಿ ಚಿರತೆ ದಾಳಿ: ಇಬ್ಬರಿಗೆ ಗಂಭೀರ ಗಾಯ, ಗ್ರಾಮಸ್ಥರಲ್ಲಿ ಆತಂಕ

Leopard attack in Shikaripura taluk of Shivamogga injures two farmers seriously, triggering panic among villagers. Forest officials set traps and urge caution. ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ ಹಾಗೂ ಮುತ್ತಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ ನಡೆಸಿದ ಘಟನೆ ಆತಂಕ ಸೃಷ್ಟಿಸಿದೆ. ದಾಳಿಯಲ್ಲಿ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡಗಂಟಿ ಗ್ರಾಮದ ಸುದೀಪ್ ಅವರು ಸಂಜೆ ವೇಳೆ ಮುತ್ತಗಿ…

Read More

ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ

ರಿಪ್ಪನ್ ಪೇಟೆಯಲ್ಲಿ ಕಾರ್ಮಿಕ  ದಿನಾಚರಣೆ. ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವೇ ಕಾರ್ಮಿಕ ದಿನ – ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಕಾರ್ಮಿಕ ದಿನಾಚರಣೆ, ಅಥವಾ ಅಂತಾರಾಷ್ಟ್ರೀಯ ಕಾರ್ಮಿಕ ದಿನ, ಪ್ರತಿ ವರ್ಷ ಮೇ 1ರಂದು ವಿಶ್ವದಾದ್ಯಂತ ಕಾರ್ಮಿಕರ ಹಕ್ಕುಗಳು ಮತ್ತು ಸಾಧನೆಗಳನ್ನು ಗೌರವಿಸುವ ದಿನವಾಗಿದೆ. ಇದು ಕಾರ್ಮಿಕ ಚಳವಳಿಯ ಇತಿಹಾಸ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ನಡೆದ ಹೋರಾಟಗಳನ್ನು ಸ್ಮರಿಸುತ್ತದೆ ಎಂದು ರಿಪ್ಪನ್ ಪೇಟೆ  ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದಲ್ಲಿ…

Read More

ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿ 10 ಲಕ್ಷ ರೂ. ಚೆಕ್ ನೀಡಿದ ಬಿಜೆಪಿ ನಾಯಕರು :

ಶಿವಮೊಗ್ಗ ನಗರದಲ್ಲಿ ಭಾನುವಾರ (ಫೆ.20ರಂದು) ಬರ್ಬರವಾಗಿ ಹತ್ಯೆಯಾಗಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಇಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​​, ಉಪಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿ ಕುಟುಂಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂಧರ್ಭದಲ್ಲಿ ಬಿಜೆಪಿ ಪಕ್ಷದ ವತಿಯಿಂದ10 ಲಕ್ಷ ರೂ. ಚೆಕ್​ಅನ್ನು ಹರ್ಷ ಪೋಷಕರಿಗೆ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಹರ್ಷ ಕಗ್ಗೊಲೆ ಆಗುತ್ತೆ ಅಂತ ಕಲ್ಪನೆಯೂ ಇರಲಿಲ್ಲ. ಸರ್ಕಾರ ಯಾರು ಗೂಂಡಾಗಳಿದ್ದಾರೆ ಅವರನ್ನ ಬಂಧನ ಮಾಡಿದೆ….

Read More

ಗೃಹ ಸಚಿವರ ಸ್ವಕ್ಷೇತ್ರದಲ್ಲಿಯೇ ವ್ಯಕ್ತಿಯೊಬ್ಬನ ಭೀಕರ ಹತ್ಯೆ!!!!!!!!

ತೀರ್ಥಹಳ್ಳಿ : ತಾಲೂಕಿನ ಶೇಡ್ಗಾರ್  ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೃಗಾವಧೆಯ ಬೆಳ್ಳಿಕೊಡಿಗೆ ವಾಸಿ ರಾಜು (45) ಬೆಳ್ಳಂಬೆಳಗ್ಗೆ ಮನೆ ಮುಂಭಾಗದಲ್ಲಿ ಹೆಣವಾಗಿದ್ದಾರೆ. ಸಾಯುವ ಮುನ್ನ ರಾಜು ಮಾರಾಮಾರಿ ವಿಚಾರ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಂಡಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಬಹಿರಂಗವಾಗಬೇಕಾಗಿದೆ. ರಾಜು ಮೂರು ದಿನಗಳಿಂದ ಮನೆಗೆ ಬಂದಿರಲ್ಲಿಲ್ಲ. ಸೋಮವಾರ ಬೆಳಿಗ್ಗೆ 6.30ರ ಸುಮಾರಿಗೆ ಮೂವರು ದುಷ್ಕರ್ಮಿಗಳು ಯದ್ವತದ್ವ ಹಲ್ಲೆ ಮಾಡಿ ಬೈಕಿನಲ್ಲಿ ಮನೆ ಮುಂಭಾಗ ತಂದು ಎಸೆದಿದ್ದಾರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡ ರಾಜು ಜೋರಾಗಿ…

