Ripponpete | ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದ ಗುತ್ತಿಗೆ ಕಾರ್ಮಿಕನಿಗೆ ಗಂಭೀರ ಗಾಯ

Ripponpete | ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದ ಗುತ್ತಿಗೆ ಕಾರ್ಮಿಕನಿಗೆ ಗಂಭೀರ ಗಾಯ ವಿದ್ಯುತ್ ಕಂಬವೇರಿದ ಗುತ್ತಿಗೆ ಕಾರ್ಮಿಕನೊಬ್ಬನಿಗೆ ಕರೆಂಟ್ ಶಾಕ್ ಆಗಿ ಕಂಬದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಟಾಣಿಜೇಡ್ಡು ಗ್ರಾಮದಲ್ಲಿ ನಡೆದಿದೆ.  ಶಿಗ್ಗಾಂವ್ ಮೂಲದ ರಮೇಶ್(24) ಗಂಭೀರ ಗಾಯಗೊಂಡಿರುವ ವಿದ್ಯುತ್ ಗುತ್ತಿಗೆ ಕಾರ್ಮಿಕನಾಗಿದ್ದಾನೆ. ಬಟಾಣಿಜೆಡ್ಡು ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಮಗಾರಿ ನಿಮಿತ್ತ ಗುತ್ತಿಗೆ ಕಾರ್ಮಿಕ ರಮೇಶ್ ಲೈಟ್ ಕಂಬವೇರಿದ್ದು ಈ…

Read More

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!??|Hosanagara

ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!?? ಹೊಸನಗರ: ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಜಾತ ದಿನೇಶ್ ರವರ ಮನೆಯ ಸುತ್ತಮುತ್ತ ಅನಾಮಿಕರು ಭಾರೀ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದ ಬುಧವಾರ ಬೆಳಗ್ಗೆ ಮನೆ ಮಾಲೀಕರ ಗಮನಕ್ಕೆ ಬಂದಿದೆ. ಗ್ರಾಮದಲ್ಲಿ ಅಕ್ರಮ ಮರಳು  ಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಶಾಲಾ ಮಕ್ಕಳಿಗೆ ಇದರಿಂದ ತೊಂದರೆ ಆಗುಬಹುದು ಎಂದು ಮರಳು ಸಾಗಾಣಿಕೆ…

Read More

Shivamogga | ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಱ್ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಲಾಗಿದೆ. ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್‌ ಫಾರ್‌ ಇ ಗವರ್‌ನೆನ್ಸ್‌ನ ಸಿಇಒ ಆಗಿ ನೇಮಿಸಲಾಗಿದೆ. 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್‌ನ…

Read More

ಅಡಿಕೆ ಕಳ್ಳತನ ಮಾಡುತಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು | ಮಾಲು ಸಹಿತ ವಾಹನ ವಶಕ್ಕೆ | Crime news

ಅಡಿಕೆ ಕಳ್ಳತನ ಮಾಡುತಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು | ಮಾಲು ಸಹಿತ ವಾಹನ ವಶಕ್ಕೆ | Crime news ಮಲೆನಾಡು ಭಾಗದಲ್ಲಿ ಅಡಿಕೆ ಕಳ್ಳತನವೆಸಗುತಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಕಲ್ಕೊಪ್ಪ ಕರಕುಚ್ಚಿ ಗ್ರಾಮದ ದೇವಾದಾಸ್ ಎಂಬುವರ ಮನೆಯಲ್ಲಿ 4 ಕ್ವಿಂಟಾಲ್ ಚಾಲಿ ಅಡಿಕೆ ಕಳ್ಳತನವಾಗಿದ್ದು ಅಡಿಕೆ ಕಳ್ಳತನ ಮಾಡಿದ್ದ ನಾಲ್ವರನ್ನು ವಾಹನ ಹಾಗೂ ಮಾಲು ಸಮೇತ ಮಾಳೂರು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಮಾಳೂರು ವ್ಯಾಪ್ತಿಯಲ್ಲಿ…

Read More

Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ

Ripponpete | ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಗ್ರಾಮಾಡಳಿತ ನಿರ್ಲಕ್ಷ್ಯ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿದೆ.ಭೀಕರ ಬರಗಾಲದಿಂದ ಹನಿ ಹನಿ ನೀರಿಗೂ ಸಹ ಆಹಾಕರ ಇದೆ. ಪ್ರತಿಯೊಂದು ವಾರ್ಡ್ ಗೆ ಹೋದರೂ ಸಹ ನೀರಿನ ಸಮಸ್ಯೆ ಇದ್ದೆ ಇದೆ.  ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ ನೀರು ಪೂರೈಸುವ ಮುಖ್ಯ ಪೈಪ್ ಸಾಗರ ರಸ್ತೆಯ…

