Headlines

ದಲಿತ ಮಹಿಳೆ ಮೇಲೆ ಅತ್ಯಾಚಾರ ಯತ್ನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ತೀರ್ಥಹಳ್ಳಿ ತಾಲೂಕಿನ ಆರಗ ಸಮೀಪ ದಲಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೇ 9 ರ ರಾತ್ರಿ ಆರಗ ಬಳಿ ನಾಲ್ವರು ದುಷ್ಕರ್ಮಿಗಳು ದಲಿತ ಮಹಿಳೆ ಮತ್ತು ಆಕೆಯ ಗಂಡನ ಮೇಲೆ ಹಲ್ಲೆ ಮಾಡಿದ್ದರು. ಬಳಿಕ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ದೂರು ದಾಖಲಾಗಿತ್ತು.  ಸದ್ಯ ಹಲ್ಲೆಗೊಳಗಾದ ಮಹಿಳೆ ಮತ್ತು ಆಕೆಯ ಪತಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀರ್ಥಹಳ್ಳಿ ಸಿಪಿಐ ಸಂತೋಷ್ ನೇತೃತ್ವದ…

Read More

ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನಾಪತ್ತೆ : ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ

 ಭದ್ರಾ ಚಾನೆಲ್ ನಲ್ಲಿ ಸ್ನಾನ ಮಾಡಲು ಹೋದ ನಾಲ್ವರು ಮಕ್ಕಳಲ್ಲಿ ಇಬ್ಬರು ನೀರು ಪಾಲಾಗಿರುವ ಘಟನೆ ವರದಿಯಾಗಿದೆ. ಸಮೀಪದ ಹೆಂಚಿನ ಸಿದ್ದಾಪುರ ಗ್ರಾಮದ ಭದ್ರಾ ಬಲದಂಡೆ ಕಾಲುವೆಯಲ್ಲಿ ದೊಡ್ಡಪ್ಪನ ಜೊತೆ ನಾಲ್ವರು ಮಕ್ಕಳು ಈಜಲು ಹೋಗಿದ್ದು ನಾಲ್ವರು ಕೈಕೈ ಹಿಡಿದು ನೀರಿಗೆ ಇಳಿದಿದ್ದಾರೆ. ಈ ವೇಳೆ ದೊಡ್ಡಪ್ಪರಾದ ಕುಬೇರಪ್ಪ ಒಬ್ವಳನ್ನ ಹಿಡಿದುಕೊಂಡ ಪರಿಣಾಮ ಒಂದು ಮಗುವನ್ನ ರಕ್ಷಣೆ ಮಾಡಿದ್ದಾರೆ. ಇನ್ನೂ ಮೂವರು ಮಕ್ಕಳು ನೀರಿನಲ್ಲಿ ತೇಲಿ ಹೋಗಿದ್ದಾರೆ. ನೀರಿನಲ್ಲಿ ಮುಳುಗಿರುವ ಮೂವರ ಮಕ್ಕಳನ್ನು ಅಲ್ಲಿ ಕುರಿ ಕಾಯುತ್ತಿದ್ದ…

Read More

ಹೈಕಮಾಂಡ್ ಬುಲಾವ್ ಹಿನ್ನಲೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಡೀರ್ ದೆಹಲಿಗೆ : ಕೈ ತಪ್ಪುತ್ತಾ ಗೃಹ ಸಚಿವ ಸ್ಥಾನ ??????

ರಾಜ್ಯ ರಾಜಕಾರಣ ದೆಹಲಿ ಅಂಗಳಕ್ಕೆ ಶಿಫ್ಟ್ ಆಗಿದೆ. ಮಹತ್ವದ ಬೆಳವಣಿಗೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇವತ್ತು ದಿಢೀರ್ ದೆಹಲಿಗೆ ತೆರಳಿದ್ದಾರೆ. ಸಂಜೆ ವೇಳೆಗೆ ಅವರು ದೆಹಲಿಗೆ ವಿಮಾನ  ಹತ್ತಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಸಂಪುಟ ಪುನರ್ ರಚನೆಯ ವೇಳೆ ಗೃಹ ಸಚಿವರ ಕುರ್ಚಿ ಅಲುಗಾಡುವ…