Read More

ಹೃದಯಾಘಾತದಿಂದ 34 ವರ್ಷದ ಯುವಕ ಸಾವು

ಹೃದಯಾಘಾತದಿಂದ 34 ವರ್ಷದ ಯುವಕ ಸಾವು ಹೃದಯಾಘಾತದಿಂದ 34 ವರ್ಷದ ಯುವಕ ಸಾವು ಕಂದಮ್ಮನಿಗಾಗಿ ಬಾಳುವ ಆಸೆ ಇತ್ತು… ಆದರೆ ಹೃದಯ ದ್ರೋಹ ಬಗೆದು ಬಡಿತ ನಿಲ್ಲಿಸಿತ್ತು… ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿ ತಂದೆ ಎಂಬ ಬಿರುದು ಪಡೆದ ಮೇಲೆ ದಿನವೂ ಕಣ್ಣಲ್ಲಿ ಕನಸು ತುಂಬಿಸಿಕೊಂಡಿದ್ದ ಗಿರೀಶ್ ಎಂಬ ಯುವಕ ಕೇವಲ 34ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಿರೀಮನೆ ಗ್ರಾಮದ ನಿವಾಸಿ ಗಿರೀಶ್ ಅವರಿಗೆ ನಿನ್ನೆ…

Read More

ಅತಿಥಿ ಉಪನ್ಯಾಸಕರು ಶೂ ಪಾಲಿಶ್, ಬಾರ್ ಗಳಲ್ಲಿ ವೇಟರ್ ಗಳಾಗಿ ಕೆಲಸ ಮಾಡುವ ದುಸ್ಥಿತಿ ಬಂದಿದ್ದರೂ ಸರ್ಕಾರ ಜಾಣಕುರುಡು ತೋರುತ್ತಿದೆ : ತೀರ್ಥಹಳ್ಳಿ ಅತಿಥಿ ಉಪನ್ಯಾಸಕರ ಆರೋಪ , ಪ್ರತಿಭಟನೆ

ತೀರ್ಥಹಳ್ಳಿ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಶ್ರೀಹರ್ಷ ಶಾನುಬೋಗ್ ರವರ ಭಾವಚಿತ್ರ ಹಿಡಿದು ಪ್ರತಿಭಟಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕಾಲೇಜು ಶಿಕ್ಷಣ ಇಲಾಖೆಯ ವ್ಯವಸ್ಥೆಯಲ್ಲಿ 11 ಸಾವಿರದಿಂದ 13 ಸಾವಿರೂ ವೇತನ ಪಡೆದು ಇಂದಿನ ಬೆಲೆ ಏರಿಕೆ ಯುಗದಲ್ಲಿ ಜೀವನ ನಿರ್ವಹಣೆ ಮಾಡಲು ಕಷ್ಟವಾಗಿದೆ ಇಂಥ ಶೋಚನೀಯ ಪರಿಸ್ಥಿತಿಯನ್ನು ಎದುರಿಸಲಾಗದೆ  ಹಲವಾರು…

Read More

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – 22 ವರ್ಷದ ಯುವಕನಿಗೆ 10 ವರ್ಷ ಶಿಕ್ಷೆ,ಒಂದೂವರೆ ಲಕ್ಷ ದಂಡ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದ್ದ, ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್​ 10 ವರ್ಷ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ. 2022ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 22 ವರ್ಷದ ವ್ಯಕ್ತಿಯೊಬ್ಬನು, 17  ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿ ಕೇಸ್​ ದಾಖಲಾಗಿತ್ತು. ಈ ಸಂಬಂಧ , ಹಿರಿಯ ಸಹಾಯಕ  ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತನಿಖೆ ಕೈಗೊಂಡಿದ್ದು, ಚಾರ್ಜ್​ಶೀಟ್ ಸಲ್ಲಿಸಿದ್ದರು.   ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು…