Read More

ಸಾಗರದಲ್ಲಿ ಆರ್‌ಸಿಬಿ ಕ್ರೇಜ್‌ ಜೋರು..! ಈ ಸಲ ಕಪ್‌ ನಮ್ದೇ ಎಂದ RCB ಅಭಿಮಾನಿ ಸಂತೋಷ್ ಸದ್ಗುರು…! ವಿಶೇಷ ಕಾರನ್ನು ಉದ್ಘಾಟಿಸಿದ ಕಿರುತೆರೆ ನಟಿ ರಜನಿ

ಸಾಗರ :ಈ ಸಲ ಕಪ್ ನಮ್ದೆ’ ಈಗಾಗಲೇ ಈ ವಾಕ್ಯ ನಿಮ್ಮ ಮನದಲ್ಲೂ ಗುಣುಗುಡುತ್ತಿರಬಹುದು. ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್, ನ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಕಿರೀಟ ಗೆಲ್ಲಲು ಪಣತೊಟ್ಟಿದೆ.ಅಭಿಮಾನಿಗಳಂತೂ ಈ ಬಾರಿ ಕಪ್ ಗೆದ್ದೇ ಗೆಲ್ತೀವಿ ಎಂಬ ಅಚಲ ಆತ್ಮವಿಶ್ವಾಸದಲ್ಲಿದ್ದಾರೆ.  ಇದರಂತೆ ಸಾಮಾಜಿಕ ಜಾಲತಾಣಗಳಲ್ಲಿ ‘ಈ ಸಲ ಕಪ್ ನಮ್ದೆ’ ಎಂಬ ಹ್ಯಾಶ್‌ಟ್ಯಾಗ್ ಗಳು ಕೂಡ ವೈರಲ್ ಆಗಿ ಹರಡುತ್ತಿದೆ. ಈ ಡೈಲಾಗ್ ಮೂಲಕ ಆರ್ಸಿಬಿ ಫ್ಯಾನ್ಸ್‌ಗಳು ಒಂದಲ್ಲ ಒಂದು ರೀತಿ…

Read More

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ಸ್ಥಳದಲ್ಲಿಯೇ ಯುವಕ ಸಾವು|accident

ಶಿವಮೊಗ್ಗ ನಗರದ ಹೊರವಲಯದ ಅಗಸವಳ್ಳಿಯಲ್ಲಿ  ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಹಿಂಬದಿಯ ಸವಾರ ಸ್ಥಳದಲ್ಲಿಯೇ ಸಾವು ಕಂಡಿದ್ದಾನೆ. ಗೋವಿಂದಾಪುರದ ನಿವಾಸಿ ಕಿಶನ್ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ. ಶಿವಮೊಗ್ಗ ನಗರದಲ್ಲಿ ಗಾರೆ ಕೆಲಸಕ್ಕೆಂದು ಗೋವಿಂದಾಪುರದಿಂದ ಲಕ್ಷಣ.ಪಿ ಎಂಬುವವರ ಜೊತೆ ಬೈಕ್ ನಲ್ಲಿ ಬರುವಾಗ‌ ಈ ಅಪಘಾತ ಸಂಭವಿಸಿದೆ. ಅಗಸವಳ್ಳಿಯ ಸಂಪತ್ ಮನೆಯ ಎದುರಿನ ರಸ್ತೆಯಲ್ಲಿ ಕೆಎ28-7851 ಕ್ರಮ ಸಂಖ್ಯೆಯ ನೀರಿನ ಟ್ಯಾಂಕ್ ಲಾರಿಯು ಎದುರಿನಿಂದ ಬಂದು ಡಿಕ್ಕಿಯಾದ ಪರಿಣಾಮ ಕಿಶನ್ (19) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ….