Read More

ಟೊಮ್ಯಾಟೊ ಪ್ಲೂ (ಟೊಮ್ಯಾಟೊ ಜ್ವರ) ಎಂಬ ಹೊಸ ವೈರಸ್ ಪತ್ತೆ : ಚಿಕ್ಕ ಮಕ್ಕಳೇ ಈ ವೈರಸ್ ನ ಟಾರ್ಗೆಟ್

ಕೊರೊನಾ ನಾಲ್ಕನೇ ಅಲೆಯ ಭೀತಿಯ ನಡುವೆ ಹೊಸ ಜ್ವರವೊಂದು ಕಾಣಿಸಿಕೊಂಡಿದ್ದು, ವಿಶೇಷವಾಗಿ ಚಿಕ್ಕ ಮಕ್ಕಳ ಪೋಷಕರಲ್ಲಿ ಆತಂಕ ಮೂಡಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಕೇರಳದಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 80 ಕ್ಕೂ ಹೆಚ್ಚು ಮಕ್ಕಳು ವೈರಸ್‌ನಿಂದ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಕೇರಳದಲ್ಲಿ ಎಲ್ಲಾ ವಾಹನಗಳ ಪ್ರಯಾಣಿಕರನ್ನು, ವಿಶೇಷವಾಗಿ ಮಕ್ಕಳನ್ನು ಪರೀಕ್ಷಿಸಲು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಂಡವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಲ್ಲದೆ, ಅಂಗನವಾಡಿಗಳಲ್ಲಿ ಐದು ವರ್ಷಕ್ಕಿಂತ ಕಡಿಮೆ…

Read More

ಗೃಹ ಮಂತ್ರಿಗಳ ಸಾಮ್ರಾಜ್ಯದಲ್ಲಿ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ : ನಾಲ್ವರು ಆರೋಪಿಗಳ ಮೇಲೆ ಪ್ರಕರಣ ದಾಖಲು

ಗೃಹ ಸಚಿವರ ಗ್ರಾಮದಲ್ಲಿಯೇ ದಲಿತ ದಂಪತಿಗಳ ಮೇಲೆ ಕೆಲ ಕಿಡಿಗೇಡಿಗಳು ಅಡ್ಡಕಟ್ಟಿ ಥಳಿಸಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿರುವ ಘಟನೆ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರರ ತವರು ಕ್ಷೇತ್ರದಲ್ಲಿ ಕಳ್ಳತನ ದರೋಡೆ ಪ್ರಕರಣಗಳು ನಡೆದ ಬೆನ್ನಲ್ಲೇ ಈಗ ದುಷ್ಕರ್ಮಿಗಳು ದಲಿತ ಮಹಿಳೆಯ ಮೇಲೆ ಅತ್ಯಾಚಾರ ಮಾಡುವ ಯತ್ನಕ್ಕೂ ಕೈ ಹಾಕಿದ್ದಾರೆ ಎಂದರೆ ತೀರ್ಥಹಳ್ಳಿ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಇದೆಯೋ?? ಇಲ್ಲವೋ ಎಂಬ ಪ್ರಶ್ನೆ ಮೂಡದೆ ಇರದು. ಘಟನೆಯ ಹಿನ್ನಲೆ: ನಿನ್ನೆ ಸಂಜೆ ತೀರ್ಥಹಳ್ಳಿ ತಾಲ್ಲೂಕಿನ…

Read More

ಸಾಲಬಾಧೆಗೆ ಹೆದರಿ ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ :

ಸೊರಬ: ಸಾಲಬಾಧೆಗೆ ಯುವ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹಿರೇಕಸವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಗ್ರಾಮದ ಎಚ್.ಕೆ. ಮಹೇಶ್ (38) ಆತ್ಮಹತ್ಯೆಗೆ ಶರಣಾದ ಯುವ ರೈತ. ಅಕಾಲಿಕ ಮಳೆಯಿಂದಾಗಿ ನಿರೀಕ್ಷೆಗಿಂತ ಕಡಿಮೆ ಬೆಳೆ ಬಂದ ಹಿನ್ನೆಲೆ ಸುಮಾರು ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಬೆಳೆ ನಷ್ಟವಾಗಿತ್ತು. ಸಹಕಾರಿ ಸಂಘವೊಂದರಲ್ಲಿ 80 ಸಾವಿರ ರೂ., ಹಾಗೂ ಕೈಗಡವಾಗಿ ಸುಮಾರು 2 ಲಕ್ಷ ರೂ., ಸಾಲ ಮಾಡಿಕೊಂಡಿದ್ದನು ಎಂದು ತಿಳಿದು ಬಂದಿದ್ದು, ಬೆಳೆ…