Read More

ಕಿಮ್ಮನೆ ರತ್ನಾಕರ್ ರವರ ಜನಜಾಗೃತಿ ಪಾದಯಾತ್ರೆಗೆ ಚಾಲನೆ : ಗೃಹ ಸಚಿವರ ಮನೆ ಮುಂದೆ ಸ್ವ ಪಕ್ಷದ ಕಾರ್ಯಕರ್ತರ ಮೇಲೆ ಗರಂ ಆದ ಕಿಮ್ಮನೆ!!!! ಯಾಕೆ ಗೊತ್ತಾ?????

ಗೃಹಸಚಿವರ ಆಡಳಿತ ವೈಖರಿ ಹಾಗೂ ಹೇಳಿಕೆ ಖಂಡಿಸಿ ಇಂದಿನಿಂದ ನಾಲ್ಕುದಿನದ ಪಾದಯಾತ್ರೆಗೆ ಕಾಗೋಡು ತಿಮ್ಮಪ್ಪನವರ ಪುತ್ರಿ ರಾಜನಂದಿನಿ ಚಾಲನೆ ನೀಡಿದರು. ಗೃಹಸಚಿವರ ಬೇಜವಬ್ದಾರಿ ಹೇಳಿಕೆ ಮತ್ತು, 40% ಕಮಿಷನ್ ಅವ್ಯವಹಾರ, ಪ್ರಾದ್ಯಾಪಕ ಹುದ್ದೆ, ಲೋಕೋಪಯೋಗಿ ಪರೀಕ್ಷೆ, ಪಿಎಸ್ಐ ಪರೀಕ್ಷೆಯಲ್ಲಿ ಹಗರಣ, ದಿನ‌ನಿತ್ಯ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಜನಜಾಗೃತಿಯ ಪಾದಯಾತ್ರೆಗೆ ಚಾಲನೆ ದೊರೆತಿದೆ. ಕಾಗೋಡು ಪುತ್ರಿ ರಾಜನಂದಿನಿರವರು ಕಾಂಗ್ರೆಸ್ ಬಾವುಟ  ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್…

Read More

ದೀಪಾವಳಿ ನೋನಿಗೆ ಸಾವಿರ ಹಣ್ಣು ಕಾಯಿ ನೈವೇದ್ಯ ಬಯಸುವ ಮಲೆನಾಡಿನ ದೈವ ! ಹಾಗಾದರೆ ಇದು ಯಾವ ಗ್ರಾಮದ ದೇವತೆ ? ಒಮ್ಮೆ ಈ ಸುದ್ದಿ ನೋಡಿ

ಬೆಳಕಿನ ಹಬ್ಬ ದೀಪಾವಳಿ ಎಂದರೆ ಅದೇನೋ ಸಡಗರ ಅದೆಷ್ಟೋ ಸಂಭ್ರಮ ಮಲೆನಾಡಿನಲ್ಲಂತೂ ಹಬ್ಬದ ಸಡಗರ ಸಂಭ್ರಮ ಹೇಳತೀರದು. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಐಗಿನಬೈಲು ಗ್ರಾಮದಲ್ಲಿ ಗಾಮೇಶ್ವರ ದೈವವು ವಿಶಿಷ್ಟವಾದಂತಹ  ಶಕ್ತಿಯನ್ನು ಹೊಂದಿದ್ದು ಪ್ರತಿ ವರ್ಷವೂ ನೋನಿ ಹಬ್ಬದಂದು ಈ ದೈವಕ್ಕೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.ನೂರಾರು  ವರ್ಷಗಳ ಇತಿಹಾಸವಿರುವ   ಈ ಗಾಮೇಶ್ವರ ದೈವ ವೃಕ್ಷಕ್ಕೆ ಗ್ರಾಮದ ಪ್ರತಿ ಕುಟುಂಬದ ಪುರುಷರು ಉಪವಾಸ ವ್ರತದೊಂದಿಗೆ ಆಗಮಿಸಿ ದೈವಕ್ಕೆ ನಮಿಸಿ ಸಾವಿರಾರು ಹಣ್ಣುಕಾಯಿ ಸಮಪಿ೯ಸುವಂತಹ ಪ್ರತೀತಿಯಿದೆ.  ಐಗಿನಬೈಲು…

Read More