Read More

ಶಿವಮೊಗ್ಗದಲ್ಲಿ ರೌಡಿಗಳಿಂದ ಟ್ರಾಫಿಕ್ ಪೊಲೀಸರಿಗೇ ಕೊಲೆ ಬೆದರಿಕೆ – ಇಬ್ಬರ ಬಂಧನ | ವೀಡಿಯೋ ವೈರಲ್ SMG

ಸಾರ್ವಜನಿಕವಾಗಿ ರೌಡಿ ಪಟಾಲಂಗಳು ಶಿವಮೊಗ್ಗದಲ್ಲಿ ಮತ್ತೆ ಗರಿಬಿಚ್ಚಿದ್ದು, ಹಾಡಹಗಲೇ, ಅದರಲ್ಲೂ ಪೊಲೀಸ್ ಸಿಬ್ಭಂದಿ ಮೇಲೆ ಮರ್ಡರ್ ಬೆದರಿಕೆ, ಅವಾಚ್ಯವಾಗಿ ಬೈದು ಧಮ್ಕಿ ಹಾಕಿರುವ ಘಟನೆ ಸದ್ಯ ಮಲೆನಾಡಿನಲ್ಲಿ ಸಂಚಲನ ಮೂಡಿಸಿದೆ. ಶಿವಮೊಗ್ಗದಲ್ಲಿ ಟ್ರಾಫಿಕ್ ಪೊಲೀಸರಿಗೇ ಅವಾಜ್ ಹಾಕಲಾಗಿದೆ. ನಟೋರಿಯಸ್ ಹಿನ್ನೆಲೆಯುಳ್ಳ ಪುಡಾರಿಗಳು, ಟ್ರಾಫಿಕ್ ಪೊಲೀಸರು ಹಿಡಿಯುತ್ತಾರೆ ಅಂತಾ ತಾವೇ ಬೈಕಿನಲ್ಲಿ ಬಿದ್ದು, ತಾವೇ ವಿಡಿಯೋ ಮಾಡಿ ತಗಲಾಕಿಕೊಂಡಿದ್ದಾರೆ. ಟ್ರಾಫಿಕ್ ಪೊಲೀಸ್ ಸಿಬ್ಭಂಧಿಗೆ ಪ್ರಾಣ ಬೆದರಿಕೆ ಒಡ್ಡಿರುವ ರೌಡಿ ಶೀಟರ್ ಗಳು, ತಮ್ಮ ಹುಡುಗರನ್ನು ಕರೆಸಿ, ಹಲ್ಲೆ ಮಾಡಲು…

Read More

ಶಿವಮೊಗ್ಗ: ಭೂಗಳ್ಳ ಅಧಿಕಾರಿಗಳು ಹಾಗು ಭ್ರಷ್ಟ ರಾಜಕಾರಣಿಗಳನ್ನು ಜೈಲಿಗಟ್ಟುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ:

  ಶಿವಮೊಗ್ಗ ತಾಲ್ಲೂಕು ವ್ಯಾಪ್ತಿ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಕೆಲವು ವರ್ಷಗಳಿಂದ ಭೂ ಮಾಫಿಯಾಗಳ ಹಾವಳಿ ತೀರಾ ಹಚ್ಚಾಗಿದ್ದು ಇದನ್ನ ತಡೆಯುವ ನಿಟ್ಟಿನಲ್ಲಿ ಉನ್ನತ ಮಟ್ಟದ ಪೊಲೀಸ್ ತಂಡವನ್ನ ರಚಿಸಬೇಕು ಎಂದು ಒತ್ತಾಯಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಮೌನ ಪ್ರತಿಭಟನೆ ನಡೆಸಿದೆ.  ಶಿವಮೊಗ್ಗ ನಗರ ಪ್ರದೇಶ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಏಕಾ ಏಕಿ ಭೂ ಮಾಫಿಯಾಗಳ ಹಾವಳಿ ಹೆಚ್ಚಾಗುತ್ತಿದ್ದು ಇದರ ಹಿಂದೆ ಜಿಲ್ಲೆಯ ಪ್ರಭಾವಿ…

Read More

ಹಳೆಯ ದ್ವೇಷ : ಮಾರಾಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಭೀಕರ ಕೊಲೆ

ಹಳೆಯ ದ್ವೇಷ : ಮಾರಾಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಭೀಕರ ಕೊಲೆ ಶಿವಮೊಗ್ಗ ತಾಲೂಕಿನ ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ 45 ವರ್ಷದ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಮೃತ ದುರ್ದೈವಿಯನ್ನು ಗಂಗಮ್ಮ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮೆಗ್ಗಾನ್ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ನಾಗೇಶ್ ನಾಯ್ಕ ಮತ್ತು ಹರೀಶ್ ನಾಯ್ಕ ಎಂಬುವರನ್ನು ಪೊಲೀಸರು…

Read More