Read More

ಬೈಂದೂರು – ರಾಣೆಬೆನ್ನೂರು ದ್ವಿಪಥ ರಸ್ತೆ ನಿರ್ಮಾಣ : ಸಂಸದ ಬಿ ವೈ ರಾಘವೇಂದ್ರ…. ಸಂಪೆಕಟ್ಟೆಯಿಂದ – ಹೊಸನಗರದ ಮಾವಿನಕೊಪ್ಪ ವೃತ್ತಕ್ಕೆ ಬೈಪಾಸ್ ರಸ್ತೆ :

ಬೈಂದೂರು-ರಾಣೆಬೆನ್ನೂರು ರಸ್ತೆ ಹಾಗೂ ಶಿಕಾರಿಪುರ ಪಟ್ಟಣದ ಬೈಪಾಸ್ ರಸ್ತೆ ನಿರ್ಮಾಣವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಸುಮಾರು 203 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ 766(2) ಬೈಂದೂರು – ರಾಣೇ ಬೆನ್ನೂರು ರಸ್ತೆ ರಾಜ್ಯದ ಮಧ್ಯ ಭಾಗ ಹಾಗು ಕರಾವಳಿ ಭಾಗವನ್ನು ಸಂಪರ್ಕಿಸುವ ಏಕಪಥ ಹಾಗೂ ಮದ್ಯಂತರ ಪಥದ ರಸ್ತೆಗಳಾಗಿವೆ. ಇವುಗಳನ್ನು ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸಲು ಕೋರಿದ ಫಲವಾಗಿ ಕೊಲ್ಲೂರು ಪಟ್ಟಣ, ನಾಗೋಡಿ, ಜಯನಗರದಿಂದ ಹೊಸನಗರ ಬಟ್ಟೆ ಮಲ್ಲಪ್ಪದಿಂದ ಯಡೇಹಳ್ಳಿ, ಕಿಟ್ಟದ ಹಳ್ಳಿಯಿಂದ ಮಾಸೂರು ರಟ್ಟಿ…

Read More

ಕಿಮ್ಮನೆ ರತ್ನಾಕರ್ ಗೆ ಕಾಂಗ್ರೆಸ್ ಸಮಾವೇಶದಲ್ಲಿ ಅವಮಾನ…?!!!!! ಜಿಲ್ಲಾ ಕಾಂಗ್ರೆಸ್ ನ ಗುಂಪುಗಾರಿಕೆಗೆ ಕಿಮ್ಮನೆ ಬೆಂಬಲಿಗರ ಆಕ್ರೋಶ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ ಇದೀಗ ರಾಜ್ಯ ನಾಯಕರ ಅಂಗಳಕ್ಕೆ ತಲುಪಿದೆ.ತೀರ್ಥಹಳ್ಳಿ ಕ್ಷೇತ್ರದಲ್ಲಿದ್ದ ಅಸಮಾಧಾನ, ಭಿನ್ನಮತ ಇದೀಗ ಜಿಲ್ಲಾ ನಾಯಕತ್ವದಲ್ಲೂ ಹೊರ ಬಿದ್ದಿದೆ.  ನಡೆದಿದ್ದೇನು?? ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೀರ್ಥಹಳ್ಳಿಯ ಗುಡ್ಡೆಕೊಪ್ಪದಿಂದ ಶಿವಮೊಗ್ಗಕ್ಕೆ ಪಾದಯಾತ್ರೆ ನಡೆಸಿ ಸಾವಿರಾರು ಕಾರ್ಯಕರ್ತರೊಂದಿಗೆ  ಶಿವಮೊಗ್ಗದ ಸಮಾವೇಶಕ್ಕೆ ಹಾಜರಾಗಿದ್ದರು. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸಾವಿರಾರು ಮಂದಿ ಕಾರ್ಯಕರ್ತರು ಬಂದಿದ್ದರು. ಸಭಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, ನಾಯಕರಾದ ಹರಿಪ್ರಸಾದ್, ಕಾಗೋಡು ತಿಮ್ಮಪ್ಪ, ಕಿಮ್ಮನೆ, ಮಂಜುನಾಥ ಗೌಡ, ಸುಂದರೇಶ್ ಇತರರು…

Read More

ಮೇ 13 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ :

ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್‌ಅಕ್ಬರ್‌ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ 48ನೇ ಉರೂಸ್ ಸಮಾರಂಭ ಮೇ 13ರಿಂದ ಪ್ರಾರಂಭಗೊಳ್ಳಲಿದೆ ಎಂದು ದರ್ಗಾ ಸಮಿತಿ ಸದಸ್ಯ ಅರ್ ಎ ಚಾಬುಸಾಬ್ ತಿಳಿಸಿದರು. ನಗರದ ದರ್ಗಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮೇ 13ರಂದು ನಗರ ವೆಂಕಟರಮಣಉಡುಪ ನೇತೃತ್ವದಲ್ಲಿ ಚಾಲನೆಗೊಳ್ಳಲಿರುವ ಉರೂಸ್‌ನ್ನು ಕಾರ್ಗಲ್‌ನ ಜನಾಬ್ ಎಸ್.ಇ.ಸಿರಾಜ್ ತಂಗಳ್ ಉದ್ಘಾಟಿಸಲಿರುವರು. ಮೇ 14ರಂದು ಮಗರಿಬ್ ನಮಾಜ್ ಬಳಿಕ ಮೌಲೂದ್, ಸಲಾತ್‌ ನಡೆಯಲಿದ್ದು, ಧಾರ್ಮಿಕ…

Read More

ಬೆಳದಿಂಗಳ ಬಾಲೆಯ ಬೆನ್ನತ್ತಿ ಹೋಗಿ ಹಣ ಕಳೆದುಕೊಂಡ ಯುವಕ : ಸಾಮಾಜಿಕ ಜಾಲತಾಣದ ಮನ್ಮಥರು ನೋಡಲೇಬೇಕಾದ ಸ್ಟೋರಿ!!!!!

ಇನ್ ಸ್ಟಾ‌ಗ್ರಾಮ್ ನಲ್ಲಿ ಪರಿಚಯವಾದ ಬೆಳದಿಂಗಳ ಬಾಲೆಯೊಬ್ಬಳು ತನ್ನ‌ ಬೇಡಿಕೆ ಈಡೇರಿಕೆಗಾಗಿ ಸಹಚರರ ಮೂಲಕ ಸೊರಬ ತಾಲೂಕು ಕ್ಯಾಸನೂರು ಗ್ರಾಮ ಉಮಟೆಗದ್ದೆ ನಿವಾಸಿ ವಿದ್ಯಾರ್ಥಿಗೆ ಬ್ಲಾಕ್ ಮೇಲ್ ಮಾಡಿ, ಹಣ ಕಿತ್ತುಕೊಂಡು ವಂಚಿಸಿರುವ ಘಟನೆ ನಿಧಾನವಾಗಿ ಬೆಳಕಿಗೆ ಬಂದಿದೆ. ಸಾಗರದ ಸಂಜಯ್ ಮೆಮೋರಿಯಲ್ ಡಿಪ್ಲಮೋ ಕಾಲೇಜಿನಲ್ಲಿ ಪ್ರಥಮ ವರ್ಷದ ತರಗತಿಯ ವಿವೇಕ್ ಎಂಬ ಯುವಕನಿಗೆ ಇನ್ಸ್ಟಾ ಗ್ರಾಮ್ ನಲ್ಲಿ ಅಣಲೇಕೊಪ್ಪದ ಸೌಜನ್ಯ ಎಂಬ ಯುವತಿ ಹಾಯ್ ಎಂಬ ಮೆಸೇಜ್ ಕಳುಹಿಸುವ ಮೂಲಕ ಪರಿಚಿತಳಾಗುತ್ತಾಳೆ. ಇಬ್ಬರು ಪರಸ್ಪರ ಮೊಬೈಲ್ ನಲ್ಲಿ…

Read More